Homeಮುಖಪುಟ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

ಮುಂದಿನ 48 ಗಂಟೆಗಳಲ್ಲಿ ನೋಟಿಸ್‌ಗೆ ಪ್ರತಿಕ್ರಿಯಿಸಬೇಕು ಎಂದು ಮಮತಾ ಬ್ಯಾನರ್ಜಿಗೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಹೂಗ್ಲಿಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿರಬೇಕಾದರೆ ಮುಸ್ಲಿಂ ಮತಗಳು ವಿವಿಧ ರಾಜಕೀಯ ಪಕ್ಷಗಳ ನಡುವೆ ವಿಭಜನೆ ಆಗಲು ಬಿಡದಂತೆ ಮುಸ್ಲಿಂ ಮತದಾರರಿಗೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ನೋಟಿಸ್‌ಗೆ ಪ್ರತಿಕ್ರಿಯಿಸಬೇಕು ಎಂದು ಅವರಿಗೆ ತಿಳಿಸಲಾಗಿದೆ.

ಏಪ್ರಿಲ್ 3 ರಂದು ಹೂಗ್ಲಿಯ ತಾರಕೇಶ್ವರದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಅವರು, ಮುಸ್ಲಿಂ ಮತದಾರರ ಮತಗಳು ವಿವಿಧ ರಾಜಕೀಯ ಪಕ್ಷಗಳ ನಡುವೆ ವಿಭಜನೆ ಆಗಲು ಬಿಡದಂತೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ಬಂದಿದೆ ಎಂದು ನೋಟಿಸ್ ತಿಳಿಸಿದೆ.

ಇದನ್ನೂ ಓದಿ: ರಾಜಕೀಯ ಪ್ರತಿಸ್ಪರ್ಧಿಗಳನ್ನು ಗುರಿಯಾಗಿಸಲು ಕೇಂದ್ರದ ಏಜೆನ್ಸಿಗಳ ದುರುಪಯೋಗ – ಶಿವಸೇನೆ

“ವಿಶ್ವವಿದ್ಯಾಲಯದವರೆಗೆ ಕನ್ಯಾಶ್ರೀ ಎಂಬ ವಿದ್ಯಾರ್ಥಿ ವೇತನವಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಶಿಶಶ್ರೀ ಇದೆ. ಸಾಮಾನ್ಯ ವರ್ಗಕ್ಕೆ ಸ್ವಾಮಿ ವಿವೇಕಾನಂದ ವಿದ್ಯಾರ್ಥಿ ವೇತನವಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನನ್ನ ಸಹೋದರ ಸಹೋದರಿಯರಿಗೆ ಐಕ್ಯಶ್ರೀ ವಿದ್ಯಾರ್ಥಿ ವೇತನವಿದೆ. ನಾನು 35 ಲಕ್ಷ ಫಲಾನುಭವಿಗಳಿಗೆ 2 ಕೋಟಿ ರೂಗಳನ್ನು ನೀಡಿದ್ದೇನೆ”

“ನನ್ನ ಅಲ್ಪಸಂಖ್ಯಾತ ಸಹೋದರ ಸಹೋದರಿಯರನ್ನು ಕೈಮುಗಿದು ವಿನಂತಿಸುತ್ತಿದ್ದೇನೆ, ಬಿಜೆಪಿಯಿಂದ ಹಣವನ್ನು ಪಡೆದುಕೊಂಡ ಶೈತಾನ ವ್ಯಕ್ತಿಯ ಮಾತುಗಳನ್ನು ಕೇಳಿ ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಬೇಡಿ.”

“ಅವರು ಅನೇಕ ಕೋಮುವಾದಿ ಹೇಳಿಕೆಗಳನ್ನು ನೀಡಿ ಹಿಂದೂ ಮುಸ್ಲಿಮರ ನಡುವೆ ಘರ್ಷಣೆಯನ್ನು ಪ್ರಾರಂಭಿಸುತ್ತಾರೆ. ಅವರು ಬಿಜೆಪಿಯ ಪ್ರಚಾರಕರಾಗಿದ್ದು, ಅವರ ಒಡನಾಡಿಯಾಗಿದ್ದಾರೆ. ಸಿಪಿಐ-ಎಂನ ಕಾಮ್ರೇಡರು ಮತ್ತು ಬಿಜೆಪಿಗರು ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಲು ಬಿಜೆಪಿ ನೀಡಿದ ಹಣದೊಂದಿಗೆ ಸುತ್ತಾಡುತ್ತಿದ್ದಾರೆ”

ಇದನ್ನೂ ಓದಿ: ವಾಹನಗಳಲ್ಲಿ ಏಕಾಂಗಿಯಾಗಿ ಓಡಾಡುವವರೂ ಮಾಸ್ಕ್‌ ಧರಿಸಬೇಕು – ದೆಹಲಿ ಹೈಕೋರ್ಟ್

“ದಯವಿಟ್ಟು ಅವರನ್ನು ಹಾಗೆ ಮಾಡಲು ಅನುಮತಿಸಬೇಡಿ. ಬಿಜೆಪಿ ಅಧಿಕಾರಕ್ಕೆ ಬಂದರೆ ನಿಮಗೆ ತೀವ್ರ ಅಪಾಯವಿದೆ ಎಂಬುದನ್ನು ನೆನಪಿನಲ್ಲಿಡಿ.”

“ಬಿಜೆಪಿಯ ಮಾತು ಕೇಳಿ ಹಿಂದೂ ಮುಸ್ಲಿಂ ಎಂದು ನಿಮ್ಮ ನಡುವೆ ವಿಭಜನೆ ಮಾಡದಂತೆ ನಾನು ನನ್ನ ಹಿಂದೂ ಸಹೋದರ ಸಹೋದರಿಯರಿಗೆ ಹೇಳುತ್ತಿದ್ದೇನೆ” ಎಂದು ಮಮತಾ ಹೇಳಿದ್ದಾರೆ ಎಂದು ನೋಟಿಸ್‌ ಉಲ್ಲೇಖಿಸಿದೆ.

ಅವರ ಭಾಷಣವು ‘ಜನರ ಪ್ರಾತಿನಿಧ್ಯ ಕಾಯ್ದೆ’ ಮತ್ತು ‘ಮಾದರಿ ಸಂಹಿತೆಯ ನಿಯಮ’ಗಳನ್ನು ಉಲ್ಲಂಘಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ: ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಗೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

0
ಲೋಕಸಭೆ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದ ಟಿಕೆಟ್‌ ಕೈತಪ್ಪಿದ ಹಿನ್ನೆಲೆ ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಹಾಲಿ ಸಂಸದ ಸಂಗಣ್ಣ ಕರಡಿ ಅವರು ತಮ್ಮ ಸಂಸದ ಸ್ಥಾನಕ್ಕೆ ಮತ್ತು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ...