Homeಅಂತರಾಷ್ಟ್ರೀಯಶ್ರೀರಾಮನ ಜನ್ಮಸ್ಥಳ ನೇಪಾಳದಲ್ಲಿದೆ ಎನ್ನುವುದು ಹಾಸ್ಯಾಸ್ಪದ: ಶಿವಸೇನೆ

ಶ್ರೀರಾಮನ ಜನ್ಮಸ್ಥಳ ನೇಪಾಳದಲ್ಲಿದೆ ಎನ್ನುವುದು ಹಾಸ್ಯಾಸ್ಪದ: ಶಿವಸೇನೆ

ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಚೀನಾದ ಕೈಗೊಂಬೆಯಾಗಿದ್ದು, ಚೀನಾದ ಸೂಚನೆಯ ಮೇರೆಗೆ ಅವರು ಪ್ರತಿದಿನ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಶಿವಸೇನೆ ಟೀಕಿಸಿದೆ.

- Advertisement -
- Advertisement -

ಶ್ರೀರಾಮನ ಜನ್ಮಸ್ಥಳ ಅಯೋಧ್ಯೆ ಭಾರತದಲ್ಲಿಲ್ಲ, ನೇಪಾಳದಲ್ಲಿದೆ ಎಂಬ ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರ ಹೇಳಿಕೆಯನ್ನು ಶಿವಸೇನೆ ಟೀಕಿಸಿದ್ದು, ಹೇಳಿಕೆಯೂ ಹಾಸ್ಯಾಸ್ಪದ ಎಂದು ಹೇಳಿದೆ.

ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಚೀನಾದ ಕೈಗೊಂಬೆಯಾಗಿದ್ದು, ಚೀನಾದ ಸೂಚನೆಯ ಮೇರೆಗೆ ಅವರು ಪ್ರತಿದಿನ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ. ಮೊದಲು ನಕ್ಷೆಯ ವಿವಾದವನ್ನು ಸೃಷ್ಟಿಸಿದರು ಈಗ ಅವರು ನೇಪಾಳ-ಭಾರತ ಸಂಘರ್ಷದಲ್ಲಿ ರಾಮನನ್ನು ನೇರವಾಗಿ ಎಳೆದಿದ್ದಾರೆ … ಭಾರತದ ಅಯೋಧ್ಯೆ ನಕಲಿ ಎಂದು ಹೇಳಿದ್ದಾರೆ. ಒಲಿಯ ಈ ಹೇಳಿಕೆಗಳು ಹಾಸ್ಯಾಸ್ಪದವಾಗಿದೆ” ಎಂದು ಬರೆದಿದೆ.

ಸಂಪಾದಕೀಯವು ಪುರಾಣಗಳನ್ನು ಉಲ್ಲೇಖಿಸಿ, ಸರಯು ನದಿ ಅಯೋಧ್ಯೆಯ ಬಳಿ ಹರಿಯುತ್ತದೆ ಆದರೆ ನೇಪಾಳದಲ್ಲಿ ಅಂತಹ ನದಿ ಇಲ್ಲ ಎಂದು ಹೇಳಿದೆ.

ರಾಮಮಂದಿರ ಹೋರಾಟದ ಸಮಯದಲ್ಲಿ ಸಾವಿರಾರು ಕರ ಸೇವಕರು ತಮ್ಮ ರಕ್ತವನ್ನು ನದಿಯ ಮೇಲೆ ಚೆಲ್ಲಿದ್ದಾರೆ. 70-75 ವರ್ಷಗಳಿಂದ ರಾಮ ಜನ್ಮಭೂಮಿ ಚಳುವಳಿ ನಡೆಯುತ್ತಿದೆ, ಆಗ ಓಲಿ ತಮ್ಮ ಹಕ್ಕು ಸಾಧಿಸಲು ಏಕೆ ಮುಂದೆ ಬರಲಿಲ್ಲ ಎಂದು ಸಂಪಾದಕೀಯವು ಪ್ರಶ್ನಿಸಿದೆ.

ಶಿವಸೇನೆಯು ಒಲಿಯ ಹೇಳಿಕೆಯನ್ನು ಮತ್ತಷ್ಟು ಅಪಹಾಸ್ಯ ಮಾಡಿ, “ಇಂದು ಅವರು ಅಯೋಧ್ಯೆ ಮತ್ತು ಭಗವಾನ್ ರಾಮ ನೇಪಾಳಿ ಎಂದು ಹೇಳಿಕೊಂಡಿದ್ದಾರೆ. ನಾಳೆ ಬಾಬರ್ ಸಹ ನೇಪಾಳದವರು ಎಂದು ಅವರು ಹೇಳಿಕೊಳ್ಳುತ್ತಾರೆ. ರಾಮ ಇಡೀ ಜಗತ್ತಿಗೆ ಸೇರಿದವನು, ಆದರೆ ರಾಮ ಜನ್ಮಭೂಮಿ ಭಾರತಕ್ಕೆ ಸೇರಿದ್ದು, ಈ ಬಗ್ಗೆ ವಿವಾದದ ಅಗತ್ಯವಿಲ್ಲ.” ಎಂದು ಹೇಳಿದೆ.

ಒಲಿ ಉಭಯ ದೇಶಗಳ ನಡುವಿನ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಬಂಧಗಳನ್ನು ಮರೆತಿದ್ದಾರೆ. ಅವರ ಕುರ್ಚಿ ಬೆದರಿಕೆಗೆ ಒಳಗಾಗಿದ್ದರಿಂದ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಸಂಪಾದಕೀಯದಲ್ಲಿ ತಿಳಿಸಲಾಗಿದೆ.

“ಆದ್ದರಿಂದ, ಚೀನಾದ ರಾಯಭಾರಿಗಳು ಅವನ ಕುರ್ಚಿಯನ್ನು ಉಳಿಸಲು ಹೋರಾಡುತ್ತಿದ್ದಾರೆ. ಓಲಿ ಚೀನಾದ ಗುಲಾಮರಾಗಿದ್ದಾರೆ ಮತ್ತು ತಮ್ಮ ದೇಶಗಳ ಸಂಸ್ಕೃತಿಯನ್ನು ಚೈನೀಸ್ ಆಗಿ ಪರಿವರ್ತಿಸಲು ನಿರ್ಧರಿಸಿದ್ದಾರೆ,” ಎಂದು ಅದು ಹೇಳಿದೆ.


ಓದಿ: ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...