Homeಅಂತರಾಷ್ಟ್ರೀಯಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್‌‌ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

- Advertisement -
- Advertisement -

ಪರ್ಷಿಯನ್ ಕೊಲ್ಲಿಯಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರದ ಅಭಿವೃದ್ಧಿಯಿಂದ ಭಾರತವನ್ನು ಇರಾನ್ ಹೊರಹಾಕಿದೆ ಎಂದು ಟೆಹ್ರಾನ್‌‌ನ ಉನ್ನತ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಮೂರು ಭಾರತೀಯ ಕಂಪನಿಗಳಾದ ಒಎನ್‌ಜಿಸಿ, ಆಯಿಲ್ ಇಂಡಿಯಾ ಲಿಮಿಟೆಡ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಒಕ್ಕೂಟದಿಂದ 2008 ರಲ್ಲಿ ಪರ್ಷಿಯನ್ ಕೊಲ್ಲಿಯ ಫಾರ್ಸಿ ಕಡಲಾಚೆಯ ಪ್ರದೇಶದಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರವನ್ನು ಕಂಡುಹಿಡಿದಿತ್ತು. ಇರಾನ್ ಮತ್ತು ಭಾರತ ಈ ಕ್ಷೇತ್ರದ ಅಭಿವೃದ್ಧಿಯ ನಿಯಮಗಳನ್ನು ಹಲವು ವರ್ಷಗಳಿಂದ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ವರ್ಷಗಳ ಹಿಂದೆ ಇರಾನ್ ಹೊರಡಿಸಿದ “ಬಹು ನಿಯಮಗಳಿಗೆ(ಮಲ್ಟಿಪಲ್ ಅಲ್ಟಿಮೇಟಮ್)” ಪ್ರತಿಕ್ರಿಯಿಸಲು ಭಾರತವು ವಿಫಲವಾದ ಕಾರಣ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಇರಾನ್ ಸ್ಥಳೀಯ ಸಂಸ್ಥೆಗಳನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

“ನಾವು ಕಳೆದ ವರ್ಷ ಸೇರಿದಂತೆ ಅನೇಕ ಅಲ್ಟಿಮೇಟಮ್‌ಗಳನ್ನು ನೀಡಿದ್ದೇವೆ, ಆದರೆ ಬಹುಶಃ ಯೋಜನೆಯನ್ನು ಕಳೆದುಕೊಳ್ಳುವಲ್ಲಿ ಮತ್ತು ಅಮೆರಿಕಾ ಅಧೀನರಾಗಿರುವುದರಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮೂಲವೊಂದು ಹೇಳಿದೆ.

 

ಯೋಜನೆಯ ಅಭಿವೃದ್ಧಿಯ ಕುರಿತು ಮಾತುಕತೆಗಾಗಿ ಇರಾನ್ ಭಾರತಕ್ಕೆ ಹಲವಾರು ಆಹ್ವಾನಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ನಿರ್ಬಂಧದಿಂದಾಗಿ ಭಾರತವು ವಿಳಂಬ ಮಾಡುತ್ತಿರುವುದರಿಂದ ಫರ್ಜಾದ್-ಬಿ ಅನಿಲ ಕ್ಷೇತ್ರ ಯೋಜನೆಯನ್ನು ಕಳೆದುಕೊಳ್ಳಲು ಸಜ್ಜಾಗಿದೆ ಎಂದು ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ಜುಲೈನಲ್ಲಿ ವರದಿ ಮಾಡಿತ್ತು.

ಇದನ್ನೂ ಓದಿ: ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಕಳೆದ ತಿಂಗಳು, ಇರಾನ್‌ನ ಪೆಟ್ರೋಲಿಯಂ ಸಚಿವ ಬಿಜಾನ್ ಜಂಗಾನೆಹ್ ಭಾರತೀಯ ಒಕ್ಕೂಟವಿಲ್ಲದೆ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದೃಪಡಿಸಿದ್ದರು.

“2.2 ಬಿಲಿಯನ್ ಡಾಲರ್ ಮೌಲ್ಯದ ಫರ್ಜಾದ್-ಬಿ ಅಭಿವೃದ್ಧಿಯ ಮೊದಲ ಹಂತವು ಮುಂದಿನ ದಿನಗಳಲ್ಲಿ ಸಹಿ ಮಾಡಲಾಗುವುದು” ಎಂದು ಅವರು ಸಂಸತ್ತಿನಲ್ಲಿ ಹೇಳಿದ್ದರು.

ಅವಕಾಶವನ್ನು ಕಳೆದುಕೊಂಡ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಇರಾನ್ ಭಾರತಕ್ಕೆ ಅನೇಕ ರಿಯಾಯಿತಿಗಳನ್ನು ನೀಡಿದ್ದು, ಯೋಜನೆಗೆ ಸೇರಲು ಬಹಳ ಸಮಯ ಕಾಯುತ್ತಿತ್ತು. ಆದರೆ ಅಮೆರಿಕಾದೊಂದಿಗೆ ದ್ವೇಷ ಕಟ್ಟಿಕೊಳ್ಳಲು ತಯಾರಿರದ ಭಾರತ ಇದನ್ನು ಕಳೆದು ಕೊಂಡಿದೆ ಎನ್ನಲಾಗಿದೆ.

ಮೂಲದ ಪ್ರಕಾರ, ಇರಾನ್ ಕಳೆದ ವರ್ಷ ಭಾರತಕ್ಕೆ ತನ್ನ ಅಂತಿಮ ಅಲ್ಟಿಮೇಟಮ್ ಅನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ ಎಂದು ಇರಾನ್ ಹೇಳಿದೆ.

“ಹಲವು ವರ್ಷದಿಂದ ಗ್ಯಾಸ್ ಹೊರತೆಗೆಯುತ್ತಿರುವ ಕತಾರ್‌ನಂತಹ ಇತರ ದೇಶಗಳೊಂದಿಗೆ ಅನಿಲ ಕ್ಷೇತ್ರಗಳನ್ನು (ಪರ್ಷಿಯನ್ ಕೊಲ್ಲಿಯಲ್ಲಿ) ಹಂಚಿಕೊಳ್ಳುತ್ತೇವೆ. ಅಮೆರಿಕಾದ ನಿರ್ಬಂಧಗಳು ಮತ್ತು ಭಯದಿಂದ ಭಾರತವು ಅವಕಾಶವನ್ನು ಕಳೆದುಕೊಂಡಿದೆ ಎಂದು ತಿಳಿಸಿದೆ.

ಈ ದೈತ್ಯ ಗ್ಯಾಸ್ ಕ್ಷೇತ್ರದಲ್ಲಿ ಸುಮಾರು 100 ಮಿಲಿಯನ್ ಆರಂಭಿಕ ಹೂಡಿಕೆಯ ಹೊರತಾಗಿಯೂ, ಅಮೆರಿಕಾದ ನಿರ್ಬಂಧಗಳಿಂದಾಗಿ ಭಾರತ ಹಿಂದೆ ಸರಿದಿದೆ.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....