Homeಅಂತರಾಷ್ಟ್ರೀಯಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್‌‌ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

- Advertisement -
- Advertisement -

ಪರ್ಷಿಯನ್ ಕೊಲ್ಲಿಯಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರದ ಅಭಿವೃದ್ಧಿಯಿಂದ ಭಾರತವನ್ನು ಇರಾನ್ ಹೊರಹಾಕಿದೆ ಎಂದು ಟೆಹ್ರಾನ್‌‌ನ ಉನ್ನತ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಮೂರು ಭಾರತೀಯ ಕಂಪನಿಗಳಾದ ಒಎನ್‌ಜಿಸಿ, ಆಯಿಲ್ ಇಂಡಿಯಾ ಲಿಮಿಟೆಡ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಒಕ್ಕೂಟದಿಂದ 2008 ರಲ್ಲಿ ಪರ್ಷಿಯನ್ ಕೊಲ್ಲಿಯ ಫಾರ್ಸಿ ಕಡಲಾಚೆಯ ಪ್ರದೇಶದಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರವನ್ನು ಕಂಡುಹಿಡಿದಿತ್ತು. ಇರಾನ್ ಮತ್ತು ಭಾರತ ಈ ಕ್ಷೇತ್ರದ ಅಭಿವೃದ್ಧಿಯ ನಿಯಮಗಳನ್ನು ಹಲವು ವರ್ಷಗಳಿಂದ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ವರ್ಷಗಳ ಹಿಂದೆ ಇರಾನ್ ಹೊರಡಿಸಿದ “ಬಹು ನಿಯಮಗಳಿಗೆ(ಮಲ್ಟಿಪಲ್ ಅಲ್ಟಿಮೇಟಮ್)” ಪ್ರತಿಕ್ರಿಯಿಸಲು ಭಾರತವು ವಿಫಲವಾದ ಕಾರಣ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಇರಾನ್ ಸ್ಥಳೀಯ ಸಂಸ್ಥೆಗಳನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

“ನಾವು ಕಳೆದ ವರ್ಷ ಸೇರಿದಂತೆ ಅನೇಕ ಅಲ್ಟಿಮೇಟಮ್‌ಗಳನ್ನು ನೀಡಿದ್ದೇವೆ, ಆದರೆ ಬಹುಶಃ ಯೋಜನೆಯನ್ನು ಕಳೆದುಕೊಳ್ಳುವಲ್ಲಿ ಮತ್ತು ಅಮೆರಿಕಾ ಅಧೀನರಾಗಿರುವುದರಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮೂಲವೊಂದು ಹೇಳಿದೆ.

 

ಯೋಜನೆಯ ಅಭಿವೃದ್ಧಿಯ ಕುರಿತು ಮಾತುಕತೆಗಾಗಿ ಇರಾನ್ ಭಾರತಕ್ಕೆ ಹಲವಾರು ಆಹ್ವಾನಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ನಿರ್ಬಂಧದಿಂದಾಗಿ ಭಾರತವು ವಿಳಂಬ ಮಾಡುತ್ತಿರುವುದರಿಂದ ಫರ್ಜಾದ್-ಬಿ ಅನಿಲ ಕ್ಷೇತ್ರ ಯೋಜನೆಯನ್ನು ಕಳೆದುಕೊಳ್ಳಲು ಸಜ್ಜಾಗಿದೆ ಎಂದು ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ಜುಲೈನಲ್ಲಿ ವರದಿ ಮಾಡಿತ್ತು.

ಇದನ್ನೂ ಓದಿ: ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಕಳೆದ ತಿಂಗಳು, ಇರಾನ್‌ನ ಪೆಟ್ರೋಲಿಯಂ ಸಚಿವ ಬಿಜಾನ್ ಜಂಗಾನೆಹ್ ಭಾರತೀಯ ಒಕ್ಕೂಟವಿಲ್ಲದೆ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದೃಪಡಿಸಿದ್ದರು.

“2.2 ಬಿಲಿಯನ್ ಡಾಲರ್ ಮೌಲ್ಯದ ಫರ್ಜಾದ್-ಬಿ ಅಭಿವೃದ್ಧಿಯ ಮೊದಲ ಹಂತವು ಮುಂದಿನ ದಿನಗಳಲ್ಲಿ ಸಹಿ ಮಾಡಲಾಗುವುದು” ಎಂದು ಅವರು ಸಂಸತ್ತಿನಲ್ಲಿ ಹೇಳಿದ್ದರು.

ಅವಕಾಶವನ್ನು ಕಳೆದುಕೊಂಡ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಇರಾನ್ ಭಾರತಕ್ಕೆ ಅನೇಕ ರಿಯಾಯಿತಿಗಳನ್ನು ನೀಡಿದ್ದು, ಯೋಜನೆಗೆ ಸೇರಲು ಬಹಳ ಸಮಯ ಕಾಯುತ್ತಿತ್ತು. ಆದರೆ ಅಮೆರಿಕಾದೊಂದಿಗೆ ದ್ವೇಷ ಕಟ್ಟಿಕೊಳ್ಳಲು ತಯಾರಿರದ ಭಾರತ ಇದನ್ನು ಕಳೆದು ಕೊಂಡಿದೆ ಎನ್ನಲಾಗಿದೆ.

ಮೂಲದ ಪ್ರಕಾರ, ಇರಾನ್ ಕಳೆದ ವರ್ಷ ಭಾರತಕ್ಕೆ ತನ್ನ ಅಂತಿಮ ಅಲ್ಟಿಮೇಟಮ್ ಅನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ ಎಂದು ಇರಾನ್ ಹೇಳಿದೆ.

“ಹಲವು ವರ್ಷದಿಂದ ಗ್ಯಾಸ್ ಹೊರತೆಗೆಯುತ್ತಿರುವ ಕತಾರ್‌ನಂತಹ ಇತರ ದೇಶಗಳೊಂದಿಗೆ ಅನಿಲ ಕ್ಷೇತ್ರಗಳನ್ನು (ಪರ್ಷಿಯನ್ ಕೊಲ್ಲಿಯಲ್ಲಿ) ಹಂಚಿಕೊಳ್ಳುತ್ತೇವೆ. ಅಮೆರಿಕಾದ ನಿರ್ಬಂಧಗಳು ಮತ್ತು ಭಯದಿಂದ ಭಾರತವು ಅವಕಾಶವನ್ನು ಕಳೆದುಕೊಂಡಿದೆ ಎಂದು ತಿಳಿಸಿದೆ.

ಈ ದೈತ್ಯ ಗ್ಯಾಸ್ ಕ್ಷೇತ್ರದಲ್ಲಿ ಸುಮಾರು 100 ಮಿಲಿಯನ್ ಆರಂಭಿಕ ಹೂಡಿಕೆಯ ಹೊರತಾಗಿಯೂ, ಅಮೆರಿಕಾದ ನಿರ್ಬಂಧಗಳಿಂದಾಗಿ ಭಾರತ ಹಿಂದೆ ಸರಿದಿದೆ.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...