Homeಮುಖಪುಟಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ: ಉತ್ತರಾಖಂಡದಲ್ಲಿ ಮುಂದುವರಿದ ಕೋಮು ಪ್ರಚೋದನಾ ಹೇಳಿಕೆಗಳು

ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ: ಉತ್ತರಾಖಂಡದಲ್ಲಿ ಮುಂದುವರಿದ ಕೋಮು ಪ್ರಚೋದನಾ ಹೇಳಿಕೆಗಳು

- Advertisement -
- Advertisement -

ಉತ್ತರಾಖಂಡದ ಉತ್ತರಕಾಶಿಯಲ್ಲಿ ಆರಂಭವಾಗಿರುವ ಕೋಮು ಉದ್ವಿಗ್ನತೆಯ ನಡುವೆಯೂ ಕೋಮು ಪ್ರಚೋದನಾ ಹೇಳಿಕೆಗಳು ಮುಂದುವರಿದಿವೆ. ಕೋಮುವಾದಿ ಭಾಷಣ ಮಾಡಿದ ಆರೋಪ ಹೊತ್ತಿರುವ ದರ್ಶನ್ ಭಾರತಿ ಅವರ ನಿಕಟವರ್ತಿ ಸ್ವಾಮಿ ಆದಿ ಯೋಗಿ ಎಂಬುವವರು 2024 ರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ (ಉತ್ತರಾಖಂಡ) ಪ್ರಾರಂಭವಾಗುತ್ತದೆ ಎಂಬ ಕೋಮು ಪ್ರಚೋದಕ ಹೇಳಿಕೆ ನೀಡಿದ್ದಾರೆ.

ಇನ್ನು ಉದ್ವಿಗ್ನತೆಯ ನಡುವೆಯೆ ಜೂನ್ 15ರಂದು ಮುಸ್ಲಿಮರ ವಿರುದ್ಧ ಮಹಾಪಂಚಾಯತ್ ಆಯೋಜಿಸುವುದಾಗಿ ಹಿಂದುತ್ವ ಗುಂಪುಗಳು ಬೆದರಿಕೆ ಹಾಕಿದ್ದರು. ಆದರೆ ಜಿಲ್ಲಾಡಳಿತವು ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿ, ನಿಷೇಧಾಜ್ಞೆ ವಿಧಿಸಿದೆ.

ದಿ ವೈರ್ ಜೊತೆ ಮಾತನಾಡಿರುವ ಆದಿ ಯೋಗಿ “ಈ ಭೂಮಿಯು ದೇವರುಗಳು, ಋಷಿಗಳು ಮತ್ತು ಸಂತರಿಗೆ ಸೇರಿದೆ. ಜನರು ಅವರ ಸೇವೆಗಾಗಿ ಇಲ್ಲಿಗೆ ಬಂದಿದ್ದಾರೆ, ಆದರೆ ಅವರು ಸೇವೆ ಮಾಡುವ ಬದಲಾಗಿ ಮಾಂಸವನ್ನು ಸೇವಿಸುತ್ತಿದ್ದಾರೆ ಮತ್ತು ನಮ್ಮ ಹೆಣ್ಣುಮಕ್ಕಳ ಮೇಲೆ ಅನಗತ್ಯ ನೋಟ ಬೀರುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಉತ್ತರಾಖಂಡದಲ್ಲಿ ಮುಸ್ಲಿಮರನ್ನು ಬಹಿಷ್ಕರಿಸುತ್ತೀರಾ ಎಂಬ ಪ್ರಶ್ನೆಗೆ “ಇಲ್ಲ, ನಾವು ಅದನ್ನು ಮಾಡುವುದಿಲ್ಲ. ಈ ಸ್ಥಳ ನಮಗೆ ಮೆಕ್ಕಾ ಇದ್ದಂತೆ. ಮೆಕ್ಕಾ ಪ್ರವೇಶಿಸಲು ನಮಗೆ ಅನುಮತಿ ಇದೆಯೇ? ಅದೇ ರೀತಿ ಇದು ನಮ್ಮ ಧಾರ್ಮಿಕ ಕ್ಷೇತ್ರವಾಗಿದ್ದು, 2024ರ ವೇಳೆಗೆ ಉತ್ತರಾಖಂಡವನ್ನು ಯಾವುದೇ ಜಿಹಾದಿ ಪ್ರಭಾವದಿಂದ ಮುಕ್ತಗೊಳಿಸುತ್ತೇವೆ, ರಾಜ್ಯದ ಎಲ್ಲಾ ಮಾಂಸಾಹಾರಗಳನ್ನು ಬಹಿಷ್ಕರಿಸಿ, ಅಂಗಡಿಗಳನ್ನು ಮುಚ್ಚುತ್ತೇವೆ. 2024 ರಲ್ಲಿ ಹಿಂದೂ ರಾಷ್ಟ್ರದ ಸ್ಥಾಪನೆಯು ಇಲ್ಲಿಯೇ ಪ್ರಾರಂಭವಾಗುತ್ತದೆ” ಎಂದಿದ್ದಾರೆ.

ಉತ್ತರಕಾಶಿಯಲ್ಲಿ ಮುಸ್ಲಿಂ ಸಮುದಾಯದ ವಿರುದ್ಧದ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿರುವ ಭಾರತಿ ಈ ಹಿಂದೆ “ನಾವು ರಾಜ್ಯದ ಪ್ರತಿಯೊಬ್ಬ ಸಚಿವರೊಂದಿಗೆ ಸಂಪರ್ಕದಲ್ಲಿದ್ದೇವೆ. ನಾವು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ‘ಲ್ಯಾಂಡ್ ಜಿಹಾದ್’ ವಿಷಯವನ್ನು ಚರ್ಚಿಸಿದ್ದೇವೆ ಮತ್ತು ಆ ಚರ್ಚೆಯ ನಂತರ ಅವರು ‘ಲ್ಯಾಂಡ್ ಜಿಹಾದ್’ ಕುರಿತು ಕಾನೂನುಗಳನ್ನು ಜಾರಿಗೆ ತಂದರು, ಇದರ ಪರಿಣಾಮವಾಗಿ 300 ಕ್ಕೂ ಹೆಚ್ಚು ಸಮಾಧಿಗಳನ್ನು ಬುಲ್ಡೋಜರ್ ಮಾಡಲಾಗಿದೆ” ಎಂದಿದ್ದರು.

ಉತ್ತರ ಕಾಶಿಯ ಪುರೋಲಾ ಪ್ರದೇಶದಲ್ಲಿ ಕಳೆದ ತಿಂಗಳು 14 ವರ್ಷದ ಹಿಂದೂ ಹುಡುಗಿಯನ್ನು ಇಬ್ಬರು ಪುರುಷರು – ಒಬ್ಬ ಮುಸ್ಲಿಂ ಮತ್ತು ಇನ್ನೊಬ್ಬ ಹಿಂದೂ ಅಪಹರಣ ಯತ್ನ ನಡೆಸಿದ ಆರೋಪದ ನಂತರ ಕೋಮು ದಾಳಿಗಳು ಹೆಚ್ಚಾಗಿವೆ. ಪಟ್ಟಣದಲ್ಲಿ ಮುಸ್ಲಿಂ ವ್ಯಾಪಾರಿಗಳು ತಮ್ಮ ಅಂಗಡಿಗಳನ್ನು ಮುಚ್ಚುಬೇಕು ಎಂದು ಬೆದರಿಕೆ ಹಾಕುವ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಈ ಮಾರುಕಟ್ಟೆಯಲ್ಲಿ ಸರಿಸುಮಾರು 650-700 ಅಂಗಡಿಗಳಿದ್ದು, ಇವುಗಳಲ್ಲಿ ಸುಮಾರು 30-40 ಮುಸ್ಲಿಮರ ಅಂಗಡಿಗಳಿವೆ.

”ಲವ್ ಜಿಹಾದಿಗಳು ಜೂನ್ 15ರಂದು ಮಹಾಪಂಚಾಯತ್‌ಗೆ ಮುಂಚಿತವಾಗಿ ಅಂಗಡಿಗಳನ್ನು ಖಾಲಿ ಮಾಡಬೇಕು ಎಂದು ತಿಳಿಸಲಾಗಿದೆ. ಅವರು ಖಾಲಿ ಮಾಡದಿದ್ದರೆ,  ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ಇದು ‘ಭೂಮಿ ರಕ್ಷಣೆಗಾಗಿ ಅಭಿಯಾನಕ್ಕೆ ಕರೆ ನೀಡುತ್ತದೆ” ಎಂದು ಪೋಸ್ಟರ್‌ನಲ್ಲಿ ಬರೆಯಲಾಗಿದೆ.

ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯೆಯಾಗಿ ಉತ್ತರಾಖಂಡ ಹೈಕೋರ್ಟ್, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ರಾಜ್ಯಕ್ಕೆ ಆದೇಶಿಸಿದೆ ಮತ್ತು ಉದ್ದೇಶಿತ ಮಹಾಪಂಚಾಯತ್ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ನಡೆಸದಂತೆ ಎಲ್ಲಾ ಪಕ್ಷಗಳಿಗೆ ಸೂಚನೆ ನೀಡಿದೆ.

ಇತ್ತೀಚೆಗೆ ಸರ್ವೋಚ್ಚ ನ್ಯಾಯಾಲಯವು ಎಲ್ಲಾ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಿಗೆ ದ್ವೇಷದ ಭಾಷಣಗಳ ವಿರುದ್ಧ ಸ್ವಯಂಪ್ರೇರಿತ ಎಫ್‌ಐಆರ್‌ಗಳನ್ನು ದಾಖಲಿಸುವಂತೆ ಸೂಚಿಸಿದೆ. ಆದರೂ ಕಳೆದ 20 ದಿನಗಳಿಂದ ಉತ್ತರಕಾಶಿಯಲ್ಲಿ ಮುಸ್ಲಿಮರು ತಮ್ಮ ಜೀವನೋಪಾಯವನ್ನು ಕಳೆದುಕೊಳ್ಳುವ ಭೀತಿಯಲ್ಲಿ ಬದುಕುತ್ತಿದ್ದಾರೆ. ಪೊಲೀಸರು ತನಿಖೆಯಲ್ಲಿ ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ

ಇದನ್ನೂ ಓದಿ; ಮಣಿಪುರದಲ್ಲಿ ಹೆಚ್ಚಾದ ಹಿಂಸಾಚಾರ: ಕೇಂದ್ರ ಸಚಿವರ ಮನೆಗೆ ಬೆಂಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...