Homeಮುಖಪುಟಸಂವಿಧಾನದಿಂದ ಮಾತ್ರ ರೈತನ ಮಗನಾದ ನಾನು ಸುಪ್ರೀಂ ಕೋರ್ಟ್‌ವರೆಗೂ ತಲುಪಲು ಸಾಧ್ಯವಾಯಿತು: ಜಸ್ಟಿಸ್ ನಾಗಮೋಹನ್ ದಾಸ್

ಸಂವಿಧಾನದಿಂದ ಮಾತ್ರ ರೈತನ ಮಗನಾದ ನಾನು ಸುಪ್ರೀಂ ಕೋರ್ಟ್‌ವರೆಗೂ ತಲುಪಲು ಸಾಧ್ಯವಾಯಿತು: ಜಸ್ಟಿಸ್ ನಾಗಮೋಹನ್ ದಾಸ್

ಭಾರತ ಇಂದು ಎಂದಿಗಿಂತಲೂ ಅತಿ ಹೆಚ್ಚು ಶ್ರೀಮಂತ ರಾಷ್ಟ್ರವಾಗಿದೆ. ಆದರೆ ಶೇ.60 ರಷ್ಟು ಸಂಪತ್ತು ಕೇವಲ ಶೇ.1 ರಷ್ಟು ಜನರ ಕೈಯಲ್ಲಿದೆ.

- Advertisement -
- Advertisement -

ರೈತನ ಮಗನಾದ ನಾನು ಬೆಂಗಳೂರಿನಲ್ಲಿ ಕಾನೂನು ಪದವಿ ಪಡೆದು 2004ರಲ್ಲಿ ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾಗಿ ನೇಮಕವಾದೆ. ಹತ್ತು ವರ್ಷಗಳ ನಂತರ 2014ರಿಂದ ದೆಹಲಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ಹಿರಿಯ ವಕೀಲರಾಗಿ ನೇಮಕವಾದೆ. ಇಷ್ಟೆಲ್ಲಾ ಸಾಧ್ಯವಾಗಿದ್ದು ಸಂವಿಧಾನದಿಂದ ಮಾತ್ರ ಎಂದು ಜಸ್ಟಿಸ್ ನಾಗಮೋಹನ್ ದಾಸ್ ಅಭಿಪ್ರಾಯಪಟ್ಟರು.

ಹಿಂದುತ್ವವಾದಿಗಳ ಗುಂಡೇಟಿಗೆ ಹುತಾತ್ಮರಾದ ಗೌರಿ ಲಂಕೇಶ್, ಎಂ.ಎಂ ಕಲಬುರ್ಗಿ, ಗೋವಿಂದ ಪನ್ಸಾರೆ ಮತ್ತು ನರೇಂದ್ರ ದಾಬೋಲ್ಕರ್ ನೆನಪಿನಲ್ಲಿ ಗೌರಿ ಸ್ಮಾರಕ ಟ್ರಸ್ಟ್ ಮತ್ತು ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್‌ ಸಂಸ್ಥೆಗಳ ಸಹಯೋಗದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳ ಮುಂದಿರುವ ಸವಾಲುಗಳು’ ವಿಷಯದ ಕುರಿತ ವೆಬಿನಾರ್ ಸರಣಿಯಲ್ಲಿ ಅವರು ಮಾತನಾಡಿದರು.

ಇಂದು ಸ್ವಾತಂತ್ರ್ಯ ದಿನಾಚರಣೆ. ನಮ್ಮ ಸ್ವಾತಂತ್ರ್ಯಕ್ಕಾಗಿ ಹಲವು ದಶಕಗಳ ಕಾಲ ಜನ ಹೋರಾಡಿ ಪ್ರಾಣ ಕೊಟ್ಟಿದ್ದಾರೆ. ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನಗಳನ್ನು ಮರೆಯಬಾರದು. ಅಂಬೇಡ್ಕರ್ ಹೇಳಿದಂತೆ ಇತಿಹಾಸವನ್ನು ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು ಎಂಬುದನ್ನು ನೆನೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಭಾರತದ ಸ್ವಾತಂತ್ರ್ಯ ಹೋರಾಟ ಕೇವಲ ರಾಜಕೀಯ ಹೋರಾಟವಾಗಿರಲಿಲ್ಲ. ಅದು ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯದ ಹೋರಾಟವೂ ಆಗಿತ್ತು. ಉಳುವವನಿಗೆ ಭೂಮಿ, ದುಡಿಯುವವರಿಗೆ ನ್ಯಾಯಯುತ ಕೂಲಿ ಸಿಗಬೇಕು. ಸತಿ ಪದ್ದಿತಿ, ಬಾಲ್ಯವಿವಾಹ ಪದ್ದತಿ ನಿರ್ಮೂಲನೆಯಾಗಬೇಕು ಎಂಬ ಹಕ್ಕೊತ್ತಾಯಗಳು ಅದರೊಡನಿದ್ದವು ಎಂದರು.

ಇಂದು ದೇಶದಲ್ಲಿ ಕೇವಲ ರಾಜಕೀಯ ಪ್ರಜಾಪ್ರಭುತ್ವದ ಬಗ್ಗೆ, ಚುನಾವಣೆಗಳ ಬಗ್ಗೆ ಮಾತ್ರ ಚರ್ಚೆ ನಡೆಯುತ್ತಿದೆ. ಆರ್ಥಿಕ ಮತ್ತು ಸಾಮಾಜಿಕ ಪ್ರಜಾಪ್ರಭುತ್ವದ ಬಗ್ಗೆ ನಾವು ಮಾತನಾಡಲಿಲ್ಲ, ಅವನ್ನು ರಾಜಕೀಯ ಪ್ರಜಾಪ್ರಭುತ್ವದೊಂದಿಗೆ ಸಮೀಕರಿಸಲಿಲ್ಲ. ಆದ್ದರಿಂದ ಚುನಾವಣೆ ಎಂದರೆ ಭಾವನಾತ್ಮಕ ವಿಚಾರಗಳು ಚರ್ಚೆಗೆ ಬರುತ್ತವೆಯೇ ಹೊರತು ಬದುಕಿನ ಬಗ್ಗೆ ಚರ್ಚೆಗಳಾಗುವುದಿಲ್ಲ. ನಿರುದ್ಯೋಗ, ಕೈಗಾರಿಕಾ ಬಿಕ್ಕಟ್ಟು, ಕೃಷಿ ಬಿಕ್ಕಟ್ಟನ ಕುರಿತು ಚರ್ಚೆಯಾಗುವುದಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಧರ್ಮ, ಭಾಷೆ, ನಮ್ಮ ಮೂಲ ಯಾವುದು, ಮಂದಿರ, ಮಸೀದಿಯ ಬಗ್ಗೆ ಭಾವನಾತ್ಮಕ ವಿಚಾರದಲ್ಲಿಯೇ ಮುಳುಗಿ ಹೋಗಿದ್ದೇವೆ. ಮಹಿಳೆಯರು, ದಲಿತರ ಮೇಲೆ ದೌರ್ಜನ್ಯ ದಾಳಿ ನಡೆಯುತ್ತಿದ್ದರೂ ಅದನ್ನು ಚುನಾವಣೆ ಸಂದರ್ಭದಲ್ಲಿ ಚರ್ಚೆಗೆ ಬರುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ರಾಜಕೀಯದಲ್ಲಿ ಹಣ, ಜಾತಿ ಮತ್ತು ಧರ್ಮದ ಪ್ರಭಾವ ತಾಂಡವವಾಡುತ್ತಿವೆ. ಶೇ.88 ರಷ್ಟು ಚುನಾಯಿತ ಸಂಸತ್ ಸದಸ್ಯರು ಕೋಟ್ಯಾಧೀಶ್ವರರಾಗಿದ್ದಾರೆ. ಶೇ.43 ರಷ್ಟು ಜನರ ಮೇಲೆ ಕ್ರಿಮಿನಲ್ ಕೇಸುಗಳಿವೆ. 54% ವಂಶಪಾರಂಪರ್ಯ ರಾಜಕೀಯ ಮಾಡುತ್ತಿದ್ದಾರೆ. ಅವರಲ್ಲಿ ಬಹುತೇಕರು ರಿಯಲ್ ಎಸ್ಟೇಟ್, ಕೈಗಾರಿಕೆ ಹಿನ್ನೆಲೆಯವರು. ಹಾಗಾದರೆ ರೈತರನ್ನು, ಕಾರ್ಮಿಕರನ್ನು ಪ್ರತಿನಿಧಿಸುವವರು ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

ಸ್ವಾತಂತ್ರ್ಯ ಬಂದ ನಂತರ ವಿಜ್ಞಾನ ಮತ್ತು ತಂತ್ರಜ್ಞಾನ ಬಳಕೆಯಿಂದ ಅತಿ ಹೆಚ್ಚು ಉತ್ಪಾದಿಸಿದ್ದೇವೆ. ಭಾರತ ಇಂದು ಎಂದಿಗಿಂತಲೂ ಅತಿ ಹೆಚ್ಚು ಶ್ರೀಮಂತ ರಾಷ್ಟ್ರವಾಗಿದೆ. ಆದರೆ ಶೇ.60 ರಷ್ಟು ಸಂಪತ್ತು ಕೇವಲ ಶೇ.1 ರಷ್ಟು ಜನರ ಕೈಯಲ್ಲಿದೆ. ಶೇ.20 ರಷ್ಟು ಸಂಪತ್ತು ಶೇ.9 ರಷ್ಟು ಜನರ ಕೈನಲ್ಲಿದೆ. ಉಳಿದ ಶೇ.20 ರಷ್ಟು ಸಂಪತ್ತು ಶೇ.90 ಜನರ ಕೈನಲ್ಲಿದೆ. ಈ ಅಸಮಾನ ಭಾರತವನ್ನು ಕಟ್ಟಿದ್ದೇವೆ. ಸಂಪತ್ತಿದ್ದರೂ ಬಡತನ, ನಿರುದ್ಯೋಗ, ಅನಾರೋಗ್ಯ, ಅನಕ್ಷರತೆ ಇದೆ. ನಾವು ಈ ಅಸಮಾನತೆಯನ್ನು ಮುಂದುವರೆಸಿಕೊಂಡು ಪ್ರಜಾಪ್ರಭುತ್ವವನ್ನು ಕಾಣಲು ಸಾಧ್ಯವಿಲ್ಲ. ಹಾಗಾಗಿ ರಾಜಕೀಯ ಸ್ವಾತಂತ್ರ್ಯದೊಂದಿಗೆ ಸಾಮಾಜಿಕ ಮತ್ತು ಆರ್ಥಿಕ ಸ್ವಾತಂತ್ರ್ಯಕ್ಕಾಗಿ ಹೋರಾಡಬೇಕಿದೆ ಎಂದರು.

ಪ್ರಜಾಪ್ರಭುತ್ವದ ಸಂಸ್ಥೆಗಳನ್ನು ಬಲಹೀನಗೊಳಿಸಲಾಗುತ್ತಿದೆ. ಚುನಾವಣಾ ಆಯೋಗ, ಸಿಬಿಐ, ವಿಚರಣಾ ತನಿಖಾ ಸಂಸ್ಥೆಗಳು, ಆರ್‌ಬಿಐ, ಆದಾಯ ತೆರಿಗೆ ಇಲಾಖೆ ಎಲ್ಲವನ್ನು ದುರ್ಬಲಗೊಳಿಸಿ ತಮ್ಮ ಮೂಗಿನ ನೇರಕ್ಕೆ ಕುಣಿಸಲಾಗುತ್ತಿದೆ. ಕಳೆದ ಸಂಸತ್ ಅಧಿವೇಶನದಲ್ಲಿ ಒಂದೇ ಒಂದು ಮಸೂದೆಯನ್ನು ಸರಿಯಾಗಿ ಚರ್ಚೆ ನಡೆಸಲಿಲ್ಲ. ಎಲ್ಲಾ ರಾಜಕೀಯ ಪಕ್ಷಗಳು ಸೇರಿ ಒಬಿಸಿ ಬಿಲ್ ಮಾತ್ರ ಪಾಸು ಮಾಡಿದರು. ಆದರೆ ಕೊರೊನಾದ ಕುರಿತಾಗಿ, ಅಸಂಘಟಿತ ಕಾರ್ಮಿಕರ ಕುರಿತಾಗಿ, 18-20 ಕೋಟಿ ಯುವಜನರು ನಿರುದ್ಯೋಗಿಗಳಾಗಿದ್ದಾರೆ ಇದರ ಬಗ್ಗೆ ಚರ್ಚೆ ನಡೆಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಕಳೆದ 72 ವರ್ಷಗಳಲ್ಲಿ ಭೂ ಸುಧಾರಣೆ, ಆರೋಗ್ಯ ಸುಧಾರಣೆ, ಕೈಗಾರಿಕೆ ಸುಧಾರಣೆ ಕಂಡೆವು. ಇದರಿಂದ ಜನಜೀವನ ಸ್ವಲ್ಪ ಉತ್ತಮವಾಗಿತ್ತು. ಆದರೆ ಇವತ್ತು ಅಪ್ರಜಾತಾಂತ್ರಿಕ ಸುಧಾರಣೆಗಳ ಪರ್ವ ಶುರುವಾಗಿದೆ. ರೈತರು ಬಿಕ್ಕಟ್ಟಿನಲ್ಲಿದ್ದಾರೆ. ಆತ್ಮಹತ್ಯೆಗಳತ್ತ ಮುಖಮಾಡಿ ಪರಿಹಾರ ಬಯಸುತ್ತಿದ್ದರೆ ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದಿತು. ವಿದ್ಯುತ್ ಮಸೂದೆ ತಂದಿದೆ. ಎಪಿಎಂಸಿ ಕಾಯ್ದೆ ರದ್ದುಪಡಿಸಿದೆ. ರೈತರನ್ನು ಗುಲಾಮರನ್ನಾಗಿ ಮಾಡಲಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಜಾತ್ಯಾತೀತ ರಾಷ್ಟ್ರ ನಿರ್ಮಾಣ ಮಾಡುವುದು ಸಂವಿಧಾನದ ಆಶಯ. ರಾಜಕೀಯದಿಂದ ಧರ್ಮವನ್ನು ಪ್ರತ್ಯೇಕಿಸಬೇಕು. ಸರ್ಕಾರಕ್ಕೆ ಯಾವುದೇ ಧರ್ಮವಿರಬಾರದು. ಆದರೆ ಇವತ್ತು ನಮ್ಮ ದುರಾದೃಷ್ಟ ಮಠಾಧೀಶರು, ಧಾರ್ಮಿಕ ಮುಖಂಡರು ಸಕ್ರಿಯ ರಾಜಕೀಯಕ್ಕೆ ಇಳಿಯುತ್ತಿದ್ದಾರೆ. ಕರ್ನಾಟಕದಲ್ಲಿ ಮೀಸಲಾತಿ ವಿಚಾರ ಒಂದು ರಾಜಕೀಯ ನಿರ್ಣಯವಾಗಬೇಕು. ಆದರೆ ಅದು ಸ್ವಾಮೀಜಿಗಳು ಮತ್ತು ಮಠಾಧೀಶರ ಹೋರಾಟವಾಗಿ ನಿಂತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ದಲಿತರು, ಮಹಿಳೆಯರು, ಬುಡಕಟ್ಟು ಜನಾಂಗ, ಅಲ್ಪಸಂಖ್ಯಾತ ಜನ ಇಂದು ಎಲ್ಲಾ ವಿಭಾಗಗಳಿಗೆ ಪ್ರವೇಶ ಪಡೆಯಬೇಕಾಗಿದೆ. ಅವರು ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗ ಕ್ಷೇತ್ರಗಳಿಗೆ ಪ್ರವೇಶ ಮಾಡುವ ಮೂಲಕ ಒಂದಷ್ಟು ಘನತೆ ಮತ್ತು ಸ್ವಾಭಿಮಾನವನ್ನು ತಂದುಕೊಡಲು ಸಾಧ್ಯವಾಗಿದೆ. ಆದರೆ ಸಾಮಾಜಿಕ ನ್ಯಾಯ ಎಂಬುದು ಅಪ್ರಸ್ತುತಗೊಳಿಸುತ್ತಿದ್ದೇವೆ. ಇಂದು ಕೇಂದ್ರ ಸರ್ಕಾರದಲ್ಲಿ 62 ಲಕ್ಷ ಉದ್ಯೋಗಗಳು ಖಾಲಿ ಬಿದ್ದಿವೆ. ಇದನ್ನು ತುಂಬುತ್ತಿಲ್ಲ. ಈ ಸವಾಲುಗಳನ್ನು ಹಿಮ್ಮೆಟ್ಟಿಸಬೇಕು.  ಈ ಎಲ್ಲಾ ಬಿಕ್ಕಟ್ಟಿಗೆ ಪರಿಹಾರ ಸಂವಿಧಾನ ಮಾರ್ಗವಾಗಿದೆ. ಅದನ್ನು ಓದಿ, ಅರ್ಥೈಸಿಕೊಂಡು ಅಳವಡಿಸಿಕೊಳ್ಳಬೇಕಿದೆ. ಆ ಮೂಲಕ ಈ ದೇಶವನ್ನು ಉಳಿಸಿಕೊಳ್ಳಬೇಕಾಗಿದೆ ಎಂದರು.

ವೆಬಿನಾರ್‌ನಲ್ಲಿ ಸಿಟಿಜನ್ಸ್ ಫಾರ್ ಜಸ್ಟೀಸ್ ಅಂಡ್ ಪೀಸ್‌ ಸಂಸ್ಥೆಯ ತೀಸ್ತಾ ಸೆಟ್ಲವಾದ್, ಚಿಂತಕರಾದ ಪ್ರೊ.ವಿ.ಎಸ್ ಶ್ರೀಧರ್, ನಗರಗೆರೆ ರಮೇಶ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ರೈತ ಹೋರಾಟ: ದೆಹಲಿಯ ಗಡಿಗಳಲ್ಲಿ ರೈತರ ತಿರಂಗಾ ಯಾತ್ರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಜಸ್ಟಿಸ್ ನಾಗಮೋಹನದಾಸ್ ಅನುಭವ ಮತ್ತು ಅನಿಸಿಕೆ ನಮ್ಮೆಲ್ಲರದೂ ಆಗಿದೆ. ನೆಹರು, ಶಾಸ್ತ್ರಿ ಅಧಿಕಾರದಲ್ಲಿ ಇದ್ದಾಗ ನಾವು ತುಂಬಾ ಚಿಕ್ಕವರು. ಇಂದಿರಾ ಬಂದಾಗ ನಾವು ಬ್ಯಾಂಕ್ ರಾಷ್ಟ್ರೀಕರಣ, , ಸರ್ಕಾರಿ ಸೇವೆಯಲ್ಲಿ ರಿಸರ್ವೇಸನ್, ಮತ್ತು ಭೂಮಿ ಪಡೆಯಲು ಅವಕಾಶ ಆಯ್ತು. ಭಾರತೀಯ ಸಂದರ್ಭದಲ್ಲಿ ಅದೊಂದು ರೆಸಲ್ಯೂಶನ್ ಕಂಡ ಯುಗ! ಅವುಗಳಿಲ್ಲದಿದ್ದಲ್ಲಿ ನಾವು ಆತ್ಮ ಗೌರವದಿಂದ ಬಾಳುವುದು ಕನಸಿನ ಮಾತಾಗಿತ್ತು.

  2. ನನ್ನಂಥಹ ವಿಚಾರವಂತರನ್ನು ಕಾಡುತ್ತಿರುವ ಅನೇಕ ವಿಚಾರಗಳ ಬಗ್ಗೆ ಜಸ್ಟಿಸ್ ನಾಗಮೋಹನದಾಸ್ ಮನಬಿಚ್ಚಿ ಮಾತಾಡಿದ್ದಾರೆ. ಸತ್ಯವನ್ನು ಹೇಳಲು ಜನ ಹಿಂಜರಿಯುತ್ತಿರುವ ಈ ಸಂಧರ್ಭದಲ್ಲಿ ದಾಸ್ ಅವರು ದೇಶ ಅದಪಾತಾಳಕ್ಕೆ ತಲುಪಿರುವ ಬಗ್ಗೆ ಸವಿಸ್ತಾರವಾಗಿ ತಮ್ಮ ನೋವನ್ನು ಹೊರಹಕಿದ್ದಾರೆ. ಮಾನ್ಯರ ಈ ಮಾತುಗಳು ಹೆಚ್ಚು ಜನಕ್ಕೆ ತಲುಪಬೇಕಾಗಿದೆ. Hats off to you Sir.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...