Homeಮುಖಪುಟಪ್ರಸಿದ್ದ ‘ಕೋಟ್ಟಕ್ಕಲ್‌ ಆಯುರ್ವೇದ’ ವೈದ್ಯ ಡಾ.ಪಿ.ಕೆ. ವಾರಿಯರ್‌ (100) ನಿಧನ

ಪ್ರಸಿದ್ದ ‘ಕೋಟ್ಟಕ್ಕಲ್‌ ಆಯುರ್ವೇದ’ ವೈದ್ಯ ಡಾ.ಪಿ.ಕೆ. ವಾರಿಯರ್‌ (100) ನಿಧನ

- Advertisement -
- Advertisement -

‘ಕೋಟ್ಟಕ್ಕಲ್‌ ಆಯುರ್ವೇದ’ ಎಂದು ಪ್ರಸಿದ್ದವಾಗಿರುವ ಆರ್ಯ ವೈದ್ಯ ಶಾಲಾದ ವ್ಯವಸ್ಥಾಪಕ ಟ್ರಸ್ಟಿ ಡಾ. ಪಿ.ಕೆ. ವಾರಿಯರ್‌ ನಿಧನರಾಗಿದ್ದಾರೆ. ಆಯುರ್ವೇದ ಔಷಧಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾಗಿರುವ ಕೇರಳದ ಕೋಟ್ಟಕ್ಕಲ್‌‌ನ ವೈದ್ಯರತ್ನಂ ಪಿಎಸ್ ವಾರಿಯರ್‌‌‌ ಅವರ ‘ಆರ್ಯ ವೈದ್ಯ ಶಾಲಾ’ದ ಮುಖ್ಯ ಕಚೇರಿಯಾದ ಕೈಲಾಸ ಮಂದಿರಂನಲ್ಲಿ ಶನಿವಾರದಂದು ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ. ಅವರು ತಿಂಗಳ ಹಿಂದೆಯಷ್ಟೆ ತನ್ನ ನೂರನೇ ಜನ್ಮ ದಿನವನ್ನು ಆಚರಿಸಿದ್ದರು.

ವೈದ್ಯರತ್ನಂ ಪಿಎಸ್ ವಾರಿಯರ್‌‌‌ ಅವರು ಪ್ರಾರಂಭಿಸಿದ್ದ ಆರ್ಯ ವೈದ್ಯ ಶಾಲಾದ ವ್ಯವಸ್ಥಾಪಕ ಟ್ರಸ್ಟಿಯಾಗಿ 1954 ರಲ್ಲಿ ಡಾ. ವಾರಿಯರ್‌ ನೇಮಕವಾಗಿದ್ದು. ಡಾ. ವಾರಿಯರ್ ಶತಮಾನದಷ್ಟು ಹಳೆಯದಾದ ಸಂಸ್ಥೆಯನ್ನು ವೈಭವ ಮತ್ತು ಖ್ಯಾತಿಯ ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರರಾದ ಡಾ. ವಾರಿಯರ್, ಆಯುರ್ವೇದಕ್ಕೆ ದೇಹ ಮತ್ತು ಮನಸ್ಸನ್ನು ಸಮಗ್ರವಾಗಿ ಪರಿಗಣಿಸುವ ಮೂಲಕ ಮನುಷ್ಯರನ್ನು ಸಮಗ್ರವಾಗಿ ನೋಡುವ ಹೊಸ ದೃಷ್ಟಿಕೋನವನ್ನು ನೀಡಿದ್ದರು ಎಂದು ದಿ ಹಿಂದೂ ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

‘ಸ್ಮೃತಿಪರ್ವಂ’ ಎಂಬ ಅವರ ಪುಸ್ತಕವು 2009 ರಲ್ಲಿ ಅತ್ಯುತ್ತಮ ಆತ್ಮಚರಿತ್ರೆಗಾಗಿ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇದರ ಇಂಗ್ಲಿಷ್ ಅನುವಾದ ‘ದಿ ಕ್ಯಾಂಟೊ ಆಫ್ ಮೆಮೊರೀಸ್’ ಕೂಡ ಹೆಚ್ಚು ಜನಪ್ರಿಯವಾಗಿತ್ತು. ಅವರು ಅಖಿಲ ಭಾರತ ಆಯುರ್ವೇದ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡು ಬಾರಿ ಆಯ್ಕೆಯಾಗಿದ್ದರು.

ಡಾ. ವಾರಿಯರ್ ಅವರ ನಿಧನಕ್ಕೆ ಭಾರತದ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅವರಿಗೆ 1999 ರಲ್ಲಿ ಪದ್ಮಶ್ರೀ, 2010 ರಲ್ಲಿ ಪದ್ಮಭೂಷಣ ನೀಡಿ ಗೌರವಿಸಲಾಗಿತ್ತು. ಕ್ಯಾಲಿಕಟ್ ವಿಶ್ವವಿದ್ಯಾಲಯವು ಅವರಿಗೆ 1999 ರಲ್ಲಿ ಡಿಲಿಟ್ ಪದವಿಯನ್ನು ನೀಡಿ ಗೌರವಿಸಿತು. ಕೋಪನ್ ಹ್ಯಾಗನ್ ವಿಶ್ವವಿದ್ಯಾಲಯದ ಡಾಕ್ಟರ್ ಆಫ್ ಮೆಡಿಸಿನ್ ಪ್ರಶಸ್ತಿ ಸೇರಿದಂತೆ ಅವರು ಅನೇಕ ಗೌರವ ಪದವಿಗಳನ್ನು ಪಡೆದಿದ್ದಾರೆ.

ಅವರ ಪತ್ನಿ ಮಾಧವಿಕುಟ್ಟಿ ಮತ್ತು ಮಗ ವಿಜಯನ್ ವಾರಿಯರ್ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಅವರಿಗೆ ಮಗ ಬಾಲಚಂದ್ರ ವಾರಿಯರ್ ಮತ್ತು ಮಗಳು ಸುಭದ್ರಾ ರಾಮಚಂದ್ರನ್ ಇದ್ದಾರೆ.

ಇದನ್ನೂ ಓದಿ: ಪತಂಜಲಿ ಕೊರೊನಾ ಔಷಧಿ: ಆಯುರ್ವೇದ ವೈದ್ಯಶಾಸ್ತ್ರಕ್ಕೆ ಮಸಿ ಬಳಿಯುವ ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...