Homeಮುಖಪುಟ‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

‘ಮುಸ್ಲಿಂ ಮತದಾರರಿಗೆ ಮನವಿ’; ನೀತಿ ಸಂಹಿಂತೆ ಉಲ್ಲಂಘನೆ ಎಂದ ಚುನಾವಣಾ ಆಯೋಗ!

ಮುಂದಿನ 48 ಗಂಟೆಗಳಲ್ಲಿ ನೋಟಿಸ್‌ಗೆ ಪ್ರತಿಕ್ರಿಯಿಸಬೇಕು ಎಂದು ಮಮತಾ ಬ್ಯಾನರ್ಜಿಗೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

- Advertisement -
- Advertisement -

ಹೂಗ್ಲಿಯಲ್ಲಿ ಚುನಾವಣಾ ಪ್ರಚಾರ ಮಾಡುತ್ತಿರಬೇಕಾದರೆ ಮುಸ್ಲಿಂ ಮತಗಳು ವಿವಿಧ ರಾಜಕೀಯ ಪಕ್ಷಗಳ ನಡುವೆ ವಿಭಜನೆ ಆಗಲು ಬಿಡದಂತೆ ಮುಸ್ಲಿಂ ಮತದಾರರಿಗೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿಗೆ ಚುನಾವಣಾ ಆಯೋಗ ಬುಧವಾರ ನೋಟಿಸ್ ನೀಡಿದೆ.

ಮುಂದಿನ 48 ಗಂಟೆಗಳಲ್ಲಿ ನೋಟಿಸ್‌ಗೆ ಪ್ರತಿಕ್ರಿಯಿಸಬೇಕು ಎಂದು ಅವರಿಗೆ ತಿಳಿಸಲಾಗಿದೆ.

ಏಪ್ರಿಲ್ 3 ರಂದು ಹೂಗ್ಲಿಯ ತಾರಕೇಶ್ವರದಲ್ಲಿ ನಡೆದ ಚುನಾವಣಾ ರ್‍ಯಾಲಿಯಲ್ಲಿ ಮಮತಾ ಬ್ಯಾನರ್ಜಿ ಅವರು, ಮುಸ್ಲಿಂ ಮತದಾರರ ಮತಗಳು ವಿವಿಧ ರಾಜಕೀಯ ಪಕ್ಷಗಳ ನಡುವೆ ವಿಭಜನೆ ಆಗಲು ಬಿಡದಂತೆ ಮನವಿ ಮಾಡಿದ್ದಾರೆ ಎಂದು ಆರೋಪಿಸಿ ಚುನಾವಣಾ ಆಯೋಗಕ್ಕೆ ದೂರು ಬಂದಿದೆ ಎಂದು ನೋಟಿಸ್ ತಿಳಿಸಿದೆ.

ಇದನ್ನೂ ಓದಿ: ರಾಜಕೀಯ ಪ್ರತಿಸ್ಪರ್ಧಿಗಳನ್ನು ಗುರಿಯಾಗಿಸಲು ಕೇಂದ್ರದ ಏಜೆನ್ಸಿಗಳ ದುರುಪಯೋಗ – ಶಿವಸೇನೆ

“ವಿಶ್ವವಿದ್ಯಾಲಯದವರೆಗೆ ಕನ್ಯಾಶ್ರೀ ಎಂಬ ವಿದ್ಯಾರ್ಥಿ ವೇತನವಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಶಿಶಶ್ರೀ ಇದೆ. ಸಾಮಾನ್ಯ ವರ್ಗಕ್ಕೆ ಸ್ವಾಮಿ ವಿವೇಕಾನಂದ ವಿದ್ಯಾರ್ಥಿ ವೇತನವಿದೆ. ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ನನ್ನ ಸಹೋದರ ಸಹೋದರಿಯರಿಗೆ ಐಕ್ಯಶ್ರೀ ವಿದ್ಯಾರ್ಥಿ ವೇತನವಿದೆ. ನಾನು 35 ಲಕ್ಷ ಫಲಾನುಭವಿಗಳಿಗೆ 2 ಕೋಟಿ ರೂಗಳನ್ನು ನೀಡಿದ್ದೇನೆ”

“ನನ್ನ ಅಲ್ಪಸಂಖ್ಯಾತ ಸಹೋದರ ಸಹೋದರಿಯರನ್ನು ಕೈಮುಗಿದು ವಿನಂತಿಸುತ್ತಿದ್ದೇನೆ, ಬಿಜೆಪಿಯಿಂದ ಹಣವನ್ನು ಪಡೆದುಕೊಂಡ ಶೈತಾನ ವ್ಯಕ್ತಿಯ ಮಾತುಗಳನ್ನು ಕೇಳಿ ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಬೇಡಿ.”

“ಅವರು ಅನೇಕ ಕೋಮುವಾದಿ ಹೇಳಿಕೆಗಳನ್ನು ನೀಡಿ ಹಿಂದೂ ಮುಸ್ಲಿಮರ ನಡುವೆ ಘರ್ಷಣೆಯನ್ನು ಪ್ರಾರಂಭಿಸುತ್ತಾರೆ. ಅವರು ಬಿಜೆಪಿಯ ಪ್ರಚಾರಕರಾಗಿದ್ದು, ಅವರ ಒಡನಾಡಿಯಾಗಿದ್ದಾರೆ. ಸಿಪಿಐ-ಎಂನ ಕಾಮ್ರೇಡರು ಮತ್ತು ಬಿಜೆಪಿಗರು ಅಲ್ಪಸಂಖ್ಯಾತ ಮತಗಳನ್ನು ವಿಭಜಿಸಲು ಬಿಜೆಪಿ ನೀಡಿದ ಹಣದೊಂದಿಗೆ ಸುತ್ತಾಡುತ್ತಿದ್ದಾರೆ”

ಇದನ್ನೂ ಓದಿ: ವಾಹನಗಳಲ್ಲಿ ಏಕಾಂಗಿಯಾಗಿ ಓಡಾಡುವವರೂ ಮಾಸ್ಕ್‌ ಧರಿಸಬೇಕು – ದೆಹಲಿ ಹೈಕೋರ್ಟ್

“ದಯವಿಟ್ಟು ಅವರನ್ನು ಹಾಗೆ ಮಾಡಲು ಅನುಮತಿಸಬೇಡಿ. ಬಿಜೆಪಿ ಅಧಿಕಾರಕ್ಕೆ ಬಂದರೆ ನಿಮಗೆ ತೀವ್ರ ಅಪಾಯವಿದೆ ಎಂಬುದನ್ನು ನೆನಪಿನಲ್ಲಿಡಿ.”

“ಬಿಜೆಪಿಯ ಮಾತು ಕೇಳಿ ಹಿಂದೂ ಮುಸ್ಲಿಂ ಎಂದು ನಿಮ್ಮ ನಡುವೆ ವಿಭಜನೆ ಮಾಡದಂತೆ ನಾನು ನನ್ನ ಹಿಂದೂ ಸಹೋದರ ಸಹೋದರಿಯರಿಗೆ ಹೇಳುತ್ತಿದ್ದೇನೆ” ಎಂದು ಮಮತಾ ಹೇಳಿದ್ದಾರೆ ಎಂದು ನೋಟಿಸ್‌ ಉಲ್ಲೇಖಿಸಿದೆ.

ಅವರ ಭಾಷಣವು ‘ಜನರ ಪ್ರಾತಿನಿಧ್ಯ ಕಾಯ್ದೆ’ ಮತ್ತು ‘ಮಾದರಿ ಸಂಹಿತೆಯ ನಿಯಮ’ಗಳನ್ನು ಉಲ್ಲಂಘಿಸಿದೆ ಎಂದು ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ: ಅಪ್ಪ-ಮಗನ ನಿಜ ಬಣ್ಣ ಬಯಲಾಗಲಿದೆ: ಸಿಎಂ ಮತ್ತು ವಿಜಯೇಂದ್ರ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...