Homeಕರ್ನಾಟಕಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ 'ಪಾಶ್‌ ಕಮಿಟಿ' ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

ಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ ‘ಪಾಶ್‌ ಕಮಿಟಿ’ ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಚಿತ್ರರಂಗದ ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ಹಲವು ತಿಂಗಳುಗಳ ಒತ್ತಡಕ್ಕೆ ಮಣಿದಿರುವ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’, ಕೊನೆಗೂ “ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ” (posh act) ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ಜಸ್ಟೀಸ್ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಕರ್ನಾಟಕದಲ್ಲಿ ಸಹ ಸಮಿತಿ ರಚಿಸಬೇಕು ಎಂಬ ಕೂಗು ಎದ್ದಿತ್ತು. ಆದರೆ, ಇದಕ್ಕೆ ಚಿತ್ರರಂಗದ ಪ್ರಮುಖರು ಆಸಕ್ತಿ ತೋರಿರಲಿಲ್ಲ. ಇದೀಗ, ಹಿರಿಯ ನಿರ್ದೇಶಕಿ ಕವಿತಾ ಲಂಕೇಶ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಖಾಯಂ ಸದಸ್ಯರಾಗಿ,  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಸದಸ್ಯರಾಗಿ ಹಿರಿಯ ನಟಿ ಪ್ರಮೀಳಾ ಜೋಶಾಯ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ವಿಮಲಾ ಕೆ.ಎಸ್, ಹಿರಿಯ ವಕೀಲೆ ರಾಜಲಕ್ಷ್ಮಿ ಅಂಕಲಗಿ, ಟ್ರಾನ್ಸ್‌ ಜೆಂಡರ್ ಹೋರಾಟಗಾರರಾದ ಮಲ್ಲು ಕುಂಬಾರ್, ನಟಿ ಶೃತಿ ಹರಿಹರನ್, ಹಿರಿಯ ಪತ್ರಕರ್ತ ಮುರುಳೀಧರ್ ಖಜಾನೆ, ರಂಗಕರ್ಮಿ ಶಶಿಕಾಂತ್ ಯಡಹಳ್ಳಿ, ನಿರ್ಮಾಕಪಕರಾದ ಸಾರಾ ಗೋವಿಂದ್ ಸಮಿತಿಯಲ್ಲಿ ಇದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜೊತೆಗೆ ಮಾತನಾಡಿದ ಕವಿತಾ ಲಂಕೇಶ್, “ಪಾಶ್ ಕಮಿಟಿ ರಚಿಸಬೇಕು ಎಂದು ಮಹಿಳಾ ಆಯೋಗದ ನಾಗಲಕ್ಷ್ಮಿ ಅವರೊಟ್ಟಿಗೆ ನಾವು ಹೋಗಿ ಒತ್ತಡ ಹಾಕಿದ್ದೆವು. ಇದಕ್ಕಾಗಿ ನಾವು ಕಳೆದ ಐದು ವರ್ಷಗಳಿಂದ ಎಷ್ಟೇ ಪ್ರಯತ್ನ ಮಾಡಿದರೂ ಆಗಿರಲಿಲ್ಲ; ಈಗ ಸಮಿತಿ ರಚಿಸಿರುವುದು ಸಂತಸ ತಂದಿದೆ” ಎಂದರು.

“ಈಗಷ್ಟೇ ಸಮಿತಿ ರಚನೆ ಆಗಿದೆ, ಇನ್ನಷ್ಟು ಕೆಲಸಗಳು ಬಾಕಿ ಇವೆ. ವಿಭಿನ್ನ ಕ್ಷೇತ್ರಗಳಿಂದ ಸದಸ್ಯರನ್ನು ನೇಮಕ ಮಾಡಿರುವುದು ನನಗೆ ಸಂತಸವಾಗಿದೆ. ದೌರ್ಜನ್ಯವಾದರೆ ನಾವು ಏನು ಮಾಡಬೇಕು ಎಂಬ ಬಗ್ಗೆ ಕೆಲಸ ಆರಂಭಿಸಬೇಕು. ಮೊದಲು ಅದಕ್ಕೊಂದು ಹೆಲ್ಪ್‌ಲೈನ್ ಆಗಬೇಕು. ಏಕೆಂದರೆ, ಯಾರೋ ದೂರು ಕೊಡಬೇಕು ಎಂದರೆ ಸಾಕಷ್ಟು ಗೊಂದಲದಲ್ಲಿ ಇರುತ್ತಾರೆ; ಮೊದಲಿನಿಂದಲೂ ಈ ಸಮಸ್ಯೆ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋದರೆ ಸಾಕಷ್ಟು ನಿರ್ಲಕ್ಷ್ಯ ಮಾಡುತ್ತಿದ್ದರು. ದೂರು ಬಂದರೆ ಏನು ಮಾಡಬಹುದು ಎಂದು ನಾವು ನೋಡಬೇಕು” ಎಂದು ಹೇಳಿದರು.

“ಸಮಿತಿಯಲ್ಲಿ ಟ್ರಾನ್ಸ್‌ ಜೆಂಡರ್‌ ಸಮುದಾಯದ ಮಲ್ಲು ಕುಂಬಾರ್ ಸೇರಿದಂತೆ ಬೇರೆಬೇರೆ ಕ್ಷೇತ್ರದ ಜನರಿದ್ದಾರೆ. ಕೆ.ಎಸ್. ವಿಮಲಾ ಮತ್ತು ರಾಜಲಕ್ಷ್ಮಿ ಅಂಕಲಗಿ ಮಹಿಳೆಯರ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ನಾವು ಸೂಚಿಸಿದ ಹೆಸರುಗಳನ್ನು ಒಪ್ಪಿಕೊಂಡು ಸಮಿತಿ ರಚಿಸಿದ್ದಾರೆ. ಸದ್ಯಕ್ಕಂತೂ ಕಮಿಟಿ ಚೆನ್ನಾಗಿದೆ ಎಂದು ನನಗೆ ಅನಿಸುತ್ತಿದೆ. ಕೆಲಸ ಚೆನ್ನಾಗಿ ಆಗುತ್ತದೆ ಎನ್ನುವ ವಿಶ್ವಾಸ ನನಗಿದೆ. ಇಷ್ಟು ದಿನ ಸಮಸ್ಯೆಗಳಾದರೆ ಅದನ್ನು ಕೇಳುವುದಕ್ಕೇ ಯಾರೂ ಇರಲಿಲ್ಲ” ಎಂದರು.

ಸಮಿತಿ ಸದಸ್ಯರಾದ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, “ಎಲ್ಲ ಅಸಂಘಟಿತ ವಲಯಗಳಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚಿಸಬೇಕು ಎಂಬ ಕಾನೂನಿದೆ. ಆದರೆ, ಚಲನಚಿತ್ರ ವಾಣಿಜ್ಯ ಮಂಡಳಿ ಸಮಿತಿ ರಚಿಸಿಲ್ಲ ಎಂಬ ದೂರು ಹಲವು ದಿನಗಳಿಂದ ಕೇಳಿಬರುತ್ತಿತ್ತು. ಕೇರಳದಲ್ಲಿ ಹೇಮಾ ಸಮಿತಿ ವರದಿ ಹೊರಗೆ ಬಂದ ಬಳಿಕ, ಇಲ್ಲಿಯೂ ಸಮಿತಿ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿದ್ದವು. ಈಗ ವಾಣಿಜ್ಯ ಮಂಡಳಿ ಸಮಿತಿ ರಚಿಸಿ, ಹಲವು ಕ್ಷೇತ್ರಗಳ ಪ್ರಮುಖರನ್ನು ಸದಸ್ಯರನ್ನಾಗಿ ನೇಮಿಸಿದ್ದಾರೆ. ಇಂಥ ಸಮಿತಿ ರಚಿಸುವುದು ಅಗತ್ಯ” ಎಂದರು.

“ಮುಖ್ಯವಾಗಿ, ಇತ್ತೀಚಿನ ದಿನಗಳಲ್ಲಿ ಮೊದಲಿಗಿಂತಲೂ ಹೆಚ್ಚಾಗಿ ಕಲಾವಿದರು, ತಂತ್ರಜ್ಞರು ಸೇರಿದಂತೆ ಹಲವು ವಿಭಾಗಗಳಲ್ಲಿ ಕೆಲಸ ಮಾಡಲು ಅನ್ಯ ರಾಜ್ಯಗಳಿಂದ ಇಲ್ಲಿಗೆ ಬರುತ್ತಿದ್ದಾರೆ. ಇತ್ತೀಚೆಗೆ ಫ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗಿದ್ದು, ಇಲ್ಲಿಗೆ ಕೆಲಸ ಮಾಡಲು ಬಂದವರ ರಕ್ಷಣೆ ಮಾಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ಎಲ್ಲವೂ ಗಮನದಲ್ಲಿಟ್ಟುಕೊಂಡು ಈಗ ಸಮಿತಿ ರಚನೆ ಆಗಿದೆ. ಪಾಶ್ ಕಮಿಟಿ ನಿಯಮಗಳ ಪ್ರಕಾರ, ಸಮಿತಿಯಲ್ಲಿ ಯಾರ್ಯಾರು ಇರಬೇಕು ಎಂದು ಗಮನದಲ್ಲಿ ಇಟ್ಟುಕೊಂಡು ಮಾಡಿದ್ದಾರೆ, ಇದು ಸ್ವಾಗತಾರ್ಹ” ಎಂದು ಹೇಳಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ‘ಕರ್ನಾಟಕ ರಾಜ್ಯ ಮಹಿಳಾ ಆಯೋಗ’ದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ, “ಚಲನಚಿತ್ರ ವಾಣಿಜ್ಯ ಮಂಡಳಿ ಅಂತಿಮವಾಗಿ ಪಾಶ್ ಸಮಿತಿ ರಚಿಸಿರುವುದು ನನಗೆ ಸಂತಸ ತಂದಿದೆ. ನಿಯಮಗಳನ್ನು ಪಾಲನೆ ಮಾಡಿ ಸಮಿತಿ ರಚಿಸಿರುವುದಾಗಿ ನನಗೆ ಮೊದಲೇ ತಿಳಿಸಿದ್ದರು. ಈ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿಗೆ ಬರುವಂತೆ ನನ್ನನ್ನೂ ಕರೆದಿದ್ದರು. ಹೆಣ್ಣು ಮಕ್ಕಳ ರಕ್ಷಣೆ ಪ್ರಮುಖ ಆದ್ಯತೆಯಾಗಿರುವದರಿಂದ ನೀವು ಕಾಲ ದೂಡುವಂತೆ ಇಲ್ಲ ಎಂದು ನಾನು ಅವರಿಗೆ ಮೊದಲೇ ತಿಳಿಸಿದ್ದೆ; ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಹ ನಾನು ಪತ್ರ ಬರೆದಿದ್ದೆ” ಎಂದರು.

“ನಾನು ಪತ್ರಿಕಾಗೋಷ್ಠಿ ನಡೆಸಿದ ನಂತರ, ಅದನ್ನು ಗಂಭೀರವಾಗಿ ಪರಿಗಣಿಸಿ ಸಮಿತಿ ರಚಿಸಿದ್ದಾರೆ. ಇದು ಸ್ವಾಗತಾರ್ಹ, ಮೊದಲ ಬಾರಿಗೆ ಚಲನಚಿತ್ರೋದ್ಯಮದಲ್ಲಿ ಸಮಿತಿ ರಚನೆಯಾಗಿದೆ. ಚಿತ್ರರಂಗದಲ್ಲಿ ಕೆಲಸ ಮಾಡುವ ಯಾವುದೇ ಹೆಣ್ಣು ಮಗಳಿಗೆ ಲೈಂಗಿಕ ದೌರ್ಜನ್ಯ ನಡೆದರೆ, ಅಲ್ಲಿಯೇ ದೂರು ನೀಡಿ, ನ್ಯಾಯ ಪಡೆಯುವ ಪಾಶ್ ಕಮಿಟಿ ರಚನೆಯಾಗಿದೆ. ಹಣ್ಣು ಮಕ್ಕಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿರುವ ವಾಣಿಜ್ಯ ಮಂಡಳಿಗೆ ಅಭಿನಂಧಿಸುತ್ತೇನೆ” ಎಂದು ಹೇಳಿದರು.

“ಆರಂಭದಲ್ಲಿ ವಾಣಿಜ್ಯ ಮಂಡಳಿಯಲ್ಲಿ ಇದಕ್ಕೆ ಭಾರೀ ವಿರೋಧವಿತ್ತು. ನಾನು ಅಲ್ಲಿ ಪತ್ರಿಕಾಗೋಷ್ಠಿ ನಡೆಸಲು ಹೋದಾಗಲೂ ಸಹ ಅಪಸ್ವರವಿತ್ತು. ಜೋರಾಗಿ ಚೀರಾಡಿ, ಜಗಳ ಮಾಡಿ ಪಾಶ್ ಸಮಿತಿ ರಚನೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಏನೋ ಆಗುತ್ತದೆ ಎಂಬ ಕಾರಣಕ್ಕೆ ಅವರು ಸಮಿತಿ ರಚನೆಗೆ ಒಪ್ಪಿಕೊಂಡಿರಲಿಲ್ಲ. ಅವರು ಅರ್ಥ ಮಾಡಿಕೊಳ್ಳುವುದಕ್ಕೆ ಇಷ್ಟು ಕಾಲ ಬೇಕಾಯಿತು. ನಮ್ಮ ಕನ್ನಡದ ನಟಿಯರು ಹಾಗೂ ಉಳಿದವರಿಗೆ ದೌರ್ಜನ್ಯವಾದಾಗ ನ್ಯಾಯ ಪಡೆಯಲು ಅವರದ್ದೇ ತಾಯಿ ಸಂಸ್ಥೆಯಲ್ಲಿ ಕಮಿಟಿ ಇರಬೇಕು. ಅವರ ನಿರ್ಧಾರವನ್ನು ನಾನು ಸ್ವಾಗತ ಕೋರುತ್ತೇನೆ. ಚಲನಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು” ಎಂದು ವಿವರಿಸಿದರು.

ಇದನ್ನೂ ಓದಿ; ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...