Homeಅಂತರಾಷ್ಟ್ರೀಯಶ್ರೀರಾಮನ ಜನ್ಮಸ್ಥಳ ನೇಪಾಳದಲ್ಲಿದೆ ಎನ್ನುವುದು ಹಾಸ್ಯಾಸ್ಪದ: ಶಿವಸೇನೆ

ಶ್ರೀರಾಮನ ಜನ್ಮಸ್ಥಳ ನೇಪಾಳದಲ್ಲಿದೆ ಎನ್ನುವುದು ಹಾಸ್ಯಾಸ್ಪದ: ಶಿವಸೇನೆ

ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಚೀನಾದ ಕೈಗೊಂಬೆಯಾಗಿದ್ದು, ಚೀನಾದ ಸೂಚನೆಯ ಮೇರೆಗೆ ಅವರು ಪ್ರತಿದಿನ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಶಿವಸೇನೆ ಟೀಕಿಸಿದೆ.

- Advertisement -
- Advertisement -

ಶ್ರೀರಾಮನ ಜನ್ಮಸ್ಥಳ ಅಯೋಧ್ಯೆ ಭಾರತದಲ್ಲಿಲ್ಲ, ನೇಪಾಳದಲ್ಲಿದೆ ಎಂಬ ನೇಪಾಳದ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಅವರ ಹೇಳಿಕೆಯನ್ನು ಶಿವಸೇನೆ ಟೀಕಿಸಿದ್ದು, ಹೇಳಿಕೆಯೂ ಹಾಸ್ಯಾಸ್ಪದ ಎಂದು ಹೇಳಿದೆ.

ಶಿವಸೇನೆಯ ಮುಖವಾಣಿ ಸಾಮ್ನಾದ ಸಂಪಾದಕೀಯ ಈ ಬಗ್ಗೆ ಪ್ರತಿಕ್ರಿಯಿಸಿದ್ದು, “ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಒಲಿ ಚೀನಾದ ಕೈಗೊಂಬೆಯಾಗಿದ್ದು, ಚೀನಾದ ಸೂಚನೆಯ ಮೇರೆಗೆ ಅವರು ಪ್ರತಿದಿನ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ. ಮೊದಲು ನಕ್ಷೆಯ ವಿವಾದವನ್ನು ಸೃಷ್ಟಿಸಿದರು ಈಗ ಅವರು ನೇಪಾಳ-ಭಾರತ ಸಂಘರ್ಷದಲ್ಲಿ ರಾಮನನ್ನು ನೇರವಾಗಿ ಎಳೆದಿದ್ದಾರೆ … ಭಾರತದ ಅಯೋಧ್ಯೆ ನಕಲಿ ಎಂದು ಹೇಳಿದ್ದಾರೆ. ಒಲಿಯ ಈ ಹೇಳಿಕೆಗಳು ಹಾಸ್ಯಾಸ್ಪದವಾಗಿದೆ” ಎಂದು ಬರೆದಿದೆ.

ಸಂಪಾದಕೀಯವು ಪುರಾಣಗಳನ್ನು ಉಲ್ಲೇಖಿಸಿ, ಸರಯು ನದಿ ಅಯೋಧ್ಯೆಯ ಬಳಿ ಹರಿಯುತ್ತದೆ ಆದರೆ ನೇಪಾಳದಲ್ಲಿ ಅಂತಹ ನದಿ ಇಲ್ಲ ಎಂದು ಹೇಳಿದೆ.

ರಾಮಮಂದಿರ ಹೋರಾಟದ ಸಮಯದಲ್ಲಿ ಸಾವಿರಾರು ಕರ ಸೇವಕರು ತಮ್ಮ ರಕ್ತವನ್ನು ನದಿಯ ಮೇಲೆ ಚೆಲ್ಲಿದ್ದಾರೆ. 70-75 ವರ್ಷಗಳಿಂದ ರಾಮ ಜನ್ಮಭೂಮಿ ಚಳುವಳಿ ನಡೆಯುತ್ತಿದೆ, ಆಗ ಓಲಿ ತಮ್ಮ ಹಕ್ಕು ಸಾಧಿಸಲು ಏಕೆ ಮುಂದೆ ಬರಲಿಲ್ಲ ಎಂದು ಸಂಪಾದಕೀಯವು ಪ್ರಶ್ನಿಸಿದೆ.

ಶಿವಸೇನೆಯು ಒಲಿಯ ಹೇಳಿಕೆಯನ್ನು ಮತ್ತಷ್ಟು ಅಪಹಾಸ್ಯ ಮಾಡಿ, “ಇಂದು ಅವರು ಅಯೋಧ್ಯೆ ಮತ್ತು ಭಗವಾನ್ ರಾಮ ನೇಪಾಳಿ ಎಂದು ಹೇಳಿಕೊಂಡಿದ್ದಾರೆ. ನಾಳೆ ಬಾಬರ್ ಸಹ ನೇಪಾಳದವರು ಎಂದು ಅವರು ಹೇಳಿಕೊಳ್ಳುತ್ತಾರೆ. ರಾಮ ಇಡೀ ಜಗತ್ತಿಗೆ ಸೇರಿದವನು, ಆದರೆ ರಾಮ ಜನ್ಮಭೂಮಿ ಭಾರತಕ್ಕೆ ಸೇರಿದ್ದು, ಈ ಬಗ್ಗೆ ವಿವಾದದ ಅಗತ್ಯವಿಲ್ಲ.” ಎಂದು ಹೇಳಿದೆ.

ಒಲಿ ಉಭಯ ದೇಶಗಳ ನಡುವಿನ ಸಾಂಸ್ಕೃತಿಕ ಮತ್ತು ಧಾರ್ಮಿಕ ಸಂಬಂಧಗಳನ್ನು ಮರೆತಿದ್ದಾರೆ. ಅವರ ಕುರ್ಚಿ ಬೆದರಿಕೆಗೆ ಒಳಗಾಗಿದ್ದರಿಂದ ಭಾರತದ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ಸಂಪಾದಕೀಯದಲ್ಲಿ ತಿಳಿಸಲಾಗಿದೆ.

“ಆದ್ದರಿಂದ, ಚೀನಾದ ರಾಯಭಾರಿಗಳು ಅವನ ಕುರ್ಚಿಯನ್ನು ಉಳಿಸಲು ಹೋರಾಡುತ್ತಿದ್ದಾರೆ. ಓಲಿ ಚೀನಾದ ಗುಲಾಮರಾಗಿದ್ದಾರೆ ಮತ್ತು ತಮ್ಮ ದೇಶಗಳ ಸಂಸ್ಕೃತಿಯನ್ನು ಚೈನೀಸ್ ಆಗಿ ಪರಿವರ್ತಿಸಲು ನಿರ್ಧರಿಸಿದ್ದಾರೆ,” ಎಂದು ಅದು ಹೇಳಿದೆ.


ಓದಿ: ನಿಜವಾದ ಅಯೋಧ್ಯೆ ನೇಪಾಳದಲ್ಲಿದೆ, ಭಗವಾನ್ ರಾಮ ನೇಪಾಳಿ: ನೇಪಾಳದ ಪ್ರಧಾನಿ ಕೆ.ಪಿ ಶರ್ಮಾ ಒಲಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...