Homeಮುಖಪುಟಸಂವಿಧಾನದಿಂದ ಮಾತ್ರ ರೈತನ ಮಗನಾದ ನಾನು ಸುಪ್ರೀಂ ಕೋರ್ಟ್‌ವರೆಗೂ ತಲುಪಲು ಸಾಧ್ಯವಾಯಿತು: ಜಸ್ಟಿಸ್ ನಾಗಮೋಹನ್ ದಾಸ್

ಸಂವಿಧಾನದಿಂದ ಮಾತ್ರ ರೈತನ ಮಗನಾದ ನಾನು ಸುಪ್ರೀಂ ಕೋರ್ಟ್‌ವರೆಗೂ ತಲುಪಲು ಸಾಧ್ಯವಾಯಿತು: ಜಸ್ಟಿಸ್ ನಾಗಮೋಹನ್ ದಾಸ್

ಭಾರತ ಇಂದು ಎಂದಿಗಿಂತಲೂ ಅತಿ ಹೆಚ್ಚು ಶ್ರೀಮಂತ ರಾಷ್ಟ್ರವಾಗಿದೆ. ಆದರೆ ಶೇ.60 ರಷ್ಟು ಸಂಪತ್ತು ಕೇವಲ ಶೇ.1 ರಷ್ಟು ಜನರ ಕೈಯಲ್ಲಿದೆ.

- Advertisement -
- Advertisement -

ರೈತನ ಮಗನಾದ ನಾನು ಬೆಂಗಳೂರಿನಲ್ಲಿ ಕಾನೂನು ಪದವಿ ಪಡೆದು 2004ರಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕವಾದೆ. ಹತ್ತು ವರ್ಷಗಳ ನಂತರ 2014ರಿಂದ ದೆಹಲಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ಹಿರಿಯ ವಕೀಲರಾಗಿ ನೇಮಕವಾದೆ. ಇಷ್ಟೆಲ್ಲಾ ಸಾಧ್ಯವಾಗಿದ್ದು ಸಂವಿಧಾನದಿಂದ ಮಾತ್ರ ಎಂದು ಜಸ್ಟಿಸ್ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಹಿಂದುತ್ವವಾದಿಗಳ ಗುಂಡೇಟಿಗೆ ಹುತಾತ್ಮರಾದ ಗೌರಿ ಲಂಕೇಶ್, ಎಂ.ಎಂ ಕಲಬುರ್ಗಿ, ಗೋವಿಂದ ಪನ್ಸಾರೆ ಮತ್ತು ನರೇಂದ್ರ ದಾಬೋಲ್ಕರ್ ನೆನಪಿನಲ್ಲಿ ಗೌರಿ ಸ್ಮಾರಕ ಟ್ರಸ್ಟ್ ಮತ್ತು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್‌ ಸಂಸ್ಥೆಗಳ ಸಹಯೋಗದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳ ಮುಂದಿರುವ ಸವಾಲುಗಳು’ ವಿಷಯದ ಕುರಿತ ವೆಬಿನಾರ್ ಸರಣಿಯಲ್ಲಿ ಅವರು ಮಾತನಾಡಿದರು.

ಇಂದು ಸ್ವಾತಂತ್ರ್ಯ ದಿನಾಚರಣೆ. ನಮ್ಮ ಸ್ವಾತಂತ್ರ್ಯಕ್ಕಾಗಿ ಹಲವು ದಶಕಗಳ ಕಾಲ ಜನ ಹೋರಾಡಿ ಪ್ರಾಣ ಕೊಟ್ಟಿದ್ದಾರೆ. ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನಗಳನ್ನು ಮರೆಯಬಾರದು. ಅಂಬೇಡ್ಕರ್ ಹೇಳಿದಂತೆ ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು ಎಂಬುದನ್ನು ನೆನೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಭಾರತದ ಸ್ವಾತಂತ್ರ್ಯ ಹೋರಾಟ ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯದ ಹೋರಾಟವೂ ಆಗಿತ್ತು. ಉಳುವವನಿಗೆ ಭೂಮಿ, ದುಡಿಯುವವರಿಗೆ ನ್ಯಾಯಯುತ ಕೂಲಿ ಸಿಗಬೇಕು. ಸತಿ ಪದ್ದಿತಿ, ಬಾಲ್ಯವಿವಾಹ ಪದ್ದತಿ ನಿರ್ಮೂಲನೆಯಾಗಬೇಕು ಎಂಬ ಹಕ್ಕೊತ್ತಾಯಗಳು ಅದರೊಡನಿದ್ದವು ಎಂದರು.

ಇಂದು ದೇಶದಲ್ಲಿ ಕೇವಲ ರಾಜಕೀಯ ಪ್ರಜಾಪ್ರಭುತ್ವದ ಬಗ್ಗೆ, ಚುನಾವಣೆಗಳ ಬಗ್ಗೆ ಮಾತ್ರ ಚರ್ಚೆ ನಡೆಯುತ್ತಿದೆ. ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವದ ಬಗ್ಗೆ ನಾವು ಮಾತನಾಡಲಿಲ್ಲ, ಅವನ್ನು ರಾಜಕೀಯ ಪ್ರಜಾಪ್ರಭುತ್ವದೊಂದಿಗೆ ಸಮೀಕರಿಸಲಿಲ್ಲ. ಆದ್ದರಿಂದ ಚುನಾವಣೆ ಎಂದರೆ ಭಾವನಾತ್ಮಕ ವಿಚಾರಗಳು ಚರ್ಚೆಗೆ ಬರುತ್ತವೆಯೇ ಹೊರತು ಬದುಕಿನ ಬಗ್ಗೆ ಚರ್ಚೆಗಳಾಗುವುದಿಲ್ಲ. ನಿರುದ್ಯೋಗ, ಕೈಗಾರಿಕಾ ಬಿಕ್ಕಟ್ಟು, ಕೃಷಿ ಬಿಕ್ಕಟ್ಟನ ಕುರಿತು ಚರ್ಚೆಯಾಗುವುದಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಧರ್ಮ, ಭಾಷೆ, ನಮ್ಮ ಮೂಲ ಯಾವುದು, ಮಂದಿರ, ಮಸೀದಿಯ ಬಗ್ಗೆ ಭಾವನಾತ್ಮಕ ವಿಚಾರದಲ್ಲಿಯೇ ಮುಳುಗಿ ಹೋಗಿದ್ದೇವೆ. ಮಹಿಳೆಯರು, ದಲಿತರ ಮೇಲೆ ದೌರ್ಜನ್ಯ ದಾಳಿ ನಡೆಯುತ್ತಿದ್ದರೂ ಅದನ್ನು ಚುನಾವಣೆ ಸಂದರ್ಭದಲ್ಲಿ ಚರ್ಚೆಗೆ ಬರುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ರಾಜಕೀಯದಲ್ಲಿ ಹಣ, ಜಾತಿ ಮತ್ತು ಧರ್ಮದ ಪ್ರಭಾವ ತಾಂಡವವಾಡುತ್ತಿವೆ. ಶೇ.88 ರಷ್ಟು ಚುನಾಯಿತ ಸಂಸತ್ ಸದಸ್ಯರು ಕೋಟ್ಯಾಧೀಶ್ವರರಾಗಿದ್ದಾರೆ. ಶೇ.43 ರಷ್ಟು ಜನರ ಮೇಲೆ ಕ್ರಿಮಿನಲ್ ಕೇಸುಗಳಿವೆ. 54% ವಂಶಪಾರಂಪರ್ಯ ರಾಜಕೀಯ ಮಾಡುತ್ತಿದ್ದಾರೆ. ಅವರಲ್ಲಿ ಬಹುತೇಕರು ರಿಯಲ್ ಎಸ್ಟೇಟ್, ಕೈಗಾರಿಕೆ ಹಿನ್ನೆಲೆಯವರು. ಹಾಗಾದರೆ ರೈತರನ್ನು, ಕಾರ್ಮಿಕರನ್ನು ಪ್ರತಿನಿಧಿಸುವವರು ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

ಸ್ವಾತಂತ್ರ್ಯ ಬಂದ ನಂತರ ವಿಜ್ಞಾನ ಮತ್ತು ತಂತ್ರಜ್ಞಾನ ಬಳಕೆಯಿಂದ ಅತಿ ಹೆಚ್ಚು ಉತ್ಪಾದಿಸಿದ್ದೇವೆ. ಭಾರತ ಇಂದು ಎಂದಿಗಿಂತಲೂ ಅತಿ ಹೆಚ್ಚು ಶ್ರೀಮಂತ ರಾಷ್ಟ್ರವಾಗಿದೆ. ಆದರೆ ಶೇ.60 ರಷ್ಟು ಸಂಪತ್ತು ಕೇವಲ ಶೇ.1 ರಷ್ಟು ಜನರ ಕೈಯಲ್ಲಿದೆ. ಶೇ.20 ರಷ್ಟು ಸಂಪತ್ತು ಶೇ.9 ರಷ್ಟು ಜನರ ಕೈನಲ್ಲಿದೆ. ಉಳಿದ ಶೇ.20 ರಷ್ಟು ಸಂಪತ್ತು ಶೇ.90 ಜನರ ಕೈನಲ್ಲಿದೆ. ಈ ಅಸಮಾನ ಭಾರತವನ್ನು ಕಟ್ಟಿದ್ದೇವೆ. ಸಂಪತ್ತಿದ್ದರೂ ಬಡತನ, ನಿರುದ್ಯೋಗ, ಅನಾರೋಗ್ಯ, ಅನಕ್ಷರತೆ ಇದೆ. ನಾವು ಈ ಅಸಮಾನತೆಯನ್ನು ಮುಂದುವರೆಸಿಕೊಂಡು ಪ್ರಜಾಪ್ರಭುತ್ವವನ್ನು ಕಾಣಲು ಸಾಧ್ಯವಿಲ್ಲ. ಹಾಗಾಗಿ ರಾಜಕೀಯ ಸ್ವಾತಂತ್ರ್ಯದೊಂದಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಿದೆ ಎಂದರು.

ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ಬಲಹೀನಗೊಳಿಸಲಾಗುತ್ತಿದೆ. ಚುನಾವಣಾ ಆಯೋಗ, ಸಿಬಿಐ, ವಿಚರಣಾ ತನಿಖಾ ಸಂಸ್ಥೆಗಳು, ಆರ್‌ಬಿಐ, ಆದಾಯ ತೆರಿಗೆ ಇಲಾಖೆ ಎಲ್ಲವನ್ನು ದುರ್ಬಲಗೊಳಿಸಿ ತಮ್ಮ ಮೂಗಿನ ನೇರಕ್ಕೆ ಕುಣಿಸಲಾಗುತ್ತಿದೆ. ಕಳೆದ ಸಂಸತ್ ಅಧಿವೇಶನದಲ್ಲಿ ಒಂದೇ ಒಂದು ಮಸೂದೆಯನ್ನು ಸರಿಯಾಗಿ ಚರ್ಚೆ ನಡೆಸಲಿಲ್ಲ. ಎಲ್ಲಾ ರಾಜಕೀಯ ಪಕ್ಷಗಳು ಸೇರಿ ಒಬಿಸಿ ಬಿಲ್ ಮಾತ್ರ ಪಾಸು ಮಾಡಿದರು. ಆದರೆ ಕೊರೊನಾದ ಕುರಿತಾಗಿ, ಅಸಂಘಟಿತ ಕಾರ್ಮಿಕರ ಕುರಿತಾಗಿ, 18-20 ಕೋಟಿ ಯುವಜನರು ನಿರುದ್ಯೋಗಿಗಳಾಗಿದ್ದಾರೆ ಇದರ ಬಗ್ಗೆ ಚರ್ಚೆ ನಡೆಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಳೆದ 72 ವರ್ಷಗಳಲ್ಲಿ ಭೂ ಸುಧಾರಣೆ, ಆರೋಗ್ಯ ಸುಧಾರಣೆ, ಕೈಗಾರಿಕೆ ಸುಧಾರಣೆ ಕಂಡೆವು. ಇದರಿಂದ ಜನಜೀವನ ಸ್ವಲ್ಪ ಉತ್ತಮವಾಗಿತ್ತು. ಆದರೆ ಇವತ್ತು ಅಪ್ರಜಾತಾಂತ್ರಿಕ ಸುಧಾರಣೆಗಳ ಪರ್ವ ಶುರುವಾಗಿದೆ. ರೈತರು ಬಿಕ್ಕಟ್ಟಿನಲ್ಲಿದ್ದಾರೆ. ಆತ್ಮಹತ್ಯೆಗಳತ್ತ ಮುಖಮಾಡಿ ಪರಿಹಾರ ಬಯಸುತ್ತಿದ್ದರೆ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿತು. ವಿದ್ಯುತ್ ಮಸೂದೆ ತಂದಿದೆ. ಎಪಿಎಂಸಿ ಕಾಯ್ದೆ ರದ್ದುಪಡಿಸಿದೆ. ರೈತರನ್ನು ಗುಲಾಮರನ್ನಾಗಿ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಾತ್ಯಾತೀತ ರಾಷ್ಟ್ರ ನಿರ್ಮಾಣ ಮಾಡುವುದು ಸಂವಿಧಾನದ ಆಶಯ. ರಾಜಕೀಯದಿಂದ ಧರ್ಮವನ್ನು ಪ್ರತ್ಯೇಕಿಸಬೇಕು. ಸರ್ಕಾರಕ್ಕೆ ಯಾವುದೇ ಧರ್ಮವಿರಬಾರದು. ಆದರೆ ಇವತ್ತು ನಮ್ಮ ದುರಾದೃಷ್ಟ ಮಠಾಧೀಶರು, ಧಾರ್ಮಿಕ ಮುಖಂಡರು ಸಕ್ರಿಯ ರಾಜಕೀಯಕ್ಕೆ ಇಳಿಯುತ್ತಿದ್ದಾರೆ. ಕರ್ನಾಟಕದಲ್ಲಿ ಮೀಸಲಾತಿ ವಿಚಾರ ಒಂದು ರಾಜಕೀಯ ನಿರ್ಣಯವಾಗಬೇಕು. ಆದರೆ ಅದು ಸ್ವಾಮೀಜಿಗಳು ಮತ್ತು ಮಠಾಧೀಶರ ಹೋರಾಟವಾಗಿ ನಿಂತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದಲಿತರು, ಮಹಿಳೆಯರು, ಬುಡಕಟ್ಟು ಜನಾಂಗ, ಅಲ್ಪಸಂಖ್ಯಾತ ಜನ ಇಂದು ಎಲ್ಲಾ ವಿಭಾಗಗಳಿಗೆ ಪ್ರವೇಶ ಪಡೆಯಬೇಕಾಗಿದೆ. ಅವರು ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಕ್ಷೇತ್ರಗಳಿಗೆ ಪ್ರವೇಶ ಮಾಡುವ ಮೂಲಕ ಒಂದಷ್ಟು ಘನತೆ ಮತ್ತು ಸ್ವಾಭಿಮಾನವನ್ನು ತಂದುಕೊಡಲು ಸಾಧ್ಯವಾಗಿದೆ. ಆದರೆ ಸಾಮಾಜಿಕ ನ್ಯಾಯ ಎಂಬುದು ಅಪ್ರಸ್ತುತಗೊಳಿಸುತ್ತಿದ್ದೇವೆ. ಇಂದು ಕೇಂದ್ರ ಸರ್ಕಾರದಲ್ಲಿ 62 ಲಕ್ಷ ಉದ್ಯೋಗಗಳು ಖಾಲಿ ಬಿದ್ದಿವೆ. ಇದನ್ನು ತುಂಬುತ್ತಿಲ್ಲ. ಈ ಸವಾಲುಗಳನ್ನು ಹಿಮ್ಮೆಟ್ಟಿಸಬೇಕು.  ಈ ಎಲ್ಲಾ ಬಿಕ್ಕಟ್ಟಿಗೆ ಪರಿಹಾರ ಸಂವಿಧಾನ ಮಾರ್ಗವಾಗಿದೆ. ಅದನ್ನು ಓದಿ, ಅರ್ಥೈಸಿಕೊಂಡು ಅಳವಡಿಸಿಕೊಳ್ಳಬೇಕಿದೆ. ಆ ಮೂಲಕ ಈ ದೇಶವನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ವೆಬಿನಾರ್‌ನಲ್ಲಿ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್‌ ಸಂಸ್ಥೆಯ ತೀಸ್ತಾ ಸೆಟ್ಲವಾದ್, ಚಿಂತಕರಾದ ಪ್ರೊ.ವಿ.ಎಸ್ ಶ್ರೀಧರ್, ನಗರಗೆರೆ ರಮೇಶ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜಸ್ಟಿಸ್ ನಾಗಮೋಹನದಾಸ್ ಅನುಭವ ಮತ್ತು ಅನಿಸಿಕೆ ನಮ್ಮೆಲ್ಲರದೂ ಆಗಿದೆ. ನೆಹರು, ಶಾಸ್ತ್ರಿ ಅಧಿಕಾರದಲ್ಲಿ ಇದ್ದಾಗ ನಾವು ತುಂಬಾ ಚಿಕ್ಕವರು. ಇಂದಿರಾ ಬಂದಾಗ ನಾವು ಬ್ಯಾಂಕ್ ರಾಷ್ಟ್ರೀಕರಣ, , ಸರ್ಕಾರಿ ಸೇವೆಯಲ್ಲಿ ರಿಸರ್ವೇಸನ್, ಮತ್ತು ಭೂಮಿ ಪಡೆಯಲು ಅವಕಾಶ ಆಯ್ತು. ಭಾರತೀಯ ಸಂದರ್ಭದಲ್ಲಿ ಅದೊಂದು ರೆಸಲ್ಯೂಶನ್ ಕಂಡ ಯುಗ! ಅವುಗಳಿಲ್ಲದಿದ್ದಲ್ಲಿ ನಾವು ಆತ್ಮ ಗೌರವದಿಂದ ಬಾಳುವುದು ಕನಸಿನ ಮಾತಾಗಿತ್ತು.

  2. ನನ್ನಂಥಹ ವಿಚಾರವಂತರನ್ನು ಕಾಡುತ್ತಿರುವ ಅನೇಕ ವಿಚಾರಗಳ ಬಗ್ಗೆ ಜಸ್ಟಿಸ್ ನಾಗಮೋಹನದಾಸ್ ಮನಬಿಚ್ಚಿ ಮಾತಾಡಿದ್ದಾರೆ. ಸತ್ಯವನ್ನು ಹೇಳಲು ಜನ ಹಿಂಜರಿಯುತ್ತಿರುವ ಈ ಸಂಧರ್ಭದಲ್ಲಿ ದಾಸ್ ಅವರು ದೇಶ ಅದಪಾತಾಳಕ್ಕೆ ತಲುಪಿರುವ ಬಗ್ಗೆ ಸವಿಸ್ತಾರವಾಗಿ ತಮ್ಮ ನೋವನ್ನು ಹೊರಹಕಿದ್ದಾರೆ. ಮಾನ್ಯರ ಈ ಮಾತುಗಳು ಹೆಚ್ಚು ಜನಕ್ಕೆ ತಲುಪಬೇಕಾಗಿದೆ. Hats off to you Sir.

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...