Homeಅಂತರಾಷ್ಟ್ರೀಯಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್‌‌ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

- Advertisement -
- Advertisement -

ಪರ್ಷಿಯನ್ ಕೊಲ್ಲಿಯಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರದ ಅಭಿವೃದ್ಧಿಯಿಂದ ಭಾರತವನ್ನು ಇರಾನ್ ಹೊರಹಾಕಿದೆ ಎಂದು ಟೆಹ್ರಾನ್‌‌ನ ಉನ್ನತ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಮೂರು ಭಾರತೀಯ ಕಂಪನಿಗಳಾದ ಒಎನ್‌ಜಿಸಿ, ಆಯಿಲ್ ಇಂಡಿಯಾ ಲಿಮಿಟೆಡ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಒಕ್ಕೂಟದಿಂದ 2008 ರಲ್ಲಿ ಪರ್ಷಿಯನ್ ಕೊಲ್ಲಿಯ ಫಾರ್ಸಿ ಕಡಲಾಚೆಯ ಪ್ರದೇಶದಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರವನ್ನು ಕಂಡುಹಿಡಿದಿತ್ತು. ಇರಾನ್ ಮತ್ತು ಭಾರತ ಈ ಕ್ಷೇತ್ರದ ಅಭಿವೃದ್ಧಿಯ ನಿಯಮಗಳನ್ನು ಹಲವು ವರ್ಷಗಳಿಂದ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ವರ್ಷಗಳ ಹಿಂದೆ ಇರಾನ್ ಹೊರಡಿಸಿದ “ಬಹು ನಿಯಮಗಳಿಗೆ(ಮಲ್ಟಿಪಲ್ ಅಲ್ಟಿಮೇಟಮ್)” ಪ್ರತಿಕ್ರಿಯಿಸಲು ಭಾರತವು ವಿಫಲವಾದ ಕಾರಣ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಇರಾನ್ ಸ್ಥಳೀಯ ಸಂಸ್ಥೆಗಳನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

“ನಾವು ಕಳೆದ ವರ್ಷ ಸೇರಿದಂತೆ ಅನೇಕ ಅಲ್ಟಿಮೇಟಮ್‌ಗಳನ್ನು ನೀಡಿದ್ದೇವೆ, ಆದರೆ ಬಹುಶಃ ಯೋಜನೆಯನ್ನು ಕಳೆದುಕೊಳ್ಳುವಲ್ಲಿ ಮತ್ತು ಅಮೆರಿಕಾ ಅಧೀನರಾಗಿರುವುದರಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮೂಲವೊಂದು ಹೇಳಿದೆ.

 

ಯೋಜನೆಯ ಅಭಿವೃದ್ಧಿಯ ಕುರಿತು ಮಾತುಕತೆಗಾಗಿ ಇರಾನ್ ಭಾರತಕ್ಕೆ ಹಲವಾರು ಆಹ್ವಾನಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ನಿರ್ಬಂಧದಿಂದಾಗಿ ಭಾರತವು ವಿಳಂಬ ಮಾಡುತ್ತಿರುವುದರಿಂದ ಫರ್ಜಾದ್-ಬಿ ಅನಿಲ ಕ್ಷೇತ್ರ ಯೋಜನೆಯನ್ನು ಕಳೆದುಕೊಳ್ಳಲು ಸಜ್ಜಾಗಿದೆ ಎಂದು ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ಜುಲೈನಲ್ಲಿ ವರದಿ ಮಾಡಿತ್ತು.

ಇದನ್ನೂ ಓದಿ: ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಕಳೆದ ತಿಂಗಳು, ಇರಾನ್‌ನ ಪೆಟ್ರೋಲಿಯಂ ಸಚಿವ ಬಿಜಾನ್ ಜಂಗಾನೆಹ್ ಭಾರತೀಯ ಒಕ್ಕೂಟವಿಲ್ಲದೆ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದೃಪಡಿಸಿದ್ದರು.

“2.2 ಬಿಲಿಯನ್ ಡಾಲರ್ ಮೌಲ್ಯದ ಫರ್ಜಾದ್-ಬಿ ಅಭಿವೃದ್ಧಿಯ ಮೊದಲ ಹಂತವು ಮುಂದಿನ ದಿನಗಳಲ್ಲಿ ಸಹಿ ಮಾಡಲಾಗುವುದು” ಎಂದು ಅವರು ಸಂಸತ್ತಿನಲ್ಲಿ ಹೇಳಿದ್ದರು.

ಅವಕಾಶವನ್ನು ಕಳೆದುಕೊಂಡ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಇರಾನ್ ಭಾರತಕ್ಕೆ ಅನೇಕ ರಿಯಾಯಿತಿಗಳನ್ನು ನೀಡಿದ್ದು, ಯೋಜನೆಗೆ ಸೇರಲು ಬಹಳ ಸಮಯ ಕಾಯುತ್ತಿತ್ತು. ಆದರೆ ಅಮೆರಿಕಾದೊಂದಿಗೆ ದ್ವೇಷ ಕಟ್ಟಿಕೊಳ್ಳಲು ತಯಾರಿರದ ಭಾರತ ಇದನ್ನು ಕಳೆದು ಕೊಂಡಿದೆ ಎನ್ನಲಾಗಿದೆ.

ಮೂಲದ ಪ್ರಕಾರ, ಇರಾನ್ ಕಳೆದ ವರ್ಷ ಭಾರತಕ್ಕೆ ತನ್ನ ಅಂತಿಮ ಅಲ್ಟಿಮೇಟಮ್ ಅನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ ಎಂದು ಇರಾನ್ ಹೇಳಿದೆ.

“ಹಲವು ವರ್ಷದಿಂದ ಗ್ಯಾಸ್ ಹೊರತೆಗೆಯುತ್ತಿರುವ ಕತಾರ್‌ನಂತಹ ಇತರ ದೇಶಗಳೊಂದಿಗೆ ಅನಿಲ ಕ್ಷೇತ್ರಗಳನ್ನು (ಪರ್ಷಿಯನ್ ಕೊಲ್ಲಿಯಲ್ಲಿ) ಹಂಚಿಕೊಳ್ಳುತ್ತೇವೆ. ಅಮೆರಿಕಾದ ನಿರ್ಬಂಧಗಳು ಮತ್ತು ಭಯದಿಂದ ಭಾರತವು ಅವಕಾಶವನ್ನು ಕಳೆದುಕೊಂಡಿದೆ ಎಂದು ತಿಳಿಸಿದೆ.

ಈ ದೈತ್ಯ ಗ್ಯಾಸ್ ಕ್ಷೇತ್ರದಲ್ಲಿ ಸುಮಾರು 100 ಮಿಲಿಯನ್ ಆರಂಭಿಕ ಹೂಡಿಕೆಯ ಹೊರತಾಗಿಯೂ, ಅಮೆರಿಕಾದ ನಿರ್ಬಂಧಗಳಿಂದಾಗಿ ಭಾರತ ಹಿಂದೆ ಸರಿದಿದೆ.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...