Homeಕರ್ನಾಟಕಬರ ಪರಿಹಾರ| ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ, ನ್ಯಾಯಾಲಯದಲ್ಲೂ ಹೋರಾಟ ಮುಂದುವರೆಯಲಿದೆ: ಸಿಎಂ ಸಿದ್ದರಾಮಯ್ಯ

ಬರ ಪರಿಹಾರ| ರಾಜ್ಯಕ್ಕಾದ ಅನ್ಯಾಯದ ವಿರುದ್ಧ ಬೀದಿಗಳಲ್ಲಿ ಮಾತ್ರವಲ್ಲ, ನ್ಯಾಯಾಲಯದಲ್ಲೂ ಹೋರಾಟ ಮುಂದುವರೆಯಲಿದೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕರ್ನಾಟಕಕ್ಕೆ ನ್ಯಾಯ ಬದ್ಧವಾಗಿ ನೀಡಬೇಕಾಗಿರುವ ಬರ ಪರಿಹಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಕೂಡಾ ತಪ್ಪು ಮಾಹಿತಿ ನೀಡಿ ನ್ಯಾಯಾಲಯದ ಹಾದಿ ತಪ್ಪಿಸುವ ಪ್ರಯತ್ನ ಮಾಡಿರುವುದು ವಿಷಾದನೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನ್ಯಾಯ ಬದ್ಧವಾಗಿ ಕರ್ನಾಟಕಕ್ಕೆ ನೀಡಬೇಕಾಗಿರುವ ಬರಪರಿಹಾರವನ್ನು ನೀಡದೆ ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಸತಾಯಿಸುತ್ತಿರುವುದನ್ನು ಕಂಡು ಬೇರೆ ದಾರಿ ಕಾಣದೆ ನ್ಯಾಯ ಕೋರಿ ನಮ್ಮ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿತ್ತು. ಇಂದು ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ತುಷಾರ್ ಮೆಹ್ತಾ ಅವರು ಬರಪರಿಹಾರ ವಿಳಂಬಕ್ಕೆ ಕರ್ನಾಟಕ ಸರ್ಕಾರವೇ ಕಾರಣ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂಬ ಅಭಿಪ್ರಾಯ ಮೂಡುವಂತೆ ವಾದ ಮಾಡಿದ್ದಾರೆ. ಇದು ಖಂಡನೀಯ ಎಂದು ಸಿಎಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಬರ ಪರಿಹಾರಕ್ಕಾಗಿ ಅವರು (ಕರ್ನಾಟಕ) ನಮ್ಮನ್ನು (ಕೇಂದ್ರ ಸರ್ಕಾರ)ವನ್ನು ಸಂಪರ್ಕಿಸಬಹುದಿತ್ತು. ಈ ಅರ್ಜಿ ಸಲ್ಲಿಸಿರುವ ಸಮಯದ ಮಹತ್ವ ನಮಗೆ ಅರ್ಥವಾಗುತ್ತದೆ. ಈ ಅರ್ಜಿಗೆ ಪ್ರತಿಕ್ರಿಯೆ ಕೋರಿ ನಮಗೆ ನೋಟೀಸ್ ನೀಡಬಾರದು. ಹಾಗೆ ಮಾಡಿದರೆ ಅದು ಸುದ್ದಿಯಾಗುತ್ತದೆ” ಎಂದು ಅಡ್ವೋಕೇಟ್ ಜನರಲ್ ಕೇಂದ್ರ ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕಲು ಕರ್ನಾಟಕ ಸರ್ಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡಿದ್ದಾರೆ ಎಂದು ಸಿಎಂ ಕಿಡಿಕಾರಿದ್ದಾರೆ.

ಕಳೆದ ಎರಡು ಮೂರು ತಿಂಗಳ ಅವಧಿಯಲ್ಲಿ ನಾನು ಮತ್ತೆ ಮತ್ತೆ ಹೇಳಿರುವಂತೆ ‘ಬರಗಾಲಕ್ಕೆ ಪರಿಹಾರ ಕೋರಿ ನಮ್ಮ ಸರ್ಕಾರ ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೇ ನಷ್ಟದ ವಿವರ ಮತ್ತು ನಿರೀಕ್ಷಿತ ಪರಿಹಾರದ ಮೊತ್ತವನ್ನು ಒಳಗೊಂಡ ಮನವಿ ಪತ್ರವನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದೆವು. ಅದರ ನಂತರ ನಾನು ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹಸಚಿವ ಅಮಿತ್ ಶಾ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಮಾಡಿದ್ದೆವು. ನಮ್ಮ ಉಪಮುಖ್ಯಮಂತ್ರಿಗಳು ಪ್ರತ್ಯೇಕವಾಗಿ ಕೇಂದ್ರ ಹಣಕಾಸು ಸಚಿವರನ್ನು ಭೇಟಿ ಮಾಡಿದ್ದರು. ಹೀಗಿದ್ದರೂ ಕರ್ನಾಟಕ ಸರ್ಕಾರ ವಿಳಂಬವಾಗಿ ಮನವಿ ಸಲ್ಲಿಸಿದೆ ಎಂದು ಕೇಂದ್ರ ಹಣಕಾಸು ಸಚಿವರು ಮತ್ತು ಗೃಹ ಸಚಿವರು ಯಾವ ಮುಜುಗರ ಇಲ್ಲದೆ ಸುಳ್ಳು ಹೇಳುತ್ತಾ ಬಂದಿದ್ದಾರೆ. ಇಂದು ಇದೇ ಸುಳ್ಳನ್ನು ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯದ ಮುಂದೆಯೂ ಹೇಳಿದೆ ಎಂದಿದ್ದಾರೆ.

ಕೇಂದ್ರ ಸರ್ಕಾರದ ಅಡ್ವೋಕೇಟ್ ಜನರಲ್ ಅವರ ಹೇಳಿಕೆಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್ ಸದ್ಯಕ್ಕೆ ಪ್ರಕರಣವನ್ನು ಎರಡು ವಾರಗಳ ಕಾಲ ಮುಂದೂಡಿದೆ. ಮುಂದಿನ ವಿಚಾರಣೆಯೊಳಗೆ ಕೇಂದ್ರ ಸರ್ಕಾರ ತನ್ನ ಉತ್ತರವನ್ನು ಸಿದ್ಧಗೊಳಿಸಬೇಕಾಗಿದೆ ಎಂದು ತಿಳಿಸಿದರು.

ಬರ ಪರಿಹಾರ ನೀಡಿಕೆಯಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡಿರುವ ಅನ್ಯಾಯದ ವಿರುದ್ಧದ ನಮ್ಮ ಹೋರಾಟ ಬೀದಿಗಳಲ್ಲಿ ಮಾತ್ರವಲ್ಲ ನ್ಯಾಯಾಲಯದಲ್ಲಿಯೂ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಸುಳ್ಳುಗಳನ್ನು ಒಂದೊಂದಾಗಿ ಬಯಲುಗೊಳಿಸುತ್ತಾ ಅದರ ನಿಜಸ್ವರೂಪವನ್ನು ರಾಜ್ಯದ ಜನತೆಯ ಮುಂದಿಡುವ ಪ್ರಯತ್ನವನ್ನು ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಕೇಂದ್ರ ಮತ್ತು ರಾಜ್ಯಗಳ ನಡುವೆ ಸ್ಪರ್ಧೆ ಬೇಡ..’; ಕಳವಳ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್‌

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ರೋಹಿತ್ ವೇಮುಲಾ ಕಾಯ್ದೆ’ ಜಾರಿ: ಕೆ.ಸಿ ವೇಣುಗೋಪಾಲ್

0
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಸಂಸ್ಥೆಗಳಲ್ಲಿನ ಜಾತಿ ಮತ್ತು ಕೋಮು ದೌರ್ಜನ್ಯ ತಡೆಯಲು 'ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಭರವಸೆ ನೀಡಿದ್ದಾರೆ. ಸಾಮಾಜಿಕ ಮತ್ತು...