HomeUncategorizedಹೊಸ ಜನಪರ ರಾಜಕಾರಣಕ್ಕೆ ನಾಂದಿ ಹಾಡಲಿದೆ 'ಮುಖ್ಯಮಂತ್ರಿ ಆಯ್ಕೆ' ಪ್ರಹಸನ

ಹೊಸ ಜನಪರ ರಾಜಕಾರಣಕ್ಕೆ ನಾಂದಿ ಹಾಡಲಿದೆ ‘ಮುಖ್ಯಮಂತ್ರಿ ಆಯ್ಕೆ’ ಪ್ರಹಸನ

- Advertisement -
- Advertisement -

1982ರ ಸಮಯ. ಆಂಧ್ರಪ್ರದೇಶದಲ್ಲಿ 5 ವರ್ಷದಲ್ಲಿ 5 ಬಾರಿ ಮುಖ್ಯಮಂತ್ರಿಗಳು ಬದಲಾಗಿದ್ದರು. ಕಾಂಗ್ರೆಸ್ಸಿನ ಹೈಕಮಾಂಡ್ ಸಂಸ್ಕೃತಿಯ ಉತ್ತುಂಗ. ಆಗ ಒಂದು ಸಲ ಕಾಂಗ್ರೆಸ್ ಪಕ್ಷದ ನಾಯಕ ಹೈದ್ರಾಬಾದಿನ ಏರ್‌ಪೋರ್ಟಿಗೆ ಬಂದಿಳಿದಿದ್ದರು. ಅವರನ್ನು ಸ್ವಾಗತಿಸಲು ಆಗಿನ ಮುಖ್ಯಮಂತ್ರಿ ಟಿ. ಆಂಜಯ್ಯ ಸುರಕ್ಷಾ ಗೆರೆಯನ್ನು ದಾಟಿ ಬಂದಿರುತ್ತಾರೆ. ಅದರಿಂದ ಸಿಟ್ಟಿಗೆದ್ದ ರಾಜೀವ್, ಅಲ್ಲಿಯೇ ಸಾರ್ವಜನಿಕರೆದುರು ಅವರಿಗೆ ಬಯ್ಯುತ್ತಾರೆ. ಮುಖ್ಯಮಂತ್ರಿಯನ್ನು ಬಫೂನ್ ಎಂದು ಕರೆಯುತ್ತಾರೆ. ಕೆಲವೇ ದಿನಗಳ ನಂತರ ಮುಖ್ಯಮಂತ್ರಿಯನ್ನು ಬದಲಿಸಲಾಗುತ್ತೆ. ಆಗ ಶುರುವಾಗಿದ್ದು ತೆಲುಗುವಾರಿ ಆತ್ಮಗೌರವಂ ಎಂಬ ನಡೆ. ದಶಕಗಳ ಕಾಂಗ್ರೆಸ್ ಆಳ್ವಿಕೆ ಕೊನೆಗೊಳ್ಳುತ್ತದೆ.

2021ರ ಕರ್ನಾಟಕದಲ್ಲಿ, ಕಾಂಗ್ರೆಸ್‌ನ ಹೈಕಮಾಂಡ್ ಸಂಸ್ಕೃತಿಯನ್ನು ಟೀಕಿಸುತ್ತಲೇ ಅಧಿಕಾರಕ್ಕೆ ಬಂದ ಬಿಜೆಪಿಯ ಮುಖ್ಯಮಂತ್ರಿ ಬದಲಾವಣೆಯ ಪ್ರಹಸನ ನಡೆಯುತ್ತಿದೆ. ಯಡಿಯೂರಪ್ಪನವರು ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿ ಪಟ್ಟ ವಹಿಸಿಕೊಂಡಾಗಲೇ ಅವರಿಗೆ ವಯಸ್ಸು 75 ಮೀರಿತ್ತು, ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂಬ ಪಟ್ಟವನ್ನೂ ಆಗಲೇ ಪಡೆದಿದ್ದರು. ಹಾಗಾಗಿ ಈ ಕಾರಣಗಳನ್ನಂತೂ ಒಪ್ಪಲು ಸಾಧ್ಯವಿಲ್ಲ, ಹಾಗಾದರೆ ಏನು ಕಾರಣ? ಅದು ’ಹೈಕಮಾಂಡ್ಗೆ ಮಾತ್ರ ಗೊತ್ತು. ಮುಂದಿನ ಮುಖ್ಯಮಂತ್ರಿ ಯಾರು ಎಂಬುದೂ ಕೇವಲ ’ಹೈಕಮಾಂಡ್ಗೆ ಗೊತ್ತು. ಈಗ ಶಾಸಕರ ಸಭೆ ಎಂಬ ಪ್ರಹಸನ ನಡೆಯುತ್ತಲಿದೆ. ಈ ನಮ್ಮ ಚುನಾಯಿತ ಶಾಸಕರು ತಮಗೆ ಒಪ್ಪಿಸಿದ ವರದಿಯನ್ನು ಓದಿ, ಮುಂದಿನ ಮುಖ್ಯಮಂತ್ರಿ ಯಾರು ಎಂದು ಘೋಷಿಸಲಿದ್ದಾರೆ. ಈ ಶಾಸಕರ ಯಾವ ಮಾತೂ ನಡೆಯುವುದಿಲ್ಲ ಎಂಬುದು ಬಹಿರಂಗ ಸತ್ಯ. ಇತ್ತೀಚಿನ ಸುದ್ದಿಯ ಪ್ರಕಾರ ಶಿಗ್ಗಾಂವದ ಶಾಸಕರಾದ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಆದರೆ ಈ ಹೊಸ ಮುಖ್ಯಮಂತ್ರಿಯಿಂದ ಏನನ್ನಾದರೂ ಸಾಧಿಸಬಹುದೇ, ಸಾಧನೆಯ ಅಪೇಕ್ಷೆಗಳನ್ನು ಅವರ ವಿರೋಧಿಗಳನ್ನು ಬಿಡಿ, ಅವರ ಸಮರ್ಥಕರೂ ಅದರ ಬಗ್ಗೆ ಏನನ್ನೂ ಮಾತನಾಡುವುದಿಲ್ಲ.

ಇನ್ನೂ ಮುಖ್ಯಮಂತ್ರಿಯಾಗಲು ಮಾನದಂಡಗಳೇನು ಎಂಬ ಚರ್ಚೆ ಬಂದಾಗ ಕೇಳಿಬರುತ್ತಿರುವ ಮಾತುಗಳು; ಸಂಭವನೀಯ ಮುಖ್ಯಮಂತ್ರಿಗಳ ಸಾಧನೆಯನ್ನು ಪರಿಗಣಿಸಲಾಗುತ್ತಿದೆಯೇ? ಅವರು ಶಿಕ್ಷಣ, ಆರೋಗ್ಯ, ಸಾಮಾಜಿಕ ನ್ಯಾಯ, ನೀರಾವರಿ, ಉದ್ಯೋಗ ಸೃಷ್ಟಿಯ ವಿಚಾರಗಳಲ್ಲಿ ಅದ್ಭುತವಾದ ಕೆಲಸ ಮಾಡಿದ್ದಾರೆಯೇ? ತಮ್ಮ ತಮ್ಮ ಇಲಾಖೆಗಳಲ್ಲಿ ಉತ್ತಮ ಆಡಳಿತ ನೀಡಿದ ಚರ್ಚೆಯಾಗುತ್ತಿದೆಯೇ? ಇಲ್ಲ, ಚರ್ಚೆ ಆಗುತ್ತಿರುವುದು ಜಾತಿ ಲೆಕ್ಕಾಚಾರ!

ಈಗ ಜನರು ಕೇಳಬೇಕಿರುವ/ಕೇಳಿಕೊಳ್ಳಬೇಕಿರುವ ಪ್ರಶ್ನೆ: ಇದು ರಾಜಕಾರಣವಾ? ಇದನ್ಯಾಕೆ ನಾವು ಸಹಿಸಿಕೊಳ್ಳಬೇಕು? ಅಧಿಕಾರದಲ್ಲಿರುವವರು ಉದ್ಯೋಗ ಸೃಷ್ಟಿಯ ಬಗ್ಗೆ ಚರ್ಚೆ ಹುಟ್ಟುಹಾಕಿದ್ದಾರೆಯೇ? ನಿರುದ್ಯೋಗ ಹೆಚ್ಚುತ್ತಿರುವ ಸಮಯದಲ್ಲಿ ಅದನ್ನು ಒಂದು ಸಮಸ್ಯೆ, ಆದ್ಯತೆಯ ವಿಷಯ ಎಂದು ಸರ್ಕಾರದವರು ಪರಿಗಣಿಸಿದ್ದಾರೆಯೇ? ಕಳೆದ ಒಂದೂವರೆ ವರ್ಷದಿಂದ ಕೊರೊನಾದಿಂದ, ಲಾಕ್‌ಡೌನ್‌ನಿಂದ ರಾಜ್ಯ ತತ್ತರಿಸಿದ್ದರೂ ಆರೋಗ್ಯ ಸೇವೆಯಲ್ಲಿ ಯಾವ ಬದಲಾವಣೆ ಆಗಬೇಕು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಹೇಗೆ ಸುಧಾರಿಸಬೇಕು ಎಂಬದು ಚರ್ಚೆಯಾಗುತ್ತಿದೆಯೇ? ಕೃಷಿ ಬಿಕ್ಕಟ್ಟು, ರೈತರ ಆತ್ಮಹತ್ಯೆಗಳು ಸುದ್ದಿಯೂ ಆಗದ ಪರಿಸ್ಥಿತಿಗೆ ಯಾಕೆ ಬಂದೆವು ನಾವು? ಮರ್ಯಾದೆಗೇಡು ಹತ್ಯೆಗಳು, ಜಾತಿ ದೌರ್ಜನ್ಯಗಳು ಹೆಚ್ಚುತ್ತಲೇ ಇರುವಾಗ, ಇವುಗಳನ್ನು ನಿಲ್ಲಿಸಲು ಏನಾದರೂ ಕಾರ್ಯಕ್ರಮ ಬೇಕಲ್ಲವೇ?
ಇವ್ಯಾವದನ್ನೂ ಮಾಡದೇ ಇರುವ ರಾಜಕಾರಣವನ್ನು ಕನ್ನಡಿಗರು ನೋಡುತ್ತಿದ್ದಾರೆ. ಲಕ್ಷಾಂತರ ಜನರು ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟು ಗಳಿಸಿದ ಪ್ರಜಾಪ್ರಭುತ್ವದ ಅಳಿವಿಗೆ ಶ್ರಮಿಸುತ್ತಿರುವ ಸಂದರ್ಭದಲ್ಲಿ ಭ್ರಮನಿರಸನ ಮಡುಗಟ್ಟಿದೆ ಎಂದು ಕಾಣುತ್ತಿದೆ. ಎಲ್ಲರೂ ಭ್ರಷ್ಟರು, ಯಾರಿಂದ ಏನೂ ಆಗುವುದಿಲ್ಲ ಎಂಬ ಸಿನಿಕತೆಯ ಪ್ರಚಲಿತವಾಗಿದೆ ಎಂದು ಕಾಣುತ್ತಿದೆ. ಆದರೆ ಇದು ನಿಜವೇ?

This is battle of perception! ಈ ಪ್ರಶ್ನೆಗೆ ಅವರವರ ಗ್ರಹಿಕೆ, ಚಿಂತನೆ, ಅವರ ಸುತ್ತಲೂ ಇರುವವರ ಚಿಂತನೆಯ ಮೇಲೆ ಉತ್ತರ ಸಿಗುವುದು.

ನನಗಂತೂ ಉತ್ತರ ಸ್ಪಷ್ಟವಾಗಿ ಕಾಣಿಸುತ್ತಿದೆ; ಇಂದಿನ ಸಿನಿಕತೆ ತಾತ್ವಿಕ ಸಿಟ್ಟಾಗಿ ಹೊರಹೊಮ್ಮಲು ಹೆಚ್ಚು ಸಮಯ ಹಿಡಿಯುವುದಿಲ್ಲ. ಮಾಧ್ಯಮಗಳು ನಿರಂತರವಾಗಿ ಬಿತ್ತರಿಸುತ್ತಿರುವ ಸುಳ್ಳುಗಳು ಸುಳ್ಳುಗಳೆಂದು ತಿಳಿಯದೇ ಇರುವುದಿಲ್ಲ. ಈಗಾಗಲೇ ಈ ಸುಳ್ಳು ಹೇಳುತ್ತಿರುವ ಮಾಧ್ಯಮಗಳು ತಮ್ಮ ವಿಶ್ವಾಸಾರ್ಹತೆಯನ್ನು ಸಂಪೂರ್ಣವಾಗಿ ಅಲ್ಲವಾದರೂ ಬಹುಮಟ್ಟಿಗೆ ಕಳೆದುಕೊಂಡಿವೆ. ಈ ದೇಶದ ಜನತೆಯೊಂದಿಗೆ ಕನ್ನಡಿಗರೂ ಬದಲಾಗಬಹುದು ಎಂಬುದನ್ನು ಈ ಮುನ್ನ ಅನೇಕ ಬಾರಿ ತೋರಿಸಿದ್ದಾರೆ. ಹೊಸದೊಂದು ರಾಜಕಾರಣ ಹುಟ್ಟುವ ಸಾಧ್ಯತೆಗಳು ಖಂಡಿತವಾಗಿಯೂ ಇವೆ.

ಆದರೆ, ಇದು ಎಷ್ಟೇ ಅನಿವಾರ್ಯವಾಗಿದ್ದರೂ ತನ್ನಿಂತಾನೆ ಆಗುವ ಪ್ರಕ್ರಿಯೆಯಲ್ಲ. ರಾಜ್ಯದ ಜನರೆಲ್ಲರೂ ಈ ಹೊಸ ರಾಜಕಾರಣದ ಸಾಧ್ಯಾಸಾಧ್ಯತೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಿದೆ. ಅದಕ್ಕಿಂತ ಮುಖ್ಯವಾಗಿ ಈ ಸಿನಿಕತೆಯ ಕಾರ್ಮೋಡಗಳನ್ನು ಬದಿಗೆ ತಳ್ಳುವ ಕೆಲಸವನ್ನು ಪ್ರಜ್ಞಾಪೂರ್ವಕವಾಗಿ ಮಾಡಬೇಕಿದೆ. ರಾಜಕೀಯ ಎಂಬ ಕ್ಷೇತ್ರವು ಕೇವಲ ನೋಡಿ ಟೀಕಿಸಲು, ಭ್ರಮನಿರಸನಗೊಳ್ಳಲು ಇರುವ ಕ್ಷೇತ್ರವಲ್ಲ ಎಂಬುದನ್ನು ಪದೇಪದೇ ನಮಗೆ ನಾವು ಹೇಳಿಕೊಳ್ಳಬೇಕಿದೆ. ರಾಜ್ಯ ಎದುರಿಸಿದ ಎಲ್ಲಾ ಪ್ರಕೃತಿ ವಿಕೋಪಗಳಲ್ಲಿ, ಕೊರೊನಾ ಮತ್ತು ಲಾಕ್‌ಡೌನ್ ತಂದಿಟ್ಟ ಸಂಕಷ್ಟಗಳಲ್ಲಿ ಸಾವಿರಾರು ಜನರು ಸಂಕಷ್ಟದಲ್ಲಿರುವವರಿಗೆ ಶಕ್ತಿಮೀರಿ ಸಹಾಯ ಮಾಡಿದ್ದನ್ನು ನಾವು ನೋಡಿದ್ದೇವೆ. ಇತರರಿಗೆ ಸಹಾಯ ಮಾಡುವ ಒಳ್ಳೆಯತನ ನಮ್ಮೆಲ್ಲರಲ್ಲಿದೆ, ಆ ಒಳ್ಳೆಯತನವನ್ನು ರಾಜಕಾರಣಕ್ಕೂ ಬಳಸಬಹುದು ಎಂಬ ನಂಬಿಕೆಯನ್ನು ಗಟ್ಟಿಗೊಳಿಸಬೇಕಿದೆ.

ತತ್ವಶಾಸ್ತ್ರದ ಒಂದು ವಾದದ ಪ್ರಕಾರ, 15ನೇ ಶತಮಾನದಲ್ಲಿ ಯುರೋಪಿನಲ್ಲಿ ನೀವು ಹುಟ್ಟಿದ್ದರೆ ನೀವು ನಾಸ್ತಿಕರಾಗುವ ಸಾಧ್ಯತೆಯೇ ಇದ್ದಿಲ್ಲವಂತೆ. ಅಂದರೆ ನಮ್ಮ ವಿಚಾರಧಾರೆಯೆಲ್ಲವೂ ನಮ್ಮ ಸುತ್ತಲಜನರ ವಿಚಾರಧಾರೆಯ ಅನುಗುಣವಾಗಿಯೇ ರೂಪುಗೊಳ್ಳುತ್ತದೆ. ಇದನ್ನು ಇಂದು ನಮ್ಮನ್ನು ಆಳುತ್ತಿರುವ ಅರೆಫ್ಯಾಸಿಸ್ಟ್ ಆಡಳಿತಗಳು ತುಂಬಾ ಚೆನ್ನಾಗಿ ಅರ್ಥಮಾಡಿಕೊಂಡಿವೆ. ದೃಶ್ಯ ಮಾಧ್ಯಮವನ್ನು ಕಬಳಿಸಿ, ನಿರಂತರವಾಗಿ ಸುಳ್ಳುಗಳನ್ನು ಹೇಳುತ್ತ, ನಾವು ಯೋಚಿಸಬಾರದ ವಿಷಯಗಳ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುತ್ತ, ಇದೇ ಸತ್ಯ ಎಂಬಂತೆ ಮರಳು ಮಾಡುತ್ತಿದ್ದಾರೆ. ಈ ಕೆಲಸದಲ್ಲಿ ಅವರು ಅದ್ಭುತ ಯಶಸ್ಸನ್ನು ಗಳಿಸಿದ್ದಾರೆ. ಈಗ, ಅದನ್ನು ಮೆಟ್ಟಿ ನಿಲ್ಲಲು, ಹೊಸ ರಾಜಕಾರಣವನ್ನು ಕಟ್ಟಬೇಕಾದರೆ, ಹೊಸ ನಂಬಿಕೆಯನ್ನು ಬೆಳೆಸಿಕೊಳ್ಳಬೇಕು ಹಾಗೂ ಅದು ಅಸಾಧ್ಯವಲ್ಲ. ಅದಕ್ಕೆ ನಮ್ಮ ಚಿಂತಕರು ಮೊದಲ ಪ್ರಮುಖ ಹೆಜ್ಜೆಯನ್ನಿಡಬೇಕಿದೆ. ಇವರು ಬರೆಯುವ ಪ್ರತಿಯೊಂದು ಪದ, ಆಡುವ ಪ್ರತಿಯೊಂದು ಮಾತಿನ ಹಿಂದೆ ಈ ಜನವಿರೋಧಿ, ಪ್ರಜಾಪ್ರಭುತ್ವವಿರೋಧಿ ಆಡಳಿತವನ್ನು ಕೊನೆಗಾಣಿಸುವ ಮತ್ತು ಹೊಸ ರಾಜಕಾರಣವನ್ನು ಹುಟ್ಟುಹಾಕುವ ಜವಾಬ್ದಾರಿ ಇರಬೇಕಿದೆ. ಆ ಜವಾಬ್ದಾರಿಯೇ ಕರ್ನಾಟಕದ ಮುಂದಿನ ರಾಜಕೀಯ ನಡೆಯನ್ನು ರೂಪಿಸುವಂತಾಗುವುದು.

ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...