Homeಮುಖಪುಟಕಾಂಗ್ರೆಸ್-ಡಿಎಂಕೆ ಸರ್ಕಾರ ಪತನ ಹಿನ್ನೆಲೆ - ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

ಕಾಂಗ್ರೆಸ್-ಡಿಎಂಕೆ ಸರ್ಕಾರ ಪತನ ಹಿನ್ನೆಲೆ – ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತ ಜಾರಿ

- Advertisement -
- Advertisement -

ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಕಾಂಗ್ರೆಸ್-ಡಿಎಂಕೆ ಮೈತ್ರಿ ಸರ್ಕಾರ ಪತನಗೊಂಡಿದೆ. ಆದರೆ ಸರ್ಕಾರ ರಚಿಸಲು ಬಿಜೆಪಿ ಒಪ್ಪದ ಕಾರಣಕ್ಕೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದಿದೆ. ಈ ಪ್ರಸ್ತಾವಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಹಿ ಹಾಕಿದ್ದಾರೆ.

ವಿಧಾನಸಭೆಯಲ್ಲಿ ವಿಶ್ವಾಸ ಮತ ಕಳೆದುಕೊಂಡ ನಂತರ ಮುಖ್ಯಮಂತ್ರಿ ವಿ ನಾರಾಯಣಸಾಮಿ ಫೆ. 22ರಂದು ರಾಜೀನಾಮೆಯನ್ನು ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರ್‌ರಾಜನ್ ಅವರಿಗೆ ನೀಡಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ರಾಜ್ಯ ಬಿಜೆಪಿ ಅಧ್ಯಕ್ಷ ವಿ ಸಾಮಿನಾಥನ್, “ನಾವು ಈ ಹಂತದಲ್ಲಿ ಸರ್ಕಾರವನ್ನು ರಚಿಸಲು ಪ್ರಯತ್ನಿಸುವುದಿಲ್ಲ. ಮುಂಬರುವ ಚುನಾವಣೆಗಳಲ್ಲಿ ಜನರ ಆಶೀರ್ವಾದ ಮತ್ತು ಮೋದಿಯವರ ನಾಯಕತ್ವದೊಂದಿಗೆ, ಎನ್‌ಡಿಎ ಮೈತ್ರಿಯ ಭಾಗವಾಗಿರುವ ಎಐಎಡಿಎಂಕೆ ಜೊತೆ ಸರ್ಕಾರ ರಚಿಸಲಿದ್ದೇವೆ. ಇದು ಪುದುಚೇರಿಯ ಜನರಿಗೆ ಉಜ್ವಲ ಭವಿಷ್ಯವನ್ನು ನೀಡುತ್ತದೆ” ಎಂದು ಹೇಳಿದ್ದರು.

ಇದನ್ನೂ ಓದಿ: ’ಸಲಿಂಗ ವಿವಾಹ ಮೂಲಭೂತ ಹಕ್ಕಲ್ಲ’ – ಕೇಂದ್ರ ಸರ್ಕಾರ ಹೇಳಿಕೆ

ಈ ಸರ್ಕಾರದ ಪತನದೊಂದಿಗೆ ಕೇಂದ್ರಾಡಳಿತ ಪ್ರದೇಶದ ಇತಿಹಾಸದಲ್ಲಿ ಕೆಟ್ಟ ಅಧ್ಯಾಯ ಕೊನೆಗೊಂಡಿದೆ ಎಂದು ಬಿಜೆಪಿ ಬಣ್ಣಿಸಿದೆ.

“ಕಳೆದ ಐದು ವರ್ಷಗಳಲ್ಲಿ ಕೇಂದ್ರಾಡಳಿತದ ಹಣಕಾಸನ್ನು ಲೂಟಿ ಮಾಡಲಾಗಿದೆ. ಉದ್ಯೋಗಗಳು, ಪಡಿತರ, ಆರೋಗ್ಯ ರಕ್ಷಣೆ, ರಸ್ತೆಗಳು ಮತ್ತು ಶಿಕ್ಷಣಕ್ಕಾಗಿ ಕೇಂದ್ರವು ಕಳುಹಿಸಿದ ಹಣವನ್ನು ದುರುಪಯೋಗಪಡಿಸಲಾಗಿದೆ” ಎಂದು ಸಾಮಿನಾಥನ್ ಆರೋಪಿಸಿದ್ದಾರೆ.

“ರಾಹುಲ್ ಗಾಂಧಿಯವರ ಭೇಟಿಯ ಸಮಯದಲ್ಲಿ ಬಡ ಮಹಿಳೆಯರು ಚಂಡಮಾರುತದ ಪರಿಣಾಮದಿಂದ ಬಳಲುತ್ತಿರುವ ಬಗ್ಗೆ ದೂರು ನೀಡಿರುವುದನ್ನು ನೀವು ಕಂಡಿದ್ದೀರಿ. ಭ್ರಷ್ಟಾಚಾರ ಮತ್ತು ಶೋಷಣೆಯ ಸಂಸ್ಕೃತಿಯನ್ನು ಮಾತ್ರ ಕಾಂಗ್ರೆಸ್ ಮತ್ತು ಡಿಎಂಕೆ ನೀಡಿದೆ. ಪುದುಚೇರಿಯ ಜನರು ಮುಂಬರುವ ಚುನಾವಣೆಗಳಲ್ಲಿ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಸ್ಮಾರ್ಟ್‌ ಸಿಟಿ ನಿರ್ಮಾಣ, ನದಿಗಳನ್ನು ಸ್ವಚ್ಚಗೊಳಿಸುವುದು ಯಾವಾಗ? ಬಿಜೆಪಿ ಉತ್ತರಿಸಲಿ: ಅಖಿಲೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...