Homeಅಂತರಾಷ್ಟ್ರೀಯಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

- Advertisement -
- Advertisement -

ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಂಡಿದ್ದು, ಸ್ವತಃ ಅಫ್ಘಾನ್ ಅಧ್ಯಕ್ಷ ಅಶ್ರಫ್‌ ಗನಿ ದೇಶವನ್ನು ತೊರೆದು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರಕ್ತಪಾತವನ್ನು ತಪ್ಪಿಸಲು ಬೇಕಾಗಿ ತಾನು ದೇಶ ತೊರೆಯುವುದಾಗಿ ಅವರು ತನ್ನ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ. ಇದರ ಜೊತೆಗೇ ದೇಶವನ್ನು ತೊರೆಯಲು ಕಾಬೂಲ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಐವರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಬೂಲ್‌ ನಗರವನ್ನು ತಾಲಿಬಾನಿಗಳು ಸುತ್ತುವರೆಯುತ್ತಿದ್ದಂತೆ ಅಫ್ಘಾನ್ ಅಧ್ಯಕ್ಷ ಅಶ್ರಫ್‌ ಗನಿ ದೇಶವನ್ನು ತೊರೆದ್ದಾರೆ. ಅವರು ತನ್ನ ಫೇಸ್‌ಬುಕ್‌ನಲ್ಲಿ, “ರಕ್ತಪಾತವನ್ನು ತಪ್ಪಿಸಲು ಬೇಕಾಗಿ ತಾನು ಅಫ್ಘಾನ್‌ ತೊರೆಯುವ ನಿರ್ಧಾರ ಮಾಡಿದ್ದೇನೆ. ತಾಲಿಬಾನ್‌ಗಳನ್ನು ಎದುರಿಸಿದರೆ ಹಲವಾರು ದೇಶಭಕ್ತರು ಹುತಾತ್ಮರಾಗುವುದರ ಜೊತೆಗೆ, ಕಾಬೂಲ್ ನಗರ ನಾಶವಾಗುತ್ತದೆ. ಇದರ ಪರಿಣಾಮ 60 ಲಕ್ಷ ಜನಸಂಖ್ಯೆಯಿರುವ ನಗರದಲ್ಲಿ ದೊಡ್ಡ ದುರಂತ ಸಂಭವಿಸುತ್ತದೆ. ಕಾಬೂಲ್ ಮತ್ತು ಕಾಬೂಲ್ ಷರೀಫ್ ಜನರ ಮೇಲೆ ರಕ್ತಸಿಕ್ತ ದಾಳಿ ನಡೆಸಲು ತಾವು ಸಿದ್ಧ ಎಂದು ತಾಲಿಬಾನ್ ಹೇಳಿದೆ. ಹೀಗಾಗಿ ರಕ್ತಪಾತವನ್ನು ತಡೆಗಟ್ಟಲು, ನಾನು ಹೊರಡಲು ನಿರ್ಧರಿಸಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ 200 ಸಿಖ್ಖರನ್ನು ರಕ್ಷಿಸುವಂತೆ ಕೇಂದ್ರಕ್ಕೆ ಅಮರಿಂದರ್ ಸಿಂಗ್ ಮನವಿ

ಇದರ ನಂತರ ತಾಲಿಬಾನಿಗಳು ಅಫ್ಘಾನ್ ಅಧ್ಯಕ್ಷರ ಅರಮನೆಯಲ್ಲಿ ಇರುವ ಫೋಟೋಗಳು ಮಾಧ್ಯಮದಲ್ಲಿ ಬಿಡುಗಡೆಗೊಂಡಿದೆ. ಪಾಕಿಸ್ಥಾನ ಈಗಾಗಲೆ ಕಾಬೂಲ್‌ಗೆ ವಿಮಾನ ಸಂಚಾರವನ್ನು ರದ್ದುಗೊಳಿಸಿದೆ. ಆಫ್ಘಾನ್‌ನಿಂದ ಭಾರತಕ್ಕೆ ಪ್ರಯಾಣಿಸಲು ಎರಡು ತುರ್ತು ವಿಮಾನಗಳು ಸಿದ್ಧವಾಗಿ ಇಡುವಂತೆ ಭಾರತ ಸರ್ಕಾರವು ಏರ್ ಇಂಡಿಯಾಗೆ ಸೂಚಿಸಿದೆ ಎಂದು ವರದಿಯಾಗಿದೆ.

ಈ ಮಧ್ಯೆ ಅಫ್ಘಾನ್ ಪ್ರಜೆಗಳು ಅಮೆರಿಕಾ ಅಧ್ಯಕ್ಷ ಜೊ ಬೈಡನ್‌ ವಿರುದ್ದ ವೈಟ್‌ಹೌಟ್‌ ಎದುರು ಪ್ರತಿಭಟನೆ ನಡೆಸುತ್ತಿದ್ದು, ನಮಗೆ ನೀವು ದ್ರೋಹ ಎಸಗಿದ್ದು, ಪ್ರಸ್ತುತ ನಡೆಯುತ್ತಿರುವುದಕ್ಕೆ ನೀವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಹಿಂದುತ್ವವಾದಿಗಳು ವಿರೋಧಿಸಿದ್ದ ಪುಸ್ತಕ: ‘ಹಿಂದೂಗಳು – ಬೇರೊಂದು ಚರಿತ್ರೆ’

ಸಾವಿರಾರು ಜನರು ಅಫ್ಘಾನಿಸ್ತಾನದಿಂದ ಹೊರ ದೇಶಕ್ಕೆ ಹೊರಡಬಹುದಾದ ಏಕೈಕ ದಾರಿಯಾದ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದು, ನೂಕು ನುಗ್ಗಲು ಉಂಟಾಗಿದೆ. ವಿಮಾನ ನಿಲ್ದಾಣವು ಅಮೆರಿಕಾ ಭದ್ರತಾ ಪಡೆಗಳ ನಿಯಂತ್ರಣದಲ್ಲಿದ್ದು, ಅಮೆರಿಕಾ ಅಲ್ಲಿ ಆರು ಸಾವಿರ ಯೋಧರನ್ನು ನೇಮಿಸಿದೆ. ನೂಕು ನುಗ್ಗಲನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಕೂಡಾ ನಡೆದಿದೆ ಎಂದು ವರದಿಯಾಗಿದೆ. ಇದರ ಮಧ್ಯೆ ಅಫ್ಘಾನ್ ವಿಮಾನ ನಿಲ್ದಾಣದಲ್ಲಿ ಐವರು ಮೃತಪಟ್ಟಿರುವುದು ಕೂಡಾ ವರದಿಯಾಗಿದೆ.

ಈ ನಡುವೆ ಅಫ್ಘಾನ್ ಗುರುದ್ವಾರದಲ್ಲಿ ಸಿಲುಕಿರುವ 200 ಸಿಖ್ಖರನ್ನು ಒಳಗೊಂಡಂತೆ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸ್ಥಳಾಂತರ ಕಾರ್ಯದಲ್ಲಿ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, “ತಾಲಿಬಾನ್ ಸ್ವಾಧೀನದ ನಂತರ ಅಫ್ಘಾನ್ ದೇಶದ ಗುರುದ್ವಾರದಲ್ಲಿ ಸಿಲುಕಿರುವ ಸುಮಾರು 200 ಸಿಖ್ಖರು ಸೇರಿದಂತೆ ಎಲ್ಲಾ ಭಾರತೀಯರನ್ನು ತಕ್ಷಣವೇ ಸ್ಥಳಾಂತರಿಸಲು ವ್ಯವಸ್ಥೆ ಮಾಡಲು ನಾನು  ಸಚಿವ ಡಾ.ಎಸ್.ಜೈಶಂಕರ್ ಅವರನ್ನು ಒತ್ತಾಯಿಸುತ್ತೇನೆ. ಅವರ ಸುರಕ್ಷಿತ ಸ್ಥಳಾಂತರಕ್ಕೆ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ನನ್ನ ಸರ್ಕಾರ ಸಿದ್ಧವಿದೆ” ಎಂದಿದ್ದಾರೆ.

ಇದರ ಜೊತೆಗೆ ಅಫ್ಘಾನ್ ನ ಅಘಾತಕಾರಿ ದೃಶ್ಯಗಳು ಹೊರಬರುತ್ತಿವೆ. ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಹಾರುತ್ತಿರುವ ವಿಮಾನದಿಂದ ಇಬ್ಬರು ವ್ಯಕ್ತಿಗಳು ಕೆಳಗೆ ಬೀಳುತ್ತಿರುವ ವಿಡಿಯೊಗಳನ್ನು ಮಾಧ್ಯಮಗಳು ಬಿಡುಗಡೆ ಮಾಡಿವೆ

ಇದನ್ನೂ ಓದಿ: ಭಯೋತ್ಪಾದನೆಯೆಂಬ ಜಾಗತಿಕ ಸಂಕಟ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...