Homeಮುಖಪುಟಪ್ರಸಿದ್ದ ‘ಕೋಟ್ಟಕ್ಕಲ್‌ ಆಯುರ್ವೇದ’ ವೈದ್ಯ ಡಾ.ಪಿ.ಕೆ. ವಾರಿಯರ್‌ (100) ನಿಧನ

ಪ್ರಸಿದ್ದ ‘ಕೋಟ್ಟಕ್ಕಲ್‌ ಆಯುರ್ವೇದ’ ವೈದ್ಯ ಡಾ.ಪಿ.ಕೆ. ವಾರಿಯರ್‌ (100) ನಿಧನ

- Advertisement -
- Advertisement -

‘ಕೋಟ್ಟಕ್ಕಲ್‌ ಆಯುರ್ವೇದ’ ಎಂದು ಪ್ರಸಿದ್ದವಾಗಿರುವ ಆರ್ಯ ವೈದ್ಯ ಶಾಲಾದ ವ್ಯವಸ್ಥಾಪಕ ಟ್ರಸ್ಟಿ ಡಾ. ಪಿ.ಕೆ. ವಾರಿಯರ್‌ ನಿಧನರಾಗಿದ್ದಾರೆ. ಆಯುರ್ವೇದ ಔಷಧಗಳಿಗೆ ವಿಶ್ವದಾದ್ಯಂತ ಹೆಸರುವಾಸಿಯಾಗಿರುವ ಕೇರಳದ ಕೋಟ್ಟಕ್ಕಲ್‌‌ನ ವೈದ್ಯರತ್ನಂ ಪಿಎಸ್ ವಾರಿಯರ್‌‌‌ ಅವರ ‘ಆರ್ಯ ವೈದ್ಯ ಶಾಲಾ’ದ ಮುಖ್ಯ ಕಚೇರಿಯಾದ ಕೈಲಾಸ ಮಂದಿರಂನಲ್ಲಿ ಶನಿವಾರದಂದು ಅವರು ತಮ್ಮ ಕೊನೆಯುಸಿರೆಳೆದಿದ್ದಾರೆ. ಅವರು ತಿಂಗಳ ಹಿಂದೆಯಷ್ಟೆ ತನ್ನ ನೂರನೇ ಜನ್ಮ ದಿನವನ್ನು ಆಚರಿಸಿದ್ದರು.

ವೈದ್ಯರತ್ನಂ ಪಿಎಸ್ ವಾರಿಯರ್‌‌‌ ಅವರು ಪ್ರಾರಂಭಿಸಿದ್ದ ಆರ್ಯ ವೈದ್ಯ ಶಾಲಾದ ವ್ಯವಸ್ಥಾಪಕ ಟ್ರಸ್ಟಿಯಾಗಿ 1954 ರಲ್ಲಿ ಡಾ. ವಾರಿಯರ್‌ ನೇಮಕವಾಗಿದ್ದು. ಡಾ. ವಾರಿಯರ್ ಶತಮಾನದಷ್ಟು ಹಳೆಯದಾದ ಸಂಸ್ಥೆಯನ್ನು ವೈಭವ ಮತ್ತು ಖ್ಯಾತಿಯ ಉತ್ತುಂಗಕ್ಕೆ ಕೊಂಡೊಯ್ಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸ್ವಾತಂತ್ರ್ಯ ಹೋರಾಟಗಾರರಾದ ಡಾ. ವಾರಿಯರ್, ಆಯುರ್ವೇದಕ್ಕೆ ದೇಹ ಮತ್ತು ಮನಸ್ಸನ್ನು ಸಮಗ್ರವಾಗಿ ಪರಿಗಣಿಸುವ ಮೂಲಕ ಮನುಷ್ಯರನ್ನು ಸಮಗ್ರವಾಗಿ ನೋಡುವ ಹೊಸ ದೃಷ್ಟಿಕೋನವನ್ನು ನೀಡಿದ್ದರು ಎಂದು ದಿ ಹಿಂದೂ ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಕೊರೊನಾ: ರೋಗ ನಿರೋಧಕತೆ ಕುರಿತು ಆಯುರ್ವೇದದ ದೃಷ್ಟಿಕೋನ

‘ಸ್ಮೃತಿಪರ್ವಂ’ ಎಂಬ ಅವರ ಪುಸ್ತಕವು 2009 ರಲ್ಲಿ ಅತ್ಯುತ್ತಮ ಆತ್ಮಚರಿತ್ರೆಗಾಗಿ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು. ಇದರ ಇಂಗ್ಲಿಷ್ ಅನುವಾದ ‘ದಿ ಕ್ಯಾಂಟೊ ಆಫ್ ಮೆಮೊರೀಸ್’ ಕೂಡ ಹೆಚ್ಚು ಜನಪ್ರಿಯವಾಗಿತ್ತು. ಅವರು ಅಖಿಲ ಭಾರತ ಆಯುರ್ವೇದ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡು ಬಾರಿ ಆಯ್ಕೆಯಾಗಿದ್ದರು.

ಡಾ. ವಾರಿಯರ್ ಅವರ ನಿಧನಕ್ಕೆ ಭಾರತದ ರಾಷ್ಟ್ರಪತಿ, ಪ್ರಧಾನ ಮಂತ್ರಿ ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಅವರಿಗೆ 1999 ರಲ್ಲಿ ಪದ್ಮಶ್ರೀ, 2010 ರಲ್ಲಿ ಪದ್ಮಭೂಷಣ ನೀಡಿ ಗೌರವಿಸಲಾಗಿತ್ತು. ಕ್ಯಾಲಿಕಟ್ ವಿಶ್ವವಿದ್ಯಾಲಯವು ಅವರಿಗೆ 1999 ರಲ್ಲಿ ಡಿಲಿಟ್ ಪದವಿಯನ್ನು ನೀಡಿ ಗೌರವಿಸಿತು. ಕೋಪನ್ ಹ್ಯಾಗನ್ ವಿಶ್ವವಿದ್ಯಾಲಯದ ಡಾಕ್ಟರ್ ಆಫ್ ಮೆಡಿಸಿನ್ ಪ್ರಶಸ್ತಿ ಸೇರಿದಂತೆ ಅವರು ಅನೇಕ ಗೌರವ ಪದವಿಗಳನ್ನು ಪಡೆದಿದ್ದಾರೆ.

ಅವರ ಪತ್ನಿ ಮಾಧವಿಕುಟ್ಟಿ ಮತ್ತು ಮಗ ವಿಜಯನ್ ವಾರಿಯರ್ ಕೆಲವು ವರ್ಷಗಳ ಹಿಂದೆ ನಿಧನರಾಗಿದ್ದರು. ಅವರಿಗೆ ಮಗ ಬಾಲಚಂದ್ರ ವಾರಿಯರ್ ಮತ್ತು ಮಗಳು ಸುಭದ್ರಾ ರಾಮಚಂದ್ರನ್ ಇದ್ದಾರೆ.

ಇದನ್ನೂ ಓದಿ: ಪತಂಜಲಿ ಕೊರೊನಾ ಔಷಧಿ: ಆಯುರ್ವೇದ ವೈದ್ಯಶಾಸ್ತ್ರಕ್ಕೆ ಮಸಿ ಬಳಿಯುವ ಪ್ರಯತ್ನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...