Homeಮುಖಪುಟಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ: ಉತ್ತರಾಖಂಡದಲ್ಲಿ ಮುಂದುವರಿದ ಕೋಮು ಪ್ರಚೋದನಾ ಹೇಳಿಕೆಗಳು

ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ: ಉತ್ತರಾಖಂಡದಲ್ಲಿ ಮುಂದುವರಿದ ಕೋಮು ಪ್ರಚೋದನಾ ಹೇಳಿಕೆಗಳು

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿಯಲ್ಲಿ ಆರಂಭವಾಗಿರುವ ಕೋಮು ಉದ್ವಿಗ್ನತೆಯ ನಡುವೆಯೂ ಕೋಮು ಪ್ರಚೋದನಾ ಹೇಳಿಕೆಗಳು ಮುಂದುವರಿದಿವೆ. ಕೋಮುವಾದಿ ಭಾಷಣ ಮಾಡಿದ ಆರೋಪ ಹೊತ್ತಿರುವ ದರ್ಶನ್ ಭಾರತಿ ಅವರ ನಿಕಟವರ್ತಿ ಸ್ವಾಮಿ ಆದಿ ಯೋಗಿ ಎಂಬುವವರು 2024 ರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ (ಉತ್ತರಾಖಂಡ) ಪ್ರಾರಂಭವಾಗುತ್ತದೆ ಎಂಬ ಕೋಮು ಪ್ರಚೋದಕ ಹೇಳಿಕೆ ನೀಡಿದ್ದಾರೆ.

ಇನ್ನು ಉದ್ವಿಗ್ನತೆಯ ನಡುವೆಯೆ ಜೂನ್ 15ರಂದು ಮುಸ್ಲಿಮರ ವಿರುದ್ಧ ಮಹಾಪಂಚಾಯತ್ ಆಯೋಜಿಸುವುದಾಗಿ ಹಿಂದುತ್ವ ಗುಂಪುಗಳು ಬೆದರಿಕೆ ಹಾಕಿದ್ದರು. ಆದರೆ ಜಿಲ್ಲಾಡಳಿತವು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ, ನಿಷೇಧಾಜ್ಞೆ ವಿಧಿಸಿದೆ.

ದಿ ವೈರ್ ಜೊತೆ ಮಾತನಾಡಿರುವ ಆದಿ ಯೋಗಿ “ಈ ಭೂಮಿಯು ದೇವರುಗಳು, ಋಷಿಗಳು ಮತ್ತು ಸಂತರಿಗೆ ಸೇರಿದೆ. ಜನರು ಅವರ ಸೇವೆಗಾಗಿ ಇಲ್ಲಿಗೆ ಬಂದಿದ್ದಾರೆ, ಆದರೆ ಅವರು ಸೇವೆ ಮಾಡುವ ಬದಲಾಗಿ ಮಾಂಸವನ್ನು ಸೇವಿಸುತ್ತಿದ್ದಾರೆ ಮತ್ತು ನಮ್ಮ ಹೆಣ್ಣುಮಕ್ಕಳ ಮೇಲೆ ಅನಗತ್ಯ ನೋಟ ಬೀರುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಉತ್ತರಾಖಂಡದಲ್ಲಿ ಮುಸ್ಲಿಮರನ್ನು ಬಹಿಷ್ಕರಿಸುತ್ತೀರಾ ಎಂಬ ಪ್ರಶ್ನೆಗೆ “ಇಲ್ಲ, ನಾವು ಅದನ್ನು ಮಾಡುವುದಿಲ್ಲ. ಈ ಸ್ಥಳ ನಮಗೆ ಮೆಕ್ಕಾ ಇದ್ದಂತೆ. ಮೆಕ್ಕಾ ಪ್ರವೇಶಿಸಲು ನಮಗೆ ಅನುಮತಿ ಇದೆಯೇ? ಅದೇ ರೀತಿ ಇದು ನಮ್ಮ ಧಾರ್ಮಿಕ ಕ್ಷೇತ್ರವಾಗಿದ್ದು, 2024ರ ವೇಳೆಗೆ ಉತ್ತರಾಖಂಡವನ್ನು ಯಾವುದೇ ಜಿಹಾದಿ ಪ್ರಭಾವದಿಂದ ಮುಕ್ತಗೊಳಿಸುತ್ತೇವೆ, ರಾಜ್ಯದ ಎಲ್ಲಾ ಮಾಂಸಾಹಾರಗಳನ್ನು ಬಹಿಷ್ಕರಿಸಿ, ಅಂಗಡಿಗಳನ್ನು ಮುಚ್ಚುತ್ತೇವೆ. 2024 ರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ” ಎಂದಿದ್ದಾರೆ.

ಉತ್ತರಕಾಶಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿರುವ ಭಾರತಿ ಈ ಹಿಂದೆ “ನಾವು ರಾಜ್ಯದ ಪ್ರತಿಯೊಬ್ಬ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇವೆ. ನಾವು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ‘ಲ್ಯಾಂಡ್ ಜಿಹಾದ್’ ವಿಷಯವನ್ನು ಚರ್ಚಿಸಿದ್ದೇವೆ ಮತ್ತು ಆ ಚರ್ಚೆಯ ನಂತರ ಅವರು ‘ಲ್ಯಾಂಡ್ ಜಿಹಾದ್’ ಕುರಿತು ಕಾನೂನುಗಳನ್ನು ಜಾರಿಗೆ ತಂದರು, ಇದರ ಪರಿಣಾಮವಾಗಿ 300 ಕ್ಕೂ ಹೆಚ್ಚು ಸಮಾಧಿಗಳನ್ನು ಬುಲ್ಡೋಜರ್ ಮಾಡಲಾಗಿದೆ” ಎಂದಿದ್ದರು.

ಉತ್ತರ ಕಾಶಿಯ ಪುರೋಲಾ ಪ್ರದೇಶದಲ್ಲಿ ಕಳೆದ ತಿಂಗಳು 14 ವರ್ಷದ ಹಿಂದೂ ಹುಡುಗಿಯನ್ನು ಇಬ್ಬರು ಪುರುಷರು – ಒಬ್ಬ ಮುಸ್ಲಿಂ ಮತ್ತು ಇನ್ನೊಬ್ಬ ಹಿಂದೂ ಅಪಹರಣ ಯತ್ನ ನಡೆಸಿದ ಆರೋಪದ ನಂತರ ಕೋಮು ದಾಳಿಗಳು ಹೆಚ್ಚಾಗಿವೆ. ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚುಬೇಕು ಎಂದು ಬೆದರಿಕೆ ಹಾಕುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಈ ಮಾರುಕಟ್ಟೆಯಲ್ಲಿ ಸರಿಸುಮಾರು 650-700 ಅಂಗಡಿಗಳಿದ್ದು, ಇವುಗಳಲ್ಲಿ ಸುಮಾರು 30-40 ಮುಸ್ಲಿಮರ ಅಂಗಡಿಗಳಿವೆ.

”ಲವ್ ಜಿಹಾದಿಗಳು ಜೂನ್ 15ರಂದು ಮಹಾಪಂಚಾಯತ್‌ಗೆ ಮುಂಚಿತವಾಗಿ ಅಂಗಡಿಗಳನ್ನು ಖಾಲಿ ಮಾಡಬೇಕು ಎಂದು ತಿಳಿಸಲಾಗಿದೆ. ಅವರು ಖಾಲಿ ಮಾಡದಿದ್ದರೆ,  ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ‘ಭೂಮಿ ರಕ್ಷಣೆಗಾಗಿ ಅಭಿಯಾನಕ್ಕೆ ಕರೆ ನೀಡುತ್ತದೆ” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಉತ್ತರಾಖಂಡ ಹೈಕೋರ್ಟ್, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ರಾಜ್ಯಕ್ಕೆ ಆದೇಶಿಸಿದೆ ಮತ್ತು ಉದ್ದೇಶಿತ ಮಹಾಪಂಚಾಯತ್ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಸದಂತೆ ಎಲ್ಲಾ ಪಕ್ಷಗಳಿಗೆ ಸೂಚನೆ ನೀಡಿದೆ.

ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ದ್ವೇಷದ ಭಾಷಣಗಳ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್‌ಗಳನ್ನು ದಾಖಲಿಸುವಂತೆ ಸೂಚಿಸಿದೆ. ಆದರೂ ಕಳೆದ 20 ದಿನಗಳಿಂದ ಉತ್ತರಕಾಶಿಯಲ್ಲಿ ಮುಸ್ಲಿಮರು ತಮ್ಮ ಜೀವನೋಪಾಯವನ್ನು ಕಳೆದುಕೊಳ್ಳುವ ಭೀತಿಯಲ್ಲಿ ಬದುಕುತ್ತಿದ್ದಾರೆ. ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ

ಇದನ್ನೂ ಓದಿ; ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...