Homeಮುಖಪುಟಬ್ರಿಜ್‌ಭೂಷಣ್ ವಿರುದ್ಧದ ಹೋರಾಟವು ಇನ್ಮುಂದೆ ಬೀದಿಗಳಲ್ಲಿ ಅಲ್ಲ, ನ್ಯಾಯಾಲಯದಲ್ಲಿ ಮುಂದುವರಿಯುತ್ತದೆ: ಕುಸ್ತಿಪಟುಗಳು

ಬ್ರಿಜ್‌ಭೂಷಣ್ ವಿರುದ್ಧದ ಹೋರಾಟವು ಇನ್ಮುಂದೆ ಬೀದಿಗಳಲ್ಲಿ ಅಲ್ಲ, ನ್ಯಾಯಾಲಯದಲ್ಲಿ ಮುಂದುವರಿಯುತ್ತದೆ: ಕುಸ್ತಿಪಟುಗಳು

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕುಸ್ತಿಪಟುಗಳು ತಮ್ಮ ಹೋರಾಟವನ್ನು ಮುಂದುವರೆಸಲಿದ್ದಾರೆ. ಈ ಬಾರಿಯ ಹೋರಾಟ ಬೀದಿಗಳಲ್ಲಿ ಅಲ್ಲ, ನ್ಯಾಯಾಲಯದಲ್ಲಿ ಎಂದು ಭಾನುವಾರ ಹೇಳಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ ಸಿಂಗ್‌ನನ್ನು ಬಂಧಿಸುವಂತೆ ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಏಪ್ರಿಲ್‌ನಿಂದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಜೂನ್ 7ರಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾದ ಕುಸ್ತಿಪಟುಗಳು ಸಿಂಗ್ ವಿರುದ್ಧದ ತನಿಖೆಯನ್ನು ಜೂನ್ 15 ರೊಳಗೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಅದರಂತೆ ಜೂನ್ 15 ರಂದು, ದೆಹಲಿ ಪೊಲೀಸರು ಉತ್ತರ ಪ್ರದೇಶದ ಬಿಜೆಪಿ ಸಂಸದರೂ ಆಗಿರುವ ಕ್ರೀಡಾ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ಬ್ರಿಜ್ಭೂ ವಿರುದ್ಧ ಆರೋಪಪಟ್ಟಿ ಸಲ್ಲಿಸಿದರು.

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳದ ದೂರುಗಳ ವಿಷಯದಲ್ಲಿ ಸರ್ಕಾರವು ಮಾತುಕತೆಯ ಸಮಯದಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನೀಡಿದ ಭರವಸೆಗಳಿಗೆ ಅನುಗುಣವಾಗಿ, ದೆಹಲಿ ಪೊಲೀಸರು ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ತನಿಖೆಯನ್ನು ಪೂರ್ಣಗೊಳಿಸಿದರು ಮತ್ತು ಆರೋಪಪಟ್ಟಿ ಸಲ್ಲಿಸಿದರು. ”ನಮಗೆ ಈಗ ನ್ಯಾಯ ಸಿಗುವವರೆಗೂ ಈ ಹೋರಾಟವು ನ್ಯಾಯಾಲಯದಲ್ಲಿ ಮುಂದುವರಿಯುತ್ತದೆ ಬೀದಿಗಳಲ್ಲಿ ಅಲ್ಲ” ಎಂದು ಜೂನ್ 15ರಂದು ಫೋಗಟ್, ಪುನಿಯಾ ಮತ್ತು ಮಲಿಕ್ ಒಂದೇ ರೀತಿಯ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

”ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಹೊಸ ಅಧ್ಯಕ್ಷ ಮತ್ತು ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲು ಚುನಾವಣೆ ನಡೆಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಜುಲೈ 11ರಂದು ಚುನಾವಣೆಗಳು ನಡೆಯಲಿವೆ ಮತ್ತು ಈ ನಿಟ್ಟಿನಲ್ಲಿ ಸರ್ಕಾರದ ಭರವಸೆಗಳ ಅನುಷ್ಠಾನಕ್ಕಾಗಿ ನಾವು ಕಾಯುತ್ತಿದ್ದೇವೆ” ಎಂದು ಕುಸ್ತಿಪಟುಗಳು ಹೇಳಿದ್ದಾರೆ.

ಬಿಜೆಪಿ ಸಂಸದ ಸಿಂಗ್ ವಿರುದ್ಧದ ಎಫ್‌ಐಆರ್‌ಗಳ ವಿವರಗಳು ಅವರು ಕನಿಷ್ಠ ಇಬ್ಬರು ಮಹಿಳಾ ಕುಸ್ತಿಪಟುಗಳಿಗೆ ವೃತ್ತಿಪರ ಸಹಾಯ ಮಾಡುವುದಾಗಿ ಲೈಂಗಿಕತೆಗೆ ಸಹಕರಿಸುವ ಬೇಡಿಕೆಯಿಟ್ಟಿದ್ದಾರೆ ಮತ್ತು ಅರ್ಧ ಡಜನ್‌ಗಿಂತಲೂ ಹೆಚ್ಚು ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತೋರಿಸುತ್ತದೆ.

ಆಪಾದನೆ ಮಾಡಿದ್ದ ದೂರುದಾರರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದ ಕಾರಣಕ್ಕೆ ದೆಹಲಿ ಪೊಲೀಸರು ಈ ಹಿಂದೆ ಸಿಂಗ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ ಜೂನ್ 15 ರಂದು, ”ಸಿಂಗ್ ವಿರುದ್ಧ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿ ಪ್ರಕರಣವನ್ನು ರದ್ದುಗೊಳಿಸಲು ಪೊಲೀಸರು ಶಿಫಾರಸು ಮಾಡಿದರು.

”ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂದೆಯ ಹೇಳಿಕೆಗಳ ಆಧಾರದ ಮೇಲೆ ಪೋಕ್ಸೋ ಪ್ರಕರಣದ ರದ್ದತಿ ವರದಿಯನ್ನು ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಜುಲೈ 4 ರಂದು ದೆಹಲಿ ನ್ಯಾಯಾಲಯವು ವಿಚಾರಣೆ ನಡೆಸಲಿದೆ.

ಜೂನ್ 18 ರಂದು, ಅಪ್ರಾಪ್ತ ಕ್ರೀಡಾಪಟು ತನ್ನ ಕುಟುಂಬಕ್ಕೆ ಬೆದರಿಕೆ ಹಾಕಿದ್ದರಿಂದ ತನ್ನ ಹೇಳಿಕೆಯನ್ನು ಬದಲಾಯಿಸಿದ್ದಾರೆ ಎಂದು ಮಲಿಕ್ ಹೇಳಿದ್ದರು.

”ಕುಸ್ತಿಯಲ್ಲಿ ತೊಡಗುವವರೆಲ್ಲರೂ ಬಡ ಕುಟುಂಬದಿಂದ ಬಂದವರು. ವ್ಯವಸ್ಥೆಯ ವಿರುದ್ಧ ಮತ್ತು ಅಂತಹ ಶಕ್ತಿಯುತ ವ್ಯಕ್ತಿಯ ವಿರುದ್ಧ ಮಾತನಾಡಲು ಅವರಿಗೆ ಸಾಧ್ಯವಿಲ್ಲ” ಎಂದು ಮಲಿಕ್ ಹೇಳಿದರು.

ದೆಹಲಿ ನ್ಯಾಯಾಲಯವು ಗುರುವಾರ ಸಿಂಗ್ ವಿರುದ್ಧದ ಪ್ರಕರಣವನ್ನು ಸಂಸದರು ಮತ್ತು ಶಾಸಕರ ಪ್ರಕರಣಗಳನ್ನು ವ್ಯವಹರಿಸುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ನ್ಯಾಯಾಲಯಕ್ಕೆ ವರ್ಗಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...