Homeಅಂತರಾಷ್ಟ್ರೀಯಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ಅಮೆರಿಕ ಭಯ: 2.2 ಬಿಲಿಯನ್ ಡಾಲರ್ ಮೌಲ್ಯದ ದೈತ್ಯ ಅನಿಲ ಕ್ಷೇತ್ರ ಕೈಚೆಲ್ಲಿದ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್‌‌ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

- Advertisement -
- Advertisement -

ಪರ್ಷಿಯನ್ ಕೊಲ್ಲಿಯಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರದ ಅಭಿವೃದ್ಧಿಯಿಂದ ಭಾರತವನ್ನು ಇರಾನ್ ಹೊರಹಾಕಿದೆ ಎಂದು ಟೆಹ್ರಾನ್‌‌ನ ಉನ್ನತ ಸರ್ಕಾರಿ ಮೂಲವನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ವರದಿ ಮಾಡಿದೆ.

ಮೂರು ಭಾರತೀಯ ಕಂಪನಿಗಳಾದ ಒಎನ್‌ಜಿಸಿ, ಆಯಿಲ್ ಇಂಡಿಯಾ ಲಿಮಿಟೆಡ್ ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಒಕ್ಕೂಟದಿಂದ 2008 ರಲ್ಲಿ ಪರ್ಷಿಯನ್ ಕೊಲ್ಲಿಯ ಫಾರ್ಸಿ ಕಡಲಾಚೆಯ ಪ್ರದೇಶದಲ್ಲಿ ಫರ್ಜಾದ್-ಬಿ ಅನಿಲ ಕ್ಷೇತ್ರವನ್ನು ಕಂಡುಹಿಡಿದಿತ್ತು. ಇರಾನ್ ಮತ್ತು ಭಾರತ ಈ ಕ್ಷೇತ್ರದ ಅಭಿವೃದ್ಧಿಯ ನಿಯಮಗಳನ್ನು ಹಲವು ವರ್ಷಗಳಿಂದ ಮಾತುಕತೆ ನಡೆಸುತ್ತಿದೆ.

ಇದನ್ನೂ ಓದಿ: ದೇಶವನ್ನುದ್ದೇಶಿಸಿ ಮೋದಿ ಭಾಷಣಕ್ಕೆ ಟ್ರೋಲ್: ನೆಟ್ಟಿಗರ ಪ್ರತಿಕ್ರಿಯೆ ಹೀಗಿದೆ!

ವರ್ಷಗಳ ಹಿಂದೆ ಇರಾನ್ ಹೊರಡಿಸಿದ “ಬಹು ನಿಯಮಗಳಿಗೆ(ಮಲ್ಟಿಪಲ್ ಅಲ್ಟಿಮೇಟಮ್)” ಪ್ರತಿಕ್ರಿಯಿಸಲು ಭಾರತವು ವಿಫಲವಾದ ಕಾರಣ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲು ಇರಾನ್ ಸ್ಥಳೀಯ ಸಂಸ್ಥೆಗಳನ್ನು ಬಳಸಲು ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

“ನಾವು ಕಳೆದ ವರ್ಷ ಸೇರಿದಂತೆ ಅನೇಕ ಅಲ್ಟಿಮೇಟಮ್‌ಗಳನ್ನು ನೀಡಿದ್ದೇವೆ, ಆದರೆ ಬಹುಶಃ ಯೋಜನೆಯನ್ನು ಕಳೆದುಕೊಳ್ಳುವಲ್ಲಿ ಮತ್ತು ಅಮೆರಿಕಾ ಅಧೀನರಾಗಿರುವುದರಲ್ಲಿ ಅವರಿಗೆ ಯಾವುದೇ ಸಮಸ್ಯೆ ಇರಲಿಲ್ಲ” ಎಂದು ಮೂಲವೊಂದು ಹೇಳಿದೆ.

 

ಯೋಜನೆಯ ಅಭಿವೃದ್ಧಿಯ ಕುರಿತು ಮಾತುಕತೆಗಾಗಿ ಇರಾನ್ ಭಾರತಕ್ಕೆ ಹಲವಾರು ಆಹ್ವಾನಗಳನ್ನು ಕಳುಹಿಸಿದೆ ಎಂದು ಮೂಲಗಳು ತಿಳಿಸಿವೆ. ಅಮೆರಿಕದ ನಿರ್ಬಂಧದಿಂದಾಗಿ ಭಾರತವು ವಿಳಂಬ ಮಾಡುತ್ತಿರುವುದರಿಂದ ಫರ್ಜಾದ್-ಬಿ ಅನಿಲ ಕ್ಷೇತ್ರ ಯೋಜನೆಯನ್ನು ಕಳೆದುಕೊಳ್ಳಲು ಸಜ್ಜಾಗಿದೆ ಎಂದು ಸುದ್ದಿ ಸಂಸ್ಥೆ ಅನಾಡೋಲು ಏಜೆನ್ಸಿ ಜುಲೈನಲ್ಲಿ ವರದಿ ಮಾಡಿತ್ತು.

ಇದನ್ನೂ ಓದಿ: ಮೋದಿಗೆ 8,400 ಕೋಟಿ ರೂ. ವಿಮಾನ; ಸೈನಿಕರಿಗೆ ಬುಲ್ಲೆಟ್‌ಪ್ರೂಫ್ ರಹಿತ ಟ್ರಕ್!: ರಾಹುಲ್ ಗಾಂಧಿ

ಕಳೆದ ತಿಂಗಳು, ಇರಾನ್‌ನ ಪೆಟ್ರೋಲಿಯಂ ಸಚಿವ ಬಿಜಾನ್ ಜಂಗಾನೆಹ್ ಭಾರತೀಯ ಒಕ್ಕೂಟವಿಲ್ಲದೆ ಅನಿಲ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದು ದೃಪಡಿಸಿದ್ದರು.

“2.2 ಬಿಲಿಯನ್ ಡಾಲರ್ ಮೌಲ್ಯದ ಫರ್ಜಾದ್-ಬಿ ಅಭಿವೃದ್ಧಿಯ ಮೊದಲ ಹಂತವು ಮುಂದಿನ ದಿನಗಳಲ್ಲಿ ಸಹಿ ಮಾಡಲಾಗುವುದು” ಎಂದು ಅವರು ಸಂಸತ್ತಿನಲ್ಲಿ ಹೇಳಿದ್ದರು.

ಅವಕಾಶವನ್ನು ಕಳೆದುಕೊಂಡ ಭಾರತ

ದೈತ್ಯ ಅನಿಲ ಕ್ಷೇತ್ರವು 21.7 ಟ್ರಿಲಿಯನ್ ಘನ ಅಡಿ ಅನಿಲ ನಿಕ್ಷೇಪ ಹೊಂದಿದ್ದು, 12.8 ಟ್ರಿಲಿಯನ್ ಘನ ಅಡಿ ನೈಸರ್ಗಿಕ ಅನಿಲ ಮತ್ತು 212 ಮಿಲಿಯನ್ ಬ್ಯಾರೆಲ್ ಅನಿಲ ಕಂಡೆನ್ಸೇಟ್ಗಳನ್ನು ಹೊಂದಿದೆ ಎಂದು ಅಂದಾಜಿಸಲಾಗಿದೆ.

ಇರಾನ್ ಭಾರತಕ್ಕೆ ಅನೇಕ ರಿಯಾಯಿತಿಗಳನ್ನು ನೀಡಿದ್ದು, ಯೋಜನೆಗೆ ಸೇರಲು ಬಹಳ ಸಮಯ ಕಾಯುತ್ತಿತ್ತು. ಆದರೆ ಅಮೆರಿಕಾದೊಂದಿಗೆ ದ್ವೇಷ ಕಟ್ಟಿಕೊಳ್ಳಲು ತಯಾರಿರದ ಭಾರತ ಇದನ್ನು ಕಳೆದು ಕೊಂಡಿದೆ ಎನ್ನಲಾಗಿದೆ.

ಮೂಲದ ಪ್ರಕಾರ, ಇರಾನ್ ಕಳೆದ ವರ್ಷ ಭಾರತಕ್ಕೆ ತನ್ನ ಅಂತಿಮ ಅಲ್ಟಿಮೇಟಮ್ ಅನ್ನು ಬಿಡುಗಡೆ ಮಾಡಿದ್ದು, ಇನ್ನು ಮುಂದೆ ಕಾಯಲು ಸಾಧ್ಯವಿಲ್ಲ ಎಂದು ಇರಾನ್ ಹೇಳಿದೆ.

“ಹಲವು ವರ್ಷದಿಂದ ಗ್ಯಾಸ್ ಹೊರತೆಗೆಯುತ್ತಿರುವ ಕತಾರ್‌ನಂತಹ ಇತರ ದೇಶಗಳೊಂದಿಗೆ ಅನಿಲ ಕ್ಷೇತ್ರಗಳನ್ನು (ಪರ್ಷಿಯನ್ ಕೊಲ್ಲಿಯಲ್ಲಿ) ಹಂಚಿಕೊಳ್ಳುತ್ತೇವೆ. ಅಮೆರಿಕಾದ ನಿರ್ಬಂಧಗಳು ಮತ್ತು ಭಯದಿಂದ ಭಾರತವು ಅವಕಾಶವನ್ನು ಕಳೆದುಕೊಂಡಿದೆ ಎಂದು ತಿಳಿಸಿದೆ.

ಈ ದೈತ್ಯ ಗ್ಯಾಸ್ ಕ್ಷೇತ್ರದಲ್ಲಿ ಸುಮಾರು 100 ಮಿಲಿಯನ್ ಆರಂಭಿಕ ಹೂಡಿಕೆಯ ಹೊರತಾಗಿಯೂ, ಅಮೆರಿಕಾದ ನಿರ್ಬಂಧಗಳಿಂದಾಗಿ ಭಾರತ ಹಿಂದೆ ಸರಿದಿದೆ.

ಇದನ್ನೂ ಓದಿ: ಚೀನಿಯರನ್ನು ಭಾರತದಿಂದ ಯಾವಾಗ ಹೊರಹಾಕುತ್ತೀರಿ? ಮೋದಿ ಭಾಷಣಕ್ಕೆ ರಾಹುಲ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...