Homeಅಂತರಾಷ್ಟ್ರೀಯಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

ಅಫ್ಘಾನ್ ಪತನ: ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು; ಟೇಕಾಫ್‌ ಆದ ವಿಮಾನದಿಂದ ಬಿದ್ದ ಜನರು!

- Advertisement -
- Advertisement -

ಅಫ್ಘಾನಿಸ್ತಾನವನ್ನು ತಾಲಿಬಾನ್‌ ವಶಪಡಿಸಿಕೊಂಡಿದ್ದು, ಸ್ವತಃ ಅಫ್ಘಾನ್ ಅಧ್ಯಕ್ಷ ಅಶ್ರಫ್‌ ಗನಿ ದೇಶವನ್ನು ತೊರೆದು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ರಕ್ತಪಾತವನ್ನು ತಪ್ಪಿಸಲು ಬೇಕಾಗಿ ತಾನು ದೇಶ ತೊರೆಯುವುದಾಗಿ ಅವರು ತನ್ನ ಫೇಸ್‌ಬುಕ್‌ನಲ್ಲಿ ಹೇಳಿಕೊಂಡಿದ್ದಾರೆ. ಇದರ ಜೊತೆಗೇ ದೇಶವನ್ನು ತೊರೆಯಲು ಕಾಬೂಲ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂಕು ನುಗ್ಗಲು ಉಂಟಾಗಿದ್ದು, ಐವರು ಮೃತಪಟ್ಟಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಕಾಬೂಲ್‌ ನಗರವನ್ನು ತಾಲಿಬಾನಿಗಳು ಸುತ್ತುವರೆಯುತ್ತಿದ್ದಂತೆ ಅಫ್ಘಾನ್ ಅಧ್ಯಕ್ಷ ಅಶ್ರಫ್‌ ಗನಿ ದೇಶವನ್ನು ತೊರೆದ್ದಾರೆ. ಅವರು ತನ್ನ ಫೇಸ್‌ಬುಕ್‌ನಲ್ಲಿ, “ರಕ್ತಪಾತವನ್ನು ತಪ್ಪಿಸಲು ಬೇಕಾಗಿ ತಾನು ಅಫ್ಘಾನ್‌ ತೊರೆಯುವ ನಿರ್ಧಾರ ಮಾಡಿದ್ದೇನೆ. ತಾಲಿಬಾನ್‌ಗಳನ್ನು ಎದುರಿಸಿದರೆ ಹಲವಾರು ದೇಶಭಕ್ತರು ಹುತಾತ್ಮರಾಗುವುದರ ಜೊತೆಗೆ, ಕಾಬೂಲ್ ನಗರ ನಾಶವಾಗುತ್ತದೆ. ಇದರ ಪರಿಣಾಮ 60 ಲಕ್ಷ ಜನಸಂಖ್ಯೆಯಿರುವ ನಗರದಲ್ಲಿ ದೊಡ್ಡ ದುರಂತ ಸಂಭವಿಸುತ್ತದೆ. ಕಾಬೂಲ್ ಮತ್ತು ಕಾಬೂಲ್ ಷರೀಫ್ ಜನರ ಮೇಲೆ ರಕ್ತಸಿಕ್ತ ದಾಳಿ ನಡೆಸಲು ತಾವು ಸಿದ್ಧ ಎಂದು ತಾಲಿಬಾನ್ ಹೇಳಿದೆ. ಹೀಗಾಗಿ ರಕ್ತಪಾತವನ್ನು ತಡೆಗಟ್ಟಲು, ನಾನು ಹೊರಡಲು ನಿರ್ಧರಿಸಿದೆ” ಎಂದು ಬರೆದಿದ್ದಾರೆ.

ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ 200 ಸಿಖ್ಖರನ್ನು ರಕ್ಷಿಸುವಂತೆ ಕೇಂದ್ರಕ್ಕೆ ಅಮರಿಂದರ್ ಸಿಂಗ್ ಮನವಿ

ಇದರ ನಂತರ ತಾಲಿಬಾನಿಗಳು ಅಫ್ಘಾನ್ ಅಧ್ಯಕ್ಷರ ಅರಮನೆಯಲ್ಲಿ ಇರುವ ಫೋಟೋಗಳು ಮಾಧ್ಯಮದಲ್ಲಿ ಬಿಡುಗಡೆಗೊಂಡಿದೆ. ಪಾಕಿಸ್ಥಾನ ಈಗಾಗಲೆ ಕಾಬೂಲ್‌ಗೆ ವಿಮಾನ ಸಂಚಾರವನ್ನು ರದ್ದುಗೊಳಿಸಿದೆ. ಆಫ್ಘಾನ್‌ನಿಂದ ಭಾರತಕ್ಕೆ ಪ್ರಯಾಣಿಸಲು ಎರಡು ತುರ್ತು ವಿಮಾನಗಳು ಸಿದ್ಧವಾಗಿ ಇಡುವಂತೆ ಭಾರತ ಸರ್ಕಾರವು ಏರ್ ಇಂಡಿಯಾಗೆ ಸೂಚಿಸಿದೆ ಎಂದು ವರದಿಯಾಗಿದೆ.

ಈ ಮಧ್ಯೆ ಅಫ್ಘಾನ್ ಪ್ರಜೆಗಳು ಅಮೆರಿಕಾ ಅಧ್ಯಕ್ಷ ಜೊ ಬೈಡನ್‌ ವಿರುದ್ದ ವೈಟ್‌ಹೌಟ್‌ ಎದುರು ಪ್ರತಿಭಟನೆ ನಡೆಸುತ್ತಿದ್ದು, ನಮಗೆ ನೀವು ದ್ರೋಹ ಎಸಗಿದ್ದು, ಪ್ರಸ್ತುತ ನಡೆಯುತ್ತಿರುವುದಕ್ಕೆ ನೀವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಇದನ್ನೂ ಓದಿ: ಹಿಂದುತ್ವವಾದಿಗಳು ವಿರೋಧಿಸಿದ್ದ ಪುಸ್ತಕ: ‘ಹಿಂದೂಗಳು – ಬೇರೊಂದು ಚರಿತ್ರೆ’

ಸಾವಿರಾರು ಜನರು ಅಫ್ಘಾನಿಸ್ತಾನದಿಂದ ಹೊರ ದೇಶಕ್ಕೆ ಹೊರಡಬಹುದಾದ ಏಕೈಕ ದಾರಿಯಾದ ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಮಾಯಿಸಿದ್ದು, ನೂಕು ನುಗ್ಗಲು ಉಂಟಾಗಿದೆ. ವಿಮಾನ ನಿಲ್ದಾಣವು ಅಮೆರಿಕಾ ಭದ್ರತಾ ಪಡೆಗಳ ನಿಯಂತ್ರಣದಲ್ಲಿದ್ದು, ಅಮೆರಿಕಾ ಅಲ್ಲಿ ಆರು ಸಾವಿರ ಯೋಧರನ್ನು ನೇಮಿಸಿದೆ. ನೂಕು ನುಗ್ಗಲನ್ನು ನಿಯಂತ್ರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ ಘಟನೆ ಕೂಡಾ ನಡೆದಿದೆ ಎಂದು ವರದಿಯಾಗಿದೆ. ಇದರ ಮಧ್ಯೆ ಅಫ್ಘಾನ್ ವಿಮಾನ ನಿಲ್ದಾಣದಲ್ಲಿ ಐವರು ಮೃತಪಟ್ಟಿರುವುದು ಕೂಡಾ ವರದಿಯಾಗಿದೆ.

ಈ ನಡುವೆ ಅಫ್ಘಾನ್ ಗುರುದ್ವಾರದಲ್ಲಿ ಸಿಲುಕಿರುವ 200 ಸಿಖ್ಖರನ್ನು ಒಳಗೊಂಡಂತೆ ಎಲ್ಲಾ ಭಾರತೀಯರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವಂತೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಸೋಮವಾರ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸ್ಥಳಾಂತರ ಕಾರ್ಯದಲ್ಲಿ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ತಮ್ಮ ಸರ್ಕಾರ ಸಿದ್ಧವಿದೆ ಎಂದು ಅವರು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, “ತಾಲಿಬಾನ್ ಸ್ವಾಧೀನದ ನಂತರ ಅಫ್ಘಾನ್ ದೇಶದ ಗುರುದ್ವಾರದಲ್ಲಿ ಸಿಲುಕಿರುವ ಸುಮಾರು 200 ಸಿಖ್ಖರು ಸೇರಿದಂತೆ ಎಲ್ಲಾ ಭಾರತೀಯರನ್ನು ತಕ್ಷಣವೇ ಸ್ಥಳಾಂತರಿಸಲು ವ್ಯವಸ್ಥೆ ಮಾಡಲು ನಾನು  ಸಚಿವ ಡಾ.ಎಸ್.ಜೈಶಂಕರ್ ಅವರನ್ನು ಒತ್ತಾಯಿಸುತ್ತೇನೆ. ಅವರ ಸುರಕ್ಷಿತ ಸ್ಥಳಾಂತರಕ್ಕೆ ಅಗತ್ಯವಿರುವ ಯಾವುದೇ ಸಹಾಯವನ್ನು ನೀಡಲು ನನ್ನ ಸರ್ಕಾರ ಸಿದ್ಧವಿದೆ” ಎಂದಿದ್ದಾರೆ.

ಇದರ ಜೊತೆಗೆ ಅಫ್ಘಾನ್ ನ ಅಘಾತಕಾರಿ ದೃಶ್ಯಗಳು ಹೊರಬರುತ್ತಿವೆ. ಕಾಬೂಲ್‌ ವಿಮಾನ ನಿಲ್ದಾಣದಲ್ಲಿ ಹಾರುತ್ತಿರುವ ವಿಮಾನದಿಂದ ಇಬ್ಬರು ವ್ಯಕ್ತಿಗಳು ಕೆಳಗೆ ಬೀಳುತ್ತಿರುವ ವಿಡಿಯೊಗಳನ್ನು ಮಾಧ್ಯಮಗಳು ಬಿಡುಗಡೆ ಮಾಡಿವೆ

ಇದನ್ನೂ ಓದಿ: ಭಯೋತ್ಪಾದನೆಯೆಂಬ ಜಾಗತಿಕ ಸಂಕಟ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...