Homeಮುಖಪುಟಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ: ಉತ್ತರಾಖಂಡದಲ್ಲಿ ಮುಂದುವರಿದ ಕೋಮು ಪ್ರಚೋದನಾ ಹೇಳಿಕೆಗಳು

ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ: ಉತ್ತರಾಖಂಡದಲ್ಲಿ ಮುಂದುವರಿದ ಕೋಮು ಪ್ರಚೋದನಾ ಹೇಳಿಕೆಗಳು

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿಯಲ್ಲಿ ಆರಂಭವಾಗಿರುವ ಕೋಮು ಉದ್ವಿಗ್ನತೆಯ ನಡುವೆಯೂ ಕೋಮು ಪ್ರಚೋದನಾ ಹೇಳಿಕೆಗಳು ಮುಂದುವರಿದಿವೆ. ಕೋಮುವಾದಿ ಭಾಷಣ ಮಾಡಿದ ಆರೋಪ ಹೊತ್ತಿರುವ ದರ್ಶನ್ ಭಾರತಿ ಅವರ ನಿಕಟವರ್ತಿ ಸ್ವಾಮಿ ಆದಿ ಯೋಗಿ ಎಂಬುವವರು 2024 ರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ (ಉತ್ತರಾಖಂಡ) ಪ್ರಾರಂಭವಾಗುತ್ತದೆ ಎಂಬ ಕೋಮು ಪ್ರಚೋದಕ ಹೇಳಿಕೆ ನೀಡಿದ್ದಾರೆ.

ಇನ್ನು ಉದ್ವಿಗ್ನತೆಯ ನಡುವೆಯೆ ಜೂನ್ 15ರಂದು ಮುಸ್ಲಿಮರ ವಿರುದ್ಧ ಮಹಾಪಂಚಾಯತ್ ಆಯೋಜಿಸುವುದಾಗಿ ಹಿಂದುತ್ವ ಗುಂಪುಗಳು ಬೆದರಿಕೆ ಹಾಕಿದ್ದರು. ಆದರೆ ಜಿಲ್ಲಾಡಳಿತವು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ, ನಿಷೇಧಾಜ್ಞೆ ವಿಧಿಸಿದೆ.

ದಿ ವೈರ್ ಜೊತೆ ಮಾತನಾಡಿರುವ ಆದಿ ಯೋಗಿ “ಈ ಭೂಮಿಯು ದೇವರುಗಳು, ಋಷಿಗಳು ಮತ್ತು ಸಂತರಿಗೆ ಸೇರಿದೆ. ಜನರು ಅವರ ಸೇವೆಗಾಗಿ ಇಲ್ಲಿಗೆ ಬಂದಿದ್ದಾರೆ, ಆದರೆ ಅವರು ಸೇವೆ ಮಾಡುವ ಬದಲಾಗಿ ಮಾಂಸವನ್ನು ಸೇವಿಸುತ್ತಿದ್ದಾರೆ ಮತ್ತು ನಮ್ಮ ಹೆಣ್ಣುಮಕ್ಕಳ ಮೇಲೆ ಅನಗತ್ಯ ನೋಟ ಬೀರುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಉತ್ತರಾಖಂಡದಲ್ಲಿ ಮುಸ್ಲಿಮರನ್ನು ಬಹಿಷ್ಕರಿಸುತ್ತೀರಾ ಎಂಬ ಪ್ರಶ್ನೆಗೆ “ಇಲ್ಲ, ನಾವು ಅದನ್ನು ಮಾಡುವುದಿಲ್ಲ. ಈ ಸ್ಥಳ ನಮಗೆ ಮೆಕ್ಕಾ ಇದ್ದಂತೆ. ಮೆಕ್ಕಾ ಪ್ರವೇಶಿಸಲು ನಮಗೆ ಅನುಮತಿ ಇದೆಯೇ? ಅದೇ ರೀತಿ ಇದು ನಮ್ಮ ಧಾರ್ಮಿಕ ಕ್ಷೇತ್ರವಾಗಿದ್ದು, 2024ರ ವೇಳೆಗೆ ಉತ್ತರಾಖಂಡವನ್ನು ಯಾವುದೇ ಜಿಹಾದಿ ಪ್ರಭಾವದಿಂದ ಮುಕ್ತಗೊಳಿಸುತ್ತೇವೆ, ರಾಜ್ಯದ ಎಲ್ಲಾ ಮಾಂಸಾಹಾರಗಳನ್ನು ಬಹಿಷ್ಕರಿಸಿ, ಅಂಗಡಿಗಳನ್ನು ಮುಚ್ಚುತ್ತೇವೆ. 2024 ರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ” ಎಂದಿದ್ದಾರೆ.

ಉತ್ತರಕಾಶಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿರುವ ಭಾರತಿ ಈ ಹಿಂದೆ “ನಾವು ರಾಜ್ಯದ ಪ್ರತಿಯೊಬ್ಬ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇವೆ. ನಾವು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ‘ಲ್ಯಾಂಡ್ ಜಿಹಾದ್’ ವಿಷಯವನ್ನು ಚರ್ಚಿಸಿದ್ದೇವೆ ಮತ್ತು ಆ ಚರ್ಚೆಯ ನಂತರ ಅವರು ‘ಲ್ಯಾಂಡ್ ಜಿಹಾದ್’ ಕುರಿತು ಕಾನೂನುಗಳನ್ನು ಜಾರಿಗೆ ತಂದರು, ಇದರ ಪರಿಣಾಮವಾಗಿ 300 ಕ್ಕೂ ಹೆಚ್ಚು ಸಮಾಧಿಗಳನ್ನು ಬುಲ್ಡೋಜರ್ ಮಾಡಲಾಗಿದೆ” ಎಂದಿದ್ದರು.

ಉತ್ತರ ಕಾಶಿಯ ಪುರೋಲಾ ಪ್ರದೇಶದಲ್ಲಿ ಕಳೆದ ತಿಂಗಳು 14 ವರ್ಷದ ಹಿಂದೂ ಹುಡುಗಿಯನ್ನು ಇಬ್ಬರು ಪುರುಷರು – ಒಬ್ಬ ಮುಸ್ಲಿಂ ಮತ್ತು ಇನ್ನೊಬ್ಬ ಹಿಂದೂ ಅಪಹರಣ ಯತ್ನ ನಡೆಸಿದ ಆರೋಪದ ನಂತರ ಕೋಮು ದಾಳಿಗಳು ಹೆಚ್ಚಾಗಿವೆ. ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚುಬೇಕು ಎಂದು ಬೆದರಿಕೆ ಹಾಕುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಈ ಮಾರುಕಟ್ಟೆಯಲ್ಲಿ ಸರಿಸುಮಾರು 650-700 ಅಂಗಡಿಗಳಿದ್ದು, ಇವುಗಳಲ್ಲಿ ಸುಮಾರು 30-40 ಮುಸ್ಲಿಮರ ಅಂಗಡಿಗಳಿವೆ.

”ಲವ್ ಜಿಹಾದಿಗಳು ಜೂನ್ 15ರಂದು ಮಹಾಪಂಚಾಯತ್‌ಗೆ ಮುಂಚಿತವಾಗಿ ಅಂಗಡಿಗಳನ್ನು ಖಾಲಿ ಮಾಡಬೇಕು ಎಂದು ತಿಳಿಸಲಾಗಿದೆ. ಅವರು ಖಾಲಿ ಮಾಡದಿದ್ದರೆ,  ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ‘ಭೂಮಿ ರಕ್ಷಣೆಗಾಗಿ ಅಭಿಯಾನಕ್ಕೆ ಕರೆ ನೀಡುತ್ತದೆ” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಉತ್ತರಾಖಂಡ ಹೈಕೋರ್ಟ್, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ರಾಜ್ಯಕ್ಕೆ ಆದೇಶಿಸಿದೆ ಮತ್ತು ಉದ್ದೇಶಿತ ಮಹಾಪಂಚಾಯತ್ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಸದಂತೆ ಎಲ್ಲಾ ಪಕ್ಷಗಳಿಗೆ ಸೂಚನೆ ನೀಡಿದೆ.

ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ದ್ವೇಷದ ಭಾಷಣಗಳ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್‌ಗಳನ್ನು ದಾಖಲಿಸುವಂತೆ ಸೂಚಿಸಿದೆ. ಆದರೂ ಕಳೆದ 20 ದಿನಗಳಿಂದ ಉತ್ತರಕಾಶಿಯಲ್ಲಿ ಮುಸ್ಲಿಮರು ತಮ್ಮ ಜೀವನೋಪಾಯವನ್ನು ಕಳೆದುಕೊಳ್ಳುವ ಭೀತಿಯಲ್ಲಿ ಬದುಕುತ್ತಿದ್ದಾರೆ. ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ

ಇದನ್ನೂ ಓದಿ; ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...