Homeಅಂತರಾಷ್ಟ್ರೀಯಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್‌‌ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

- Advertisement -
- Advertisement -

ಪರ್ಷಿಯನ್ ಕೊಲ್ಲಿಯಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರದ ಅಭಿವೃದ್ಧಿಯಿಂದ ಭಾರತವನ್ನು ಇರಾನ್ ಹೊರಹಾಕಿದೆ ಎಂದು ಟೆಹ್ರಾನ್‌‌ನ ಉನ್ನತ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಮೂರು ಭಾರತೀಯ ಕಂಪನಿಗಳಾದ ಒಎನ್‌ಜಿಸಿ, ಆಯಿಲ್ ಇಂಡಿಯಾ ಲಿಮಿಟೆಡ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಒಕ್ಕೂಟದಿಂದ 2008 ರಲ್ಲಿ ಪರ್ಷಿಯನ್ ಕೊಲ್ಲಿಯ ಫಾರ್ಸಿ ಕಡಲಾಚೆಯ ಪ್ರದೇಶದಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರವನ್ನು ಕಂಡುಹಿಡಿದಿತ್ತು. ಇರಾನ್ ಮತ್ತು ಭಾರತ ಈ ಕ್ಷೇತ್ರದ ಅಭಿವೃದ್ಧಿಯ ನಿಯಮಗಳನ್ನು ಹಲವು ವರ್ಷಗಳಿಂದ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ವರ್ಷಗಳ ಹಿಂದೆ ಇರಾನ್ ಹೊರಡಿಸಿದ “ಬಹು ನಿಯಮಗಳಿಗೆ(ಮಲ್ಟಿಪಲ್ ಅಲ್ಟಿಮೇಟಮ್)” ಪ್ರತಿಕ್ರಿಯಿಸಲು ಭಾರತವು ವಿಫಲವಾದ ಕಾರಣ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಇರಾನ್ ಸ್ಥಳೀಯ ಸಂಸ್ಥೆಗಳನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

“ನಾವು ಕಳೆದ ವರ್ಷ ಸೇರಿದಂತೆ ಅನೇಕ ಅಲ್ಟಿಮೇಟಮ್‌ಗಳನ್ನು ನೀಡಿದ್ದೇವೆ, ಆದರೆ ಬಹುಶಃ ಯೋಜನೆಯನ್ನು ಕಳೆದುಕೊಳ್ಳುವಲ್ಲಿ ಮತ್ತು ಅಮೆರಿಕಾ ಅಧೀನರಾಗಿರುವುದರಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮೂಲವೊಂದು ಹೇಳಿದೆ.

 

ಯೋಜನೆಯ ಅಭಿವೃದ್ಧಿಯ ಕುರಿತು ಮಾತುಕತೆಗಾಗಿ ಇರಾನ್ ಭಾರತಕ್ಕೆ ಹಲವಾರು ಆಹ್ವಾನಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ನಿರ್ಬಂಧದಿಂದಾಗಿ ಭಾರತವು ವಿಳಂಬ ಮಾಡುತ್ತಿರುವುದರಿಂದ ಫರ್ಜಾದ್-ಬಿ ಅನಿಲ ಕ್ಷೇತ್ರ ಯೋಜನೆಯನ್ನು ಕಳೆದುಕೊಳ್ಳಲು ಸಜ್ಜಾಗಿದೆ ಎಂದು ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ಜುಲೈನಲ್ಲಿ ವರದಿ ಮಾಡಿತ್ತು.

ಇದನ್ನೂ ಓದಿ: ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಕಳೆದ ತಿಂಗಳು, ಇರಾನ್‌ನ ಪೆಟ್ರೋಲಿಯಂ ಸಚಿವ ಬಿಜಾನ್ ಜಂಗಾನೆಹ್ ಭಾರತೀಯ ಒಕ್ಕೂಟವಿಲ್ಲದೆ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದೃಪಡಿಸಿದ್ದರು.

“2.2 ಬಿಲಿಯನ್ ಡಾಲರ್ ಮೌಲ್ಯದ ಫರ್ಜಾದ್-ಬಿ ಅಭಿವೃದ್ಧಿಯ ಮೊದಲ ಹಂತವು ಮುಂದಿನ ದಿನಗಳಲ್ಲಿ ಸಹಿ ಮಾಡಲಾಗುವುದು” ಎಂದು ಅವರು ಸಂಸತ್ತಿನಲ್ಲಿ ಹೇಳಿದ್ದರು.

ಅವಕಾಶವನ್ನು ಕಳೆದುಕೊಂಡ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಇರಾನ್ ಭಾರತಕ್ಕೆ ಅನೇಕ ರಿಯಾಯಿತಿಗಳನ್ನು ನೀಡಿದ್ದು, ಯೋಜನೆಗೆ ಸೇರಲು ಬಹಳ ಸಮಯ ಕಾಯುತ್ತಿತ್ತು. ಆದರೆ ಅಮೆರಿಕಾದೊಂದಿಗೆ ದ್ವೇಷ ಕಟ್ಟಿಕೊಳ್ಳಲು ತಯಾರಿರದ ಭಾರತ ಇದನ್ನು ಕಳೆದು ಕೊಂಡಿದೆ ಎನ್ನಲಾಗಿದೆ.

ಮೂಲದ ಪ್ರಕಾರ, ಇರಾನ್ ಕಳೆದ ವರ್ಷ ಭಾರತಕ್ಕೆ ತನ್ನ ಅಂತಿಮ ಅಲ್ಟಿಮೇಟಮ್ ಅನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ ಎಂದು ಇರಾನ್ ಹೇಳಿದೆ.

“ಹಲವು ವರ್ಷದಿಂದ ಗ್ಯಾಸ್ ಹೊರತೆಗೆಯುತ್ತಿರುವ ಕತಾರ್‌ನಂತಹ ಇತರ ದೇಶಗಳೊಂದಿಗೆ ಅನಿಲ ಕ್ಷೇತ್ರಗಳನ್ನು (ಪರ್ಷಿಯನ್ ಕೊಲ್ಲಿಯಲ್ಲಿ) ಹಂಚಿಕೊಳ್ಳುತ್ತೇವೆ. ಅಮೆರಿಕಾದ ನಿರ್ಬಂಧಗಳು ಮತ್ತು ಭಯದಿಂದ ಭಾರತವು ಅವಕಾಶವನ್ನು ಕಳೆದುಕೊಂಡಿದೆ ಎಂದು ತಿಳಿಸಿದೆ.

ಈ ದೈತ್ಯ ಗ್ಯಾಸ್ ಕ್ಷೇತ್ರದಲ್ಲಿ ಸುಮಾರು 100 ಮಿಲಿಯನ್ ಆರಂಭಿಕ ಹೂಡಿಕೆಯ ಹೊರತಾಗಿಯೂ, ಅಮೆರಿಕಾದ ನಿರ್ಬಂಧಗಳಿಂದಾಗಿ ಭಾರತ ಹಿಂದೆ ಸರಿದಿದೆ.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...