Homeಮುಖಪುಟಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ: ಉತ್ತರಾಖಂಡದಲ್ಲಿ ಮುಂದುವರಿದ ಕೋಮು ಪ್ರಚೋದನಾ ಹೇಳಿಕೆಗಳು

ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ: ಉತ್ತರಾಖಂಡದಲ್ಲಿ ಮುಂದುವರಿದ ಕೋಮು ಪ್ರಚೋದನಾ ಹೇಳಿಕೆಗಳು

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿಯಲ್ಲಿ ಆರಂಭವಾಗಿರುವ ಕೋಮು ಉದ್ವಿಗ್ನತೆಯ ನಡುವೆಯೂ ಕೋಮು ಪ್ರಚೋದನಾ ಹೇಳಿಕೆಗಳು ಮುಂದುವರಿದಿವೆ. ಕೋಮುವಾದಿ ಭಾಷಣ ಮಾಡಿದ ಆರೋಪ ಹೊತ್ತಿರುವ ದರ್ಶನ್ ಭಾರತಿ ಅವರ ನಿಕಟವರ್ತಿ ಸ್ವಾಮಿ ಆದಿ ಯೋಗಿ ಎಂಬುವವರು 2024 ರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ (ಉತ್ತರಾಖಂಡ) ಪ್ರಾರಂಭವಾಗುತ್ತದೆ ಎಂಬ ಕೋಮು ಪ್ರಚೋದಕ ಹೇಳಿಕೆ ನೀಡಿದ್ದಾರೆ.

ಇನ್ನು ಉದ್ವಿಗ್ನತೆಯ ನಡುವೆಯೆ ಜೂನ್ 15ರಂದು ಮುಸ್ಲಿಮರ ವಿರುದ್ಧ ಮಹಾಪಂಚಾಯತ್ ಆಯೋಜಿಸುವುದಾಗಿ ಹಿಂದುತ್ವ ಗುಂಪುಗಳು ಬೆದರಿಕೆ ಹಾಕಿದ್ದರು. ಆದರೆ ಜಿಲ್ಲಾಡಳಿತವು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ, ನಿಷೇಧಾಜ್ಞೆ ವಿಧಿಸಿದೆ.

ದಿ ವೈರ್ ಜೊತೆ ಮಾತನಾಡಿರುವ ಆದಿ ಯೋಗಿ “ಈ ಭೂಮಿಯು ದೇವರುಗಳು, ಋಷಿಗಳು ಮತ್ತು ಸಂತರಿಗೆ ಸೇರಿದೆ. ಜನರು ಅವರ ಸೇವೆಗಾಗಿ ಇಲ್ಲಿಗೆ ಬಂದಿದ್ದಾರೆ, ಆದರೆ ಅವರು ಸೇವೆ ಮಾಡುವ ಬದಲಾಗಿ ಮಾಂಸವನ್ನು ಸೇವಿಸುತ್ತಿದ್ದಾರೆ ಮತ್ತು ನಮ್ಮ ಹೆಣ್ಣುಮಕ್ಕಳ ಮೇಲೆ ಅನಗತ್ಯ ನೋಟ ಬೀರುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಉತ್ತರಾಖಂಡದಲ್ಲಿ ಮುಸ್ಲಿಮರನ್ನು ಬಹಿಷ್ಕರಿಸುತ್ತೀರಾ ಎಂಬ ಪ್ರಶ್ನೆಗೆ “ಇಲ್ಲ, ನಾವು ಅದನ್ನು ಮಾಡುವುದಿಲ್ಲ. ಈ ಸ್ಥಳ ನಮಗೆ ಮೆಕ್ಕಾ ಇದ್ದಂತೆ. ಮೆಕ್ಕಾ ಪ್ರವೇಶಿಸಲು ನಮಗೆ ಅನುಮತಿ ಇದೆಯೇ? ಅದೇ ರೀತಿ ಇದು ನಮ್ಮ ಧಾರ್ಮಿಕ ಕ್ಷೇತ್ರವಾಗಿದ್ದು, 2024ರ ವೇಳೆಗೆ ಉತ್ತರಾಖಂಡವನ್ನು ಯಾವುದೇ ಜಿಹಾದಿ ಪ್ರಭಾವದಿಂದ ಮುಕ್ತಗೊಳಿಸುತ್ತೇವೆ, ರಾಜ್ಯದ ಎಲ್ಲಾ ಮಾಂಸಾಹಾರಗಳನ್ನು ಬಹಿಷ್ಕರಿಸಿ, ಅಂಗಡಿಗಳನ್ನು ಮುಚ್ಚುತ್ತೇವೆ. 2024 ರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ” ಎಂದಿದ್ದಾರೆ.

ಉತ್ತರಕಾಶಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿರುವ ಭಾರತಿ ಈ ಹಿಂದೆ “ನಾವು ರಾಜ್ಯದ ಪ್ರತಿಯೊಬ್ಬ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇವೆ. ನಾವು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ‘ಲ್ಯಾಂಡ್ ಜಿಹಾದ್’ ವಿಷಯವನ್ನು ಚರ್ಚಿಸಿದ್ದೇವೆ ಮತ್ತು ಆ ಚರ್ಚೆಯ ನಂತರ ಅವರು ‘ಲ್ಯಾಂಡ್ ಜಿಹಾದ್’ ಕುರಿತು ಕಾನೂನುಗಳನ್ನು ಜಾರಿಗೆ ತಂದರು, ಇದರ ಪರಿಣಾಮವಾಗಿ 300 ಕ್ಕೂ ಹೆಚ್ಚು ಸಮಾಧಿಗಳನ್ನು ಬುಲ್ಡೋಜರ್ ಮಾಡಲಾಗಿದೆ” ಎಂದಿದ್ದರು.

ಉತ್ತರ ಕಾಶಿಯ ಪುರೋಲಾ ಪ್ರದೇಶದಲ್ಲಿ ಕಳೆದ ತಿಂಗಳು 14 ವರ್ಷದ ಹಿಂದೂ ಹುಡುಗಿಯನ್ನು ಇಬ್ಬರು ಪುರುಷರು – ಒಬ್ಬ ಮುಸ್ಲಿಂ ಮತ್ತು ಇನ್ನೊಬ್ಬ ಹಿಂದೂ ಅಪಹರಣ ಯತ್ನ ನಡೆಸಿದ ಆರೋಪದ ನಂತರ ಕೋಮು ದಾಳಿಗಳು ಹೆಚ್ಚಾಗಿವೆ. ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚುಬೇಕು ಎಂದು ಬೆದರಿಕೆ ಹಾಕುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಈ ಮಾರುಕಟ್ಟೆಯಲ್ಲಿ ಸರಿಸುಮಾರು 650-700 ಅಂಗಡಿಗಳಿದ್ದು, ಇವುಗಳಲ್ಲಿ ಸುಮಾರು 30-40 ಮುಸ್ಲಿಮರ ಅಂಗಡಿಗಳಿವೆ.

”ಲವ್ ಜಿಹಾದಿಗಳು ಜೂನ್ 15ರಂದು ಮಹಾಪಂಚಾಯತ್‌ಗೆ ಮುಂಚಿತವಾಗಿ ಅಂಗಡಿಗಳನ್ನು ಖಾಲಿ ಮಾಡಬೇಕು ಎಂದು ತಿಳಿಸಲಾಗಿದೆ. ಅವರು ಖಾಲಿ ಮಾಡದಿದ್ದರೆ,  ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ‘ಭೂಮಿ ರಕ್ಷಣೆಗಾಗಿ ಅಭಿಯಾನಕ್ಕೆ ಕರೆ ನೀಡುತ್ತದೆ” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಉತ್ತರಾಖಂಡ ಹೈಕೋರ್ಟ್, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ರಾಜ್ಯಕ್ಕೆ ಆದೇಶಿಸಿದೆ ಮತ್ತು ಉದ್ದೇಶಿತ ಮಹಾಪಂಚಾಯತ್ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಸದಂತೆ ಎಲ್ಲಾ ಪಕ್ಷಗಳಿಗೆ ಸೂಚನೆ ನೀಡಿದೆ.

ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ದ್ವೇಷದ ಭಾಷಣಗಳ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್‌ಗಳನ್ನು ದಾಖಲಿಸುವಂತೆ ಸೂಚಿಸಿದೆ. ಆದರೂ ಕಳೆದ 20 ದಿನಗಳಿಂದ ಉತ್ತರಕಾಶಿಯಲ್ಲಿ ಮುಸ್ಲಿಮರು ತಮ್ಮ ಜೀವನೋಪಾಯವನ್ನು ಕಳೆದುಕೊಳ್ಳುವ ಭೀತಿಯಲ್ಲಿ ಬದುಕುತ್ತಿದ್ದಾರೆ. ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ

ಇದನ್ನೂ ಓದಿ; ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...