Homeಮುಖಪುಟಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ: ಉತ್ತರಾಖಂಡದಲ್ಲಿ ಮುಂದುವರಿದ ಕೋಮು ಪ್ರಚೋದನಾ ಹೇಳಿಕೆಗಳು

ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ: ಉತ್ತರಾಖಂಡದಲ್ಲಿ ಮುಂದುವರಿದ ಕೋಮು ಪ್ರಚೋದನಾ ಹೇಳಿಕೆಗಳು

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿಯಲ್ಲಿ ಆರಂಭವಾಗಿರುವ ಕೋಮು ಉದ್ವಿಗ್ನತೆಯ ನಡುವೆಯೂ ಕೋಮು ಪ್ರಚೋದನಾ ಹೇಳಿಕೆಗಳು ಮುಂದುವರಿದಿವೆ. ಕೋಮುವಾದಿ ಭಾಷಣ ಮಾಡಿದ ಆರೋಪ ಹೊತ್ತಿರುವ ದರ್ಶನ್ ಭಾರತಿ ಅವರ ನಿಕಟವರ್ತಿ ಸ್ವಾಮಿ ಆದಿ ಯೋಗಿ ಎಂಬುವವರು 2024 ರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ (ಉತ್ತರಾಖಂಡ) ಪ್ರಾರಂಭವಾಗುತ್ತದೆ ಎಂಬ ಕೋಮು ಪ್ರಚೋದಕ ಹೇಳಿಕೆ ನೀಡಿದ್ದಾರೆ.

ಇನ್ನು ಉದ್ವಿಗ್ನತೆಯ ನಡುವೆಯೆ ಜೂನ್ 15ರಂದು ಮುಸ್ಲಿಮರ ವಿರುದ್ಧ ಮಹಾಪಂಚಾಯತ್ ಆಯೋಜಿಸುವುದಾಗಿ ಹಿಂದುತ್ವ ಗುಂಪುಗಳು ಬೆದರಿಕೆ ಹಾಕಿದ್ದರು. ಆದರೆ ಜಿಲ್ಲಾಡಳಿತವು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ, ನಿಷೇಧಾಜ್ಞೆ ವಿಧಿಸಿದೆ.

ದಿ ವೈರ್ ಜೊತೆ ಮಾತನಾಡಿರುವ ಆದಿ ಯೋಗಿ “ಈ ಭೂಮಿಯು ದೇವರುಗಳು, ಋಷಿಗಳು ಮತ್ತು ಸಂತರಿಗೆ ಸೇರಿದೆ. ಜನರು ಅವರ ಸೇವೆಗಾಗಿ ಇಲ್ಲಿಗೆ ಬಂದಿದ್ದಾರೆ, ಆದರೆ ಅವರು ಸೇವೆ ಮಾಡುವ ಬದಲಾಗಿ ಮಾಂಸವನ್ನು ಸೇವಿಸುತ್ತಿದ್ದಾರೆ ಮತ್ತು ನಮ್ಮ ಹೆಣ್ಣುಮಕ್ಕಳ ಮೇಲೆ ಅನಗತ್ಯ ನೋಟ ಬೀರುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಉತ್ತರಾಖಂಡದಲ್ಲಿ ಮುಸ್ಲಿಮರನ್ನು ಬಹಿಷ್ಕರಿಸುತ್ತೀರಾ ಎಂಬ ಪ್ರಶ್ನೆಗೆ “ಇಲ್ಲ, ನಾವು ಅದನ್ನು ಮಾಡುವುದಿಲ್ಲ. ಈ ಸ್ಥಳ ನಮಗೆ ಮೆಕ್ಕಾ ಇದ್ದಂತೆ. ಮೆಕ್ಕಾ ಪ್ರವೇಶಿಸಲು ನಮಗೆ ಅನುಮತಿ ಇದೆಯೇ? ಅದೇ ರೀತಿ ಇದು ನಮ್ಮ ಧಾರ್ಮಿಕ ಕ್ಷೇತ್ರವಾಗಿದ್ದು, 2024ರ ವೇಳೆಗೆ ಉತ್ತರಾಖಂಡವನ್ನು ಯಾವುದೇ ಜಿಹಾದಿ ಪ್ರಭಾವದಿಂದ ಮುಕ್ತಗೊಳಿಸುತ್ತೇವೆ, ರಾಜ್ಯದ ಎಲ್ಲಾ ಮಾಂಸಾಹಾರಗಳನ್ನು ಬಹಿಷ್ಕರಿಸಿ, ಅಂಗಡಿಗಳನ್ನು ಮುಚ್ಚುತ್ತೇವೆ. 2024 ರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ” ಎಂದಿದ್ದಾರೆ.

ಉತ್ತರಕಾಶಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿರುವ ಭಾರತಿ ಈ ಹಿಂದೆ “ನಾವು ರಾಜ್ಯದ ಪ್ರತಿಯೊಬ್ಬ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇವೆ. ನಾವು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ‘ಲ್ಯಾಂಡ್ ಜಿಹಾದ್’ ವಿಷಯವನ್ನು ಚರ್ಚಿಸಿದ್ದೇವೆ ಮತ್ತು ಆ ಚರ್ಚೆಯ ನಂತರ ಅವರು ‘ಲ್ಯಾಂಡ್ ಜಿಹಾದ್’ ಕುರಿತು ಕಾನೂನುಗಳನ್ನು ಜಾರಿಗೆ ತಂದರು, ಇದರ ಪರಿಣಾಮವಾಗಿ 300 ಕ್ಕೂ ಹೆಚ್ಚು ಸಮಾಧಿಗಳನ್ನು ಬುಲ್ಡೋಜರ್ ಮಾಡಲಾಗಿದೆ” ಎಂದಿದ್ದರು.

ಉತ್ತರ ಕಾಶಿಯ ಪುರೋಲಾ ಪ್ರದೇಶದಲ್ಲಿ ಕಳೆದ ತಿಂಗಳು 14 ವರ್ಷದ ಹಿಂದೂ ಹುಡುಗಿಯನ್ನು ಇಬ್ಬರು ಪುರುಷರು – ಒಬ್ಬ ಮುಸ್ಲಿಂ ಮತ್ತು ಇನ್ನೊಬ್ಬ ಹಿಂದೂ ಅಪಹರಣ ಯತ್ನ ನಡೆಸಿದ ಆರೋಪದ ನಂತರ ಕೋಮು ದಾಳಿಗಳು ಹೆಚ್ಚಾಗಿವೆ. ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚುಬೇಕು ಎಂದು ಬೆದರಿಕೆ ಹಾಕುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಈ ಮಾರುಕಟ್ಟೆಯಲ್ಲಿ ಸರಿಸುಮಾರು 650-700 ಅಂಗಡಿಗಳಿದ್ದು, ಇವುಗಳಲ್ಲಿ ಸುಮಾರು 30-40 ಮುಸ್ಲಿಮರ ಅಂಗಡಿಗಳಿವೆ.

”ಲವ್ ಜಿಹಾದಿಗಳು ಜೂನ್ 15ರಂದು ಮಹಾಪಂಚಾಯತ್‌ಗೆ ಮುಂಚಿತವಾಗಿ ಅಂಗಡಿಗಳನ್ನು ಖಾಲಿ ಮಾಡಬೇಕು ಎಂದು ತಿಳಿಸಲಾಗಿದೆ. ಅವರು ಖಾಲಿ ಮಾಡದಿದ್ದರೆ,  ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ‘ಭೂಮಿ ರಕ್ಷಣೆಗಾಗಿ ಅಭಿಯಾನಕ್ಕೆ ಕರೆ ನೀಡುತ್ತದೆ” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಉತ್ತರಾಖಂಡ ಹೈಕೋರ್ಟ್, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ರಾಜ್ಯಕ್ಕೆ ಆದೇಶಿಸಿದೆ ಮತ್ತು ಉದ್ದೇಶಿತ ಮಹಾಪಂಚಾಯತ್ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಸದಂತೆ ಎಲ್ಲಾ ಪಕ್ಷಗಳಿಗೆ ಸೂಚನೆ ನೀಡಿದೆ.

ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ದ್ವೇಷದ ಭಾಷಣಗಳ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್‌ಗಳನ್ನು ದಾಖಲಿಸುವಂತೆ ಸೂಚಿಸಿದೆ. ಆದರೂ ಕಳೆದ 20 ದಿನಗಳಿಂದ ಉತ್ತರಕಾಶಿಯಲ್ಲಿ ಮುಸ್ಲಿಮರು ತಮ್ಮ ಜೀವನೋಪಾಯವನ್ನು ಕಳೆದುಕೊಳ್ಳುವ ಭೀತಿಯಲ್ಲಿ ಬದುಕುತ್ತಿದ್ದಾರೆ. ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ

ಇದನ್ನೂ ಓದಿ; ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...