Homeಕರ್ನಾಟಕನಾಡಿನ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ಇನ್ನಿಲ್ಲ

ನಾಡಿನ ಖ್ಯಾತ ಸಾಹಿತಿ ಸಾರಾ ಅಬೂಬಕ್ಕರ್ (87) ಇನ್ನಿಲ್ಲ

- Advertisement -
- Advertisement -

ವಯೋಸಹಜ ಅನಾರೋಗ್ಯದ ಕಾರಣ ಆಸ್ಪತ್ರೆಯಲ್ಲಿದ್ದ ನಾಡಿನ ಖ್ಯಾತ ಹಿರಿಯ ಸಾಹಿತಿ ಸಾರಾ ಅಬೂಬಕ್ಕರ್‌ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರು ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಅವರಿಗೆ 87 ವರ್ಷ ವಯಸ್ಸಾಗಿತ್ತು.

ನ್ಯಾಯವಾದಿಯಾಗಿದ್ದ ತಂದೆ ಪಿ. ಅಹಮದ್, ತಾಯಿ ಜೈನಾಬಿ ಅವರ ಮಗಳಾಗಿ ಸಾರಾ ಅಬೂಬಕ್ಕರ್ ಅವರು 1936ರ ಜೂನ್ 30 ರಂದು ಕೇರಳದ ಕಾಸರಗೋಡಿನ ಚಂದ್ರಗಿರಿ ನದಿಯ ತೀರದ  ಗ್ರಾಮವೊಂದರಲ್ಲಿ ಜನಿಸಿದರು. ಪ್ರಾಥಮಿಕ ವಿದ್ಯಾಭ್ಯಾಸ ತಮ್ಮ ಹುಟ್ಟೂರಿನಲ್ಲೇ ಪಡೆದ ಅವರು, ಹೈಸ್ಕೂಲು ವಿದ್ಯಾಭ್ಯಾಸವನ್ನು ಕಾಸರಗೋಡಿನಲ್ಲಿ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇಂಜಿನಿಯರ್ ಆಗಿದ್ದ ಅಬೂಬಕ್ಕರ್‌‌ ಅವರನ್ನು ಸಾರಾ ವಿವಾಹವಾದ ನಂತರ ಅವರು ತಮ್ಮ ವಿದ್ಯಾಭ್ಯಾಸಕ್ಕೆ ವಿದಾಯ ಹೇಳುವಂತಾಯಿತು. ಆದರೆ ಅವರು ಓದಿನಲ್ಲಿ ನಿರಂತರ ಆಸಕ್ತರಾಗಿದ್ದ ಸಾಹಿತ್ಯ ಲೋಕದೆಡೆಗೆ ಆಕರ್ಷಿತರಾದರು. ಅವರ ಅಣ್ಣ ತಂದುಕೊಡುತ್ತಿದ್ದ ಕೇರಳದ ಪ್ರಸಿದ್ದ ಲೇಖಕ ವೈಕಂ ಮಹಮದ್ ಬಷೀರ್‌ ಅವರ ಕಾದಂಬರಿಗಳ ಓದಿನ ಪ್ರಭಾವದಿಂದ ಅವರು ಬರೆಯುವ ಆಸಕ್ತಿಯನ್ನು ತೆಳೆದರು.

ತಮ್ಮ ನಲವತ್ತನೆ ವಯಸ್ಸಿನ ನಂತರ ಬರೆಯಲು ಪ್ರಾರಂಬಿಸಿದ ಸಾರಾ ಅಬೂಬಕ್ಕರ್  ಅವರ ಮೊದಲ ಕಾದಂಬರಿ ‘ಚಂದ್ರಗಿರಿಯ ತೀರದಲ್ಲಿ’ ಲಂಕೇಶ್ ಪತ್ರಿಕೆಯಲ್ಲಿ ಧಾರಾವಾಹಿಯಾಗಿ ಪ್ರಕಟಗೊಂಡಿತು. ಈ ಕಥೆಯಲ್ಲಿ ಹೊರಹೊಮ್ಮಿದ ವಾಸ್ತವಿಕ ಬದುಕಿನ ಚಿತ್ರಣ ಮತ್ತು ಧರ್ಮದ ಕಟ್ಟುಪಾಡುಗಳಲ್ಲಿ ಶೋಷಿತಗೊಂಡ ಮಹಿಳೆಯರ ಧ್ವನಿಗಳು ಅಸಂಖ್ಯಾತ ಓದುಗರ ಹೃದಯವನ್ನು ತಟ್ಟಿ ಈ ಕಾದಂಬರಿ ಎಲ್ಲೆಡೆಯಿಂದ ಮೆಚ್ಚುಗೆ ಪಡೆಯಿದೆ.

ಚಂದ್ರಗಿರಿಯ ತೀರದಲ್ಲಿ- ೧೯೮೪, ಸಹನಾ, – ೧೯೮೫, ವಜ್ರಗಳು, ಕದನವಿರಾಮ, – ೧೯೮೮, ಸುಳಿಯಲ್ಲಿ ಸಿಕ್ಕವರು,೧೯೯೪, ಪ್ರವಾಹ-ಸುಳಿ (ಸುಳಿಯಲ್ಲಿ ಸಿಕ್ಕವರು ಕೃತಿಯ ಭಾಗ-೨), ತಳ ಒಡೆದ ದೋಣಿ, ೧೯೯೭, ಪಂಜರ, ಇಳಿಜಾರು, ಕಾಣಿಕೆ ಇವರ ಪ್ರಮುಖ ಕೃತಿಗಳಾಗಿವೆ.

ಚಪ್ಪಲಿಗಳು, ೧೯೮೯, ಪಯಣ ಮತ್ತು ಇತರ ಕಥೆಗಳು, ಅರ್ಧರಾತ್ರಿಯಲ್ಲಿ ಹುಟ್ಟಿದ ಕೂಸು, ೧೯೯೨, ಖೆಡ್ಡ, ಸುಮಯ್ಯಾ (ಜನಪದ ಆಧರಿಸಿದ ಕಥೆಗಳು), ೨೦೦೪, ಗಗನ ಸಖಿ, ೨೦೦೭ ಇವರ ಪ್ರಮುಖ ಕಥಾ ಸಂಕಲನಗಳಾಗಿವೆ.

ಕಮರಿದ ಕನಸು, ಮಗಳು ಹುಟ್ಟಿದಳು, ತೇಲಾಡುವ ಮೋಡಗಳು, ತಾಳ, ಹೀಗೂ ಒಂದು ಬದುಕು ಇವರ ಬರೆದ ಬಾನುಲಿ ನಾಟಕಗಳಾಗಿದ್ದು, ಲೇಖನ ಗುಚ್ಛ, ಮನೋಮಿ, ಬಲೆ, ನಾನಿನ್ನು ನಿದ್ರಿಸುವೆ (ಕಾದಂಬರಿಗಳು) ಇವರ ಪ್ರಮುಖ  ಲೇಖನ ಮತ್ತು ಅನುವಾದಗಳಾಗಿವೆ. ಐಷಾರಾಮದ ಆಳದಲ್ಲಿ ಎಂಬ ಪ್ರವಾಸಕಥನವನ್ನು ಕೂಡಾ ಸಾರಾ ಅವರು ಬರೆದಿದ್ದಾರೆ.

ಸಾರಾ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ದಾನ ಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಬಿ. ಸರೋಜಾದೇವಿ ಪ್ರಶಸ್ತಿ, ‘ಸಹನಾ’ ಕಾದಂಬರಿಗೆ ವರ್ಧಮಾನ ಪ್ರಶಸ್ತಿ, ‘ಸುಳಿಯಲ್ಲಿ ಸಿಕ್ಕವರು’ ಕೃತಿಗೆ ಮಾತೋಶ್ರೀ ರತ್ನಮ್ಮ ಹೆಗ್ಗಡೆ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಅನುಪಮ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಹಂಪಿ ವಿಶ್ವವಿದ್ಯಾಲಯದ ನಾಡೋಜ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿ ಗೌರವಗಳು ಸಂದಿವೆ.

ಮೃತರ ಪಾರ್ಥೀವ ಶರೀರವನ್ನು ಮಂಗಳೂರಿನ ಲೇಡಿಹಿಲ್ ಬಳಿ ಇರುವ ಅವರ ನಿವಾಸದಲ್ಲಿ ಮಧ್ಯಾಹ್ನ 3 ಗಂಟೆಯಿಂದ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ರಾತ್ರಿ 8 ಗಂಟೆಗೆ ಅಂತ್ಯ ಕ್ರಿಯೆ ನೆರವೇಸಿಸಲಾಗುತ್ತದೆ ಎಂದು ಅವರ ಆಪ್ತ ಮೂಲಕಗಳು ನಾನುಗೌರಿ.ಕಾಂಗೆ ತಿಳಿಸಿವೆ.

ಹಿರಿಯ ಸಾಹಿತಿಗೆ ನಾಡಿನ ಹಲವರು ಗಣ್ಯ ವ್ಯಕ್ತಿಗಳು ಶ್ರದ್ದಾಂಜಲಿ ಕೋರಿದ್ದು, ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಗೆ ಅವರ ಕೊಡುಗೆಗಳನ್ನು ನೆನೆಸಿಕೊಂಡಿದ್ದಾರೆ.

ಸಂಸ್ಕೃತಿ ಚಿಂತಕ, ಸಾಹಿತಿ ರಹಮತ್ ತರಿಕೆರೆ ಅವರು, “ನಿನ್ನೆಯಷ್ಟೆ ಅಕ್ಕರದವ್ವ ಫಾತಿಮಾ ಶೇಖರ ಜನ್ಮದಿನವಿತ್ತು. ಈ ದಿನ ‘ಮುಸ್ಲಿಂ‌ಹುಡುಗಿ ಶಾಲೆ‌ ಕಲಿತದ್ದು’ ಬರೆಹದ ಮೂಲಕ ಸಾಹಿತ್ಯಲೋಕ ಪ್ರವೇಶಿಸಿದ ಸಾರಾ ಇಲ್ಲವಾದರು. ಸಾರಾ ಎಂದರೆ ಅರಬ್ಬಿಯಲ್ಲಿ ಸಂತೋಷದಾಯಕಿ ರಾಜಕುಮಾರಿ ಎಂದರ್ಥಗಳಿವೆ. ಆದರೆ ಇವರು ಬದುಕೆಲ್ಲ ಬವಣೆಗೊಳಗಾದ ಮಹಿಳೆಯರ ಬಗ್ಗೆಯೇ ಧ್ಯಾನಿಸಿದರು. ಬರೆದರು. 25 ವರ್ಷಗಳ ಹಿಂದೆ ಅವರೊಡನೆ ಇಡೀ ದಿನವಿದ್ದು ಸಂದರ್ಶನ ಮಾಡಿ ಪ್ರಕಟಿಸಿದ್ದು ನೆ‌ನಪಾಗುತ್ತಿದೆ. ವೈಚಾರಿಕವಾಗಿ ಕಠೋರ ನಿಷ್ಠುರೆ; ಅಂತಃಕರಣದಲ್ಲಿ ತಾಯಿಯಾಗಿದ್ದರು” ಎಂದು ಹೇಳಿದ್ದಾರೆ.

“ತಾ‌ನು ನಂಬಿದ ಮೌಲ್ಯಗಳಿಗೆ ಬದ್ಧರಾಗಿ, ಎದುರಾದ ವಿರೋಧಗಳನ್ನು ದಿಟ್ಟತನದಿಂದ ಎದುರಿಸಿ, ಮುಸ್ಲಿಂ ಲೋಕದ ತವಕ-ತಲ್ಲಣಗಳಿಗೆ ದನಿಯಾಗಿದ್ದ ಹಿರಿಯ ಸಾಹಿತಿ ಸಾರಾ ಅಬೂಬಕರ್ ನಿಧನ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ. ಅವರ ಬಂಧುಗಳು ಮತ್ತು ಓದುಗ ಬಳಗದ ದುಃಖದಲ್ಲಿ ನಾನೂ ಭಾಗಿಯಾಗಿದ್ದೇ‌ನೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ವಿಧಾನಪರಿಷತ್‌‌ನ ವಿಪಕ್ಷ ನಾಯಕ ಬಿಕೆ ಹರಿಪ್ರಸಾದ್ ಅವರು, “ಕರಾವಳಿ ಸೌಹಾರ್ದತೆಯ ಗಟ್ಟಿ ಧ್ವನಿ,ಕೋಮುವಾದದ ವಿರುದ್ಧದ ದಿಟ್ಟ ದನಿ ಅಸ್ತಂಗತವಾಗಿದೆ. ಲೇಖಕಿ ಸಾರಾ ಅಬೂಬಕ್ಕರ್ ನಿಧನ ಸಾಹಿತ್ಯ ಲೋಕಕ್ಕೆ ತುಂಬಿ ಬಾರದ ನಷ್ಟ. ದುರಿತ ಕಾಲದಲ್ಲಿ ಸಾರಾ ಅವರ ಅಗಲಿಕೆ ಕುಟುಂಬದ ಸದಸ್ಯರನ್ನೇ ಕಳೆದುಕೊಂಡಂತಾಗಿದೆ. ಅವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬಸ್ಥರು ಹಾಗೂ ಅವರ ಒಡನಾಡಿಗಳ ನೋವಲ್ಲಿ ನಾನು ಭಾಗಿ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಖ್ಯಾತ ವ್ಯಂಗ್ಯಚಿತ್ರಕಾರ ಪಿ.ಮೊಹಮದ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...