Homeಮುಖಪುಟ'ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..'; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ...

‘ಕೊನೆಯ ಉಸಿರು ಇರುವವರೆಗೂ ಹೋರಾಟ ಇರುತ್ತದೆ..’; 29ನೇ ದಿನಕ್ಕೆ ಕಾಲಿಟ್ಟ ರೈತ ನಾಯಕ ದಲ್ಲೆವಾಲ್ ಉಪವಾಸ ಸತ್ಯಾಗ್ರಹ

- Advertisement -
- Advertisement -

ರೈತರ ಹಕ್ಕುಗಳಿಗಾಗಿ ಕಳೆದ 29 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಜಗಜಿತ್ ಸಿಂಗ್ ದಲ್ಲೆವಾಲ್, 15 ಕೆಜಿ ತೂಕ ಇಳಿಸಿಕೊಂಡಿದ್ದಾರೆ. ಅವರು, “ತಮ್ಮ ಬೇಡಿಕೆಗಳನ್ನು ಅಂಗೀಕರಿಸುವವರೆಗೆ ಅಥವಾ ನನ್ನ ಕೊನೆ ಉಸಿರೆಳೆಯುವವರೆಗೆ ಹೋರಾಟವನ್ನು ಮುಂದುವರಿಸುತ್ತೇನೆ” ಎಂದು ಮಂಗಳವಾರ ಪುನರುಚ್ಚರಿಸಿದರು.

ಫೆಬ್ರವರಿ 13 ರಿಂದ ರೈತರು ಧರಣಿ ಸತ್ಯಾಗ್ರಹ ನಡೆಸುತ್ತಿರುವ ಹರಿಯಾಣದ ಗಡಿಭಾಗದಲ್ಲಿರುವ ಖಾನೌರಿ ಪ್ರತಿಭಟನಾ ಸ್ಥಳದಲ್ಲಿ ವೇದಿಕೆಯ ಮೇಲೆ ಹಾಸಿಗೆಯ ಮೇಲೆ ಮಲಗಿರುವಾಗಲೇ ಹೇಳಿಕೆ ನೀಡಿದ್ದಾರೆ. ಉಪವಾಸ ಮತ್ತು ವಯಸ್ಸಾದ ಕಾರಣದಿಂದ ದಲ್ಲೇವಾಲ್ ಪ್ರಮುಖ ಅಂಗಗಳು ಕ್ಷೀಣಿಸುತ್ತಿವೆ ಎಂದು ವೈದ್ಯರು ಹೇಳಿದರು. “ರೈತರ ಪ್ರತಿಭಟನೆಯ ಕರೆಗೆ ಇತರ ರಾಜ್ಯಗಳು ಸಹ ಸೇರಬೇಕು, ಈ ಹೋರಾಟವು ಒಗ್ಗಟ್ಟಿನಿಂದ ಹೋರಾಡಬೇಕು” ಎಂದು ದಲ್ಲೇವಾಲ್ ಮನವಿ ಮಾಡಿದ್ದಾರೆ.

“ನಾನು ಕ್ಷೇಮವಾಗಿದ್ದೇನೆ.. ನಾವು ಈ ಯುದ್ಧವನ್ನು ಒಗ್ಗಟ್ಟಿನಿಂದ ಗೆಲ್ಲಬೇಕು” ಎಂದು 70 ವರ್ಷದ ದಲ್ಲೆವಾಲ್ ಹೇಳಿದರು. ಅವರ ಆರೋಗ್ಯವನ್ನು 24 ಗಂಟೆಗಳ ಕಾಲ ವೈದ್ಯರ ತಂಡವು ಮೇಲ್ವಿಚಾರಣೆ ಮಾಡುತ್ತಿದೆ. ರೈತ ನಾಯಕನಿಗೆ ಹೃದಯ ಸ್ತಂಭನದ ಅಪಾಯವಿದೆ ಎಂದು ಈಗಾಗಲೇ ಎಚ್ಚರಿಸಿದ್ದಾರೆ.

29 ದಿನಗಳ ಉಪವಾಸ ಸತ್ಯಾಗ್ರಹದಿಂದಾಗಿ ಅವರ ರೋಗನಿರೋಧಕ ಶಕ್ತಿ ದಿನದಿಂದ ದಿನಕ್ಕೆ ದುರ್ಬಲವಾಗುತ್ತಿದ್ದು, ಸೋಂಕಿನ ಅಪಾಯವನ್ನು ಎದುರಿಸುತ್ತಿದ್ದಾರೆ ಎಂದು ವೈದ್ಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

“ಅವರ ಪ್ರಮುಖ ಅಂಗಗಳಾದ ಯಕೃತ್ತು ಮತ್ತು ಮೂತ್ರಪಿಂಡಗಳು ದುರ್ಬಲಗೊಳ್ಳುತ್ತಿವೆ. ಸ್ಥಿತಿಯು ಹದಗೆಡುತ್ತಿದೆ” ಎಂದು ಖಾನೌರಿ ಗಡಿಯಲ್ಲಿ ದಲ್ಲೆವಾಲ್ ಅವರನ್ನು ಪರೀಕ್ಷಿಸಿದ ವೈದ್ಯರು ಹೇಳಿದರು. ಇತ್ತೀಚಿನ ಪರೀಕ್ಷಾ ವರದಿಯ ಪ್ರಕಾರ, ಅವರ ದೇಹದಲ್ಲಿ ಕೀಟೋನ್ ಮಟ್ಟಗಳು ಸಾಕಷ್ಟು ಹೆಚ್ಚಾಗಿದ್ದು, ಅವರು ದುರ್ಬಲರಾಗಿದ್ದಾರೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕೇಂದ್ರದಿಂದ ಕಾನೂನು ಖಾತ್ರಿಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ನವೆಂಬರ್ 26 ರಂದು ಉಪವಾಸ ಸತ್ಯಾಗ್ರಹ ಆರಂಭಿಸಿದ 70 ವರ್ಷದ ದಲ್ಲೆವಾಲ್, “ರೈತರನ್ನು ಪ್ರತಿಭಟನಾ ಸ್ಥಳದಿಂದ ಕಳುಹಿಸುವುದಕ್ಕೆ ಸರ್ಕಾರಕ್ಕೆ ಅವಕಾಶ ನೀಡಬಾರದು” ಎಂದು ಹೇಳಿದರು.

“ಒಂದೋ ನಾವು ನಮ್ಮ ಬೇಡಿಕೆಗಳಿಗಾಗಿ ಹೋರಾಡುತ್ತೇವೆ ಅಥವಾ ನಾವು ಇಲ್ಲಿಯೇ ಸಾಯುತ್ತೇವೆ” ಎಂದು ಧ್ವನಿವರ್ಧಕದಲ್ಲಿ ಸಂಕ್ಷಿಪ್ತ ಭಾಷಣದಲ್ಲಿ ಅವರು ತಮ್ಮ ಕ್ಷೀಣವಾದ ಧ್ವನಿಯೊಂದಿಗೆ ಹೇಳಿದರು. “ಈಗ ದೊಡ್ಡಣ್ಣ (ಹರಿಯಾಣ) ಪ್ರತಿಭಟನೆಗೆ ಸೇರಿಕೊಂಡಿದ್ದಾರೆ” ಎಂದು ಹೇಳುವ ಮೂಲಕ ಆತ್ಮವಿಶ್ವಾಸವನ್ನು ಪ್ರತಿಧ್ವನಿಸಿದರು.

2020-21ರಲ್ಲಿ ಈಗ ರದ್ದಾದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ರೈತರ ಆಂದೋಲನದ ಹಿಂದೆ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ದಲ್ಲೆವಾಲ್, ಪಂಜಾಬ್ ರೈತರ ಇತ್ತೀಚಿನ ‘ದೆಹಲಿ ಚಲೋ’ ಮೆರವಣಿಗೆಯ ಹಿಂದಿನ ಮುಖವೂ ಹೌದು.

ಫೆಬ್ರವರಿ 13 ರಿಂದ ಪಂಜಾಬ್ ಮತ್ತು ಹರಿಯಾಣದ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ರೈತರು ರಾಷ್ಟ್ರೀಯ ರಾಜಧಾನಿಗೆ ತಮ್ಮ ಮೆರವಣಿಗೆಯನ್ನು ಭದ್ರತಾ ಪಡೆಗಳು ವಿಫಲಗೊಳಿಸಿದ ನಂತರ ಬಿಡಾರ ಹೂಡಿದ್ದಾರೆ.

ಸುಪ್ರೀಂ ಕೋರ್ಟ್‌ನ ಆದೇಶದ ಮೇರೆಗೆ, ಪಂಜಾಬ್ ಸರ್ಕಾರವು ಪಟಿಯಾಲ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಹಿರಿಯ ವೈದ್ಯರನ್ನು ಒಳಗೊಂಡ ವೈದ್ಯಕೀಯ ಮಂಡಳಿಯನ್ನು ಇಡೀ ದಿನದ ಮೇಲ್ವಿಚಾರಣೆಗಾಗಿ ಸ್ಥಾಪಿಸಿದೆ. ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಪ್ರತಿಭಟನಾ ಸ್ಥಳದಲ್ಲಿ ತಾತ್ಕಾಲಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗಿದೆ.

ರೈತರ ಹೋರಾಟವನ್ನು ಬೆಂಬಲಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಹಠಮಾರಿತನವನ್ನು ಬಿಟ್ಟು ರೈತರೊಂದಿಗೆ ಮಾತನಾಡಬೇಕೆಂದು ಕೇಳಿಕೊಂಡರು.

“ಕೇಂದ್ರ ಸರ್ಕಾರ ತನ್ನ ಮೊಂಡುತನ ಬಿಟ್ಟು ರೈತ ಸಂಘಟನೆಗಳ ಜತೆ ಮಾತುಕತೆಗೆ ದಾರಿ ಮಾಡಿಕೊಡಬೇಕು.. ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧವನ್ನು ಮೋದಿಜೀ ತಡೆಯಲು ಸಾಧ್ಯವಾದರೆ, 200 ಕಿ.ಮೀ ದೂರದಲ್ಲಿ ಕೂತು ಅನ್ನದಾತರೊಂದಿಗೆ ಮಾತನಾಡಬಹುದಲ್ಲವೇ? ನೀವು ಕಾಯುತ್ತಿದ್ದೀರಾ..?” ಸಿಎಂ ಮಾನ್ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಇದನ್ನೂ ಓದಿ; ಚಳಿಗಾಲದ ಅಧಿವೇಶನ ರದ್ದುಗೊಳಿಸಿದ ಮಣಿಪುರ ಸರ್ಕಾರ; ‘ಸಂವಿಧಾನ ನಿಯಮ ಉಲ್ಲಂಘಿಸಿಲ್ಲ’ ಎಂದ ಕಾನೂನು ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...