Homeಕರ್ನಾಟಕಲಾಕ್‌ಡೌನ್ ಸಮಯದಲ್ಲಿ ಪಡಿತರ ವ್ಯವಸ್ಥೆಯ ವಿಸ್ತರಣೆ ಮತ್ತು ಸಾರ್ವತ್ರೀಕರಣವೊಂದೇ ದಾರಿ

ಲಾಕ್‌ಡೌನ್ ಸಮಯದಲ್ಲಿ ಪಡಿತರ ವ್ಯವಸ್ಥೆಯ ವಿಸ್ತರಣೆ ಮತ್ತು ಸಾರ್ವತ್ರೀಕರಣವೊಂದೇ ದಾರಿ

- Advertisement -
- Advertisement -

ಲಾಕ್‌ಡೌನ್ ಅನ್ನುವ ಪದ ದೇಶದ ಎಲ್ಲರ ಬಾಯಲ್ಲೂ ಹರಿದಾಡುತ್ತಿದೆ. ಆದರೆ ಸರ್ಕಾರಕ್ಕೆ ಯಾರೆಲ್ಲರ ಬದುಕು ಹೇಗೆ ಲಾಕ್‌ಡೌನ್ ಆಗುತ್ತಿದೆ ಎಂಬ ಅಂದಾಜಿಲ್ಲ ಎನಿಸುತ್ತಿದೆ. ಮೇಲ್ನೋಟಕ್ಕೆ ಹಲವಾರು ಉತ್ತಮವಾದ ಘೋಷಣೆಗಳನ್ನು ಸರ್ಕಾರವು ಮಾಡಿದೆ. ಆದರೆ ತಳಮಟ್ಟದಲ್ಲಿನ ಅನುಷ್ಠಾನದ ಸಮಸ್ಯೆ ನೋಡಿದರೆ ಜನಸಾಮಾನ್ಯರ ಬದುಕಿನ ಬಗ್ಗೆ ಅರಿವು ಇಲ್ಲದ ರೀತಿಯಲ್ಲಿ ನಡೆದುಕೊಳ್ಳಲಾಗುತ್ತಿದೆ ಎಂಬುದರಲ್ಲಿ ಸಂಶಯವೇ ಇಲ್ಲ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಲಾಕ್‌ಡೌನ್ ಸಮಯದಲ್ಲಿ ಹೆಚ್ಚಿನ ಪಡಿತರ ವಿತರಣೆ ಮಾಡುವುದಾಗಿ ಘೋಷಿಸಿವೆ. ಆದರೆ ಎಷ್ಟು ಪ್ರಮಾಣದ ಜನಕ್ಕೆ ತಲುಪುತ್ತದೆ ಎಂಬುದು ದೊಡ್ಡ ಪ್ರಶ್ನೆ ಆಗಿದೆ. ಜನರ ಅನ್ನದ ಪ್ರಶ್ನೆಯನ್ನು ಸರಿಯಾಗಿ ನಿಭಾಯಿಸಬೇಕಾದ ಅನಿವಾರ್ಯತೆ ಇದೆ. ಜನರು ಜೀವನಾಧಾರ ಕೆಲಸಗಳನ್ನು ನಿಲ್ಲಿಸಿ ಮನೆಯಲ್ಲಿ ಕುಳಿತಿರುವ ಈ ಸಂದರ್ಭದಲ್ಲಿ ಅವರಿಗೆ ಸರಿಯಾದ ಪಡಿತರ ವ್ಯವಸ್ಥೆ ಮಾಡಬೇಕಿದೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅನ್ನಭಾಗ್ಯ ಯೋಜನೆಯಾಗಿ ಪಡಿತರ ವಿತರಕ ವ್ಯವಸ್ಥೆಯನ್ನು ವಿಸ್ತರಿಸಿದ ನಂತರ ಸಾಮಾನ್ಯವಾಗಿ ಪ್ರತಿ ತಿಂಗಳೂ ಒಬ್ಬ ವ್ಯಕ್ತಿಗೆ 7 ಕೆ.ಜಿ ಅಕ್ಕಿ ಕೊಡುತ್ತಿದ್ದರು. ಆದರೆ ಈಗ ಪ್ರತಿ ವ್ಯಕ್ತಿಗೆ ೫ ಕೆ.ಜಿ ಅಕ್ಕಿ ಕೊಡುತ್ತಿದ್ದಾರೆ. ಹಾಗೇನೂ ಇಲ್ಲ, ನಾವು ಅದರ ಜೊತೆಗೆ 2 ಕೆ.ಜಿ. ಗೋಧಿ ನೀಡುತ್ತೇವೆ ಎಂದು ಹೇಳಲಾಗಿತ್ತು. ಆದರೆ ಒಬ್ಬ ವ್ಯಕ್ತಿಗಲ್ಲಾ, ಒಂದು ಕುಟುಂಬಕ್ಕೆ 2 ಕೆಜಿ ಗೋಧಿ ಕೊಡುತ್ತಾರೆ.

ಆದರೆ ಬಡಜನರ ಹೊಟ್ಟೆ ತುಂಬಿಸಲು ಇಷ್ಟು ಸಾಕಾಗುವುದಿಲ್ಲ. ಪೂರ್ತಿ ಲಾಕ್‌ಡೌನ್ ಮಾಡಿದಾಗ ಅವರ ಜೀವನ ಅವಶ್ಯಕತೆಗಳಿಗೆ ಬೇಕಾಗುವ ಇತರ ಆಹಾರ ವಸ್ತುಗಳ ಪೂರೈಕೆ ಸರಿಯಾಗಿ ಮಾಡಲೇಬೇಕಿದೆ. ಇಲ್ಲವಾದರೆ ಅನಿವಾರ್ಯವಾಗಿ ಲಾಕ್‌ಡೌನ್ ಮುರಿದು ಹೊರಗೆ ಹೋಗುವ ಪರಿಸ್ಥಿತಿ ಉದ್ಭವವಾಗುತ್ತದೆ. ಇದು ಕೂಡ ಮತ್ತೆ ದೊಡ್ಡ ಸಮಸ್ಯೆಯಾಗಿ ಪರಿಣಮಿಸಲಿದೆಯೆಂಬುದು ಆಹಾರದ ಹಕ್ಕಿನ ಕಾರ್ಯಕರ್ತರ ಒಕ್ಕೊರಲಿನ ಅಭಿಪ್ರಾಯವಾಗಿದೆ.

ಈ ಕುರಿತು ಆಹಾರದ ಹಕ್ಕಿಗಾಗಿ ಆಂದೋಲನದ ಧಾರವಾಡದ ಶಾರದ ಗೋಪಾಲ್‌ರವರನ್ನು ಮಾತಾಡಿಸಿದಾಗ ‘ಪಡಿತರ ವಿತರಣೆಗೆ ಸಂಬಂಧಿಸಿದಂತೆ ನಾವು ಈ ಹಿಂದೆ ಸರ್ಕಾರಕ್ಕೆ ನಮಗೆ ಗೋಧಿ ಬೇಡ ಅಕ್ಕಿಯ ಜೊತೆಗೆ ಉತ್ತರ ಕರ್ನಾಟಕದ ಮಂದಿಗೆ ಜೋಳ, ದಕ್ಷಿಣ ಕರ್ನಾಟಕದ ಕಡೆ ರಾಗಿ ಈ ರೀತಿ ಕೊಡಿ ಎಂದು ಹೇಳಿದ್ದೆವು. ಸರ್ಕಾರ ಬೇಡ ಎಂದದ್ದನ್ನು ಮಾತ್ರ ತೆಗೆದುಕೊಂಡು ಗೋಧಿಯನ್ನು ಕಡಿಮೆ ಮಾಡಿತ್ತು. ಆದರೆ ಈಗ ಅಕ್ಕಿಯ ಜೊತೆ ಒಂದು ಕಾರ್ಡಿಗೆ ೨ ಕೆಜಿ ಗೋಧಿ ಕೊಡುತ್ತಿದ್ದಾರೆ. ಈ ಪಂಜಾಬ್‌ನಲ್ಲಿ ಅಧಿಕವಾಗಿ ಹೊಸ ಸ್ಟಾಕ್ ಬಂದಿದೆ. ಹಾಗಾಗಿ ಹಳೆಯ ಸ್ಟಾಕ್ ಖಾಲಿ ಮಾಡಬೇಕಾಗಿದೆ. ಗೋಧಿಯನ್ನ ಕೊಡುತ್ತಿದ್ದಾರೆ. ಕೊಡುವುದನ್ನೇ ಸರಿಯಾಗಿ ಕೊಡದ ಸರ್ಕಾರವು ಜನಗಳಿಗೆ ಇದು ಸಾಕಾಗುವುದೋ ಇಲ್ವೋ ಅನ್ನೋದನ್ನು ಯೋಚನೆ ಮಾಡುವುದಿಲ್ಲ. ಇನ್ನು ಏಪ್ರಿಲ್ ೨೦ರಿಂದ ಕೇಂದ್ರ ಸರ್ಕಾರವು ಒಬ್ಬ ವ್ಯಕ್ತಿಗೆ 5 ಕೆ.ಜಿ ಅಕ್ಕಿ, ಒಂದು ಕಾರ್ಡ್ಗೆ ಒಂದು ಕೆ.ಜಿ ಬೇಳೆ, ಮೂರು ತಿಂಗಳ ಸಾಮಗ್ರಿ ಕೊಡುವುದಾಗಿ ನಿರ್ಮಲ ಸೀತಾರಾಮನ್ ಘೋಷಿಸಿದ್ದಾರೆ. ಅದನ್ನು ಕೊಡುತ್ತಾರೋ ಇಲ್ಲವೋ ಇದುವರೆಗೆ ಜನರಿಗೆ ಸ್ಪಷ್ಟವಾಗಿಲ್ಲ.

ಇನ್ನು ವಿತರಣೆಯ ಸಮಸ್ಯೆಗಳನ್ನು ನೋಡಿದರೆ ರಾಜ್ಯಸರ್ಕಾರವು ಒಟಿಪಿ ತಗೊಂಡು ವಿತರಿಸುತ್ತೇವೆ ಎಂದು ಮೊದಲು ಹೇಳಿದ್ದರು. ನಂತರ ಒಟಿಪಿ ಇಲ್ಲದೆಯೇ ವಿತರಿಸಬೇಕೆಂದು ಸರ್ಕಾರ ಹೇಳಿದೆ. ಆದರೆ ಸರ್ಕಾರದ ಸೂಚನೆಗಳನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ. ಹುಕ್ಕೇರಿ, ಖಾನಾಪುರ ಭಾಗದಲ್ಲಿ ಒಟಿಪಿ ಇದ್ದರೆ ಮಾತ್ರ ಕೊಡುತ್ತೇವೆ ಎನ್ನುತ್ತಿದ್ದಾರೆ. ಬೆಂಗಳೂರಿಗೆ ಹತ್ತಿರವಿರುವ ಜಿಲ್ಲೆಗಳಲ್ಲಿ ಮಾತ್ರ ಒಟಿಪಿ ಇಲ್ಲದೆ ಕೊಡುತ್ತಿದ್ದಾರೆ. ಹಾಗೂ ಹಳ್ಳಿಗಳಲ್ಲಿ ತಿಂಗಳಿಗೆ ಕನಿಷ್ಟ ಹತ್ತು ಕಾರ್ಡ್ ಡಿಲಿಟ್ ಆಗುತ್ತಿವೆ. ಇದಕ್ಕೆ ಕಾರಣ ಏನೆಂದು ಇದುವರೆಗೂ ಅಧಿಕಾರಿಗಳ ಬಳಿ ಉತ್ತರವಿಲ್ಲ. ಜನ ಕಾರ್ಡ್ನ್ನು ಮಾಡಿಸಲು ಇಡೀ ವರ್ಷ ತಾಲ್ಲೂಕು ಕಚೇರಿಗೆ ಅಲೆಯುತ್ತಿದ್ದಾರೆ. ಎಪಿಎಲ್ ಅವರಿಗೆ ಅಂತೂ ಏನು ಕೊಡುತ್ತಿಲ್ಲ. ಹಾಗಾಗಿ ಈಗಾಗಲೇ ಕೊಡುವುದರಲ್ಲೇ ಲೋಪ ಇರುವುದರಿಂದ ನಾವು ಈ ಪಡಿತರ ಹಂಚಿಕೆಯನ್ನು ಲಾಕ್‌ಡೌನ್ ವಿಚಾರವನ್ನು ದೃಷ್ಟಿಯಲ್ಲಿಟ್ಟಕೊಂಡು ಸಾರ್ವತ್ರಿಕರಣಗೊಳಿಸಬೇಕೆಂದು ನಮ್ಮ ಆಂದೋಲನದ ಒತ್ತಾಯವಾಗಿದೆ. ಎಂದು ಹೇಳಿದರು.

ಲೋಡಿಂಗ್ ಕಾರ್ಮಿಕರ ಸಂಘಟನೆಯಿಂದ ಸಿಕ್ಕ ಮಾಹಿತಿ

ಅನ್ನಭಾಗ್ಯ ಲೋಡಿಂಗ್ ಕಾರ್ಮಿಕರನ್ನು ಸಂಘಟಿಸುತ್ತಿರುವ ಶ್ರಮಿಕ ಶಕ್ತಿ ಸಂಘಟನೆಯ ಅಧ್ಯಕ್ಷರಾದ ವರದರಾಜೇಂದ್ರ ಅವರನ್ನೂ ಮಾತಾಡಿಸಲಾಯಿತು. ಕೇಂದ್ರ ಸರ್ಕಾರದಿಂದ ಬಂದಿರುವ ರೇಷನ್ ಈಗ ಸ್ಟಾಕ್ ಮಾಡುತ್ತಿದ್ದಾರೆ ಇಷ್ಟರಲ್ಲೇ ವಿತರಣೆಯಾಗಲಿದೆ, ಇದರಲ್ಲಿ ನಮ್ಮ ಕಾರ್ಮಿಕರು ತೊಡಗಿಸಿಕೊಂಡಿದ್ದಾರೆ ಎಂದು ಹೇಳಿದರು.

ವಲಸೆ ಕಾರ್ಮಿಕರೇನು ಹೇಳುತ್ತಾರೆ?

ಯಾದಗಿರಿ ಜಿಲ್ಲೆಯಿಂದ ಬೆಂಗಳೂರಿಗೆ ಬಂದಿರುವ ದಿನಗೂಲಿ ಕಾರ್ಮಿಕರಾದ ದೇವಮ್ಮ ಮಾತನಾಡಿ ಈ ಸಮಯದಲ್ಲಿ ಮಕ್ಕಳು ಮರಿ ಇರೋ ನಾವು ಸರ್ಕಾರ ಕೊಡುತ್ತಿರುವ ರೇಷನ್ ಕೆಲವು ದಿನಗಳು ಮಾತ್ರ ನಡೆಯಲಿದೆ ಮತ್ತು ಅಕ್ಕಿ, ಗೋಧಿ ಅಷ್ಟೇ ಕೊಡದೆ ಬೇರೆ ಸಾಮಗ್ರಿಗಳನ್ನು ಕೊಟ್ಟರೆ ಸ್ವಲ್ಪ ಮಟ್ಟಿಗೆ ಉಸಿರಾಡುವ ಸ್ಥಿತಿಯಲ್ಲಿ ಇರುತ್ತೇವೆ. ಇಲ್ಲವಾದರೆ ನಮಗೆ ಕಷ್ಟವಾಗಲಿದೆ ಎಂದರು. ನಮ್ಮ ಕಂಟ್ರಾಕ್ಟರ್ ಮೂರನೇ ದಿನದಿಂದ ಪತ್ತೆ ಇಲ್ಲ. ಇಲ್ಲಿ ನಮಗೆ ಬೇರೆ ಅಗತ್ಯಗಳಿಗೆ ದುಡ್ಡು ಕೋಡೋರ್ಯಾರು? ನಾವೂ ಊರಿಗೆ ಹೋಗಿಬಿಟ್ಟಿದ್ದರೆ ಒಳ್ಳೇದಿತ್ತು ಎಂದರು. ಕಟ್ಟಡ ಕಾರ್ಮಿಕರಿಗೆ ಮತ್ತು ಮಹಿಳೆಯರ ಜನಧನ್ ಅಕೌಂಟಿಗೆ ಹಣ ಬಂದಿದೆಯಲ್ಲಾ ಎಂಬ ಪ್ರಶ್ನೆಗೆ ಅವರು ಕೊಟ್ಟ ಉತ್ತರ ಪರಿಸ್ಥಿತಿಯನ್ನು ಬಿಚ್ಚಿಟ್ಟಿತ್ತು. ‘ಆ ಕಾರ್ಡ್ ಮಾಡಿಸ್ತೀವಿ ಅಂತ ನಮ್ ಹತ್ರ ಯಾರೋ ೫೦೦ ರೂ. ಇಸ್ಕೊಂಡು ಹೋದ್ರು. ಆಮೇಲೆ ಏನಾಯ್ತು ಗೊತ್ತಿಲ್ಲ. ದುಡ್ಡು ಬಂದ್ರೆ ಹೇಗೆ ಗೊತ್ತಾಗುತ್ತೆ?’, ‘ನಿಮ್ಮ ಫೋನಿಗೆ ಮೆಸೇಜು ಬರುತ್ತೆ ನೋಡಿ’, ‘ಮೆಸೇಜು ನೋಡೋದು ನನಗೂ ಗೊತ್ತಿಲ್ಲ, ನನ್ನ ಗಂಡಂಗೂ ಗೊತ್ತಿಲ್ಲ’.

ಪಡಿತರ ವಿತರಕರ ಅನಿಸಿಕೆ

ಮಂಡ್ಯ ಜಿಲ್ಲೆಯ ಪಡಿತರ ವಿತರಕ ಶಿವಣ್ಣ ಅವರನ್ನು ಮಾತಾಡಿಸಿದಾಗ ಈ ಬಾರಿ ಕಳೆದ ಬಾರಿಗಿಂತ ವ್ಯಕ್ತಿಗೆ ಎರಡು ಕೆಜಿ ಅಕ್ಕಿ ಕಮ್ಮಿ ಮಾಡಿದ್ದಾರೆ. ಇಲ್ಲಿ ಬೆಂಗಳೂರಿನಿAದ ಸಾಕಷ್ಟು ಜನ ಹಳ್ಳಿಗೆ ಬಂದಿರುವುದರಿAದ ಹೆಚ್ಚು ಅಕ್ಕಿ ಬೇಕಾಗುತ್ತದೆ ಮತ್ತು ಈಗ ಬೇರೆ ಜಿಲ್ಲೆಯವರೂ ಇಲ್ಲಿ ಬಂದು ಲಾಕ್ ಆಗಿರುತ್ತಾರೆ. ಅಂತಹವರಿಗೂ ನಾವು ಅಕ್ಕಿ ಕೊಡಬೇಕಾಗುತ್ತದೆ. ಆದರೆ ಸರ್ಕಾರ ಹೆಚ್ಚಿನ ಅಕ್ಕಿ ಮಾತ್ರ ಕೊಡುವುದಿಲ್ಲ. ಪಡಿತರ ಲೈಸನ್ಸ್ದಾರರು ಹಣ ಹೊಡೆಯುತ್ತಾರೆ ಎಂಬ ಮಾತು ಮಾತ್ರ ಬರುತ್ತದೆ. ಆದರೆ ಲೈಸನ್ಸ್ದಾರರ ಸಮಸ್ಯೆಗಳು ಸಾಕಷ್ಟಿವೆ. ಸರ್ಕಾರ ಕೊಡುವ ಕಮಿಷನ್ ಅತಿ ಕಡಿಮೆ ಪ್ರಮಾಣದ್ದಾಗಿದ್ದು ದುರಾಸೆ ಮೂಡಿಸುವಂತೆ ಪ್ರೇರೇಪಿಸುತ್ತಿದೆ. ಆಹಾರ ವಿತರಣೆ ಪ್ರಮುಖವಾದಂತಹ ಕೆಲಸ. ಇದನ್ನ ಗಂಭೀರವಾಗಿ ಮಾಡುವಂತಹ ವಾತಾವರಣ ಇಲಾಖೆ ಕಲ್ಪಿಸಬೇಕು ಎಂದಿದ್ದಾರೆ.

ಅಧಿಕಾರಿಗಳ ಪ್ರತಿಕ್ರಿಯೆ

ಈ ಬಗ್ಗೆ ಆಹಾರ ಇಲಾಖೆ ಆಯುಕ್ತರಾದ ಶಮ್ಲಾ ಇಕ್ಬಾಲ್ ಅವರಿಗೆ ಕರೆಮಾಡಿದಾಗ ‘ನಾವು 10 ಕೆಜಿ ಕೊಡ್ತಿದ್ದೀವಿ’ ಅಂದವರೇ ಫೋನ್ ಕಟ್ ಮಾಡಿದರು. ಮತ್ತೆ ಕರೆ ಮಾಡಿದರೂ ರಿಸೀವ್ ಮಾಡಲಿಲ್ಲ.

ಇದೇ ಇಲಾಖೆಯ ಅಪರ ನಿರ್ದೇಶಕರಾದ ಗಂಗಾಧರ್‌ರವರನ್ನು ಮಾತನಾಡಿಸಿದಾಗ ‘ಬಜೆಟ್‌ನ ತೀರ್ಮಾನದಂತೆ ಎರಡು ಕೆ.ಜಿ ಕಡಿಮೆ ಆಗಿದೆ. ಬೇರೆ ಬೇರೆ ಜಿಲ್ಲೆಯವರಿಗೂ ಆಧಾರ್ ಕಾರ್ಡಿನ ದಾಖಲೆಯಂತೆ ಲಭ್ಯವಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಕೊಡುತ್ತಾರೆ. ಮುಖ್ಯಮಂತ್ರಿಗಳ ತೀರ್ಮಾನದಂತೆ ಪಡಿತರ ಚೀಟಿ ಇಲ್ಲದ ಹೊಸ ಅರ್ಜಿ ಹಾಕಿರುವ 1.85 ಲಕ್ಷ ಜನಕ್ಕೆ ಒಂದು ಕುಟುಂಬಕ್ಕೆ 10 ಕೆಜಿ ಅಕ್ಕಿಯನ್ನು ಕೊಡುತ್ತೇವೆ. ಅದು ಇನ್ನು ಎರಡು ದಿನದಲ್ಲಿ ಕಾರ್ಯರೂಪಕ್ಕೆ ಬರುತ್ತೆ’ ಎಂದರು.

ಆಹಾರ ಸರಬರಾಜು ಕೆಲಸದಲ್ಲಿರುವ ಸ್ವಯಂಸೇವಕರ ಅನಿಸಿಕೆ

ನಾವು ಮಾತನಾಡಿಸಿದಂತಹ ಸ್ವಯಂಸೇವಕರು ‘ಈ ಸಂದರ್ಭದಲ್ಲಿ ನಾವು ಸರ್ಕಾರದಿಂದ ಬರುವ ಸಾಮಗ್ರಿಗಳನ್ನು ತಲುಪಿಸುವುದಕ್ಕೂ ಆದ್ಯತೆ ನೀಡುತ್ತಿದ್ದೇವೆ. ಸಮಸ್ಯೆಗಳನ್ನು ಹೇಳುತ್ತೇವೆ. ನಮ್ಮ ಹೆಸರು ಹಾಕಬಾರದು’ ಎಂದು ಹೇಳಿ ಶುರು ಮಾಡಿದರು.

‘ಬಡವರು, ದಿನಗೂಲಿ ಕಾರ್ಮಿಕರು, ಮಹಿಳೆಯರು ತುಂಬಾ ಸಂಕಷ್ಟದಲ್ಲಿದ್ದಾರೆ. ಇವರಿಗೆ ಸರ್ಕಾರ ಈಗ ನೀಡುತ್ತಿರುವ ರೇಷನ್ ಯಾವುದೇ ಕಾರಣಕ್ಕೂ ಸಾಲುವುದಿಲ್ಲ. ಅಕ್ಕಿ ಗೋಧಿಯ ಜೊತೆ, ಪ್ರತಿ ದಿನ ಅಡುಗೆಗೆ ಬೇಕಾದಂತಹ ಮೂಲಭೂತ ಸಾಮಗ್ರಿಗಳನ್ನು ತಪ್ಪದೇ ನೀಡಬೇಕಿದೆ.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯನ್ನು ಲಾಕ್‌ಡೌನ್ ಸಮಯದಲ್ಲಿ ಇನ್ನಷ್ಟು ಬಲಗೊಳಿಸುವ ಅವಶ್ಯಕತೆ ಇದೆ. ಆಹಾರ ವಿತರಣೆ ಮಾಡಲು ಸರಿಯಾದ ಮಾರ್ಗಸೂಚಿಗಳನ್ನು ಇಟ್ಟುಕೊಳ್ಳಬೇಕಿದೆ ಗ್ರಾಮೀಣ ಪ್ರದೇಶದಲ್ಲಿ ಅತಿ ಹೆಚ್ಚು ಗಮನಕೊಟ್ಟು ಆಹಾರ ವಿತರಣೆ ಮಾಡಬೇಕಿದೆ ಎಂದು ಹೇಳಿದರು.

ಜೊತೆಗೆ ಎಲ್ಲರಿಗೂ ಆಹಾರದ ಖಾತರಿ ಇದೆ ಎಂದಾದಾಗ ಇರುವ ನೆಮ್ಮದಿಯು, ಬೇರೆ ಬೇರೆ ಕಾರಣಗಳಿಂದ ಕೆಲವರನ್ನು ಹೊರಗಿಡುವ ಪ್ರಕ್ರಿಯೆ ನಡೆದಾಗ ಇರುವುದಿಲ್ಲ. ಜನರು ಭೀತಿಗೊಳಗಾಗುತ್ತಾರೆ; ಸ್ವಲ್ಪ ಮಟ್ಟಿಗೆ ಉಳ್ಳವರೂ ಸಹಾ ಆಹಾರ ಪದಾರ್ಥಗಳನ್ನು ಸ್ಟಾಕ್ ಮಾಡಲು ತೊಡಗುತ್ತಾರೆ. ಆಗ ಬಿಕ್ಕಟ್ಟು ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಕಾರ್ಡ್ ಯಾರಿಗಿದೆ ಯಾರಿಗಿಲ್ಲ ಎಂಬುದನ್ನೆಲ್ಲಾ ನೋಡಬಾರದು. ಬಹಳ ದೊಡ್ಡ ಆರ್ಥಿಕ ತಜ್ಞರೂ ಸಹಾ ಇದನ್ನೇ ಹೇಳಿದ್ದಾರೆ. ಈ ಸಂದರ್ಭದಲ್ಲಿ ಎಲ್ಲರಿಗೂ ಸಮಾನವಾದ ರೀತಿಯಲ್ಲಿ ಅಗತ್ಯವಿರುವಷ್ಟೂ ಆಹಾರವನ್ನು ಒದಗಿಸುವುದಕ್ಕಿಂತ ಮಹತ್ವದ ಕೆಲಸ ಇನ್ನೊಂದಿಲ್ಲ. ಜೊತೆಗೆ ಜನರ ಕೈಯ್ಯಲ್ಲಿ ಹಣ ಓಡಾಡುವಂತೆ ಮಾಡಿದರೆ ಅವರ ಕೊಳ್ಳುವ ಶಕ್ತಿ ಸ್ವಲ್ಪಮಟ್ಟಿಗೆ ಉಳಿದುಕೊಂಡರೂ ಆರ್ಥಿಕತೆ ಪೂರ್ಣ ಕುಸಿಯದಂತೆ ತಡೆಯಬಹುದು. ಆದರೆ ನೀತಿ ನಿರೂಪಕರು ಮೇಲಿನಿಂದ ಜನರನ್ನು ಹೊರಗಿಡುವ ತೀರ್ಮಾನ ಘೋಷಿಸುತ್ತಾರೆ. ಕೆಳಗಿನವರು ಅದನ್ನು ಮತ್ತಷ್ಟು ಕ್ಲಿಷ್ಟಗೊಳಿಸಿ ಜನರಿಗೆ ತೊಂದರೆ ಕೊಡುತ್ತಾರೆ. ಹೀಗೆಯೇ ಮುಂದುವರೆದರೆ ಬೇರೆ ದೇಶಗಳಲ್ಲಿಯಂತೆ ಇಲ್ಲೂ ಆಹಾರ ದಂಗೆಗಳು ಏರ್ಪಡುತ್ತವೆ.’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...