Homeಮುಖಪುಟಬ್ರಿಜ್‌ಭೂಷಣ್ ವಿರುದ್ಧದ ಹೋರಾಟವು ಇನ್ಮುಂದೆ ಬೀದಿಗಳಲ್ಲಿ ಅಲ್ಲ, ನ್ಯಾಯಾಲಯದಲ್ಲಿ ಮುಂದುವರಿಯುತ್ತದೆ: ಕುಸ್ತಿಪಟುಗಳು

ಬ್ರಿಜ್‌ಭೂಷಣ್ ವಿರುದ್ಧದ ಹೋರಾಟವು ಇನ್ಮುಂದೆ ಬೀದಿಗಳಲ್ಲಿ ಅಲ್ಲ, ನ್ಯಾಯಾಲಯದಲ್ಲಿ ಮುಂದುವರಿಯುತ್ತದೆ: ಕುಸ್ತಿಪಟುಗಳು

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಕ್ಕಾಗಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕುಸ್ತಿಪಟುಗಳು ತಮ್ಮ ಹೋರಾಟವನ್ನು ಮುಂದುವರೆಸಲಿದ್ದಾರೆ. ಈ ಬಾರಿಯ ಹೋರಾಟ ಬೀದಿಗಳಲ್ಲಿ ಅಲ್ಲ, ನ್ಯಾಯಾಲಯದಲ್ಲಿ ಎಂದು ಭಾನುವಾರ ಹೇಳಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ ಸಿಂಗ್‌ನನ್ನು ಬಂಧಿಸುವಂತೆ ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಎರಡು ಬಾರಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಭಾರತದ ಅಗ್ರ ಕುಸ್ತಿಪಟುಗಳು ಏಪ್ರಿಲ್‌ನಿಂದ ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದರು.

ಜೂನ್ 7ರಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾದ ಕುಸ್ತಿಪಟುಗಳು ಸಿಂಗ್ ವಿರುದ್ಧದ ತನಿಖೆಯನ್ನು ಜೂನ್ 15 ರೊಳಗೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಅದರಂತೆ ಜೂನ್ 15 ರಂದು, ದೆಹಲಿ ಪೊಲೀಸರು ಉತ್ತರ ಪ್ರದೇಶದ ಬಿಜೆಪಿ ಸಂಸದರೂ ಆಗಿರುವ ಕ್ರೀಡಾ ಆಡಳಿತ ಮಂಡಳಿಯ ಮಾಜಿ ಅಧ್ಯಕ್ಷ ಬ್ರಿಜ್ಭೂ ವಿರುದ್ಧ ಆರೋಪಪಟ್ಟಿ ಸಲ್ಲಿಸಿದರು.

ಮಹಿಳಾ ಕುಸ್ತಿಪಟುಗಳ ಲೈಂಗಿಕ ಕಿರುಕುಳದ ದೂರುಗಳ ವಿಷಯದಲ್ಲಿ ಸರ್ಕಾರವು ಮಾತುಕತೆಯ ಸಮಯದಲ್ಲಿ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ನೀಡಿದ ಭರವಸೆಗಳಿಗೆ ಅನುಗುಣವಾಗಿ, ದೆಹಲಿ ಪೊಲೀಸರು ಆರು ಮಹಿಳಾ ಕುಸ್ತಿಪಟುಗಳು ದಾಖಲಿಸಿದ ಎಫ್‌ಐಆರ್‌ಗಳ ಆಧಾರದ ಮೇಲೆ ತನಿಖೆಯನ್ನು ಪೂರ್ಣಗೊಳಿಸಿದರು ಮತ್ತು ಆರೋಪಪಟ್ಟಿ ಸಲ್ಲಿಸಿದರು. ”ನಮಗೆ ಈಗ ನ್ಯಾಯ ಸಿಗುವವರೆಗೂ ಈ ಹೋರಾಟವು ನ್ಯಾಯಾಲಯದಲ್ಲಿ ಮುಂದುವರಿಯುತ್ತದೆ ಬೀದಿಗಳಲ್ಲಿ ಅಲ್ಲ” ಎಂದು ಜೂನ್ 15ರಂದು ಫೋಗಟ್, ಪುನಿಯಾ ಮತ್ತು ಮಲಿಕ್ ಒಂದೇ ರೀತಿಯ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

”ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಹೊಸ ಅಧ್ಯಕ್ಷ ಮತ್ತು ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡಲು ಚುನಾವಣೆ ನಡೆಸುವ ಪ್ರಕ್ರಿಯೆಯು ಪ್ರಾರಂಭವಾಗಿದೆ. ಜುಲೈ 11ರಂದು ಚುನಾವಣೆಗಳು ನಡೆಯಲಿವೆ ಮತ್ತು ಈ ನಿಟ್ಟಿನಲ್ಲಿ ಸರ್ಕಾರದ ಭರವಸೆಗಳ ಅನುಷ್ಠಾನಕ್ಕಾಗಿ ನಾವು ಕಾಯುತ್ತಿದ್ದೇವೆ” ಎಂದು ಕುಸ್ತಿಪಟುಗಳು ಹೇಳಿದ್ದಾರೆ.

ಬಿಜೆಪಿ ಸಂಸದ ಸಿಂಗ್ ವಿರುದ್ಧದ ಎಫ್‌ಐಆರ್‌ಗಳ ವಿವರಗಳು ಅವರು ಕನಿಷ್ಠ ಇಬ್ಬರು ಮಹಿಳಾ ಕುಸ್ತಿಪಟುಗಳಿಗೆ ವೃತ್ತಿಪರ ಸಹಾಯ ಮಾಡುವುದಾಗಿ ಲೈಂಗಿಕತೆಗೆ ಸಹಕರಿಸುವ ಬೇಡಿಕೆಯಿಟ್ಟಿದ್ದಾರೆ ಮತ್ತು ಅರ್ಧ ಡಜನ್‌ಗಿಂತಲೂ ಹೆಚ್ಚು ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ತೋರಿಸುತ್ತದೆ.

ಆಪಾದನೆ ಮಾಡಿದ್ದ ದೂರುದಾರರಲ್ಲಿ ಒಬ್ಬರು ಅಪ್ರಾಪ್ತರಾಗಿದ್ದ ಕಾರಣಕ್ಕೆ ದೆಹಲಿ ಪೊಲೀಸರು ಈ ಹಿಂದೆ ಸಿಂಗ್ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ ಜೂನ್ 15 ರಂದು, ”ಸಿಂಗ್ ವಿರುದ್ಧ ಯಾವುದೇ ಪುರಾವೆಗಳಿಲ್ಲ” ಎಂದು ಹೇಳಿ ಪ್ರಕರಣವನ್ನು ರದ್ದುಗೊಳಿಸಲು ಪೊಲೀಸರು ಶಿಫಾರಸು ಮಾಡಿದರು.

”ಅಪ್ರಾಪ್ತ ಬಾಲಕಿ ಮತ್ತು ಆಕೆಯ ತಂದೆಯ ಹೇಳಿಕೆಗಳ ಆಧಾರದ ಮೇಲೆ ಪೋಕ್ಸೋ ಪ್ರಕರಣದ ರದ್ದತಿ ವರದಿಯನ್ನು ದಾಖಲಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಜುಲೈ 4 ರಂದು ದೆಹಲಿ ನ್ಯಾಯಾಲಯವು ವಿಚಾರಣೆ ನಡೆಸಲಿದೆ.

ಜೂನ್ 18 ರಂದು, ಅಪ್ರಾಪ್ತ ಕ್ರೀಡಾಪಟು ತನ್ನ ಕುಟುಂಬಕ್ಕೆ ಬೆದರಿಕೆ ಹಾಕಿದ್ದರಿಂದ ತನ್ನ ಹೇಳಿಕೆಯನ್ನು ಬದಲಾಯಿಸಿದ್ದಾರೆ ಎಂದು ಮಲಿಕ್ ಹೇಳಿದ್ದರು.

”ಕುಸ್ತಿಯಲ್ಲಿ ತೊಡಗುವವರೆಲ್ಲರೂ ಬಡ ಕುಟುಂಬದಿಂದ ಬಂದವರು. ವ್ಯವಸ್ಥೆಯ ವಿರುದ್ಧ ಮತ್ತು ಅಂತಹ ಶಕ್ತಿಯುತ ವ್ಯಕ್ತಿಯ ವಿರುದ್ಧ ಮಾತನಾಡಲು ಅವರಿಗೆ ಸಾಧ್ಯವಿಲ್ಲ” ಎಂದು ಮಲಿಕ್ ಹೇಳಿದರು.

ದೆಹಲಿ ನ್ಯಾಯಾಲಯವು ಗುರುವಾರ ಸಿಂಗ್ ವಿರುದ್ಧದ ಪ್ರಕರಣವನ್ನು ಸಂಸದರು ಮತ್ತು ಶಾಸಕರ ಪ್ರಕರಣಗಳನ್ನು ವ್ಯವಹರಿಸುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಹರ್ಜೀತ್ ಸಿಂಗ್ ಜಸ್ಪಾಲ್ ಅವರ ನ್ಯಾಯಾಲಯಕ್ಕೆ ವರ್ಗಾಯಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...