Homeಮುಖಪುಟ'ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..'; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ...

‘ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..’; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ರೈತರ ಹಕ್ಕುಗಳಿಗಾಗಿ ಕಳೆದ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಗಜಿತ್ ಸಿಂಗ್ ದಲ್ಲೆವಾಲ್, 15 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಅವರು, “ತಮ್ಮ ಬೇಡಿಕೆಗಳನ್ನು ಅಂಗೀಕರಿಸುವವರೆಗೆ ಅಥವಾ ನನ್ನ ಕೊನೆ ಉಸಿರೆಳೆಯುವವರೆಗೆ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಮಂಗಳವಾರ ಪುನರುಚ್ಚರಿಸಿದರು.

ಫೆಬ್ರವರಿ 13 ರಿಂದ ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹರಿಯಾಣದ ಗಡಿಭಾಗದಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಲ್ಲಿ ವೇದಿಕೆಯ ಮೇಲೆ ಹಾಸಿಗೆಯ ಮೇಲೆ ಮಲಗಿರುವಾಗಲೇ ಹೇಳಿಕೆ ನೀಡಿದ್ದಾರೆ. ಉಪವಾಸ ಮತ್ತು ವಯಸ್ಸಾದ ಕಾರಣದಿಂದ ದಲ್ಲೇವಾಲ್ ಪ್ರಮುಖ ಅಂಗಗಳು ಕ್ಷೀಣಿಸುತ್ತಿವೆ ಎಂದು ವೈದ್ಯರು ಹೇಳಿದರು. “ರೈತರ ಪ್ರತಿಭಟನೆಯ ಕರೆಗೆ ಇತರ ರಾಜ್ಯಗಳು ಸಹ ಸೇರಬೇಕು, ಈ ಹೋರಾಟವು ಒಗ್ಗಟ್ಟಿನಿಂದ ಹೋರಾಡಬೇಕು” ಎಂದು ದಲ್ಲೇವಾಲ್ ಮನವಿ ಮಾಡಿದ್ದಾರೆ.

“ನಾನು ಕ್ಷೇಮವಾಗಿದ್ದೇನೆ.. ನಾವು ಈ ಯುದ್ಧವನ್ನು ಒಗ್ಗಟ್ಟಿನಿಂದ ಗೆಲ್ಲಬೇಕು” ಎಂದು 70 ವರ್ಷದ ದಲ್ಲೆವಾಲ್ ಹೇಳಿದರು. ಅವರ ಆರೋಗ್ಯವನ್ನು 24 ಗಂಟೆಗಳ ಕಾಲ ವೈದ್ಯರ ತಂಡವು ಮೇಲ್ವಿಚಾರಣೆ ಮಾಡುತ್ತಿದೆ. ರೈತ ನಾಯಕನಿಗೆ ಹೃದಯ ಸ್ತಂಭನದ ಅಪಾಯವಿದೆ ಎಂದು ಈಗಾಗಲೇ ಎಚ್ಚರಿಸಿದ್ದಾರೆ.

29 ದಿನಗಳ ಉಪವಾಸ ಸತ್ಯಾಗ್ರಹದಿಂದಾಗಿ ಅವರ ರೋಗನಿರೋಧಕ ಶಕ್ತಿ ದಿನದಿಂದ ದಿನಕ್ಕೆ ದುರ್ಬಲವಾಗುತ್ತಿದ್ದು, ಸೋಂಕಿನ ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಅವರ ಪ್ರಮುಖ ಅಂಗಗಳಾದ ಯಕೃತ್ತು ಮತ್ತು ಮೂತ್ರಪಿಂಡಗಳು ದುರ್ಬಲಗೊಳ್ಳುತ್ತಿವೆ. ಸ್ಥಿತಿಯು ಹದಗೆಡುತ್ತಿದೆ” ಎಂದು ಖಾನೌರಿ ಗಡಿಯಲ್ಲಿ ದಲ್ಲೆವಾಲ್ ಅವರನ್ನು ಪರೀಕ್ಷಿಸಿದ ವೈದ್ಯರು ಹೇಳಿದರು. ಇತ್ತೀಚಿನ ಪರೀಕ್ಷಾ ವರದಿಯ ಪ್ರಕಾರ, ಅವರ ದೇಹದಲ್ಲಿ ಕೀಟೋನ್ ಮಟ್ಟಗಳು ಸಾಕಷ್ಟು ಹೆಚ್ಚಾಗಿದ್ದು, ಅವರು ದುರ್ಬಲರಾಗಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕೇಂದ್ರದಿಂದ ಕಾನೂನು ಖಾತ್ರಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನವೆಂಬರ್ 26 ರಂದು ಉಪವಾಸ ಸತ್ಯಾಗ್ರಹ ಆರಂಭಿಸಿದ 70 ವರ್ಷದ ದಲ್ಲೆವಾಲ್, “ರೈತರನ್ನು ಪ್ರತಿಭಟನಾ ಸ್ಥಳದಿಂದ ಕಳುಹಿಸುವುದಕ್ಕೆ ಸರ್ಕಾರಕ್ಕೆ ಅವಕಾಶ ನೀಡಬಾರದು” ಎಂದು ಹೇಳಿದರು.

“ಒಂದೋ ನಾವು ನಮ್ಮ ಬೇಡಿಕೆಗಳಿಗಾಗಿ ಹೋರಾಡುತ್ತೇವೆ ಅಥವಾ ನಾವು ಇಲ್ಲಿಯೇ ಸಾಯುತ್ತೇವೆ” ಎಂದು ಧ್ವನಿವರ್ಧಕದಲ್ಲಿ ಸಂಕ್ಷಿಪ್ತ ಭಾಷಣದಲ್ಲಿ ಅವರು ತಮ್ಮ ಕ್ಷೀಣವಾದ ಧ್ವನಿಯೊಂದಿಗೆ ಹೇಳಿದರು. “ಈಗ ದೊಡ್ಡಣ್ಣ (ಹರಿಯಾಣ) ಪ್ರತಿಭಟನೆಗೆ ಸೇರಿಕೊಂಡಿದ್ದಾರೆ” ಎಂದು ಹೇಳುವ ಮೂಲಕ ಆತ್ಮವಿಶ್ವಾಸವನ್ನು ಪ್ರತಿಧ್ವನಿಸಿದರು.

2020-21ರಲ್ಲಿ ಈಗ ರದ್ದಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನದ ಹಿಂದೆ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ದಲ್ಲೆವಾಲ್, ಪಂಜಾಬ್ ರೈತರ ಇತ್ತೀಚಿನ ‘ದೆಹಲಿ ಚಲೋ’ ಮೆರವಣಿಗೆಯ ಹಿಂದಿನ ಮುಖವೂ ಹೌದು.

ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣದ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ರೈತರು ರಾಷ್ಟ್ರೀಯ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ ನಂತರ ಬಿಡಾರ ಹೂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ, ಪಂಜಾಬ್ ಸರ್ಕಾರವು ಪಟಿಯಾಲ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿಯನ್ನು ಇಡೀ ದಿನದ ಮೇಲ್ವಿಚಾರಣೆಗಾಗಿ ಸ್ಥಾಪಿಸಿದೆ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಪ್ರತಿಭಟನಾ ಸ್ಥಳದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ.

ರೈತರ ಹೋರಾಟವನ್ನು ಬೆಂಬಲಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಠಮಾರಿತನವನ್ನು ಬಿಟ್ಟು ರೈತರೊಂದಿಗೆ ಮಾತನಾಡಬೇಕೆಂದು ಕೇಳಿಕೊಂಡರು.

“ಕೇಂದ್ರ ಸರ್ಕಾರ ತನ್ನ ಮೊಂಡುತನ ಬಿಟ್ಟು ರೈತ ಸಂಘಟನೆಗಳ ಜತೆ ಮಾತುಕತೆಗೆ ದಾರಿ ಮಾಡಿಕೊಡಬೇಕು.. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಮೋದಿಜೀ ತಡೆಯಲು ಸಾಧ್ಯವಾದರೆ, 200 ಕಿ.ಮೀ ದೂರದಲ್ಲಿ ಕೂತು ಅನ್ನದಾತರೊಂದಿಗೆ ಮಾತನಾಡಬಹುದಲ್ಲವೇ? ನೀವು ಕಾಯುತ್ತಿದ್ದೀರಾ..?” ಸಿಎಂ ಮಾನ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಚಳಿಗಾಲದ ಅಧಿವೇಶನ ರದ್ದುಗೊಳಿಸಿದ ಮಣಿಪುರ ಸರ್ಕಾರ; ‘ಸಂವಿಧಾನ ನಿಯಮ ಉಲ್ಲಂಘಿಸಿಲ್ಲ’ ಎಂದ ಕಾನೂನು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...