Homeಅಂತರಾಷ್ಟ್ರೀಯಶ್ರೀರಾಮನ ಜನ್ಮಸ್ಥಳ ನೇಪಾಳದಲ್ಲಿದೆ ಎನ್ನುವುದು ಹಾಸ್ಯಾಸ್ಪದ: ಶಿವಸೇನೆ

ಶ್ರೀರಾಮನ ಜನ್ಮಸ್ಥಳ ನೇಪಾಳದಲ್ಲಿದೆ ಎನ್ನುವುದು ಹಾಸ್ಯಾಸ್ಪದ: ಶಿವಸೇನೆ

ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಚೀನಾದ ಕೈಗೊಂಬೆಯಾಗಿದ್ದು, ಚೀನಾದ ಸೂಚನೆಯ ಮೇರೆಗೆ ಅವರು ಪ್ರತಿದಿನ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಶಿವಸೇನೆ ಟೀಕಿಸಿದೆ.

- Advertisement -
- Advertisement -

ಶ್ರೀರಾಮನ ಜನ್ಮಸ್ಥಳ ಅಯೋಧ್ಯೆ ಭಾರತದಲ್ಲಿಲ್ಲ, ನೇಪಾಳದಲ್ಲಿದೆ ಎಂಬ ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರ ಹೇಳಿಕೆಯನ್ನು ಶಿವಸೇನೆ ಟೀಕಿಸಿದ್ದು, ಹೇಳಿಕೆಯೂ ಹಾಸ್ಯಾಸ್ಪದ ಎಂದು ಹೇಳಿದೆ.

ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಚೀನಾದ ಕೈಗೊಂಬೆಯಾಗಿದ್ದು, ಚೀನಾದ ಸೂಚನೆಯ ಮೇರೆಗೆ ಅವರು ಪ್ರತಿದಿನ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ. ಮೊದಲು ನಕ್ಷೆಯ ವಿವಾದವನ್ನು ಸೃಷ್ಟಿಸಿದರು ಈಗ ಅವರು ನೇಪಾಳ-ಭಾರತ ಸಂಘರ್ಷದಲ್ಲಿ ರಾಮನನ್ನು ನೇರವಾಗಿ ಎಳೆದಿದ್ದಾರೆ … ಭಾರತದ ಅಯೋಧ್ಯೆ ನಕಲಿ ಎಂದು ಹೇಳಿದ್ದಾರೆ. ಒಲಿಯ ಈ ಹೇಳಿಕೆಗಳು ಹಾಸ್ಯಾಸ್ಪದವಾಗಿದೆ” ಎಂದು ಬರೆದಿದೆ.

ಸಂಪಾದಕೀಯವು ಪುರಾಣಗಳನ್ನು ಉಲ್ಲೇಖಿಸಿ, ಸರಯು ನದಿ ಅಯೋಧ್ಯೆಯ ಬಳಿ ಹರಿಯುತ್ತದೆ ಆದರೆ ನೇಪಾಳದಲ್ಲಿ ಅಂತಹ ನದಿ ಇಲ್ಲ ಎಂದು ಹೇಳಿದೆ.

ರಾಮಮಂದಿರ ಹೋರಾಟದ ಸಮಯದಲ್ಲಿ ಸಾವಿರಾರು ಕರ ಸೇವಕರು ತಮ್ಮ ರಕ್ತವನ್ನು ನದಿಯ ಮೇಲೆ ಚೆಲ್ಲಿದ್ದಾರೆ. 70-75 ವರ್ಷಗಳಿಂದ ರಾಮ ಜನ್ಮಭೂಮಿ ಚಳುವಳಿ ನಡೆಯುತ್ತಿದೆ, ಆಗ ಓಲಿ ತಮ್ಮ ಹಕ್ಕು ಸಾಧಿಸಲು ಏಕೆ ಮುಂದೆ ಬರಲಿಲ್ಲ ಎಂದು ಸಂಪಾದಕೀಯವು ಪ್ರಶ್ನಿಸಿದೆ.

ಶಿವಸೇನೆಯು ಒಲಿಯ ಹೇಳಿಕೆಯನ್ನು ಮತ್ತಷ್ಟು ಅಪಹಾಸ್ಯ ಮಾಡಿ, “ಇಂದು ಅವರು ಅಯೋಧ್ಯೆ ಮತ್ತು ಭಗವಾನ್ ರಾಮ ನೇಪಾಳಿ ಎಂದು ಹೇಳಿಕೊಂಡಿದ್ದಾರೆ. ನಾಳೆ ಬಾಬರ್ ಸಹ ನೇಪಾಳದವರು ಎಂದು ಅವರು ಹೇಳಿಕೊಳ್ಳುತ್ತಾರೆ. ರಾಮ ಇಡೀ ಜಗತ್ತಿಗೆ ಸೇರಿದವನು, ಆದರೆ ರಾಮ ಜನ್ಮಭೂಮಿ ಭಾರತಕ್ಕೆ ಸೇರಿದ್ದು, ಈ ಬಗ್ಗೆ ವಿವಾದದ ಅಗತ್ಯವಿಲ್ಲ.” ಎಂದು ಹೇಳಿದೆ.

ಒಲಿ ಉಭಯ ದೇಶಗಳ ನಡುವಿನ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಬಂಧಗಳನ್ನು ಮರೆತಿದ್ದಾರೆ. ಅವರ ಕುರ್ಚಿ ಬೆದರಿಕೆಗೆ ಒಳಗಾಗಿದ್ದರಿಂದ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಸಂಪಾದಕೀಯದಲ್ಲಿ ತಿಳಿಸಲಾಗಿದೆ.

“ಆದ್ದರಿಂದ, ಚೀನಾದ ರಾಯಭಾರಿಗಳು ಅವನ ಕುರ್ಚಿಯನ್ನು ಉಳಿಸಲು ಹೋರಾಡುತ್ತಿದ್ದಾರೆ. ಓಲಿ ಚೀನಾದ ಗುಲಾಮರಾಗಿದ್ದಾರೆ ಮತ್ತು ತಮ್ಮ ದೇಶಗಳ ಸಂಸ್ಕೃತಿಯನ್ನು ಚೈನೀಸ್ ಆಗಿ ಪರಿವರ್ತಿಸಲು ನಿರ್ಧರಿಸಿದ್ದಾರೆ,” ಎಂದು ಅದು ಹೇಳಿದೆ.


ಓದಿ: ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...