HomeUncategorizedಹೊಸ ಜನಪರ ರಾಜಕಾರಣಕ್ಕೆ ನಾಂದಿ ಹಾಡಲಿದೆ 'ಮುಖ್ಯಮಂತ್ರಿ ಆಯ್ಕೆ' ಪ್ರಹಸನ

ಹೊಸ ಜನಪರ ರಾಜಕಾರಣಕ್ಕೆ ನಾಂದಿ ಹಾಡಲಿದೆ ‘ಮುಖ್ಯಮಂತ್ರಿ ಆಯ್ಕೆ’ ಪ್ರಹಸನ

- Advertisement -
- Advertisement -

1982ರ ಸಮಯ. ಆಂಧ್ರಪ್ರದೇಶದಲ್ಲಿ 5 ವರ್ಷದಲ್ಲಿ 5 ಬಾರಿ ಮುಖ್ಯಮಂತ್ರಿಗಳು ಬದಲಾಗಿದ್ದರು. ಕಾಂಗ್ರೆಸ್ಸಿನ ಹೈಕಮಾಂಡ್ ಸಂಸ್ಕೃತಿಯ ಉತ್ತುಂಗ. ಆಗ ಒಂದು ಸಲ ಕಾಂಗ್ರೆಸ್ ಪಕ್ಷದ ನಾಯಕ ಹೈದ್ರಾಬಾದಿನ ಏರ್‌ಪೋರ್ಟಿಗೆ ಬಂದಿಳಿದಿದ್ದರು. ಅವರನ್ನು ಸ್ವಾಗತಿಸಲು ಆಗಿನ ಮುಖ್ಯಮಂತ್ರಿ ಟಿ. ಆಂಜಯ್ಯ ಸುರಕ್ಷಾ ಗೆರೆಯನ್ನು ದಾಟಿ ಬಂದಿರುತ್ತಾರೆ. ಅದರಿಂದ ಸಿಟ್ಟಿಗೆದ್ದ ರಾಜೀವ್, ಅಲ್ಲಿಯೇ ಸಾರ್ವಜನಿಕರೆದುರು ಅವರಿಗೆ ಬಯ್ಯುತ್ತಾರೆ. ಮುಖ್ಯಮಂತ್ರಿಯನ್ನು ಬಫೂನ್ ಎಂದು ಕರೆಯುತ್ತಾರೆ. ಕೆಲವೇ ದಿನಗಳ ನಂತರ ಮುಖ್ಯಮಂತ್ರಿಯನ್ನು ಬದಲಿಸಲಾಗುತ್ತೆ. ಆಗ ಶುರುವಾಗಿದ್ದು ತೆಲುಗುವಾರಿ ಆತ್ಮಗೌರವಂ ಎಂಬ ನಡೆ. ದಶಕಗಳ ಕಾಂಗ್ರೆಸ್ ಆಳ್ವಿಕೆ ಕೊನೆಗೊಳ್ಳುತ್ತದೆ.

2021ರ ಕರ್ನಾಟಕದಲ್ಲಿ, ಕಾಂಗ್ರೆಸ್‌ನ ಹೈಕಮಾಂಡ್ ಸಂಸ್ಕೃತಿಯನ್ನು ಟೀಕಿಸುತ್ತಲೇ ಅಧಿಕಾರಕ್ಕೆ ಬಂದ ಬಿಜೆಪಿಯ ಮುಖ್ಯಮಂತ್ರಿ ಬದಲಾವಣೆಯ ಪ್ರಹಸನ ನಡೆಯುತ್ತಿದೆ. ಯಡಿಯೂರಪ್ಪನವರು ಯಾವ ಕಾರಣಕ್ಕೆ ರಾಜೀನಾಮೆ ನೀಡಿದ್ದಾರೆ ಎಂಬುದಕ್ಕೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಯಡಿಯೂರಪ್ಪನವರು ಮುಖ್ಯಮಂತ್ರಿ ಪಟ್ಟ ವಹಿಸಿಕೊಂಡಾಗಲೇ ಅವರಿಗೆ ವಯಸ್ಸು 75 ಮೀರಿತ್ತು, ಅತ್ಯಂತ ಭ್ರಷ್ಟ ಮುಖ್ಯಮಂತ್ರಿ ಎಂಬ ಪಟ್ಟವನ್ನೂ ಆಗಲೇ ಪಡೆದಿದ್ದರು. ಹಾಗಾಗಿ ಈ ಕಾರಣಗಳನ್ನಂತೂ ಒಪ್ಪಲು ಸಾಧ್ಯವಿಲ್ಲ, ಹಾಗಾದರೆ ಏನು ಕಾರಣ? ಅದು ’ಹೈಕಮಾಂಡ್ಗೆ ಮಾತ್ರ ಗೊತ್ತು. ಮುಂದಿನ ಮುಖ್ಯಮಂತ್ರಿ ಯಾರು ಎಂಬುದೂ ಕೇವಲ ’ಹೈಕಮಾಂಡ್ಗೆ ಗೊತ್ತು. ಈಗ ಶಾಸಕರ ಸಭೆ ಎಂಬ ಪ್ರಹಸನ ನಡೆಯುತ್ತಲಿದೆ. ಈ ನಮ್ಮ ಚುನಾಯಿತ ಶಾಸಕರು ತಮಗೆ ಒಪ್ಪಿಸಿದ ವರದಿಯನ್ನು ಓದಿ, ಮುಂದಿನ ಮುಖ್ಯಮಂತ್ರಿ ಯಾರು ಎಂದು ಘೋಷಿಸಲಿದ್ದಾರೆ. ಈ ಶಾಸಕರ ಯಾವ ಮಾತೂ ನಡೆಯುವುದಿಲ್ಲ ಎಂಬುದು ಬಹಿರಂಗ ಸತ್ಯ. ಇತ್ತೀಚಿನ ಸುದ್ದಿಯ ಪ್ರಕಾರ ಶಿಗ್ಗಾಂವದ ಶಾಸಕರಾದ ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಎಂದು ಘೋಷಿಸಲಾಗಿದೆ. ಆದರೆ ಈ ಹೊಸ ಮುಖ್ಯಮಂತ್ರಿಯಿಂದ ಏನನ್ನಾದರೂ ಸಾಧಿಸಬಹುದೇ, ಸಾಧನೆಯ ಅಪೇಕ್ಷೆಗಳನ್ನು ಅವರ ವಿರೋಧಿಗಳನ್ನು ಬಿಡಿ, ಅವರ ಸಮರ್ಥಕರೂ ಅದರ ಬಗ್ಗೆ ಏನನ್ನೂ ಮಾತನಾಡುವುದಿಲ್ಲ.

ಇನ್ನೂ ಮುಖ್ಯಮಂತ್ರಿಯಾಗಲು ಮಾನದಂಡಗಳೇನು ಎಂಬ ಚರ್ಚೆ ಬಂದಾಗ ಕೇಳಿಬರುತ್ತಿರುವ ಮಾತುಗಳು; ಸಂಭವನೀಯ ಮುಖ್ಯಮಂತ್ರಿಗಳ ಸಾಧನೆಯನ್ನು ಪರಿಗಣಿಸಲಾಗುತ್ತಿದೆಯೇ? ಅವರು ಶಿಕ್ಷಣ, ಆರೋಗ್ಯ, ಸಾಮಾಜಿಕ ನ್ಯಾಯ, ನೀರಾವರಿ, ಉದ್ಯೋಗ ಸೃಷ್ಟಿಯ ವಿಚಾರಗಳಲ್ಲಿ ಅದ್ಭುತವಾದ ಕೆಲಸ ಮಾಡಿದ್ದಾರೆಯೇ? ತಮ್ಮ ತಮ್ಮ ಇಲಾಖೆಗಳಲ್ಲಿ ಉತ್ತಮ ಆಡಳಿತ ನೀಡಿದ ಚರ್ಚೆಯಾಗುತ್ತಿದೆಯೇ? ಇಲ್ಲ, ಚರ್ಚೆ ಆಗುತ್ತಿರುವುದು ಜಾತಿ ಲೆಕ್ಕಾಚಾರ!

ಈಗ ಜನರು ಕೇಳಬೇಕಿರುವ/ಕೇಳಿಕೊಳ್ಳಬೇಕಿರುವ ಪ್ರಶ್ನೆ: ಇದು ರಾಜಕಾರಣವಾ? ಇದನ್ಯಾಕೆ ನಾವು ಸಹಿಸಿಕೊಳ್ಳಬೇಕು? ಅಧಿಕಾರದಲ್ಲಿರುವವರು ಉದ್ಯೋಗ ಸೃಷ್ಟಿಯ ಬಗ್ಗೆ ಚರ್ಚೆ ಹುಟ್ಟುಹಾಕಿದ್ದಾರೆಯೇ? ನಿರುದ್ಯೋಗ ಹೆಚ್ಚುತ್ತಿರುವ ಸಮಯದಲ್ಲಿ ಅದನ್ನು ಒಂದು ಸಮಸ್ಯೆ, ಆದ್ಯತೆಯ ವಿಷಯ ಎಂದು ಸರ್ಕಾರದವರು ಪರಿಗಣಿಸಿದ್ದಾರೆಯೇ? ಕಳೆದ ಒಂದೂವರೆ ವರ್ಷದಿಂದ ಕೊರೊನಾದಿಂದ, ಲಾಕ್‌ಡೌನ್‌ನಿಂದ ರಾಜ್ಯ ತತ್ತರಿಸಿದ್ದರೂ ಆರೋಗ್ಯ ಸೇವೆಯಲ್ಲಿ ಯಾವ ಬದಲಾವಣೆ ಆಗಬೇಕು, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯನ್ನು ಹೇಗೆ ಸುಧಾರಿಸಬೇಕು ಎಂಬದು ಚರ್ಚೆಯಾಗುತ್ತಿದೆಯೇ? ಕೃಷಿ ಬಿಕ್ಕಟ್ಟು, ರೈತರ ಆತ್ಮಹತ್ಯೆಗಳು ಸುದ್ದಿಯೂ ಆಗದ ಪರಿಸ್ಥಿತಿಗೆ ಯಾಕೆ ಬಂದೆವು ನಾವು? ಮರ್ಯಾದೆಗೇಡು ಹತ್ಯೆಗಳು, ಜಾತಿ ದೌರ್ಜನ್ಯಗಳು ಹೆಚ್ಚುತ್ತಲೇ ಇರುವಾಗ, ಇವುಗಳನ್ನು ನಿಲ್ಲಿಸಲು ಏನಾದರೂ ಕಾರ್ಯಕ್ರಮ ಬೇಕಲ್ಲವೇ?
ಇವ್ಯಾವದನ್ನೂ ಮಾಡದೇ ಇರುವ ರಾಜಕಾರಣವನ್ನು ಕನ್ನಡಿಗರು ನೋಡುತ್ತಿದ್ದಾರೆ. ಲಕ್ಷಾಂತರ ಜನರು ತಮ್ಮ ಇಡೀ ಜೀವನವನ್ನು ಮುಡುಪಾಗಿಟ್ಟು ಗಳಿಸಿದ ಪ್ರಜಾಪ್ರಭುತ್ವದ ಅಳಿವಿಗೆ ಶ್ರಮಿಸುತ್ತಿರುವ ಸಂದರ್ಭದಲ್ಲಿ ಭ್ರಮನಿರಸನ ಮಡುಗಟ್ಟಿದೆ ಎಂದು ಕಾಣುತ್ತಿದೆ. ಎಲ್ಲರೂ ಭ್ರಷ್ಟರು, ಯಾರಿಂದ ಏನೂ ಆಗುವುದಿಲ್ಲ ಎಂಬ ಸಿನಿಕತೆಯ ಪ್ರಚಲಿತವಾಗಿದೆ ಎಂದು ಕಾಣುತ್ತಿದೆ. ಆದರೆ ಇದು ನಿಜವೇ?

This is battle of perception! ಈ ಪ್ರಶ್ನೆಗೆ ಅವರವರ ಗ್ರಹಿಕೆ, ಚಿಂತನೆ, ಅವರ ಸುತ್ತಲೂ ಇರುವವರ ಚಿಂತನೆಯ ಮೇಲೆ ಉತ್ತರ ಸಿಗುವುದು.

ನನಗಂತೂ ಉತ್ತರ ಸ್ಪಷ್ಟವಾಗಿ ಕಾಣಿಸುತ್ತಿದೆ; ಇಂದಿನ ಸಿನಿಕತೆ ತಾತ್ವಿಕ ಸಿಟ್ಟಾಗಿ ಹೊರಹೊಮ್ಮಲು ಹೆಚ್ಚು ಸಮಯ ಹಿಡಿಯುವುದಿಲ್ಲ. ಮಾಧ್ಯಮಗಳು ನಿರಂತರವಾಗಿ ಬಿತ್ತರಿಸುತ್ತಿರುವ ಸುಳ್ಳುಗಳು ಸುಳ್ಳುಗಳೆಂದು ತಿಳಿಯದೇ ಇರುವುದಿಲ್ಲ. ಈಗಾಗಲೇ ಈ ಸುಳ್ಳು ಹೇಳುತ್ತಿರುವ ಮಾಧ್ಯಮಗಳು ತಮ್ಮ ವಿಶ್ವಾಸಾರ್ಹತೆಯನ್ನು ಸಂಪೂರ್ಣವಾಗಿ ಅಲ್ಲವಾದರೂ ಬಹುಮಟ್ಟಿಗೆ ಕಳೆದುಕೊಂಡಿವೆ. ಈ ದೇಶದ ಜನತೆಯೊಂದಿಗೆ ಕನ್ನಡಿಗರೂ ಬದಲಾಗಬಹುದು ಎಂಬುದನ್ನು ಈ ಮುನ್ನ ಅನೇಕ ಬಾರಿ ತೋರಿಸಿದ್ದಾರೆ. ಹೊಸದೊಂದು ರಾಜಕಾರಣ ಹುಟ್ಟುವ ಸಾಧ್ಯತೆಗಳು ಖಂಡಿತವಾಗಿಯೂ ಇವೆ.

ಆದರೆ, ಇದು ಎಷ್ಟೇ ಅನಿವಾರ್ಯವಾಗಿದ್ದರೂ ತನ್ನಿಂತಾನೆ ಆಗುವ ಪ್ರಕ್ರಿಯೆಯಲ್ಲ. ರಾಜ್ಯದ ಜನರೆಲ್ಲರೂ ಈ ಹೊಸ ರಾಜಕಾರಣದ ಸಾಧ್ಯಾಸಾಧ್ಯತೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಿದೆ. ಅದಕ್ಕಿಂತ ಮುಖ್ಯವಾಗಿ ಈ ಸಿನಿಕತೆಯ ಕಾರ್ಮೋಡಗಳನ್ನು ಬದಿಗೆ ತಳ್ಳುವ ಕೆಲಸವನ್ನು ಪ್ರಜ್ಞಾಪೂರ್ವಕವಾಗಿ ಮಾಡಬೇಕಿದೆ. ರಾಜಕೀಯ ಎಂಬ ಕ್ಷೇತ್ರವು ಕೇವಲ ನೋಡಿ ಟೀಕಿಸಲು, ಭ್ರಮನಿರಸನಗೊಳ್ಳಲು ಇರುವ ಕ್ಷೇತ್ರವಲ್ಲ ಎಂಬುದನ್ನು ಪದೇಪದೇ ನಮಗೆ ನಾವು ಹೇಳಿಕೊಳ್ಳಬೇಕಿದೆ. ರಾಜ್ಯ ಎದುರಿಸಿದ ಎಲ್ಲಾ ಪ್ರಕೃತಿ ವಿಕೋಪಗಳಲ್ಲಿ, ಕೊರೊನಾ ಮತ್ತು ಲಾಕ್‌ಡೌನ್ ತಂದಿಟ್ಟ ಸಂಕಷ್ಟಗಳಲ್ಲಿ ಸಾವಿರಾರು ಜನರು ಸಂಕಷ್ಟದಲ್ಲಿರುವವರಿಗೆ ಶಕ್ತಿಮೀರಿ ಸಹಾಯ ಮಾಡಿದ್ದನ್ನು ನಾವು ನೋಡಿದ್ದೇವೆ. ಇತರರಿಗೆ ಸಹಾಯ ಮಾಡುವ ಒಳ್ಳೆಯತನ ನಮ್ಮೆಲ್ಲರಲ್ಲಿದೆ, ಆ ಒಳ್ಳೆಯತನವನ್ನು ರಾಜಕಾರಣಕ್ಕೂ ಬಳಸಬಹುದು ಎಂಬ ನಂಬಿಕೆಯನ್ನು ಗಟ್ಟಿಗೊಳಿಸಬೇಕಿದೆ.

ತತ್ವಶಾಸ್ತ್ರದ ಒಂದು ವಾದದ ಪ್ರಕಾರ, 15ನೇ ಶತಮಾನದಲ್ಲಿ ಯುರೋಪಿನಲ್ಲಿ ನೀವು ಹುಟ್ಟಿದ್ದರೆ ನೀವು ನಾಸ್ತಿಕರಾಗುವ ಸಾಧ್ಯತೆಯೇ ಇದ್ದಿಲ್ಲವಂತೆ. ಅಂದರೆ ನಮ್ಮ ವಿಚಾರಧಾರೆಯೆಲ್ಲವೂ ನಮ್ಮ ಸುತ್ತಲಜನರ ವಿಚಾರಧಾರೆಯ ಅನುಗುಣವಾಗಿಯೇ ರೂಪುಗೊಳ್ಳುತ್ತದೆ. ಇದನ್ನು ಇಂದು ನಮ್ಮನ್ನು ಆಳುತ್ತಿರುವ ಅರೆಫ್ಯಾಸಿಸ್ಟ್ ಆಡಳಿತಗಳು ತುಂಬಾ ಚೆನ್ನಾಗಿ ಅರ್ಥಮಾಡಿಕೊಂಡಿವೆ. ದೃಶ್ಯ ಮಾಧ್ಯಮವನ್ನು ಕಬಳಿಸಿ, ನಿರಂತರವಾಗಿ ಸುಳ್ಳುಗಳನ್ನು ಹೇಳುತ್ತ, ನಾವು ಯೋಚಿಸಬಾರದ ವಿಷಯಗಳ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುತ್ತ, ಇದೇ ಸತ್ಯ ಎಂಬಂತೆ ಮರಳು ಮಾಡುತ್ತಿದ್ದಾರೆ. ಈ ಕೆಲಸದಲ್ಲಿ ಅವರು ಅದ್ಭುತ ಯಶಸ್ಸನ್ನು ಗಳಿಸಿದ್ದಾರೆ. ಈಗ, ಅದನ್ನು ಮೆಟ್ಟಿ ನಿಲ್ಲಲು, ಹೊಸ ರಾಜಕಾರಣವನ್ನು ಕಟ್ಟಬೇಕಾದರೆ, ಹೊಸ ನಂಬಿಕೆಯನ್ನು ಬೆಳೆಸಿಕೊಳ್ಳಬೇಕು ಹಾಗೂ ಅದು ಅಸಾಧ್ಯವಲ್ಲ. ಅದಕ್ಕೆ ನಮ್ಮ ಚಿಂತಕರು ಮೊದಲ ಪ್ರಮುಖ ಹೆಜ್ಜೆಯನ್ನಿಡಬೇಕಿದೆ. ಇವರು ಬರೆಯುವ ಪ್ರತಿಯೊಂದು ಪದ, ಆಡುವ ಪ್ರತಿಯೊಂದು ಮಾತಿನ ಹಿಂದೆ ಈ ಜನವಿರೋಧಿ, ಪ್ರಜಾಪ್ರಭುತ್ವವಿರೋಧಿ ಆಡಳಿತವನ್ನು ಕೊನೆಗಾಣಿಸುವ ಮತ್ತು ಹೊಸ ರಾಜಕಾರಣವನ್ನು ಹುಟ್ಟುಹಾಕುವ ಜವಾಬ್ದಾರಿ ಇರಬೇಕಿದೆ. ಆ ಜವಾಬ್ದಾರಿಯೇ ಕರ್ನಾಟಕದ ಮುಂದಿನ ರಾಜಕೀಯ ನಡೆಯನ್ನು ರೂಪಿಸುವಂತಾಗುವುದು.

ರಾಜಶೇಖರ್ ಅಕ್ಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....