Homeಕರ್ನಾಟಕಬ್ರಿಜ್ ಭೂಷಣ್‌ನನ್ನು ಬಂಧಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ; ಅಗ್ರ ಕುಸ್ತಿಪಟುಗಳ ಪಟ್ಟು

ಬ್ರಿಜ್ ಭೂಷಣ್‌ನನ್ನು ಬಂಧಿಸುವವರೆಗೂ ಹೋರಾಟ ನಿಲ್ಲಿಸುವುದಿಲ್ಲ; ಅಗ್ರ ಕುಸ್ತಿಪಟುಗಳ ಪಟ್ಟು

- Advertisement -
- Advertisement -

ಹಲವಾರು ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ತಮ್ಮ ಧರಣಿ ಸತ್ಯಾಗ್ರಹವನ್ನು ಮುಂದುವರಿಸುವುದಾಗಿ ಭಾರತದ ಅಗ್ರ ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.

ಒಲಿಂಪಿಕ್ ಪದಕ ವಿಜೇತರಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತ ವಿನೇಶ್ ಫೋಗಟ್ ಸೇರಿದಂತೆ ಹಲವಾರು ಕ್ರೀಡಾಪಟುಗಳು ದೆಹಲಿಯ ಜಂತರ್ ಮಂತರ್‌ನಲ್ಲಿ ಬ್ರಿಜ್‌ ಭೂಷಣ್‌ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಸುಪ್ರೀಂ ಕೋರ್ಟ್ ಪ್ರಕರಣವನ್ನು ಆಲಿಸಿದ ಕೆಲವು ಗಂಟೆಗಳ ನಂತರ ಫೆಡರೇಶನ್ ಮುಖ್ಯಸ್ಥರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ. ಸುಮಾರು ನಾಲ್ಕು ತಿಂಗಳ ನಂತರ ಕುಸ್ತಿಪಟುಗಳು ಆರೋಪಗಳನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ.

“ಇದು ವಿಜಯದತ್ತ ನಮ್ಮ ಮೊದಲ ಹೆಜ್ಜೆಯಾಗಿದೆ, ಆದರೆ ಪ್ರತಿಭಟನೆಗಳು ಮುಂದುವರಿಯುತ್ತವೆ” ಎಂದು ಮಲಿಕ್ ಹೇಳಿದ್ದಾರೆ. “ನಾವು ಸುದೀರ್ಘ ಯುದ್ಧಕ್ಕಾಗಿ ಇಲ್ಲಿದ್ದೇವೆ. ಆಂತರಿಕ ಸಮಾಲೋಚನೆಯ ನಂತರ ನಾವು ನಮ್ಮ ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

“ದೆಹಲಿ ಪೊಲೀಸರ ಮೇಲೆ ಕುಸ್ತಿಪಟುಗಳು ನಂಬಿಕೆ ಕಳೆದುಕೊಂಡಿದ್ದಾರೆ. ಏಕೆಂದರೆ ಅವರು ಆರು ದಿನಗಳನ್ನು ತೆಗೆದುಕೊಂಡರು ಮತ್ತು ಕ್ರಮ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಮಧ್ಯಸ್ಥಿಕೆ ವಹಿಸಬೇಕಾಯಿತು” ಎಂದು ಫೋಗಟ್ ಹೇಳಿದ್ದಾರೆ.

“ನಾವು ಈಗಾಗಲೇ ಸಾಕಷ್ಟು ಪುರಾವೆಗಳನ್ನು ನೀಡಿದ್ದೇವೆ ಮತ್ತು ಬೇರೆ ಏನಾದರೂ ಅಗತ್ಯವಿದ್ದರೆ, ನಾವು ಅದನ್ನು ಸುಪ್ರೀಂ ಕೋರ್ಟ್‌ಗೆ ಪ್ರಸ್ತುತಪಡಿಸುತ್ತೇವೆಯೇ ಹೊರತು ದೆಹಲಿ ಪೊಲೀಸರಿಗೆ ಅಲ್ಲ. ಇದು ಎಫ್‌ಐಆರ್ ದಾಖಲಿಸುವ ಹೋರಾಟವಲ್ಲ. ಈಗಾಗಲೇ 85 ಪ್ರಕರಣಗಳಿರುವ ವ್ಯಕ್ತಿಯ ವಿರುದ್ಧದ ಹೋರಾಟವಾಗಿದೆ. ನಾವು ಭ್ರಷ್ಟರನ್ನು ಕುಸ್ತಿಯಿಂದ ಮುಕ್ತಗೊಳಿಸಬೇಕಾಗಿದೆ” ಎಂದಿದ್ದಾರೆ.

ಬ್ರಿಜ್‌ ಭೂಷಣ್‌ ಸಿಂಗ್ ಅವರನ್ನು ಎಲ್ಲಾ ಸ್ಥಾನಗಳಿಂದ ವಜಾಗೊಳಿಸುವಂತೆ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

“ಕಂಬಿ ಹಿಂದೆ ಹಾಕುವವರೆಗೂ ತಮ್ಮ ಹುದ್ದೆಯನ್ನು ದುರುಪಯೋಗಪಡಿಸಿಕೊಳ್ಳುವುದನ್ನು ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥರು ಮುಂದುವರಿಸುತ್ತಾರೆ” ಎಂದು ಪುನಿಯಾ ತಿಳಿಸಿದ್ದಾರೆ.

“ಪ್ರತಿಭಟಿಸುವ ನಮಗೆಲ್ಲರಿಗೂ ಭದ್ರತೆ ಬೇಕು, ದೂರುದಾರರಿಗೆ ಭದ್ರತೆ ಬೇಕು. ಏಕೆಂದರೆ ನಮಗೆ ಯಾರು ಹಾನಿ ಮಾಡಲು ಬಯಸುತ್ತಾರೆ ಎಂದು ನಿಮಗೆ ತಿಳಿದಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಅಪ್ರಾಪ್ತ ವಯಸ್ಕ ಸೇರಿದಂತೆ ಏಳು ಮಹಿಳಾ ಕುಸ್ತಿಪಟುಗಳು ಏಪ್ರಿಲ್ 21ರಂದು ದೆಹಲಿಯಲ್ಲಿ ಆತನ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸಿದ್ದಾರೆ.

ಅಪ್ರಾಪ್ತ ಕುಸ್ತಿಪಟು ಮಾಡಿದ ಆರೋಪಗಳಿಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಜೊತೆಗೆ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೋ) ಅಡಿಯಲ್ಲಿ ಮೊದಲ ಪ್ರಕರಣ ದಾಖಲಿಸಲಾಗಿದೆ. ವಯಸ್ಕ ಕುಸ್ತಿಪಟುಗಳು ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ.

ಉತ್ತರ ಪ್ರದೇಶದ ಕೈಸರ್‌ಗಂಜ್‌ನಿಂದ ಆರು ಬಾರಿ ಬಿಜೆಪಿ ಸಂಸದರಾಗಿ ಗೆದ್ದಿರುವ, ಆರೋಪಿ ಬ್ರಿಜ್‌ ಭೂಷಣ್ ಸಿಂಗ್ ಪ್ರತಿಕ್ರಿಯಿಸಿದ್ದು, ಪೊಲೀಸರೊಂದಿಗೆ ಸಹಕರಿಸಲು ಸಿದ್ಧ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಥ್ಲೀಟ್‌ಗಳು ತಮ್ಮ ಪ್ರತಿಭಟನೆಯನ್ನು ಪುನರಾರಂಭಿಸುವ ಮೊದಲು ಆರೋಪಗಳ ತನಿಖೆಗಾಗಿ ಕೇಂದ್ರ ಕ್ರೀಡಾ ಸಚಿವಾಲಯ ರಚಿಸಿರುವ ಉಸ್ತುವಾರಿ ಸಮಿತಿಯ ವರದಿಗಾಗಿ ಕಾಯಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ಸುಪ್ರೀಂ ಕೋರ್ಟ್‌ ನೋಟಿಸ್‌ ನಂತರ ಬಿಜೆಪಿ ಸಂಸದ ಸಿಂಗ್ ವಿರುದ್ಧ FIR: ಕ್ರೀಡಾಪಟುಗಳ ಹೋರಾಟಕ್ಕೆ ಮೊದಲ ಜಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...