Homeಕರ್ನಾಟಕಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ 'ಪಾಶ್‌ ಕಮಿಟಿ' ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

ಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ ‘ಪಾಶ್‌ ಕಮಿಟಿ’ ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಚಿತ್ರರಂಗದ ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ಹಲವು ತಿಂಗಳುಗಳ ಒತ್ತಡಕ್ಕೆ ಮಣಿದಿರುವ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’, ಕೊನೆಗೂ “ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ” (posh act) ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ಜಸ್ಟೀಸ್ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಕರ್ನಾಟಕದಲ್ಲಿ ಸಹ ಸಮಿತಿ ರಚಿಸಬೇಕು ಎಂಬ ಕೂಗು ಎದ್ದಿತ್ತು. ಆದರೆ, ಇದಕ್ಕೆ ಚಿತ್ರರಂಗದ ಪ್ರಮುಖರು ಆಸಕ್ತಿ ತೋರಿರಲಿಲ್ಲ. ಇದೀಗ, ಹಿರಿಯ ನಿರ್ದೇಶಕಿ ಕವಿತಾ ಲಂಕೇಶ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಖಾಯಂ ಸದಸ್ಯರಾಗಿ,  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಸದಸ್ಯರಾಗಿ ಹಿರಿಯ ನಟಿ ಪ್ರಮೀಳಾ ಜೋಶಾಯ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ವಿಮಲಾ ಕೆ.ಎಸ್, ಹಿರಿಯ ವಕೀಲೆ ರಾಜಲಕ್ಷ್ಮಿ ಅಂಕಲಗಿ, ಟ್ರಾನ್ಸ್‌ ಜೆಂಡರ್ ಹೋರಾಟಗಾರರಾದ ಮಲ್ಲು ಕುಂಬಾರ್, ನಟಿ ಶೃತಿ ಹರಿಹರನ್, ಹಿರಿಯ ಪತ್ರಕರ್ತ ಮುರುಳೀಧರ್ ಖಜಾನೆ, ರಂಗಕರ್ಮಿ ಶಶಿಕಾಂತ್ ಯಡಹಳ್ಳಿ, ನಿರ್ಮಾಕಪಕರಾದ ಸಾರಾ ಗೋವಿಂದ್ ಸಮಿತಿಯಲ್ಲಿ ಇದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜೊತೆಗೆ ಮಾತನಾಡಿದ ಕವಿತಾ ಲಂಕೇಶ್, “ಪಾಶ್ ಕಮಿಟಿ ರಚಿಸಬೇಕು ಎಂದು ಮಹಿಳಾ ಆಯೋಗದ ನಾಗಲಕ್ಷ್ಮಿ ಅವರೊಟ್ಟಿಗೆ ನಾವು ಹೋಗಿ ಒತ್ತಡ ಹಾಕಿದ್ದೆವು. ಇದಕ್ಕಾಗಿ ನಾವು ಕಳೆದ ಐದು ವರ್ಷಗಳಿಂದ ಎಷ್ಟೇ ಪ್ರಯತ್ನ ಮಾಡಿದರೂ ಆಗಿರಲಿಲ್ಲ; ಈಗ ಸಮಿತಿ ರಚಿಸಿರುವುದು ಸಂತಸ ತಂದಿದೆ” ಎಂದರು.

“ಈಗಷ್ಟೇ ಸಮಿತಿ ರಚನೆ ಆಗಿದೆ, ಇನ್ನಷ್ಟು ಕೆಲಸಗಳು ಬಾಕಿ ಇವೆ. ವಿಭಿನ್ನ ಕ್ಷೇತ್ರಗಳಿಂದ ಸದಸ್ಯರನ್ನು ನೇಮಕ ಮಾಡಿರುವುದು ನನಗೆ ಸಂತಸವಾಗಿದೆ. ದೌರ್ಜನ್ಯವಾದರೆ ನಾವು ಏನು ಮಾಡಬೇಕು ಎಂಬ ಬಗ್ಗೆ ಕೆಲಸ ಆರಂಭಿಸಬೇಕು. ಮೊದಲು ಅದಕ್ಕೊಂದು ಹೆಲ್ಪ್‌ಲೈನ್ ಆಗಬೇಕು. ಏಕೆಂದರೆ, ಯಾರೋ ದೂರು ಕೊಡಬೇಕು ಎಂದರೆ ಸಾಕಷ್ಟು ಗೊಂದಲದಲ್ಲಿ ಇರುತ್ತಾರೆ; ಮೊದಲಿನಿಂದಲೂ ಈ ಸಮಸ್ಯೆ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋದರೆ ಸಾಕಷ್ಟು ನಿರ್ಲಕ್ಷ್ಯ ಮಾಡುತ್ತಿದ್ದರು. ದೂರು ಬಂದರೆ ಏನು ಮಾಡಬಹುದು ಎಂದು ನಾವು ನೋಡಬೇಕು” ಎಂದು ಹೇಳಿದರು.

“ಸಮಿತಿಯಲ್ಲಿ ಟ್ರಾನ್ಸ್‌ ಜೆಂಡರ್‌ ಸಮುದಾಯದ ಮಲ್ಲು ಕುಂಬಾರ್ ಸೇರಿದಂತೆ ಬೇರೆಬೇರೆ ಕ್ಷೇತ್ರದ ಜನರಿದ್ದಾರೆ. ಕೆ.ಎಸ್. ವಿಮಲಾ ಮತ್ತು ರಾಜಲಕ್ಷ್ಮಿ ಅಂಕಲಗಿ ಮಹಿಳೆಯರ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ನಾವು ಸೂಚಿಸಿದ ಹೆಸರುಗಳನ್ನು ಒಪ್ಪಿಕೊಂಡು ಸಮಿತಿ ರಚಿಸಿದ್ದಾರೆ. ಸದ್ಯಕ್ಕಂತೂ ಕಮಿಟಿ ಚೆನ್ನಾಗಿದೆ ಎಂದು ನನಗೆ ಅನಿಸುತ್ತಿದೆ. ಕೆಲಸ ಚೆನ್ನಾಗಿ ಆಗುತ್ತದೆ ಎನ್ನುವ ವಿಶ್ವಾಸ ನನಗಿದೆ. ಇಷ್ಟು ದಿನ ಸಮಸ್ಯೆಗಳಾದರೆ ಅದನ್ನು ಕೇಳುವುದಕ್ಕೇ ಯಾರೂ ಇರಲಿಲ್ಲ” ಎಂದರು.

ಸಮಿತಿ ಸದಸ್ಯರಾದ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, “ಎಲ್ಲ ಅಸಂಘಟಿತ ವಲಯಗಳಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚಿಸಬೇಕು ಎಂಬ ಕಾನೂನಿದೆ. ಆದರೆ, ಚಲನಚಿತ್ರ ವಾಣಿಜ್ಯ ಮಂಡಳಿ ಸಮಿತಿ ರಚಿಸಿಲ್ಲ ಎಂಬ ದೂರು ಹಲವು ದಿನಗಳಿಂದ ಕೇಳಿಬರುತ್ತಿತ್ತು. ಕೇರಳದಲ್ಲಿ ಹೇಮಾ ಸಮಿತಿ ವರದಿ ಹೊರಗೆ ಬಂದ ಬಳಿಕ, ಇಲ್ಲಿಯೂ ಸಮಿತಿ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿದ್ದವು. ಈಗ ವಾಣಿಜ್ಯ ಮಂಡಳಿ ಸಮಿತಿ ರಚಿಸಿ, ಹಲವು ಕ್ಷೇತ್ರಗಳ ಪ್ರಮುಖರನ್ನು ಸದಸ್ಯರನ್ನಾಗಿ ನೇಮಿಸಿದ್ದಾರೆ. ಇಂಥ ಸಮಿತಿ ರಚಿಸುವುದು ಅಗತ್ಯ” ಎಂದರು.

“ಮುಖ್ಯವಾಗಿ, ಇತ್ತೀಚಿನ ದಿನಗಳಲ್ಲಿ ಮೊದಲಿಗಿಂತಲೂ ಹೆಚ್ಚಾಗಿ ಕಲಾವಿದರು, ತಂತ್ರಜ್ಞರು ಸೇರಿದಂತೆ ಹಲವು ವಿಭಾಗಗಳಲ್ಲಿ ಕೆಲಸ ಮಾಡಲು ಅನ್ಯ ರಾಜ್ಯಗಳಿಂದ ಇಲ್ಲಿಗೆ ಬರುತ್ತಿದ್ದಾರೆ. ಇತ್ತೀಚೆಗೆ ಫ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗಿದ್ದು, ಇಲ್ಲಿಗೆ ಕೆಲಸ ಮಾಡಲು ಬಂದವರ ರಕ್ಷಣೆ ಮಾಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ಎಲ್ಲವೂ ಗಮನದಲ್ಲಿಟ್ಟುಕೊಂಡು ಈಗ ಸಮಿತಿ ರಚನೆ ಆಗಿದೆ. ಪಾಶ್ ಕಮಿಟಿ ನಿಯಮಗಳ ಪ್ರಕಾರ, ಸಮಿತಿಯಲ್ಲಿ ಯಾರ್ಯಾರು ಇರಬೇಕು ಎಂದು ಗಮನದಲ್ಲಿ ಇಟ್ಟುಕೊಂಡು ಮಾಡಿದ್ದಾರೆ, ಇದು ಸ್ವಾಗತಾರ್ಹ” ಎಂದು ಹೇಳಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ‘ಕರ್ನಾಟಕ ರಾಜ್ಯ ಮಹಿಳಾ ಆಯೋಗ’ದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ, “ಚಲನಚಿತ್ರ ವಾಣಿಜ್ಯ ಮಂಡಳಿ ಅಂತಿಮವಾಗಿ ಪಾಶ್ ಸಮಿತಿ ರಚಿಸಿರುವುದು ನನಗೆ ಸಂತಸ ತಂದಿದೆ. ನಿಯಮಗಳನ್ನು ಪಾಲನೆ ಮಾಡಿ ಸಮಿತಿ ರಚಿಸಿರುವುದಾಗಿ ನನಗೆ ಮೊದಲೇ ತಿಳಿಸಿದ್ದರು. ಈ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿಗೆ ಬರುವಂತೆ ನನ್ನನ್ನೂ ಕರೆದಿದ್ದರು. ಹೆಣ್ಣು ಮಕ್ಕಳ ರಕ್ಷಣೆ ಪ್ರಮುಖ ಆದ್ಯತೆಯಾಗಿರುವದರಿಂದ ನೀವು ಕಾಲ ದೂಡುವಂತೆ ಇಲ್ಲ ಎಂದು ನಾನು ಅವರಿಗೆ ಮೊದಲೇ ತಿಳಿಸಿದ್ದೆ; ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಹ ನಾನು ಪತ್ರ ಬರೆದಿದ್ದೆ” ಎಂದರು.

“ನಾನು ಪತ್ರಿಕಾಗೋಷ್ಠಿ ನಡೆಸಿದ ನಂತರ, ಅದನ್ನು ಗಂಭೀರವಾಗಿ ಪರಿಗಣಿಸಿ ಸಮಿತಿ ರಚಿಸಿದ್ದಾರೆ. ಇದು ಸ್ವಾಗತಾರ್ಹ, ಮೊದಲ ಬಾರಿಗೆ ಚಲನಚಿತ್ರೋದ್ಯಮದಲ್ಲಿ ಸಮಿತಿ ರಚನೆಯಾಗಿದೆ. ಚಿತ್ರರಂಗದಲ್ಲಿ ಕೆಲಸ ಮಾಡುವ ಯಾವುದೇ ಹೆಣ್ಣು ಮಗಳಿಗೆ ಲೈಂಗಿಕ ದೌರ್ಜನ್ಯ ನಡೆದರೆ, ಅಲ್ಲಿಯೇ ದೂರು ನೀಡಿ, ನ್ಯಾಯ ಪಡೆಯುವ ಪಾಶ್ ಕಮಿಟಿ ರಚನೆಯಾಗಿದೆ. ಹಣ್ಣು ಮಕ್ಕಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿರುವ ವಾಣಿಜ್ಯ ಮಂಡಳಿಗೆ ಅಭಿನಂಧಿಸುತ್ತೇನೆ” ಎಂದು ಹೇಳಿದರು.

“ಆರಂಭದಲ್ಲಿ ವಾಣಿಜ್ಯ ಮಂಡಳಿಯಲ್ಲಿ ಇದಕ್ಕೆ ಭಾರೀ ವಿರೋಧವಿತ್ತು. ನಾನು ಅಲ್ಲಿ ಪತ್ರಿಕಾಗೋಷ್ಠಿ ನಡೆಸಲು ಹೋದಾಗಲೂ ಸಹ ಅಪಸ್ವರವಿತ್ತು. ಜೋರಾಗಿ ಚೀರಾಡಿ, ಜಗಳ ಮಾಡಿ ಪಾಶ್ ಸಮಿತಿ ರಚನೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಏನೋ ಆಗುತ್ತದೆ ಎಂಬ ಕಾರಣಕ್ಕೆ ಅವರು ಸಮಿತಿ ರಚನೆಗೆ ಒಪ್ಪಿಕೊಂಡಿರಲಿಲ್ಲ. ಅವರು ಅರ್ಥ ಮಾಡಿಕೊಳ್ಳುವುದಕ್ಕೆ ಇಷ್ಟು ಕಾಲ ಬೇಕಾಯಿತು. ನಮ್ಮ ಕನ್ನಡದ ನಟಿಯರು ಹಾಗೂ ಉಳಿದವರಿಗೆ ದೌರ್ಜನ್ಯವಾದಾಗ ನ್ಯಾಯ ಪಡೆಯಲು ಅವರದ್ದೇ ತಾಯಿ ಸಂಸ್ಥೆಯಲ್ಲಿ ಕಮಿಟಿ ಇರಬೇಕು. ಅವರ ನಿರ್ಧಾರವನ್ನು ನಾನು ಸ್ವಾಗತ ಕೋರುತ್ತೇನೆ. ಚಲನಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು” ಎಂದು ವಿವರಿಸಿದರು.

ಇದನ್ನೂ ಓದಿ; ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...