Homeಮುಖಪುಟ'ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..'; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ...

‘ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..’; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ರೈತರ ಹಕ್ಕುಗಳಿಗಾಗಿ ಕಳೆದ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಗಜಿತ್ ಸಿಂಗ್ ದಲ್ಲೆವಾಲ್, 15 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಅವರು, “ತಮ್ಮ ಬೇಡಿಕೆಗಳನ್ನು ಅಂಗೀಕರಿಸುವವರೆಗೆ ಅಥವಾ ನನ್ನ ಕೊನೆ ಉಸಿರೆಳೆಯುವವರೆಗೆ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಮಂಗಳವಾರ ಪುನರುಚ್ಚರಿಸಿದರು.

ಫೆಬ್ರವರಿ 13 ರಿಂದ ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹರಿಯಾಣದ ಗಡಿಭಾಗದಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಲ್ಲಿ ವೇದಿಕೆಯ ಮೇಲೆ ಹಾಸಿಗೆಯ ಮೇಲೆ ಮಲಗಿರುವಾಗಲೇ ಹೇಳಿಕೆ ನೀಡಿದ್ದಾರೆ. ಉಪವಾಸ ಮತ್ತು ವಯಸ್ಸಾದ ಕಾರಣದಿಂದ ದಲ್ಲೇವಾಲ್ ಪ್ರಮುಖ ಅಂಗಗಳು ಕ್ಷೀಣಿಸುತ್ತಿವೆ ಎಂದು ವೈದ್ಯರು ಹೇಳಿದರು. “ರೈತರ ಪ್ರತಿಭಟನೆಯ ಕರೆಗೆ ಇತರ ರಾಜ್ಯಗಳು ಸಹ ಸೇರಬೇಕು, ಈ ಹೋರಾಟವು ಒಗ್ಗಟ್ಟಿನಿಂದ ಹೋರಾಡಬೇಕು” ಎಂದು ದಲ್ಲೇವಾಲ್ ಮನವಿ ಮಾಡಿದ್ದಾರೆ.

“ನಾನು ಕ್ಷೇಮವಾಗಿದ್ದೇನೆ.. ನಾವು ಈ ಯುದ್ಧವನ್ನು ಒಗ್ಗಟ್ಟಿನಿಂದ ಗೆಲ್ಲಬೇಕು” ಎಂದು 70 ವರ್ಷದ ದಲ್ಲೆವಾಲ್ ಹೇಳಿದರು. ಅವರ ಆರೋಗ್ಯವನ್ನು 24 ಗಂಟೆಗಳ ಕಾಲ ವೈದ್ಯರ ತಂಡವು ಮೇಲ್ವಿಚಾರಣೆ ಮಾಡುತ್ತಿದೆ. ರೈತ ನಾಯಕನಿಗೆ ಹೃದಯ ಸ್ತಂಭನದ ಅಪಾಯವಿದೆ ಎಂದು ಈಗಾಗಲೇ ಎಚ್ಚರಿಸಿದ್ದಾರೆ.

29 ದಿನಗಳ ಉಪವಾಸ ಸತ್ಯಾಗ್ರಹದಿಂದಾಗಿ ಅವರ ರೋಗನಿರೋಧಕ ಶಕ್ತಿ ದಿನದಿಂದ ದಿನಕ್ಕೆ ದುರ್ಬಲವಾಗುತ್ತಿದ್ದು, ಸೋಂಕಿನ ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಅವರ ಪ್ರಮುಖ ಅಂಗಗಳಾದ ಯಕೃತ್ತು ಮತ್ತು ಮೂತ್ರಪಿಂಡಗಳು ದುರ್ಬಲಗೊಳ್ಳುತ್ತಿವೆ. ಸ್ಥಿತಿಯು ಹದಗೆಡುತ್ತಿದೆ” ಎಂದು ಖಾನೌರಿ ಗಡಿಯಲ್ಲಿ ದಲ್ಲೆವಾಲ್ ಅವರನ್ನು ಪರೀಕ್ಷಿಸಿದ ವೈದ್ಯರು ಹೇಳಿದರು. ಇತ್ತೀಚಿನ ಪರೀಕ್ಷಾ ವರದಿಯ ಪ್ರಕಾರ, ಅವರ ದೇಹದಲ್ಲಿ ಕೀಟೋನ್ ಮಟ್ಟಗಳು ಸಾಕಷ್ಟು ಹೆಚ್ಚಾಗಿದ್ದು, ಅವರು ದುರ್ಬಲರಾಗಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕೇಂದ್ರದಿಂದ ಕಾನೂನು ಖಾತ್ರಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನವೆಂಬರ್ 26 ರಂದು ಉಪವಾಸ ಸತ್ಯಾಗ್ರಹ ಆರಂಭಿಸಿದ 70 ವರ್ಷದ ದಲ್ಲೆವಾಲ್, “ರೈತರನ್ನು ಪ್ರತಿಭಟನಾ ಸ್ಥಳದಿಂದ ಕಳುಹಿಸುವುದಕ್ಕೆ ಸರ್ಕಾರಕ್ಕೆ ಅವಕಾಶ ನೀಡಬಾರದು” ಎಂದು ಹೇಳಿದರು.

“ಒಂದೋ ನಾವು ನಮ್ಮ ಬೇಡಿಕೆಗಳಿಗಾಗಿ ಹೋರಾಡುತ್ತೇವೆ ಅಥವಾ ನಾವು ಇಲ್ಲಿಯೇ ಸಾಯುತ್ತೇವೆ” ಎಂದು ಧ್ವನಿವರ್ಧಕದಲ್ಲಿ ಸಂಕ್ಷಿಪ್ತ ಭಾಷಣದಲ್ಲಿ ಅವರು ತಮ್ಮ ಕ್ಷೀಣವಾದ ಧ್ವನಿಯೊಂದಿಗೆ ಹೇಳಿದರು. “ಈಗ ದೊಡ್ಡಣ್ಣ (ಹರಿಯಾಣ) ಪ್ರತಿಭಟನೆಗೆ ಸೇರಿಕೊಂಡಿದ್ದಾರೆ” ಎಂದು ಹೇಳುವ ಮೂಲಕ ಆತ್ಮವಿಶ್ವಾಸವನ್ನು ಪ್ರತಿಧ್ವನಿಸಿದರು.

2020-21ರಲ್ಲಿ ಈಗ ರದ್ದಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನದ ಹಿಂದೆ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ದಲ್ಲೆವಾಲ್, ಪಂಜಾಬ್ ರೈತರ ಇತ್ತೀಚಿನ ‘ದೆಹಲಿ ಚಲೋ’ ಮೆರವಣಿಗೆಯ ಹಿಂದಿನ ಮುಖವೂ ಹೌದು.

ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣದ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ರೈತರು ರಾಷ್ಟ್ರೀಯ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ ನಂತರ ಬಿಡಾರ ಹೂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ, ಪಂಜಾಬ್ ಸರ್ಕಾರವು ಪಟಿಯಾಲ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿಯನ್ನು ಇಡೀ ದಿನದ ಮೇಲ್ವಿಚಾರಣೆಗಾಗಿ ಸ್ಥಾಪಿಸಿದೆ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಪ್ರತಿಭಟನಾ ಸ್ಥಳದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ.

ರೈತರ ಹೋರಾಟವನ್ನು ಬೆಂಬಲಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಠಮಾರಿತನವನ್ನು ಬಿಟ್ಟು ರೈತರೊಂದಿಗೆ ಮಾತನಾಡಬೇಕೆಂದು ಕೇಳಿಕೊಂಡರು.

“ಕೇಂದ್ರ ಸರ್ಕಾರ ತನ್ನ ಮೊಂಡುತನ ಬಿಟ್ಟು ರೈತ ಸಂಘಟನೆಗಳ ಜತೆ ಮಾತುಕತೆಗೆ ದಾರಿ ಮಾಡಿಕೊಡಬೇಕು.. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಮೋದಿಜೀ ತಡೆಯಲು ಸಾಧ್ಯವಾದರೆ, 200 ಕಿ.ಮೀ ದೂರದಲ್ಲಿ ಕೂತು ಅನ್ನದಾತರೊಂದಿಗೆ ಮಾತನಾಡಬಹುದಲ್ಲವೇ? ನೀವು ಕಾಯುತ್ತಿದ್ದೀರಾ..?” ಸಿಎಂ ಮಾನ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಚಳಿಗಾಲದ ಅಧಿವೇಶನ ರದ್ದುಗೊಳಿಸಿದ ಮಣಿಪುರ ಸರ್ಕಾರ; ‘ಸಂವಿಧಾನ ನಿಯಮ ಉಲ್ಲಂಘಿಸಿಲ್ಲ’ ಎಂದ ಕಾನೂನು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...