Homeಅಂತರಾಷ್ಟ್ರೀಯ132 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಚೀನಾದ ಈಸ್ಟರ್ನ್‌ ಏರ್‌ಲೈನ್ಸ್‌ ಪತನ

132 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಚೀನಾದ ಈಸ್ಟರ್ನ್‌ ಏರ್‌ಲೈನ್ಸ್‌ ಪತನ

- Advertisement -
- Advertisement -

132 ಜನರನ್ನು ಹೊತ್ತೊಯ್ಯುತ್ತಿದ್ದ ‘ಚೀನಾ ಈಸ್ಟರ್ನ್ ಏರ್‌ಲೈನ್ಸ್’ ಪ್ರಯಾಣಿಕ ವಿಮಾನವು ದಕ್ಷಿಣ ಚೀನಾದಲ್ಲಿ ಪತನಗೊಂಡಿದೆ ಎಂದು ದೇಶದ ಸರ್ಕಾರಿ ಮಾಧ್ಯಮ ಸಿಸಿಟಿವಿ ವರದಿ ಮಾಡಿದೆ. ಸೋಮವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಅದು ವರದಿ ಮಾಡಿದೆ.

ಬೋಯಿಂಗ್‌ 737 ಎಂಬ ವಿಮಾನವು ಗುವಾಂಗ್ಕ್ಸಿ ಪ್ರದೇಶದ ವುಝೌ ನಗರದ ಬಳಿಯ ಗ್ರಾಮಾಂತರ ಪ್ರದೇಶದಲ್ಲಿ ಪತನಗೊಂಡಿದೆ. ಇದರಿಂದಾಗಿ ಭಾರಿ ಬೆಂಕಿ ಭುಗಿಲೆದ್ದಿದೆ ಎಂದು CCTV ವರದಿಯಲ್ಲಿ ಹೇಳಿದ್ದು, ಘಟನಾ ಸ್ಥಳಕ್ಕೆ ರಕ್ಷಣಾ ತಂಡಗಳನ್ನು ಕಳುಹಿಸಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ: ಶಿಕಾರಿಪುರ: ಲಾಯರ್‌ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ಅಧಿಕಾರಿ ಅಮಾನತು

ವಿಮಾನದ ಪತನದ ಕಾರಣದ ಬಗ್ಗೆ ಮಾಹಿತಿಯನ್ನು ಅದು ನೀಡಿಲ್ಲ. ಫ್ಲೈಟ್-ಟ್ರ್ಯಾಕಿಂಗ್ ವೆಬ್‌ಸೈಟ್ ಆಗಿರುವ ‘ಫ್ಲೈಟ್‌ರಾಡಾರ್24’ ಪತನಗೊಂಡ ವಿಮಾನವನ್ನು, ‘ಆರು ವರ್ಷದ 737-800 ವಿಮಾನ’ ಎಂದು ಗುರುತಿಸಿದೆ.

“MU5735 ವಿಮಾನವು ಕುನ್ಮಿಂಗ್ ನಗರದಿಂದ ಮಧ್ಯಾಹ್ನ 1 ಗಂಟೆಯ ನಂತರ (05:00 GMT) ಟೇಕ್ ಆಫ್ ಆಗಿದೆ. ಆದರೆ ಅದು ಇಳಿಯಬೇಕಾದ ಗುವಾಂಗ್‌ಝೌ ಪ್ರದೇಶವನ್ನು ತಲುಪಿಲ್ಲ” ಎಂದು ವಿಮಾನ ನಿಲ್ದಾಣದ ಸಿಬ್ಬಂದಿಯನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ವಿಮಾನವು ತನ್ನ ಗುರಿಯನ್ನು ಮಧ್ಯಾಹ್ನ 3:05ಕ್ಕೆ (07:05 GMT) ತಲುಪಬೇಕಿತ್ತು.

“ಈ ದುರ್ಘಟನೆಯು ಇತ್ತೀಚೆಗಿನ ವರ್ಷಗಳಲ್ಲಿ ಚೀನಾದ ಅತಿದೊಡ್ಡ ಘಟನೆಯಾಗಿದೆ” ಎಂದು ಅಲ್‌ಜಝೀರಾ ತನ್ನ ವರದಿಗಾರ್ತಿ ಕತ್ರೀನಾ ಯು ಅವರನ್ನು ಉಲ್ಲೇಖಿಸಿ ವರದಿ ಮಾಡಿದೆ. ಈ ಬಗ್ಗೆ ಬೀಜಿಂಗ್‌ನಲ್ಲಿ ಮಾತನಾಡಿದ ಕತ್ರಿನಾ, “ಸಿಬ್ಬಂದಿ ಸೇರಿದಂತೆ 132 ಮಂದಿ ವಿಮಾನದಲ್ಲಿದ್ದರು ಎಂದು ಚೀನಾದ ನಾಗರಿಕ ವಿಮಾನಯಾನ ಪ್ರಾಧಿಕಾರ ಹೇಳಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಆರ್ಥಿಕ ಬಿಕ್ಕಟ್ಟು: ಕಾಗದದ ಕೊರತೆಯಿಂದಾಗಿ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ!

“ವಿಮಾನವು ಕ್ವಾಂಗ್ಕ್ಸಿ ಮೇಲಿನಿಂದ ಹಾರುತ್ತಿರ ಬೇಕಾದರೆ ಕೆಳಗೆ ಬರುವುದರಿಂದ ಕಾಳ್ಗಿಚ್ಚು ಸಂಭವಿಸಿದೆ ಎಂದು ತೋರುತ್ತದೆ, ಮತ್ತು ಈ ಪ್ರದೇಶವು ಎಷ್ಟು ದೂರದಲ್ಲಿದೆ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬಹುದು” ಎಂದು ಅವರು ಮುಂದುವರಿಸಿದರು.

“ವಿಮಾನವು ಕ್ವಾಂಗ್ಕ್ಸಿಯಲ್ಲಿ ಕೆಳಗೆ ಬರುವುದರಿಂದ ಕಾಳ್ಗಿಚ್ಚು ಸಂಭವಿಸಿದೆ ಎಂದು ತೋರುತ್ತದೆ. ಈ ಭೂಪ್ರದೇಶಕ್ಕೆ ತಲುಪುವುದು ಕಷ್ಟಕರವಾಗಿದ್ದು, ಇದರಿಂದಾಗಿ ರಕ್ಷಣಾ ತಂಡಗಳನ್ನು ಅಲ್ಲಿಗೆ ತ್ವರಿತವಾಗಿ ತಲುಪಿಸುವುದು ಸುಲಭವಲ್ಲ” ಎಂದು ಅವರು ಹೇಳಿದ್ದಾರೆ.

ಚೀನಾ ಈಸ್ಟರ್ನ್‌ ಚೀನಾದ ಮೂರು ಪ್ರಮುಖ ವಿಮಾನ ಸಂಸ್ಥೆಗಳಲ್ಲಿ ಒಂದಾಗಿದೆ. 248 ಸ್ಥಳಗಳಿಗೆ ಸೇವೆ ಸಲ್ಲಿಸುವ ಇದು ದೇಶೀಯ ಮತ್ತು ಅಂತರರಾಷ್ಟ್ರೀಯ ಮಾರ್ಗಗಳನ್ನು ನಿರ್ವಹಿಸುತ್ತದೆ. ದೇಶದ ವಿಮಾನಯಾನ ಉದ್ಯಮದ ಸುರಕ್ಷತಾ ದಾಖಲೆಯು ಕಳೆದ ದಶಕದಲ್ಲಿ ವಿಶ್ವದಲ್ಲೇ ಅತ್ಯುತ್ತಮವಾಗಿದೆ ಎಂದು ಅಲ್‌ ಜಝೀರಾ ಉಲ್ಲೇಖಿಸಿದೆ.

ಇದನ್ನೂ ಓದಿ: NATO ಸದಸ್ಯತ್ವಕ್ಕೆ ಇನ್ನು ಮುಂದೆ ಒತ್ತಾಯಿಸುವುದಿಲ್ಲ; ಮಾತುಕತೆಗೆ ಒಪ್ಪಿಕೊಂಡ ಝೆಲೆನ್ಸ್ಕಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...