Homeಅಂತರಾಷ್ಟ್ರೀಯ132 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಚೀನಾದ ಈಸ್ಟರ್ನ್‌ ಏರ್‌ಲೈನ್ಸ್‌ ಪತನ

132 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಚೀನಾದ ಈಸ್ಟರ್ನ್‌ ಏರ್‌ಲೈನ್ಸ್‌ ಪತನ

- Advertisement -
- Advertisement -

132 ಜನರನ್ನು ಹೊತ್ತೊಯ್ಯುತ್ತಿದ್ದ ‘ಚೀನಾ ಈಸ್ಟರ್ನ್ ಏರ್‌ಲೈನ್ಸ್’ ಪ್ರಯಾಣಿಕ ವಿಮಾನವು ದಕ್ಷಿಣ ಚೀನಾದಲ್ಲಿ ಪತನಗೊಂಡಿದೆ ಎಂದು ದೇಶದ ಸರ್ಕಾರಿ ಮಾಧ್ಯಮ ಸಿಸಿಟಿವಿ ವರದಿ ಮಾಡಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಅದು ವರದಿ ಮಾಡಿದೆ.

ಬೋಯಿಂಗ್‌ 737 ಎಂಬ ವಿಮಾನವು ಗುವಾಂಗ್ಕ್ಸಿ ಪ್ರದೇಶದ ವುಝೌ ನಗರದ ಬಳಿಯ ಗ್ರಾಮಾಂತರ ಪ್ರದೇಶದಲ್ಲಿ ಪತನಗೊಂಡಿದೆ. ಇದರಿಂದಾಗಿ ಭಾರಿ ಬೆಂಕಿ ಭುಗಿಲೆದ್ದಿದೆ ಎಂದು CCTV ವರದಿಯಲ್ಲಿ ಹೇಳಿದ್ದು, ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

ವಿಮಾನದ ಪತನದ ಕಾರಣದ ಬಗ್ಗೆ ಮಾಹಿತಿಯನ್ನು ಅದು ನೀಡಿಲ್ಲ. ಫ್ಲೈಟ್-ಟ್ರ್ಯಾಕಿಂಗ್ ವೆಬ್‌ಸೈಟ್ ಆಗಿರುವ ‘ಫ್ಲೈಟ್‌ರಾಡಾರ್24’ ಪತನಗೊಂಡ ವಿಮಾನವನ್ನು, ‘ಆರು ವರ್ಷದ 737-800 ವಿಮಾನ’ ಎಂದು ಗುರುತಿಸಿದೆ.

“MU5735 ವಿಮಾನವು ಕುನ್ಮಿಂಗ್ ನಗರದಿಂದ ಮಧ್ಯಾಹ್ನ 1 ಗಂಟೆಯ ನಂತರ (05:00 GMT) ಟೇಕ್ ಆಫ್ ಆಗಿದೆ. ಆದರೆ ಅದು ಇಳಿಯಬೇಕಾದ ಗುವಾಂಗ್‌ಝೌ ಪ್ರದೇಶವನ್ನು ತಲುಪಿಲ್ಲ” ಎಂದು ವಿಮಾನ ನಿಲ್ದಾಣದ ಸಿಬ್ಬಂದಿಯನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ವಿಮಾನವು ತನ್ನ ಗುರಿಯನ್ನು ಮಧ್ಯಾಹ್ನ 3:05ಕ್ಕೆ (07:05 GMT) ತಲುಪಬೇಕಿತ್ತು.

“ಈ ದುರ್ಘಟನೆಯು ಇತ್ತೀಚೆಗಿನ ವರ್ಷಗಳಲ್ಲಿ ಚೀನಾದ ಅತಿದೊಡ್ಡ ಘಟನೆಯಾಗಿದೆ” ಎಂದು ಅಲ್‌ಜಝೀರಾ ತನ್ನ ವರದಿಗಾರ್ತಿ ಕತ್ರೀನಾ ಯು ಅವರನ್ನು ಉಲ್ಲೇಖಿಸಿ ವರದಿ ಮಾಡಿದೆ. ಈ ಬಗ್ಗೆ ಬೀಜಿಂಗ್‌ನಲ್ಲಿ ಮಾತನಾಡಿದ ಕತ್ರಿನಾ, “ಸಿಬ್ಬಂದಿ ಸೇರಿದಂತೆ 132 ಮಂದಿ ವಿಮಾನದಲ್ಲಿದ್ದರು ಎಂದು ಚೀನಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಹೇಳಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

“ವಿಮಾನವು ಕ್ವಾಂಗ್ಕ್ಸಿ ಮೇಲಿನಿಂದ ಹಾರುತ್ತಿರ ಬೇಕಾದರೆ ಕೆಳಗೆ ಬರುವುದರಿಂದ ಕಾಳ್ಗಿಚ್ಚು ಸಂಭವಿಸಿದೆ ಎಂದು ತೋರುತ್ತದೆ, ಮತ್ತು ಈ ಪ್ರದೇಶವು ಎಷ್ಟು ದೂರದಲ್ಲಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬಹುದು” ಎಂದು ಅವರು ಮುಂದುವರಿಸಿದರು.

“ವಿಮಾನವು ಕ್ವಾಂಗ್ಕ್ಸಿಯಲ್ಲಿ ಕೆಳಗೆ ಬರುವುದರಿಂದ ಕಾಳ್ಗಿಚ್ಚು ಸಂಭವಿಸಿದೆ ಎಂದು ತೋರುತ್ತದೆ. ಈ ಭೂಪ್ರದೇಶಕ್ಕೆ ತಲುಪುವುದು ಕಷ್ಟಕರವಾಗಿದ್ದು, ಇದರಿಂದಾಗಿ ರಕ್ಷಣಾ ತಂಡಗಳನ್ನು ಅಲ್ಲಿಗೆ ತ್ವರಿತವಾಗಿ ತಲುಪಿಸುವುದು ಸುಲಭವಲ್ಲ” ಎಂದು ಅವರು ಹೇಳಿದ್ದಾರೆ.

ಚೀನಾ ಈಸ್ಟರ್ನ್‌ ಚೀನಾದ ಮೂರು ಪ್ರಮುಖ ವಿಮಾನ ಸಂಸ್ಥೆಗಳಲ್ಲಿ ಒಂದಾಗಿದೆ. 248 ಸ್ಥಳಗಳಿಗೆ ಸೇವೆ ಸಲ್ಲಿಸುವ ಇದು ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳನ್ನು ನಿರ್ವಹಿಸುತ್ತದೆ. ದೇಶದ ವಿಮಾನಯಾನ ಉದ್ಯಮದ ಸುರಕ್ಷತಾ ದಾಖಲೆಯು ಕಳೆದ ದಶಕದಲ್ಲಿ ವಿಶ್ವದಲ್ಲೇ ಅತ್ಯುತ್ತಮವಾಗಿದೆ ಎಂದು ಅಲ್‌ ಜಝೀರಾ ಉಲ್ಲೇಖಿಸಿದೆ.

ಇದನ್ನೂ ಓದಿ: NATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....