Homeಅಂತರಾಷ್ಟ್ರೀಯಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್‌‌ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

- Advertisement -
- Advertisement -

ಪರ್ಷಿಯನ್ ಕೊಲ್ಲಿಯಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರದ ಅಭಿವೃದ್ಧಿಯಿಂದ ಭಾರತವನ್ನು ಇರಾನ್ ಹೊರಹಾಕಿದೆ ಎಂದು ಟೆಹ್ರಾನ್‌‌ನ ಉನ್ನತ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಮೂರು ಭಾರತೀಯ ಕಂಪನಿಗಳಾದ ಒಎನ್‌ಜಿಸಿ, ಆಯಿಲ್ ಇಂಡಿಯಾ ಲಿಮಿಟೆಡ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಒಕ್ಕೂಟದಿಂದ 2008 ರಲ್ಲಿ ಪರ್ಷಿಯನ್ ಕೊಲ್ಲಿಯ ಫಾರ್ಸಿ ಕಡಲಾಚೆಯ ಪ್ರದೇಶದಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರವನ್ನು ಕಂಡುಹಿಡಿದಿತ್ತು. ಇರಾನ್ ಮತ್ತು ಭಾರತ ಈ ಕ್ಷೇತ್ರದ ಅಭಿವೃದ್ಧಿಯ ನಿಯಮಗಳನ್ನು ಹಲವು ವರ್ಷಗಳಿಂದ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ವರ್ಷಗಳ ಹಿಂದೆ ಇರಾನ್ ಹೊರಡಿಸಿದ “ಬಹು ನಿಯಮಗಳಿಗೆ(ಮಲ್ಟಿಪಲ್ ಅಲ್ಟಿಮೇಟಮ್)” ಪ್ರತಿಕ್ರಿಯಿಸಲು ಭಾರತವು ವಿಫಲವಾದ ಕಾರಣ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಇರಾನ್ ಸ್ಥಳೀಯ ಸಂಸ್ಥೆಗಳನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

“ನಾವು ಕಳೆದ ವರ್ಷ ಸೇರಿದಂತೆ ಅನೇಕ ಅಲ್ಟಿಮೇಟಮ್‌ಗಳನ್ನು ನೀಡಿದ್ದೇವೆ, ಆದರೆ ಬಹುಶಃ ಯೋಜನೆಯನ್ನು ಕಳೆದುಕೊಳ್ಳುವಲ್ಲಿ ಮತ್ತು ಅಮೆರಿಕಾ ಅಧೀನರಾಗಿರುವುದರಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮೂಲವೊಂದು ಹೇಳಿದೆ.

 

ಯೋಜನೆಯ ಅಭಿವೃದ್ಧಿಯ ಕುರಿತು ಮಾತುಕತೆಗಾಗಿ ಇರಾನ್ ಭಾರತಕ್ಕೆ ಹಲವಾರು ಆಹ್ವಾನಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ನಿರ್ಬಂಧದಿಂದಾಗಿ ಭಾರತವು ವಿಳಂಬ ಮಾಡುತ್ತಿರುವುದರಿಂದ ಫರ್ಜಾದ್-ಬಿ ಅನಿಲ ಕ್ಷೇತ್ರ ಯೋಜನೆಯನ್ನು ಕಳೆದುಕೊಳ್ಳಲು ಸಜ್ಜಾಗಿದೆ ಎಂದು ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ಜುಲೈನಲ್ಲಿ ವರದಿ ಮಾಡಿತ್ತು.

ಇದನ್ನೂ ಓದಿ: ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಕಳೆದ ತಿಂಗಳು, ಇರಾನ್‌ನ ಪೆಟ್ರೋಲಿಯಂ ಸಚಿವ ಬಿಜಾನ್ ಜಂಗಾನೆಹ್ ಭಾರತೀಯ ಒಕ್ಕೂಟವಿಲ್ಲದೆ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದೃಪಡಿಸಿದ್ದರು.

“2.2 ಬಿಲಿಯನ್ ಡಾಲರ್ ಮೌಲ್ಯದ ಫರ್ಜಾದ್-ಬಿ ಅಭಿವೃದ್ಧಿಯ ಮೊದಲ ಹಂತವು ಮುಂದಿನ ದಿನಗಳಲ್ಲಿ ಸಹಿ ಮಾಡಲಾಗುವುದು” ಎಂದು ಅವರು ಸಂಸತ್ತಿನಲ್ಲಿ ಹೇಳಿದ್ದರು.

ಅವಕಾಶವನ್ನು ಕಳೆದುಕೊಂಡ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಇರಾನ್ ಭಾರತಕ್ಕೆ ಅನೇಕ ರಿಯಾಯಿತಿಗಳನ್ನು ನೀಡಿದ್ದು, ಯೋಜನೆಗೆ ಸೇರಲು ಬಹಳ ಸಮಯ ಕಾಯುತ್ತಿತ್ತು. ಆದರೆ ಅಮೆರಿಕಾದೊಂದಿಗೆ ದ್ವೇಷ ಕಟ್ಟಿಕೊಳ್ಳಲು ತಯಾರಿರದ ಭಾರತ ಇದನ್ನು ಕಳೆದು ಕೊಂಡಿದೆ ಎನ್ನಲಾಗಿದೆ.

ಮೂಲದ ಪ್ರಕಾರ, ಇರಾನ್ ಕಳೆದ ವರ್ಷ ಭಾರತಕ್ಕೆ ತನ್ನ ಅಂತಿಮ ಅಲ್ಟಿಮೇಟಮ್ ಅನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ ಎಂದು ಇರಾನ್ ಹೇಳಿದೆ.

“ಹಲವು ವರ್ಷದಿಂದ ಗ್ಯಾಸ್ ಹೊರತೆಗೆಯುತ್ತಿರುವ ಕತಾರ್‌ನಂತಹ ಇತರ ದೇಶಗಳೊಂದಿಗೆ ಅನಿಲ ಕ್ಷೇತ್ರಗಳನ್ನು (ಪರ್ಷಿಯನ್ ಕೊಲ್ಲಿಯಲ್ಲಿ) ಹಂಚಿಕೊಳ್ಳುತ್ತೇವೆ. ಅಮೆರಿಕಾದ ನಿರ್ಬಂಧಗಳು ಮತ್ತು ಭಯದಿಂದ ಭಾರತವು ಅವಕಾಶವನ್ನು ಕಳೆದುಕೊಂಡಿದೆ ಎಂದು ತಿಳಿಸಿದೆ.

ಈ ದೈತ್ಯ ಗ್ಯಾಸ್ ಕ್ಷೇತ್ರದಲ್ಲಿ ಸುಮಾರು 100 ಮಿಲಿಯನ್ ಆರಂಭಿಕ ಹೂಡಿಕೆಯ ಹೊರತಾಗಿಯೂ, ಅಮೆರಿಕಾದ ನಿರ್ಬಂಧಗಳಿಂದಾಗಿ ಭಾರತ ಹಿಂದೆ ಸರಿದಿದೆ.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...