Homeಅಂತರಾಷ್ಟ್ರೀಯಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

- Advertisement -
- Advertisement -

ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಂಡಿದ್ದು, ಸ್ವತಃ ಅಫ್ಘಾನ್ ಅಧ್ಯಕ್ಷ ಅಶ್ರಫ್‌ ಗನಿ ದೇಶವನ್ನು ತೊರೆದು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರಕ್ತಪಾತವನ್ನು ತಪ್ಪಿಸಲು ಬೇಕಾಗಿ ತಾನು ದೇಶ ತೊರೆಯುವುದಾಗಿ ಅವರು ತನ್ನ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ. ಇದರ ಜೊತೆಗೇ ದೇಶವನ್ನು ತೊರೆಯಲು ಕಾಬೂಲ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಐವರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಬೂಲ್‌ ನಗರವನ್ನು ತಾಲಿಬಾನಿಗಳು ಸುತ್ತುವರೆಯುತ್ತಿದ್ದಂತೆ ಅಫ್ಘಾನ್ ಅಧ್ಯಕ್ಷ ಅಶ್ರಫ್‌ ಗನಿ ದೇಶವನ್ನು ತೊರೆದ್ದಾರೆ. ಅವರು ತನ್ನ ಫೇಸ್‌ಬುಕ್‌ನಲ್ಲಿ, “ರಕ್ತಪಾತವನ್ನು ತಪ್ಪಿಸಲು ಬೇಕಾಗಿ ತಾನು ಅಫ್ಘಾನ್‌ ತೊರೆಯುವ ನಿರ್ಧಾರ ಮಾಡಿದ್ದೇನೆ. ತಾಲಿಬಾನ್‌ಗಳನ್ನು ಎದುರಿಸಿದರೆ ಹಲವಾರು ದೇಶಭಕ್ತರು ಹುತಾತ್ಮರಾಗುವುದರ ಜೊತೆಗೆ, ಕಾಬೂಲ್ ನಗರ ನಾಶವಾಗುತ್ತದೆ. ಇದರ ಪರಿಣಾಮ 60 ಲಕ್ಷ ಜನಸಂಖ್ಯೆಯಿರುವ ನಗರದಲ್ಲಿ ದೊಡ್ಡ ದುರಂತ ಸಂಭವಿಸುತ್ತದೆ. ಕಾಬೂಲ್ ಮತ್ತು ಕಾಬೂಲ್ ಷರೀಫ್ ಜನರ ಮೇಲೆ ರಕ್ತಸಿಕ್ತ ದಾಳಿ ನಡೆಸಲು ತಾವು ಸಿದ್ಧ ಎಂದು ತಾಲಿಬಾನ್ ಹೇಳಿದೆ. ಹೀಗಾಗಿ ರಕ್ತಪಾತವನ್ನು ತಡೆಗಟ್ಟಲು, ನಾನು ಹೊರಡಲು ನಿರ್ಧರಿಸಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ 200 ಸಿಖ್ಖರನ್ನು ರಕ್ಷಿಸುವಂತೆ ಕೇಂದ್ರಕ್ಕೆ ಅಮರಿಂದರ್ ಸಿಂಗ್ ಮನವಿ

ಇದರ ನಂತರ ತಾಲಿಬಾನಿಗಳು ಅಫ್ಘಾನ್ ಅಧ್ಯಕ್ಷರ ಅರಮನೆಯಲ್ಲಿ ಇರುವ ಫೋಟೋಗಳು ಮಾಧ್ಯಮದಲ್ಲಿ ಬಿಡುಗಡೆಗೊಂಡಿದೆ. ಪಾಕಿಸ್ಥಾನ ಈಗಾಗಲೆ ಕಾಬೂಲ್‌ಗೆ ವಿಮಾನ ಸಂಚಾರವನ್ನು ರದ್ದುಗೊಳಿಸಿದೆ. ಆಫ್ಘಾನ್‌ನಿಂದ ಭಾರತಕ್ಕೆ ಪ್ರಯಾಣಿಸಲು ಎರಡು ತುರ್ತು ವಿಮಾನಗಳು ಸಿದ್ಧವಾಗಿ ಇಡುವಂತೆ ಭಾರತ ಸರ್ಕಾರವು ಏರ್ ಇಂಡಿಯಾಗೆ ಸೂಚಿಸಿದೆ ಎಂದು ವರದಿಯಾಗಿದೆ.

ಈ ಮಧ್ಯೆ ಅಫ್ಘಾನ್ ಪ್ರಜೆಗಳು ಅಮೆರಿಕಾ ಅಧ್ಯಕ್ಷ ಜೊ ಬೈಡನ್‌ ವಿರುದ್ದ ವೈಟ್‌ಹೌಟ್‌ ಎದುರು ಪ್ರತಿಭಟನೆ ನಡೆಸುತ್ತಿದ್ದು, ನಮಗೆ ನೀವು ದ್ರೋಹ ಎಸಗಿದ್ದು, ಪ್ರಸ್ತುತ ನಡೆಯುತ್ತಿರುವುದಕ್ಕೆ ನೀವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಹಿಂದುತ್ವವಾದಿಗಳು ವಿರೋಧಿಸಿದ್ದ ಪುಸ್ತಕ: ‘ಹಿಂದೂಗಳು – ಬೇರೊಂದು ಚರಿತ್ರೆ’

ಸಾವಿರಾರು ಜನರು ಅಫ್ಘಾನಿಸ್ತಾನದಿಂದ ಹೊರ ದೇಶಕ್ಕೆ ಹೊರಡಬಹುದಾದ ಏಕೈಕ ದಾರಿಯಾದ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದು, ನೂಕು ನುಗ್ಗಲು ಉಂಟಾಗಿದೆ. ವಿಮಾನ ನಿಲ್ದಾಣವು ಅಮೆರಿಕಾ ಭದ್ರತಾ ಪಡೆಗಳ ನಿಯಂತ್ರಣದಲ್ಲಿದ್ದು, ಅಮೆರಿಕಾ ಅಲ್ಲಿ ಆರು ಸಾವಿರ ಯೋಧರನ್ನು ನೇಮಿಸಿದೆ. ನೂಕು ನುಗ್ಗಲನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಕೂಡಾ ನಡೆದಿದೆ ಎಂದು ವರದಿಯಾಗಿದೆ. ಇದರ ಮಧ್ಯೆ ಅಫ್ಘಾನ್ ವಿಮಾನ ನಿಲ್ದಾಣದಲ್ಲಿ ಐವರು ಮೃತಪಟ್ಟಿರುವುದು ಕೂಡಾ ವರದಿಯಾಗಿದೆ.

ಈ ನಡುವೆ ಅಫ್ಘಾನ್ ಗುರುದ್ವಾರದಲ್ಲಿ ಸಿಲುಕಿರುವ 200 ಸಿಖ್ಖರನ್ನು ಒಳಗೊಂಡಂತೆ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸ್ಥಳಾಂತರ ಕಾರ್ಯದಲ್ಲಿ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, “ತಾಲಿಬಾನ್ ಸ್ವಾಧೀನದ ನಂತರ ಅಫ್ಘಾನ್ ದೇಶದ ಗುರುದ್ವಾರದಲ್ಲಿ ಸಿಲುಕಿರುವ ಸುಮಾರು 200 ಸಿಖ್ಖರು ಸೇರಿದಂತೆ ಎಲ್ಲಾ ಭಾರತೀಯರನ್ನು ತಕ್ಷಣವೇ ಸ್ಥಳಾಂತರಿಸಲು ವ್ಯವಸ್ಥೆ ಮಾಡಲು ನಾನು  ಸಚಿವ ಡಾ.ಎಸ್.ಜೈಶಂಕರ್ ಅವರನ್ನು ಒತ್ತಾಯಿಸುತ್ತೇನೆ. ಅವರ ಸುರಕ್ಷಿತ ಸ್ಥಳಾಂತರಕ್ಕೆ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ನನ್ನ ಸರ್ಕಾರ ಸಿದ್ಧವಿದೆ” ಎಂದಿದ್ದಾರೆ.

ಇದರ ಜೊತೆಗೆ ಅಫ್ಘಾನ್ ನ ಅಘಾತಕಾರಿ ದೃಶ್ಯಗಳು ಹೊರಬರುತ್ತಿವೆ. ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಹಾರುತ್ತಿರುವ ವಿಮಾನದಿಂದ ಇಬ್ಬರು ವ್ಯಕ್ತಿಗಳು ಕೆಳಗೆ ಬೀಳುತ್ತಿರುವ ವಿಡಿಯೊಗಳನ್ನು ಮಾಧ್ಯಮಗಳು ಬಿಡುಗಡೆ ಮಾಡಿವೆ

ಇದನ್ನೂ ಓದಿ: ಭಯೋತ್ಪಾದನೆಯೆಂಬ ಜಾಗತಿಕ ಸಂಕಟ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...