Homeಮುಖಪುಟಕೃಷಿ ಕಾಯ್ದೆಗಳು ವಾಪಸ್: ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ

ಕೃಷಿ ಕಾಯ್ದೆಗಳು ವಾಪಸ್: ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ

- Advertisement -
- Advertisement -

ಇಂದು ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು ಲೋಕಸಭೆ ಮತ್ತು ರಾಜ್ಯಸಭೆ ಎರಡೂ ಅಧಿವೇಶನಗಳಲ್ಲಿ ಕೃಷಿ ಕಾನೂನುಗಳ ರದ್ಧತಿ ಮಸೂದೆ -2021 ಯನ್ನು ಅಂಗೀಕರಿಸುತ್ತಿದ್ದಂತೆ ಇತ್ತ ದೆಹಲಿ ಗಡಿಗಳಲ್ಲಿ ರೈತರ ಸಂಭ್ರಮಾಚರಣೆ ಶುರುವಾಗಿದೆ. ರೈತರು ಪರಸ್ಪರ ಹೂವಿನ ಮಳೆಗೆರೆಯುವ ಮೂಲಕ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಸಿಂಘು ಗಡಿಯಲ್ಲಿ ಯುವ ರೈತರು ಟ್ರಾಕ್ಟರ್ ಪರೇಡ್ ನಡೆಸುವ ಮೂಲಕ, ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದಾರೆ. ಅಲ್ಲದೆ ಇಂದು ಕೂಡ ನೂರಾರು ರೈತರು ಸಿಂಘು ಗಡಿಗೆ ಬಂದು ಹೋರಾಟದ ಸಾಗರ ಸೇರಿಕೊಂಡಿದ್ದಾರೆ.

ಕಳೆದ ಒಂದು ವರ್ಷದಿಂದ ನಿರಂತರವಾಗಿ ಮತ್ತು ಭದ್ರವಾಗಿ ಅಲ್ಲೆ ನೆಲೆಯೂರಿ ಚಳವಳಿಗೆ ನಾನಾ ರೀತಿಯಲ್ಲಿ ಕೊಡುಗೆ ನೀಡಿರುವ ಹಲವಾರು ಹೋರಾಟಗಾರರಿಗೆ ಅಭಿನಂದನೆ ಮತ್ತು ಸನ್ಮಾನ ಕಾರ್ಯಕ್ರಮ ಸಹ ನಡೆಯುತ್ತಿದೆ. ಒಂದು ವರ್ಷದಿಂದ ಎಲ್ಲಿಗೂ ಹೋಗದೆ ನಿರಂತರವಾಗಿ ಚಳವಳಿ ಕಣದಲ್ಲಿದ್ದವರಿಗೆ ಸಿಹಿ ತಿನಿಸಿ, ಅವರಿಗೆ ಪುಷ್ಪಾರ್ಚನೆ ಮಾಡಿ ಅಭಿನಂದಿಸಲಾಗಿದೆ.

ಕಳೆದ ಒಂದು ವರ್ಷದಿಂದ ಪ್ರತಿಭಟನಾನಿರತ ರೈತರ ಚಪ್ಪಲಿ ಹೊಲಿದುಕೊಟ್ಟು ಸೇವೆ ನೀಡಿದ ಯುವಕನಿಗೆ ರೈತರೆಲ್ಲರೂ ಹೂವಿನ ಮಳೆಗೈದು ಅಭಿನಂದನೆ ಸಲ್ಲಿಸಿದ್ದಾರೆ.

ಸಿಂಘು ಗಡಿಯಲ್ಲಿ ರೈತ ಮಹಿಳೆಯರು ನೃತ್ಯ ಮಾಡುವ ಮೂಲಕ ಸಂಭ್ರಮಾಚರಣೆಯ ಭಾಗವಾಗಿದ್ದಾರೆ. ನೂರಾರು ಮಹಿಳೆಯರು ಪರಸ್ಪರ ಹೂವಿನ ಮಳೆಗರೆದಿದ್ದಾರೆ.

ಇನ್ನೊಂದೆಡೆ ಸಿಂಘು ಗಡಿಯಲ್ಲಿ ಪಂಜಾಬ್‌ನ 32 ರೈತ ಸಂಘದ ಮುಖಂಡರು ಸೇರಿ ಸಭೆ ನಡೆಸಿದ್ದಾರೆ.. ಚಳವಳಿಯ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಾಗಿದೆ. ಸಂಯುಕ್ತ ಕಿಸಾನ್ ಮೋರ್ಚಾ ಸಂಚಾಲಕರಾದ ಡಾ.ದರ್ಶನ್ ಪಾಲ್ ಸಹ ಪಾಲ್ಗೊಂಡಿದ್ದರು.

ಟಿಕ್ರಿ ಗಡಿಯಲ್ಲಿ ಸಾವಿರಾರು ರೈತರು ಎಂಎಸ್‌ಪಿ ಖಾತ್ರಿ ಕಾನೂನಿಗಾಗಿ ಹೋರಾಟ ಮುಂದುವರೆಸಿದ್ದಾರೆ.

ಸರ್ಕಾರದ ರದ್ದತಿ ಕ್ರಮದ ಬಗ್ಗೆ ಮಾತನಾಡಿದ ರಾಕೇಶ್ ಟಿಕಾಯತ್, ರೈತರ ಆಂದೋಲನ ಮುಂದುವರಿಯುತ್ತದೆ. “ಕೃಷಿ ಕಾನೂನು ರದ್ದತಿ ಮಸೂದೆಯು ಆಂದೋಲನದ ಸಮಯದಲ್ಲಿ ಮಡಿದ 750 ರೈತರಿಗೆ ಶ್ರದ್ಧಾಂಜಲಿಯಾಗಿದೆ. ನಮಗಿನ್ನು MSP (ಕನಿಷ್ಠ ಬೆಂಬಲ ಬೆಲೆ) ಖಾತ್ರಿಯ ಕಾನೂನು ಜಾರಿಯಾಗಿಲ್ಲ. ಎಂಎಸ್ಪಿ ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ’’ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಕೃಷಿ ಕಾನೂನುಗಳ ರದ್ಧತಿ ಮಸೂದೆ -2021 ಹುತಾತ್ಮ ರೈತರಿಗೆ ಅರ್ಪಣೆ: ರಾಕೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...