Homeಮುಖಪುಟಪ್ರಸಿದ್ದ ‘ಕೋಟ್ಟಕ್ಕಲ್‌ ಆಯುರ್ವೇದ’ ವೈದ್ಯ ಡಾ.ಪಿ.ಕೆ. ವಾರಿಯರ್‌ (100) ನಿಧನ

ಪ್ರಸಿದ್ದ ‘ಕೋಟ್ಟಕ್ಕಲ್‌ ಆಯುರ್ವೇದ’ ವೈದ್ಯ ಡಾ.ಪಿ.ಕೆ. ವಾರಿಯರ್‌ (100) ನಿಧನ

- Advertisement -
- Advertisement -

‘ಕೋಟ್ಟಕ್ಕಲ್‌ ಆಯುರ್ವೇದ’ ಎಂದು ಪ್ರಸಿದ್ದವಾಗಿರುವ ಆರ್ಯ ವೈದ್ಯ ಶಾಲಾದ ವ್ಯವಸ್ಥಾಪಕ ಟ್ರಸ್ಟಿ ಡಾ. ಪಿ.ಕೆ. ವಾರಿಯರ್‌ ನಿಧನರಾಗಿದ್ದಾರೆ. ಆಯುರ್ವೇದ ಔಷಧಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾಗಿರುವ ಕೇರಳದ ಕೋಟ್ಟಕ್ಕಲ್‌‌ನ ವೈದ್ಯರತ್ನಂ ಪಿಎಸ್ ವಾರಿಯರ್‌‌‌ ಅವರ ‘ಆರ್ಯ ವೈದ್ಯ ಶಾಲಾ’ದ ಮುಖ್ಯ ಕಚೇರಿಯಾದ ಕೈಲಾಸ ಮಂದಿರಂನಲ್ಲಿ ಶನಿವಾರದಂದು ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ. ಅವರು ತಿಂಗಳ ಹಿಂದೆಯಷ್ಟೆ ತನ್ನ ನೂರನೇ ಜನ್ಮ ದಿನವನ್ನು ಆಚರಿಸಿದ್ದರು.

ವೈದ್ಯರತ್ನಂ ಪಿಎಸ್ ವಾರಿಯರ್‌‌‌ ಅವರು ಪ್ರಾರಂಭಿಸಿದ್ದ ಆರ್ಯ ವೈದ್ಯ ಶಾಲಾದ ವ್ಯವಸ್ಥಾಪಕ ಟ್ರಸ್ಟಿಯಾಗಿ 1954 ರಲ್ಲಿ ಡಾ. ವಾರಿಯರ್‌ ನೇಮಕವಾಗಿದ್ದು. ಡಾ. ವಾರಿಯರ್ ಶತಮಾನದಷ್ಟು ಹಳೆಯದಾದ ಸಂಸ್ಥೆಯನ್ನು ವೈಭವ ಮತ್ತು ಖ್ಯಾತಿಯ ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರರಾದ ಡಾ. ವಾರಿಯರ್, ಆಯುರ್ವೇದಕ್ಕೆ ದೇಹ ಮತ್ತು ಮನಸ್ಸನ್ನು ಸಮಗ್ರವಾಗಿ ಪರಿಗಣಿಸುವ ಮೂಲಕ ಮನುಷ್ಯರನ್ನು ಸಮಗ್ರವಾಗಿ ನೋಡುವ ಹೊಸ ದೃಷ್ಟಿಕೋನವನ್ನು ನೀಡಿದ್ದರು ಎಂದು ದಿ ಹಿಂದೂ ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

‘ಸ್ಮೃತಿಪರ್ವಂ’ ಎಂಬ ಅವರ ಪುಸ್ತಕವು 2009 ರಲ್ಲಿ ಅತ್ಯುತ್ತಮ ಆತ್ಮಚರಿತ್ರೆಗಾಗಿ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇದರ ಇಂಗ್ಲಿಷ್ ಅನುವಾದ ‘ದಿ ಕ್ಯಾಂಟೊ ಆಫ್ ಮೆಮೊರೀಸ್’ ಕೂಡ ಹೆಚ್ಚು ಜನಪ್ರಿಯವಾಗಿತ್ತು. ಅವರು ಅಖಿಲ ಭಾರತ ಆಯುರ್ವೇದ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡು ಬಾರಿ ಆಯ್ಕೆಯಾಗಿದ್ದರು.

ಡಾ. ವಾರಿಯರ್ ಅವರ ನಿಧನಕ್ಕೆ ಭಾರತದ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅವರಿಗೆ 1999 ರಲ್ಲಿ ಪದ್ಮಶ್ರೀ, 2010 ರಲ್ಲಿ ಪದ್ಮಭೂಷಣ ನೀಡಿ ಗೌರವಿಸಲಾಗಿತ್ತು. ಕ್ಯಾಲಿಕಟ್ ವಿಶ್ವವಿದ್ಯಾಲಯವು ಅವರಿಗೆ 1999 ರಲ್ಲಿ ಡಿಲಿಟ್ ಪದವಿಯನ್ನು ನೀಡಿ ಗೌರವಿಸಿತು. ಕೋಪನ್ ಹ್ಯಾಗನ್ ವಿಶ್ವವಿದ್ಯಾಲಯದ ಡಾಕ್ಟರ್ ಆಫ್ ಮೆಡಿಸಿನ್ ಪ್ರಶಸ್ತಿ ಸೇರಿದಂತೆ ಅವರು ಅನೇಕ ಗೌರವ ಪದವಿಗಳನ್ನು ಪಡೆದಿದ್ದಾರೆ.

ಅವರ ಪತ್ನಿ ಮಾಧವಿಕುಟ್ಟಿ ಮತ್ತು ಮಗ ವಿಜಯನ್ ವಾರಿಯರ್ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಅವರಿಗೆ ಮಗ ಬಾಲಚಂದ್ರ ವಾರಿಯರ್ ಮತ್ತು ಮಗಳು ಸುಭದ್ರಾ ರಾಮಚಂದ್ರನ್ ಇದ್ದಾರೆ.

ಇದನ್ನೂ ಓದಿ: ಪತಂಜಲಿ ಕೊರೊನಾ ಔಷಧಿ: ಆಯುರ್ವೇದ ವೈದ್ಯಶಾಸ್ತ್ರಕ್ಕೆ ಮಸಿ ಬಳಿಯುವ ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...