Homeಮುಖಪುಟ'ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..'; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ...

‘ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..’; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ರೈತರ ಹಕ್ಕುಗಳಿಗಾಗಿ ಕಳೆದ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಗಜಿತ್ ಸಿಂಗ್ ದಲ್ಲೆವಾಲ್, 15 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಅವರು, “ತಮ್ಮ ಬೇಡಿಕೆಗಳನ್ನು ಅಂಗೀಕರಿಸುವವರೆಗೆ ಅಥವಾ ನನ್ನ ಕೊನೆ ಉಸಿರೆಳೆಯುವವರೆಗೆ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಮಂಗಳವಾರ ಪುನರುಚ್ಚರಿಸಿದರು.

ಫೆಬ್ರವರಿ 13 ರಿಂದ ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹರಿಯಾಣದ ಗಡಿಭಾಗದಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಲ್ಲಿ ವೇದಿಕೆಯ ಮೇಲೆ ಹಾಸಿಗೆಯ ಮೇಲೆ ಮಲಗಿರುವಾಗಲೇ ಹೇಳಿಕೆ ನೀಡಿದ್ದಾರೆ. ಉಪವಾಸ ಮತ್ತು ವಯಸ್ಸಾದ ಕಾರಣದಿಂದ ದಲ್ಲೇವಾಲ್ ಪ್ರಮುಖ ಅಂಗಗಳು ಕ್ಷೀಣಿಸುತ್ತಿವೆ ಎಂದು ವೈದ್ಯರು ಹೇಳಿದರು. “ರೈತರ ಪ್ರತಿಭಟನೆಯ ಕರೆಗೆ ಇತರ ರಾಜ್ಯಗಳು ಸಹ ಸೇರಬೇಕು, ಈ ಹೋರಾಟವು ಒಗ್ಗಟ್ಟಿನಿಂದ ಹೋರಾಡಬೇಕು” ಎಂದು ದಲ್ಲೇವಾಲ್ ಮನವಿ ಮಾಡಿದ್ದಾರೆ.

“ನಾನು ಕ್ಷೇಮವಾಗಿದ್ದೇನೆ.. ನಾವು ಈ ಯುದ್ಧವನ್ನು ಒಗ್ಗಟ್ಟಿನಿಂದ ಗೆಲ್ಲಬೇಕು” ಎಂದು 70 ವರ್ಷದ ದಲ್ಲೆವಾಲ್ ಹೇಳಿದರು. ಅವರ ಆರೋಗ್ಯವನ್ನು 24 ಗಂಟೆಗಳ ಕಾಲ ವೈದ್ಯರ ತಂಡವು ಮೇಲ್ವಿಚಾರಣೆ ಮಾಡುತ್ತಿದೆ. ರೈತ ನಾಯಕನಿಗೆ ಹೃದಯ ಸ್ತಂಭನದ ಅಪಾಯವಿದೆ ಎಂದು ಈಗಾಗಲೇ ಎಚ್ಚರಿಸಿದ್ದಾರೆ.

29 ದಿನಗಳ ಉಪವಾಸ ಸತ್ಯಾಗ್ರಹದಿಂದಾಗಿ ಅವರ ರೋಗನಿರೋಧಕ ಶಕ್ತಿ ದಿನದಿಂದ ದಿನಕ್ಕೆ ದುರ್ಬಲವಾಗುತ್ತಿದ್ದು, ಸೋಂಕಿನ ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಅವರ ಪ್ರಮುಖ ಅಂಗಗಳಾದ ಯಕೃತ್ತು ಮತ್ತು ಮೂತ್ರಪಿಂಡಗಳು ದುರ್ಬಲಗೊಳ್ಳುತ್ತಿವೆ. ಸ್ಥಿತಿಯು ಹದಗೆಡುತ್ತಿದೆ” ಎಂದು ಖಾನೌರಿ ಗಡಿಯಲ್ಲಿ ದಲ್ಲೆವಾಲ್ ಅವರನ್ನು ಪರೀಕ್ಷಿಸಿದ ವೈದ್ಯರು ಹೇಳಿದರು. ಇತ್ತೀಚಿನ ಪರೀಕ್ಷಾ ವರದಿಯ ಪ್ರಕಾರ, ಅವರ ದೇಹದಲ್ಲಿ ಕೀಟೋನ್ ಮಟ್ಟಗಳು ಸಾಕಷ್ಟು ಹೆಚ್ಚಾಗಿದ್ದು, ಅವರು ದುರ್ಬಲರಾಗಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕೇಂದ್ರದಿಂದ ಕಾನೂನು ಖಾತ್ರಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನವೆಂಬರ್ 26 ರಂದು ಉಪವಾಸ ಸತ್ಯಾಗ್ರಹ ಆರಂಭಿಸಿದ 70 ವರ್ಷದ ದಲ್ಲೆವಾಲ್, “ರೈತರನ್ನು ಪ್ರತಿಭಟನಾ ಸ್ಥಳದಿಂದ ಕಳುಹಿಸುವುದಕ್ಕೆ ಸರ್ಕಾರಕ್ಕೆ ಅವಕಾಶ ನೀಡಬಾರದು” ಎಂದು ಹೇಳಿದರು.

“ಒಂದೋ ನಾವು ನಮ್ಮ ಬೇಡಿಕೆಗಳಿಗಾಗಿ ಹೋರಾಡುತ್ತೇವೆ ಅಥವಾ ನಾವು ಇಲ್ಲಿಯೇ ಸಾಯುತ್ತೇವೆ” ಎಂದು ಧ್ವನಿವರ್ಧಕದಲ್ಲಿ ಸಂಕ್ಷಿಪ್ತ ಭಾಷಣದಲ್ಲಿ ಅವರು ತಮ್ಮ ಕ್ಷೀಣವಾದ ಧ್ವನಿಯೊಂದಿಗೆ ಹೇಳಿದರು. “ಈಗ ದೊಡ್ಡಣ್ಣ (ಹರಿಯಾಣ) ಪ್ರತಿಭಟನೆಗೆ ಸೇರಿಕೊಂಡಿದ್ದಾರೆ” ಎಂದು ಹೇಳುವ ಮೂಲಕ ಆತ್ಮವಿಶ್ವಾಸವನ್ನು ಪ್ರತಿಧ್ವನಿಸಿದರು.

2020-21ರಲ್ಲಿ ಈಗ ರದ್ದಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನದ ಹಿಂದೆ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ದಲ್ಲೆವಾಲ್, ಪಂಜಾಬ್ ರೈತರ ಇತ್ತೀಚಿನ ‘ದೆಹಲಿ ಚಲೋ’ ಮೆರವಣಿಗೆಯ ಹಿಂದಿನ ಮುಖವೂ ಹೌದು.

ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣದ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ರೈತರು ರಾಷ್ಟ್ರೀಯ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ ನಂತರ ಬಿಡಾರ ಹೂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ, ಪಂಜಾಬ್ ಸರ್ಕಾರವು ಪಟಿಯಾಲ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿಯನ್ನು ಇಡೀ ದಿನದ ಮೇಲ್ವಿಚಾರಣೆಗಾಗಿ ಸ್ಥಾಪಿಸಿದೆ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಪ್ರತಿಭಟನಾ ಸ್ಥಳದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ.

ರೈತರ ಹೋರಾಟವನ್ನು ಬೆಂಬಲಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಠಮಾರಿತನವನ್ನು ಬಿಟ್ಟು ರೈತರೊಂದಿಗೆ ಮಾತನಾಡಬೇಕೆಂದು ಕೇಳಿಕೊಂಡರು.

“ಕೇಂದ್ರ ಸರ್ಕಾರ ತನ್ನ ಮೊಂಡುತನ ಬಿಟ್ಟು ರೈತ ಸಂಘಟನೆಗಳ ಜತೆ ಮಾತುಕತೆಗೆ ದಾರಿ ಮಾಡಿಕೊಡಬೇಕು.. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಮೋದಿಜೀ ತಡೆಯಲು ಸಾಧ್ಯವಾದರೆ, 200 ಕಿ.ಮೀ ದೂರದಲ್ಲಿ ಕೂತು ಅನ್ನದಾತರೊಂದಿಗೆ ಮಾತನಾಡಬಹುದಲ್ಲವೇ? ನೀವು ಕಾಯುತ್ತಿದ್ದೀರಾ..?” ಸಿಎಂ ಮಾನ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಚಳಿಗಾಲದ ಅಧಿವೇಶನ ರದ್ದುಗೊಳಿಸಿದ ಮಣಿಪುರ ಸರ್ಕಾರ; ‘ಸಂವಿಧಾನ ನಿಯಮ ಉಲ್ಲಂಘಿಸಿಲ್ಲ’ ಎಂದ ಕಾನೂನು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...