Homeಮುಖಪುಟಪ್ರಜಾಪ್ರಭುತ್ವ ನಾಶ ಮಾಡುತ್ತಿರುವ ಕೇಂದ್ರದ ವಿರುದ್ಧ ಹೋರಾಟ ಮುಂದುವರೆಯಲಿದೆ: 18 ಪ್ರತಿಪಕ್ಷಗಳ ನಿರ್ಧಾರ

ಪ್ರಜಾಪ್ರಭುತ್ವ ನಾಶ ಮಾಡುತ್ತಿರುವ ಕೇಂದ್ರದ ವಿರುದ್ಧ ಹೋರಾಟ ಮುಂದುವರೆಯಲಿದೆ: 18 ಪ್ರತಿಪಕ್ಷಗಳ ನಿರ್ಧಾರ

- Advertisement -
- Advertisement -

ಕೇಂದ್ರ ಸರ್ಕಾರದ ದಮನಕಾರಿ ನಡೆಯ ವಿರುದ್ಧ ಎಲ್ಲ ಪ್ರತಿಪಕ್ಷಗಳು ಒಂದಾಗುತ್ತಿವೆ. ಸೋಮವಾರ ರಾತ್ರಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮತ್ತು ರಾಜ್ಯಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಅವರ ನಿವಾಸದಲ್ಲೇ 18 ವಿರೋಧ ಪಕ್ಷಗಳ ನಾಯಕರು ಸೇರಿ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಜಾಪ್ರಭುತ್ವವನ್ನು ನಾಶ ಮಾಡುತ್ತಿದೆ. ಇದರ ವಿರುದ್ಧ ನಮ್ಮ ಹೋರಾಟ ಮುಂದುವರಿಸಲು ಸರ್ವಪಕ್ಷಗಳು ನಿರ್ಧರಿಸಿದವು.

ಡಿಎಂಕೆ, ಎನ್‌ಸಿಪಿ, ಜೆಡಿಯು, ಬಿಆರ್‌ಎಸ್, ಎಂಡಿಎಂಕೆ, ಕೆಸಿ, ಟಿಎಂಸಿ, ಆರ್‌ಎಸ್‌ಪಿ, ಆರ್‌ಜೆಡಿ, ಎನ್‌ಸಿ, ಐಯುಎಂಎಲ್, ವಿಸಿಕೆ ಎಸ್‌ಪಿ ಹಾಗೂ ಜೆಎಂಎಂ ಪಕ್ಷಗಳ ನಾಯಕರು ‌‌ಸಭೆಯಲ್ಲಿ ಹಾಜರಿದ್ದರು. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಹ ಸಭೆಯಲ್ಲಿ ಭಾಗಿಯಾಗಿದ್ದರು.

ಅದಾನಿ ಸಮೂಹದ ವಿರುದ್ಧ ಕೇಳಿಬಂದಿರುವ ವಂಚನೆ ಆರೋಪಗಳಿಗೆ ಸಂಬಂಧಿಸಿದಂತೆ ಜಂಟಿ ಸಂಸದೀಯ ಸಮಿತಿಯಿಂದ(ಜೆಪಿಸಿ) ತನಿಖೆ ಮತ್ತು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ಬಂದಿರುವ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯತ್ವದಿಂದ ರಾಹುಲ್ ಗಾಂಧಿ ಅನರ್ಹತೆ ಬಗ್ಗೆ ಚರ್ಚೆ ನಡೆಯಿತು. ಈ ಸಂಬಂಧ ಬಿಜೆಪಿ ವಿರುದ್ಧ ಹೋರಾಟ ಮುಂದುವರಿಸಲು ಪ್ರತಿಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಸಭೆಯಲ್ಲಿ ಟಿಎಂಸಿ ನಾಯಕರು ಪ್ರತ್ಯಕ್ಷ; ಕೇಂದ್ರದ ವಿರುದ್ಧ “ಕಪ್ಪು” ಬಟ್ಟೆ ಧರಿಸಿ ಪ್ರತಿಭಟನೆ

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್ ಅವರು, ”ಪ್ರಜಾಪ್ರಭುತ್ವವನ್ನು ನಾಶಪಡಿಸುತ್ತಿರುವ ಮತ್ತು ಎಲ್ಲಾ ಸಂಸ್ಥೆಗಳನ್ನು ಬುಡಮೇಲು ಮಾಡಿರುವ ಮೋದಿ ಆಡಳಿತದ ವಿರುದ್ಧ ತಮ್ಮ ಅಭಿಯಾನವನ್ನು ಒಂದೇ ಧ್ವನಿಯಲ್ಲಿ ಮುಂದುವರಿಸಲು ಖರ್ಗೆ ಅವರ ನಿವಾಸದಲ್ಲಿ ಸಭೆ ಸೇರಿದ್ದ 18 ವಿರೋಧ ಪಕ್ಷಗಳ ನಾಯಕರು ನಿರ್ಧರಿಸಿದರು” ಎಂದು ಹೇಳಿದರು.

”ಮೋದಿಯವರ ಬೆದರಿಕೆ ರಾಜಕೀಯವನ್ನು ಎದುರಿಸಲು ಅವರು ತಮ್ಮ ಸಾಮೂಹಿಕ ಸಂಕಲ್ಪವನ್ನು ವ್ಯಕ್ತಪಡಿಸಿದರು. ಈ ಸಂಕಲ್ಪವು ಈಗ ಸಂಸತ್ತಿನ ಒಳಗೂ ಹೊರಗೂ ಪ್ರತಿಫಲಿಸುತ್ತದೆ” ಎಂದು ಜೈರಾಮ್ ರಮೇಶ್ ಹೇಳಿದರು.

ಈ ಸಭೆಯಿಂದ ಶಿವಸೇನಾ ದೂರ ಉಳಿದಿತ್ತು ಏಕೆಂದರೆ, ರಾಹುಲ್ ಗಾಂಧಿ ಅವರು ವೀರ ಸಾವರ್ಕರ್ ಕುರಿತಂತೆ ನೀಡಿರುವ ಹೇಳಿಕೆಗೆ ಅಸಮಧಾನಗೊಂಡಿದ್ದು, ಪ್ರತಿಭಟನಾರ್ಥವಾಗಿ ಶಿವಸೇನಾ ಸಭೆಯಿಂದ ದೂರ ಉಳಿದಿತ್ತು.

ಅದಾನಿ ತನಿಖೆ ವಿಚಾರವಾಗಿ ಕೇಂದ್ರದ ವಿರುದ್ಧ ಟ್ವೀಟ್ ಮಲ್ಲಿಕಾರ್ಜುನ ಖರ್ಗೆ, ”ಒಬ್ಬ ವ್ಯಕ್ತಿಯನ್ನು ಉಳಿಸುವ ಉದ್ದೇಶದಿಂದ ಮೋದಿ, 140 ಕೋಟಿ ಜನರ ಹಿತಾಸಕ್ತಿಯನ್ನು ಬಲಿಕೊಟ್ಟಿದ್ದಾರೆ. ಮೋದಿಯ ಪರಮ ಆಪ್ತನನ್ನು ರಕ್ಷಿಸಲು ಬಿಜೆಪಿ, ಸಂಸತ್ತಿನಲ್ಲಿ ಜನರ ವಿಷಯಗಳ ಕುರಿತ ಚರ್ಚೆಗೆ ತಡೆಹಾಕಿದೆ. ತಪ್ಪೇನೂ ನಡೆದಿಲ್ಲವೆಂದಾದರೆ ಜಂಟಿ ಸದನ ಸಮಿತಿ ರಚನೆಗೆ ಏಕೆ ಹಿಂದೇಟು?” ಎಂದು ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...