Homeಅಂತರಾಷ್ಟ್ರೀಯಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್‌‌ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

- Advertisement -
- Advertisement -

ಪರ್ಷಿಯನ್ ಕೊಲ್ಲಿಯಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರದ ಅಭಿವೃದ್ಧಿಯಿಂದ ಭಾರತವನ್ನು ಇರಾನ್ ಹೊರಹಾಕಿದೆ ಎಂದು ಟೆಹ್ರಾನ್‌‌ನ ಉನ್ನತ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಮೂರು ಭಾರತೀಯ ಕಂಪನಿಗಳಾದ ಒಎನ್‌ಜಿಸಿ, ಆಯಿಲ್ ಇಂಡಿಯಾ ಲಿಮಿಟೆಡ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಒಕ್ಕೂಟದಿಂದ 2008 ರಲ್ಲಿ ಪರ್ಷಿಯನ್ ಕೊಲ್ಲಿಯ ಫಾರ್ಸಿ ಕಡಲಾಚೆಯ ಪ್ರದೇಶದಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರವನ್ನು ಕಂಡುಹಿಡಿದಿತ್ತು. ಇರಾನ್ ಮತ್ತು ಭಾರತ ಈ ಕ್ಷೇತ್ರದ ಅಭಿವೃದ್ಧಿಯ ನಿಯಮಗಳನ್ನು ಹಲವು ವರ್ಷಗಳಿಂದ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ವರ್ಷಗಳ ಹಿಂದೆ ಇರಾನ್ ಹೊರಡಿಸಿದ “ಬಹು ನಿಯಮಗಳಿಗೆ(ಮಲ್ಟಿಪಲ್ ಅಲ್ಟಿಮೇಟಮ್)” ಪ್ರತಿಕ್ರಿಯಿಸಲು ಭಾರತವು ವಿಫಲವಾದ ಕಾರಣ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಇರಾನ್ ಸ್ಥಳೀಯ ಸಂಸ್ಥೆಗಳನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

“ನಾವು ಕಳೆದ ವರ್ಷ ಸೇರಿದಂತೆ ಅನೇಕ ಅಲ್ಟಿಮೇಟಮ್‌ಗಳನ್ನು ನೀಡಿದ್ದೇವೆ, ಆದರೆ ಬಹುಶಃ ಯೋಜನೆಯನ್ನು ಕಳೆದುಕೊಳ್ಳುವಲ್ಲಿ ಮತ್ತು ಅಮೆರಿಕಾ ಅಧೀನರಾಗಿರುವುದರಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮೂಲವೊಂದು ಹೇಳಿದೆ.

 

ಯೋಜನೆಯ ಅಭಿವೃದ್ಧಿಯ ಕುರಿತು ಮಾತುಕತೆಗಾಗಿ ಇರಾನ್ ಭಾರತಕ್ಕೆ ಹಲವಾರು ಆಹ್ವಾನಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ನಿರ್ಬಂಧದಿಂದಾಗಿ ಭಾರತವು ವಿಳಂಬ ಮಾಡುತ್ತಿರುವುದರಿಂದ ಫರ್ಜಾದ್-ಬಿ ಅನಿಲ ಕ್ಷೇತ್ರ ಯೋಜನೆಯನ್ನು ಕಳೆದುಕೊಳ್ಳಲು ಸಜ್ಜಾಗಿದೆ ಎಂದು ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ಜುಲೈನಲ್ಲಿ ವರದಿ ಮಾಡಿತ್ತು.

ಇದನ್ನೂ ಓದಿ: ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಕಳೆದ ತಿಂಗಳು, ಇರಾನ್‌ನ ಪೆಟ್ರೋಲಿಯಂ ಸಚಿವ ಬಿಜಾನ್ ಜಂಗಾನೆಹ್ ಭಾರತೀಯ ಒಕ್ಕೂಟವಿಲ್ಲದೆ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದೃಪಡಿಸಿದ್ದರು.

“2.2 ಬಿಲಿಯನ್ ಡಾಲರ್ ಮೌಲ್ಯದ ಫರ್ಜಾದ್-ಬಿ ಅಭಿವೃದ್ಧಿಯ ಮೊದಲ ಹಂತವು ಮುಂದಿನ ದಿನಗಳಲ್ಲಿ ಸಹಿ ಮಾಡಲಾಗುವುದು” ಎಂದು ಅವರು ಸಂಸತ್ತಿನಲ್ಲಿ ಹೇಳಿದ್ದರು.

ಅವಕಾಶವನ್ನು ಕಳೆದುಕೊಂಡ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಇರಾನ್ ಭಾರತಕ್ಕೆ ಅನೇಕ ರಿಯಾಯಿತಿಗಳನ್ನು ನೀಡಿದ್ದು, ಯೋಜನೆಗೆ ಸೇರಲು ಬಹಳ ಸಮಯ ಕಾಯುತ್ತಿತ್ತು. ಆದರೆ ಅಮೆರಿಕಾದೊಂದಿಗೆ ದ್ವೇಷ ಕಟ್ಟಿಕೊಳ್ಳಲು ತಯಾರಿರದ ಭಾರತ ಇದನ್ನು ಕಳೆದು ಕೊಂಡಿದೆ ಎನ್ನಲಾಗಿದೆ.

ಮೂಲದ ಪ್ರಕಾರ, ಇರಾನ್ ಕಳೆದ ವರ್ಷ ಭಾರತಕ್ಕೆ ತನ್ನ ಅಂತಿಮ ಅಲ್ಟಿಮೇಟಮ್ ಅನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ ಎಂದು ಇರಾನ್ ಹೇಳಿದೆ.

“ಹಲವು ವರ್ಷದಿಂದ ಗ್ಯಾಸ್ ಹೊರತೆಗೆಯುತ್ತಿರುವ ಕತಾರ್‌ನಂತಹ ಇತರ ದೇಶಗಳೊಂದಿಗೆ ಅನಿಲ ಕ್ಷೇತ್ರಗಳನ್ನು (ಪರ್ಷಿಯನ್ ಕೊಲ್ಲಿಯಲ್ಲಿ) ಹಂಚಿಕೊಳ್ಳುತ್ತೇವೆ. ಅಮೆರಿಕಾದ ನಿರ್ಬಂಧಗಳು ಮತ್ತು ಭಯದಿಂದ ಭಾರತವು ಅವಕಾಶವನ್ನು ಕಳೆದುಕೊಂಡಿದೆ ಎಂದು ತಿಳಿಸಿದೆ.

ಈ ದೈತ್ಯ ಗ್ಯಾಸ್ ಕ್ಷೇತ್ರದಲ್ಲಿ ಸುಮಾರು 100 ಮಿಲಿಯನ್ ಆರಂಭಿಕ ಹೂಡಿಕೆಯ ಹೊರತಾಗಿಯೂ, ಅಮೆರಿಕಾದ ನಿರ್ಬಂಧಗಳಿಂದಾಗಿ ಭಾರತ ಹಿಂದೆ ಸರಿದಿದೆ.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...