Homeಕರ್ನಾಟಕನಾಡಿನ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ಇನ್ನಿಲ್ಲ

ನಾಡಿನ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ಇನ್ನಿಲ್ಲ

- Advertisement -
- Advertisement -

ವಯೋಸಹಜ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿದ್ದ ನಾಡಿನ ಖ್ಯಾತ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್‌ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಅವರಿಗೆ 87 ವರ್ಷ ವಯಸ್ಸಾಗಿತ್ತು.

ನ್ಯಾಯವಾದಿಯಾಗಿದ್ದ ತಂದೆ ಪಿ. ಅಹಮದ್, ತಾಯಿ ಜೈನಾಬಿ ಅವರ ಮಗಳಾಗಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30 ರಂದು ಕೇರಳದ ಕಾಸರಗೋಡಿನ ಚಂದ್ರಗಿರಿ ನದಿಯ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ಪ್ರಾಥಮಿಕ ವಿದ್ಯಾಭ್ಯಾಸ ತಮ್ಮ ಹುಟ್ಟೂರಿನಲ್ಲೇ ಪಡೆದ ಅವರು, ಹೈಸ್ಕೂಲು ವಿದ್ಯಾಭ್ಯಾಸವನ್ನು ಕಾಸರಗೋಡಿನಲ್ಲಿ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಜಿನಿಯರ್ ಆಗಿದ್ದ ಅಬೂಬಕ್ಕರ್‌‌ ಅವರನ್ನು ಸಾರಾ ವಿವಾಹವಾದ ನಂತರ ಅವರು ತಮ್ಮ ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಅವರು ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾಹಿತ್ಯ ಲೋಕದೆಡೆಗೆ ಆಕರ್ಷಿತರಾದರು. ಅವರ ಅಣ್ಣ ತಂದುಕೊಡುತ್ತಿದ್ದ ಕೇರಳದ ಪ್ರಸಿದ್ದ ಲೇಖಕ ವೈಕಂ ಮಹಮದ್ ಬಷೀರ್‌ ಅವರ ಕಾದಂಬರಿಗಳ ಓದಿನ ಪ್ರಭಾವದಿಂದ ಅವರು ಬರೆಯುವ ಆಸಕ್ತಿಯನ್ನು ತೆಳೆದರು.

ತಮ್ಮ ನಲವತ್ತನೆ ವಯಸ್ಸಿನ ನಂತರ ಬರೆಯಲು ಪ್ರಾರಂಬಿಸಿದ ಸಾರಾ ಅಬೂಬಕ್ಕರ್  ಅವರ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಈ ಕಥೆಯಲ್ಲಿ ಹೊರಹೊಮ್ಮಿದ ವಾಸ್ತವಿಕ ಬದುಕಿನ ಚಿತ್ರಣ ಮತ್ತು ಧರ್ಮದ ಕಟ್ಟುಪಾಡುಗಳಲ್ಲಿ ಶೋಷಿತಗೊಂಡ ಮಹಿಳೆಯರ ಧ್ವನಿಗಳು ಅಸಂಖ್ಯಾತ ಓದುಗರ ಹೃದಯವನ್ನು ತಟ್ಟಿ ಈ ಕಾದಂಬರಿ ಎಲ್ಲೆಡೆಯಿಂದ ಮೆಚ್ಚುಗೆ ಪಡೆಯಿದೆ.

ಚಂದ್ರಗಿರಿಯ ತೀರದಲ್ಲಿ- ೧೯೮೪, ಸಹನಾ, – ೧೯೮೫, ವಜ್ರಗಳು, ಕದನವಿರಾಮ, – ೧೯೮೮, ಸುಳಿಯಲ್ಲಿ ಸಿಕ್ಕವರು,೧೯೯೪, ಪ್ರವಾಹ-ಸುಳಿ (ಸುಳಿಯಲ್ಲಿ ಸಿಕ್ಕವರು ಕೃತಿಯ ಭಾಗ-೨), ತಳ ಒಡೆದ ದೋಣಿ, ೧೯೯೭, ಪಂಜರ, ಇಳಿಜಾರು, ಕಾಣಿಕೆ ಇವರ ಪ್ರಮುಖ ಕೃತಿಗಳಾಗಿವೆ.

ಚಪ್ಪಲಿಗಳು, ೧೯೮೯, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ೧೯೯೨, ಖೆಡ್ಡ, ಸುಮಯ್ಯಾ (ಜನಪದ ಆಧರಿಸಿದ ಕಥೆಗಳು), ೨೦೦೪, ಗಗನ ಸಖಿ, ೨೦೦೭ ಇವರ ಪ್ರಮುಖ ಕಥಾ ಸಂಕಲನಗಳಾಗಿವೆ.

ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು ಇವರ ಬರೆದ ಬಾನುಲಿ ನಾಟಕಗಳಾಗಿದ್ದು, ಲೇಖನ ಗುಚ್ಛ, ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ (ಕಾದಂಬರಿಗಳು) ಇವರ ಪ್ರಮುಖ  ಲೇಖನ ಮತ್ತು ಅನುವಾದಗಳಾಗಿವೆ. ಐಷಾರಾಮದ ಆಳದಲ್ಲಿ ಎಂಬ ಪ್ರವಾಸಕಥನವನ್ನು ಕೂಡಾ ಸಾರಾ ಅವರು ಬರೆದಿದ್ದಾರೆ.

ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ.

ಮೃತರ ಪಾರ್ಥೀವ ಶರೀರವನ್ನು ಮಂಗಳೂರಿನ ಲೇಡಿಹಿಲ್ ಬಳಿ ಇರುವ ಅವರ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ರಾತ್ರಿ 8 ಗಂಟೆಗೆ ಅಂತ್ಯ ಕ್ರಿಯೆ ನೆರವೇಸಿಸಲಾಗುತ್ತದೆ ಎಂದು ಅವರ ಆಪ್ತ ಮೂಲಕಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಹಿರಿಯ ಸಾಹಿತಿಗೆ ನಾಡಿನ ಹಲವರು ಗಣ್ಯ ವ್ಯಕ್ತಿಗಳು ಶ್ರದ್ದಾಂಜಲಿ ಕೋರಿದ್ದು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಅವರ ಕೊಡುಗೆಗಳನ್ನು ನೆನೆಸಿಕೊಂಡಿದ್ದಾರೆ.

ಸಂಸ್ಕೃತಿ ಚಿಂತಕ, ಸಾಹಿತಿ ರಹಮತ್ ತರಿಕೆರೆ ಅವರು, “ನಿನ್ನೆಯಷ್ಟೆ ಅಕ್ಕರದವ್ವ ಫಾತಿಮಾ ಶೇಖರ ಜನ್ಮದಿನವಿತ್ತು. ಈ ದಿನ ‘ಮುಸ್ಲಿಂ‌ಹುಡುಗಿ ಶಾಲೆ‌ ಕಲಿತದ್ದು’ ಬರೆಹದ ಮೂಲಕ ಸಾಹಿತ್ಯಲೋಕ ಪ್ರವೇಶಿಸಿದ ಸಾರಾ ಇಲ್ಲವಾದರು. ಸಾರಾ ಎಂದರೆ ಅರಬ್ಬಿಯಲ್ಲಿ ಸಂತೋಷದಾಯಕಿ ರಾಜಕುಮಾರಿ ಎಂದರ್ಥಗಳಿವೆ. ಆದರೆ ಇವರು ಬದುಕೆಲ್ಲ ಬವಣೆಗೊಳಗಾದ ಮಹಿಳೆಯರ ಬಗ್ಗೆಯೇ ಧ್ಯಾನಿಸಿದರು. ಬರೆದರು. 25 ವರ್ಷಗಳ ಹಿಂದೆ ಅವರೊಡನೆ ಇಡೀ ದಿನವಿದ್ದು ಸಂದರ್ಶನ ಮಾಡಿ ಪ್ರಕಟಿಸಿದ್ದು ನೆ‌ನಪಾಗುತ್ತಿದೆ. ವೈಚಾರಿಕವಾಗಿ ಕಠೋರ ನಿಷ್ಠುರೆ; ಅಂತಃಕರಣದಲ್ಲಿ ತಾಯಿಯಾಗಿದ್ದರು” ಎಂದು ಹೇಳಿದ್ದಾರೆ.

“ತಾ‌ನು ನಂಬಿದ ಮೌಲ್ಯಗಳಿಗೆ ಬದ್ಧರಾಗಿ, ಎದುರಾದ ವಿರೋಧಗಳನ್ನು ದಿಟ್ಟತನದಿಂದ ಎದುರಿಸಿ, ಮುಸ್ಲಿಂ ಲೋಕದ ತವಕ-ತಲ್ಲಣಗಳಿಗೆ ದನಿಯಾಗಿದ್ದ ಹಿರಿಯ ಸಾಹಿತಿ ಸಾರಾ ಅಬೂಬಕರ್ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ. ಅವರ ಬಂಧುಗಳು ಮತ್ತು ಓದುಗ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇ‌ನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಧಾನಪರಿಷತ್‌‌ನ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಅವರು, “ಕರಾವಳಿ ಸೌಹಾರ್ದತೆಯ ಗಟ್ಟಿ ಧ್ವನಿ,ಕೋಮುವಾದದ ವಿರುದ್ಧದ ದಿಟ್ಟ ದನಿ ಅಸ್ತಂಗತವಾಗಿದೆ. ಲೇಖಕಿ ಸಾರಾ ಅಬೂಬಕ್ಕರ್ ನಿಧನ ಸಾಹಿತ್ಯ ಲೋಕಕ್ಕೆ ತುಂಬಿ ಬಾರದ ನಷ್ಟ. ದುರಿತ ಕಾಲದಲ್ಲಿ ಸಾರಾ ಅವರ ಅಗಲಿಕೆ ಕುಟುಂಬದ ಸದಸ್ಯರನ್ನೇ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬಸ್ಥರು ಹಾಗೂ ಅವರ ಒಡನಾಡಿಗಳ ನೋವಲ್ಲಿ ನಾನು ಭಾಗಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಖ್ಯಾತ ವ್ಯಂಗ್ಯಚಿತ್ರಕಾರ ಪಿ.ಮೊಹಮದ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....