Homeಮುಖಪುಟಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಿಸಿದ ಚುನಾವಣಾ ಆಯೋಗ

- Advertisement -
- Advertisement -

ಕೇಂದ್ರ ಚುನಾವಣಾ ಆಯೋಗ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ. ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ವಿಧಾನಸಭೆಗಳಿಗೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದೆ.

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು, ಛತ್ತೀಸ್‌ಗಢ, ಮಧ್ಯಪ್ರದೇಶ, ಮಿಜೋರಾಂ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ”ಮಿಜೋರಾಂ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ಮತ್ತು ತೆಲಂಗಾಣದಲ್ಲಿ ನಡೆಯುವ ಚುನಾವಣೆಯಲ್ಲಿ ಒಟ್ಟು 8.2 ಕೋಟಿ ಪುರುಷ ಮತ್ತು 7.8 ಕೋಟಿ ಮಹಿಳಾ ಮತದಾರರು ಇರಲಿದ್ದಾರೆ. ಈ ಪೈಕಿ 60.2 ಲಕ್ಷ ಮಂದಿ ಮೊದಲ ಬಾರಿಗೆ ಮತದಾರರಾಗಿದ್ದಾರೆ” ಎಂದು ಹೇಳಿದರು.

”ಐದು ವಿಧಾನಸಭಾ ಚುನಾವಣೆಗೆ ಮುನ್ನ ನಾವು ರಾಜಕೀಯ ಪಕ್ಷಗಳು ಮತ್ತು ಜಾರಿ ಸಂಸ್ಥೆಗಳು ಸೇರಿದಂತೆ ಎಲ್ಲಾ ಮಧ್ಯಸ್ಥಗಾರರು, ರಾಜಕೀಯ ಪಕ್ಷಗಳ ವಕ್ತಾರರನ್ನು ಭೇಟಿ ಮಾಡಿ ಚರ್ಚಿಸಿದ್ದೇವೆ” ಎಂದು ಹೇಳಿದ್ದಾರೆ.

ಚುನಾವಣಾ ಆಯುಕ್ತರು ನೀಡಿರುವ ಮಾಹಿತಿಯಂತೆ ಮಿಜೋರಾಂ ವಿಧಾನಸಭೆಯ ಅವಧಿ ಡಿಸೆಂಬರ್ 17ಗೆ ಕೊನೆಗೊಳ್ಳಲ್ಲಿದ್ದು, ಛತ್ತೀಸ್ಗಢ ವಿಧಾನಸಭೆ ಅವಧಿ ಜನವರಿ 3, ಮಧ್ಯಪ್ರದೇಶ ವಿಧಾನಸಭೆ ಅವಧಿ ಜನವರಿ 8, ರಾಜಸ್ಥಾನ ವಿಧಾನಸಭೆ ಅವಧಿ ಜನವರಿ 14 ಮತ್ತು ತೆಲಂಗಾಣ  ವಿಧಾನಸಭೆ ಅವಧಿಯು ಜನವರಿ 18ಕ್ಕೆ ಕೊನೆಗೊಳ್ಳಲಿದೆ.

ನವೆಂಬರ್‌ 7 ರಿಂದ 30ರವರೆಗೆ ಚುನಾವಣೆ!
ಮಧ್ಯಪ್ರದೇಶ, ಮಿಜೋರಾಂ, ತೆಲಂಗಾಣ, ರಾಜಸ್ಥಾನ ಹಾಗೂ ಛತ್ತೀಸ್‌ಘಡದಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದು, ನವೆಂಬರ್‌ 7 ರಿಂದ 30ರವರೆಗೆ ಮತದಾನ ನಡೆಯಲಿದೆ. ಛತ್ತೀಸ್‌ಘಡದಲ್ಲಿ ಮಾತ್ರ ಎರಡು ಹಂತದ ಮತದಾನ ಇದ್ದು, ಉಳಿದ ರಾಜ್ಯಗಳಲ್ಲಿ ಒಂದು ಹಂತದಲ್ಲಿಯೇ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮುಂದಿನ ಲೋಕಸಭಾ ಚುನಾವಣೆಯ ಸೆಮಿಫೈನಲ್‌ ಎಂದೇ ಈ ಚುನಾವಣೆಯನ್ನು ಕರೆಯಲಾಗುತ್ತಿದ್ದು, ರಾಜಕೀಯ ಪಕ್ಷಗಳು ಎಲೆಕ್ಷನ್‌ಗೆ ಭರ್ಜರಿ ತಯಾರಿ ನಡೆಸಿವೆ.

ಮಿಜೋರಾಂನಲ್ಲಿ ನವೆಂಬರ್‌ 7ಕ್ಕೆ ಮತದಾನ ನಡೆದರೆ, ಮಧ್ಯಪ್ರದೇಶದಲ್ಲಿ ನವೆಂಬರ್‌ 17ರಂದು ಮತದಾನ ನಡೆಯಲಿದೆ. ರಾಜಸ್ಥಾನದಲ್ಲಿ ನವೆಂಬರ್‌ 23ಕ್ಕೆ ಮತದಾನ ನಡೆಯುತ್ತಿದ್ದು, ತೆಲಂಗಾಣದಲ್ಲಿ ನವೆಂಬರ್‌ 30ರಂದು ವೋಟಿಂಗ್‌ ನಡೆಯಲಿದೆ. ಛತ್ತೀಸ್‌ಘಡದಲ್ಲಿ ನವೆಂಬರ್‌ 7 ಮತ್ತು 17ರಂದು ಎರಡು ಹಂತಗಳಲ್ಲಿ ಜನರು ಮತ ಚಲಾಯಿಸಲಿದ್ದಾರೆ.

”ಮಧ್ಯಪ್ರದೇಶದ ಒಟ್ಟು 230 ಸ್ಥಾನಗಳು, ಛತ್ತೀಸ್‌ಗಢದ- 90 ಸ್ಥಾನಗಳು, ರಾಜಸ್ಥಾನದ 200 ಸ್ಥಾನಗಳು, ತೆಲಂಗಾಣದ 119 ಸ್ಥಾನಗಳು ಮತ್ತು ಮಿಜೋರಾಂನ 90 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮತದಾರರು ಅಕ್ಟೋಬರ್ 17 ರಿಂದ ನವೆಂಬರ್ 30 ರವರೆಗೆ ಮತದಾರರ ಪಟ್ಟಿಯಲ್ಲಿ ವಿವರಗಳನ್ನು ನವೀಕರಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ಅಂತೆಯೇ 5 ರಾಜ್ಯಗಳಲ್ಲಿ 1.77 ಲಕ್ಷ ಮತಗಟ್ಟೆಗಳು ಮತ್ತು 1.01 ಲಕ್ಷ ಮತಗಟ್ಟೆಗಳು ವೆಬ್ ಕಾಸ್ಟಿಂಗ್ ಸೌಲಭ್ಯವನ್ನು ಹೊಂದಿವೆ” ಎಂದು ಅವರು ಮಾಹಿತಿ ನೀಡಿದರು.

ಚುನಾವಣೆ ನಡೆಯುವ ಈ ಐದು ರಾಜ್ಯಗಳಲ್ಲಿ 940 ಕ್ಕೂ ಹೆಚ್ಚು ಅಂತರ-ರಾಜ್ಯ ಗಡಿ ಚೆಕ್ ಪೋಸ್ಟ್‌ಗಳನ್ನು ನಿರ್ಮಿಸಲಾಗುತ್ತಿದ್ದು, ಆ ಮೂಲಕ ನಾವು ಯಾವುದೇ ಅಕ್ರಮ ನಗದು, ಮದ್ಯ, ಉಚಿತ ವಸ್ತುಗಳು ಮತ್ತು ಮಾದಕ ವಸ್ತುಗಳ ಗಡಿಯಾಚೆಗಿನ ಚಲನೆಯನ್ನು ಪರಿಶೀಲಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...