Homeಮುಖಪುಟನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆಗಳು ‘ಗಂಭೀರ’: ಸುಪ್ರೀಂಕೋರ್ಟ್‌‌

ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆಗಳು ‘ಗಂಭೀರ’: ಸುಪ್ರೀಂಕೋರ್ಟ್‌‌

- Advertisement -
- Advertisement -

ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಘಟನೆಗಳನ್ನು “ಗಂಭೀರ” ಎಂದು ಸುಪ್ರೀಂಕೋರ್ಟ್‌‌ ಶುಕ್ರವಾರ ಹೇಳಿದೆ. ನ್ಯಾಯಾಂಗದ ಅಧಿಕಾರಿಗಳಿಗೆ ಒದಗಿಸುತ್ತಿರುವ ಭದ್ರತೆಯ ಕುರಿತ ಸ್ಥಿತಿಗತಿಗಳ ವರದಿಗಳನ್ನು ಸಲ್ಲಿಸುವಂತೆ ರಾಜ್ಯಗಳನ್ನು ಕೇಳಿದೆ.

ಇತ್ತೀಚೆಗೆ ಜಾರ್ಖಂಡ್‌‌‌‌ನ ಧನ್ಬಾದ್‌ನಲ್ಲಿ ನ್ಯಾಯಾಧೀಶರೊಬ್ಬರನ್ನು ರಸ್ತೆಯಲ್ಲಿ ವಾಹನವೊಂದರಿಂದ ಡಿಕ್ಕಿ ಹೊಡೆಸಿ ಕೊಲ್ಲಲಾಗಿದೆ ಎಂಬ ಆರೋಪದ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಪ್ರಕರಣದ ಬಗ್ಗೆ ಮುಖ್ಯ ನ್ಯಾಯಮೂರ್ತಿ ಎನ್‌ ವಿ ರಮಣ ಮತ್ತು ನ್ಯಾಯಮೂರ್ತಿ ಸೂರ್ಯ ಕಾಂತ್ ಅವರನ್ನೊಳಗೊಂಡ ನ್ಯಾಯಪೀಠವು ಸಿಬಿಐಗೆ ನೋಟಿಸ್‌ ನೀಡಿದೆ.

ಜುಲೈ 28 ರ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ ಎಂದು ಜಾರ್ಖಂಡ್ ಪರ ಹಾಜರಾದ ವಕೀಲರು ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜಾಮೀನು ನೀಡದ ನ್ಯಾಯಾಧೀಶನ ಬರ್ಬರ ಕೊಲೆ: ಸುಮೊಟೋ ಪ್ರಕರಣದ ದಾಖಲಿಸಿದ ಸುಪ್ರೀಂ

ನ್ಯಾಯಪೀಠವು ಅಟಾರ್ನಿ ಜನರಲ್ ಕೆ ಕೆ ವೇಣುಗೋಪಾಲ್ ಅವರಿಗೆ, ಗ್ಯಾಂಗ್‌ಸ್ಟರ್‌ಗಳು ಮತ್ತು ಉನ್ನತ ಮಟ್ಟದ ವ್ಯಕ್ತಿಗಳನ್ನು ಒಳಗೊಂಡಿರುವ ಹಲವಾರು ಪ್ರಕರಣಗಳಿದ್ದು, ನ್ಯಾಯಾಧೀಶರು ಬೆದರಿಕೆ ಅಥವಾ ನಿಂದನೀಯ ಸಂದೇಶಗಳನ್ನು ಪಡೆದ ಉದಾಹರಣೆಗಳಿವೆ ಎಂದು ಹೇಳಿದೆ.

“ದೂರು ಸಲ್ಲಿಸಲು ಕೂಡಾ ನ್ಯಾಯಾಧೀಶರಿಗೆ ಯಾವುದೇ ಸ್ವಾತಂತ್ರ್ಯವಿಲ್ಲ” ಎಂದು ಹೇಳಿರುವ ಪೀಠ, ಇಂತಹ ದೂರುಗಳನ್ನು ಸಲ್ಲಿಸಿದರೆ ಪೊಲೀಸರು ಅಥವಾ ಸಿಬಿಐ ನ್ಯಾಯಾಂಗಕ್ಕೆ ಸಹಾಯ ಮಾಡುತ್ತಿಲ್ಲ ಎಂದು ಸುಪ್ರೀಂಕೋರ್ಟ್‌‌ ಹೇಳಿದೆ.

“ನಾವು ಸೋಮವಾರ (ಆಗಸ್ಟ್ 9) ಜಾರ್ಖಂಡ್ ಪ್ರಕರಣವನ್ನು ವಿಚಾರಣೆ ನಡೆಸುತ್ತೇವೆ. ಈ ಬಗ್ಗೆ ನಾವು ಸಿಬಿಐಗೆ ನೋಟಿಸ್ ನೀಡುತ್ತಿದ್ದೇವೆ” ಎಂದು ಪೀಠ ಹೇಳಿದೆ.

ಜಾರ್ಖಾಂಡಿನ ಧನ್ಬಾದ್ ಘಟನೆಯ ಹಿನ್ನೆಲೆಯಲ್ಲಿ, ನ್ಯಾಯಾಲಯಗಳನ್ನು ಮತ್ತು ನ್ಯಾಯಾಧೀಶರನ್ನು ರಕ್ಷಿಸುವ ವಿಷಯದ ಕುರಿತು ಸುಪ್ರೀಂಕೋರ್ಟ್‌‌ ಸ್ವಯಂ ಪ್ರೇರಿತ ವಿಚಾರಣೆಯನ್ನು ಕೈಗೆತ್ತಿಕೊಂಡಿದೆ.

ಧನ್ಬಾದ್ ನ್ಯಾಯಾಲಯದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಉತ್ತಮ್ ಆನಂದ್ ಅವರು, ಜುಲೈ 28 ರಂದು ಮುಂಜಾನೆ ವಾಕಿಂಗ್‌ಗೆ ಹೊರಟಿದ್ದಾಗ ಸದರ್ ಪೊಲೀಸ್ ಠಾಣೆ ವ್ಯಾಪ್ತಿಯ ಜಿಲ್ಲಾ ನ್ಯಾಯಾಲಯದ ಬಳಿಯ ರಣಧೀರ್ ವರ್ಮಾ ಚೌಕ್‌ನಲ್ಲಿ ಆಟೋ ರಿಕ್ಷಾ ಒಂದರಿಂದ ಡಿಕ್ಕಿ ಹೊಡೆದು ಮೃತಪಟ್ಟಿದ್ದರು.

ಇದನ್ನೂ ಓದಿ: ಜಾರ್ಖಂಡ್ ನ್ಯಾಯಾಧೀಶರಿಗೆ ಆಟೋದಿಂದ ಗುದ್ದಿ ಸಾಯಿಸಿದ ದುಷ್ಕರ್ಮಿಗಳು: ಸಿಸಿಟಿವಿಯಲ್ಲಿ ಸೆರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...