Homeಕರ್ನಾಟಕಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ 'ಪಾಶ್‌ ಕಮಿಟಿ' ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

ಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ ‘ಪಾಶ್‌ ಕಮಿಟಿ’ ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಚಿತ್ರರಂಗದ ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ಹಲವು ತಿಂಗಳುಗಳ ಒತ್ತಡಕ್ಕೆ ಮಣಿದಿರುವ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’, ಕೊನೆಗೂ “ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ” (posh act) ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ಜಸ್ಟೀಸ್ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಕರ್ನಾಟಕದಲ್ಲಿ ಸಹ ಸಮಿತಿ ರಚಿಸಬೇಕು ಎಂಬ ಕೂಗು ಎದ್ದಿತ್ತು. ಆದರೆ, ಇದಕ್ಕೆ ಚಿತ್ರರಂಗದ ಪ್ರಮುಖರು ಆಸಕ್ತಿ ತೋರಿರಲಿಲ್ಲ. ಇದೀಗ, ಹಿರಿಯ ನಿರ್ದೇಶಕಿ ಕವಿತಾ ಲಂಕೇಶ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಖಾಯಂ ಸದಸ್ಯರಾಗಿ,  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಸದಸ್ಯರಾಗಿ ಹಿರಿಯ ನಟಿ ಪ್ರಮೀಳಾ ಜೋಶಾಯ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ವಿಮಲಾ ಕೆ.ಎಸ್, ಹಿರಿಯ ವಕೀಲೆ ರಾಜಲಕ್ಷ್ಮಿ ಅಂಕಲಗಿ, ಟ್ರಾನ್ಸ್‌ ಜೆಂಡರ್ ಹೋರಾಟಗಾರರಾದ ಮಲ್ಲು ಕುಂಬಾರ್, ನಟಿ ಶೃತಿ ಹರಿಹರನ್, ಹಿರಿಯ ಪತ್ರಕರ್ತ ಮುರುಳೀಧರ್ ಖಜಾನೆ, ರಂಗಕರ್ಮಿ ಶಶಿಕಾಂತ್ ಯಡಹಳ್ಳಿ, ನಿರ್ಮಾಕಪಕರಾದ ಸಾರಾ ಗೋವಿಂದ್ ಸಮಿತಿಯಲ್ಲಿ ಇದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜೊತೆಗೆ ಮಾತನಾಡಿದ ಕವಿತಾ ಲಂಕೇಶ್, “ಪಾಶ್ ಕಮಿಟಿ ರಚಿಸಬೇಕು ಎಂದು ಮಹಿಳಾ ಆಯೋಗದ ನಾಗಲಕ್ಷ್ಮಿ ಅವರೊಟ್ಟಿಗೆ ನಾವು ಹೋಗಿ ಒತ್ತಡ ಹಾಕಿದ್ದೆವು. ಇದಕ್ಕಾಗಿ ನಾವು ಕಳೆದ ಐದು ವರ್ಷಗಳಿಂದ ಎಷ್ಟೇ ಪ್ರಯತ್ನ ಮಾಡಿದರೂ ಆಗಿರಲಿಲ್ಲ; ಈಗ ಸಮಿತಿ ರಚಿಸಿರುವುದು ಸಂತಸ ತಂದಿದೆ” ಎಂದರು.

“ಈಗಷ್ಟೇ ಸಮಿತಿ ರಚನೆ ಆಗಿದೆ, ಇನ್ನಷ್ಟು ಕೆಲಸಗಳು ಬಾಕಿ ಇವೆ. ವಿಭಿನ್ನ ಕ್ಷೇತ್ರಗಳಿಂದ ಸದಸ್ಯರನ್ನು ನೇಮಕ ಮಾಡಿರುವುದು ನನಗೆ ಸಂತಸವಾಗಿದೆ. ದೌರ್ಜನ್ಯವಾದರೆ ನಾವು ಏನು ಮಾಡಬೇಕು ಎಂಬ ಬಗ್ಗೆ ಕೆಲಸ ಆರಂಭಿಸಬೇಕು. ಮೊದಲು ಅದಕ್ಕೊಂದು ಹೆಲ್ಪ್‌ಲೈನ್ ಆಗಬೇಕು. ಏಕೆಂದರೆ, ಯಾರೋ ದೂರು ಕೊಡಬೇಕು ಎಂದರೆ ಸಾಕಷ್ಟು ಗೊಂದಲದಲ್ಲಿ ಇರುತ್ತಾರೆ; ಮೊದಲಿನಿಂದಲೂ ಈ ಸಮಸ್ಯೆ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋದರೆ ಸಾಕಷ್ಟು ನಿರ್ಲಕ್ಷ್ಯ ಮಾಡುತ್ತಿದ್ದರು. ದೂರು ಬಂದರೆ ಏನು ಮಾಡಬಹುದು ಎಂದು ನಾವು ನೋಡಬೇಕು” ಎಂದು ಹೇಳಿದರು.

“ಸಮಿತಿಯಲ್ಲಿ ಟ್ರಾನ್ಸ್‌ ಜೆಂಡರ್‌ ಸಮುದಾಯದ ಮಲ್ಲು ಕುಂಬಾರ್ ಸೇರಿದಂತೆ ಬೇರೆಬೇರೆ ಕ್ಷೇತ್ರದ ಜನರಿದ್ದಾರೆ. ಕೆ.ಎಸ್. ವಿಮಲಾ ಮತ್ತು ರಾಜಲಕ್ಷ್ಮಿ ಅಂಕಲಗಿ ಮಹಿಳೆಯರ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ನಾವು ಸೂಚಿಸಿದ ಹೆಸರುಗಳನ್ನು ಒಪ್ಪಿಕೊಂಡು ಸಮಿತಿ ರಚಿಸಿದ್ದಾರೆ. ಸದ್ಯಕ್ಕಂತೂ ಕಮಿಟಿ ಚೆನ್ನಾಗಿದೆ ಎಂದು ನನಗೆ ಅನಿಸುತ್ತಿದೆ. ಕೆಲಸ ಚೆನ್ನಾಗಿ ಆಗುತ್ತದೆ ಎನ್ನುವ ವಿಶ್ವಾಸ ನನಗಿದೆ. ಇಷ್ಟು ದಿನ ಸಮಸ್ಯೆಗಳಾದರೆ ಅದನ್ನು ಕೇಳುವುದಕ್ಕೇ ಯಾರೂ ಇರಲಿಲ್ಲ” ಎಂದರು.

ಸಮಿತಿ ಸದಸ್ಯರಾದ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, “ಎಲ್ಲ ಅಸಂಘಟಿತ ವಲಯಗಳಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚಿಸಬೇಕು ಎಂಬ ಕಾನೂನಿದೆ. ಆದರೆ, ಚಲನಚಿತ್ರ ವಾಣಿಜ್ಯ ಮಂಡಳಿ ಸಮಿತಿ ರಚಿಸಿಲ್ಲ ಎಂಬ ದೂರು ಹಲವು ದಿನಗಳಿಂದ ಕೇಳಿಬರುತ್ತಿತ್ತು. ಕೇರಳದಲ್ಲಿ ಹೇಮಾ ಸಮಿತಿ ವರದಿ ಹೊರಗೆ ಬಂದ ಬಳಿಕ, ಇಲ್ಲಿಯೂ ಸಮಿತಿ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿದ್ದವು. ಈಗ ವಾಣಿಜ್ಯ ಮಂಡಳಿ ಸಮಿತಿ ರಚಿಸಿ, ಹಲವು ಕ್ಷೇತ್ರಗಳ ಪ್ರಮುಖರನ್ನು ಸದಸ್ಯರನ್ನಾಗಿ ನೇಮಿಸಿದ್ದಾರೆ. ಇಂಥ ಸಮಿತಿ ರಚಿಸುವುದು ಅಗತ್ಯ” ಎಂದರು.

“ಮುಖ್ಯವಾಗಿ, ಇತ್ತೀಚಿನ ದಿನಗಳಲ್ಲಿ ಮೊದಲಿಗಿಂತಲೂ ಹೆಚ್ಚಾಗಿ ಕಲಾವಿದರು, ತಂತ್ರಜ್ಞರು ಸೇರಿದಂತೆ ಹಲವು ವಿಭಾಗಗಳಲ್ಲಿ ಕೆಲಸ ಮಾಡಲು ಅನ್ಯ ರಾಜ್ಯಗಳಿಂದ ಇಲ್ಲಿಗೆ ಬರುತ್ತಿದ್ದಾರೆ. ಇತ್ತೀಚೆಗೆ ಫ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗಿದ್ದು, ಇಲ್ಲಿಗೆ ಕೆಲಸ ಮಾಡಲು ಬಂದವರ ರಕ್ಷಣೆ ಮಾಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ಎಲ್ಲವೂ ಗಮನದಲ್ಲಿಟ್ಟುಕೊಂಡು ಈಗ ಸಮಿತಿ ರಚನೆ ಆಗಿದೆ. ಪಾಶ್ ಕಮಿಟಿ ನಿಯಮಗಳ ಪ್ರಕಾರ, ಸಮಿತಿಯಲ್ಲಿ ಯಾರ್ಯಾರು ಇರಬೇಕು ಎಂದು ಗಮನದಲ್ಲಿ ಇಟ್ಟುಕೊಂಡು ಮಾಡಿದ್ದಾರೆ, ಇದು ಸ್ವಾಗತಾರ್ಹ” ಎಂದು ಹೇಳಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ‘ಕರ್ನಾಟಕ ರಾಜ್ಯ ಮಹಿಳಾ ಆಯೋಗ’ದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ, “ಚಲನಚಿತ್ರ ವಾಣಿಜ್ಯ ಮಂಡಳಿ ಅಂತಿಮವಾಗಿ ಪಾಶ್ ಸಮಿತಿ ರಚಿಸಿರುವುದು ನನಗೆ ಸಂತಸ ತಂದಿದೆ. ನಿಯಮಗಳನ್ನು ಪಾಲನೆ ಮಾಡಿ ಸಮಿತಿ ರಚಿಸಿರುವುದಾಗಿ ನನಗೆ ಮೊದಲೇ ತಿಳಿಸಿದ್ದರು. ಈ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿಗೆ ಬರುವಂತೆ ನನ್ನನ್ನೂ ಕರೆದಿದ್ದರು. ಹೆಣ್ಣು ಮಕ್ಕಳ ರಕ್ಷಣೆ ಪ್ರಮುಖ ಆದ್ಯತೆಯಾಗಿರುವದರಿಂದ ನೀವು ಕಾಲ ದೂಡುವಂತೆ ಇಲ್ಲ ಎಂದು ನಾನು ಅವರಿಗೆ ಮೊದಲೇ ತಿಳಿಸಿದ್ದೆ; ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಹ ನಾನು ಪತ್ರ ಬರೆದಿದ್ದೆ” ಎಂದರು.

“ನಾನು ಪತ್ರಿಕಾಗೋಷ್ಠಿ ನಡೆಸಿದ ನಂತರ, ಅದನ್ನು ಗಂಭೀರವಾಗಿ ಪರಿಗಣಿಸಿ ಸಮಿತಿ ರಚಿಸಿದ್ದಾರೆ. ಇದು ಸ್ವಾಗತಾರ್ಹ, ಮೊದಲ ಬಾರಿಗೆ ಚಲನಚಿತ್ರೋದ್ಯಮದಲ್ಲಿ ಸಮಿತಿ ರಚನೆಯಾಗಿದೆ. ಚಿತ್ರರಂಗದಲ್ಲಿ ಕೆಲಸ ಮಾಡುವ ಯಾವುದೇ ಹೆಣ್ಣು ಮಗಳಿಗೆ ಲೈಂಗಿಕ ದೌರ್ಜನ್ಯ ನಡೆದರೆ, ಅಲ್ಲಿಯೇ ದೂರು ನೀಡಿ, ನ್ಯಾಯ ಪಡೆಯುವ ಪಾಶ್ ಕಮಿಟಿ ರಚನೆಯಾಗಿದೆ. ಹಣ್ಣು ಮಕ್ಕಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿರುವ ವಾಣಿಜ್ಯ ಮಂಡಳಿಗೆ ಅಭಿನಂಧಿಸುತ್ತೇನೆ” ಎಂದು ಹೇಳಿದರು.

“ಆರಂಭದಲ್ಲಿ ವಾಣಿಜ್ಯ ಮಂಡಳಿಯಲ್ಲಿ ಇದಕ್ಕೆ ಭಾರೀ ವಿರೋಧವಿತ್ತು. ನಾನು ಅಲ್ಲಿ ಪತ್ರಿಕಾಗೋಷ್ಠಿ ನಡೆಸಲು ಹೋದಾಗಲೂ ಸಹ ಅಪಸ್ವರವಿತ್ತು. ಜೋರಾಗಿ ಚೀರಾಡಿ, ಜಗಳ ಮಾಡಿ ಪಾಶ್ ಸಮಿತಿ ರಚನೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಏನೋ ಆಗುತ್ತದೆ ಎಂಬ ಕಾರಣಕ್ಕೆ ಅವರು ಸಮಿತಿ ರಚನೆಗೆ ಒಪ್ಪಿಕೊಂಡಿರಲಿಲ್ಲ. ಅವರು ಅರ್ಥ ಮಾಡಿಕೊಳ್ಳುವುದಕ್ಕೆ ಇಷ್ಟು ಕಾಲ ಬೇಕಾಯಿತು. ನಮ್ಮ ಕನ್ನಡದ ನಟಿಯರು ಹಾಗೂ ಉಳಿದವರಿಗೆ ದೌರ್ಜನ್ಯವಾದಾಗ ನ್ಯಾಯ ಪಡೆಯಲು ಅವರದ್ದೇ ತಾಯಿ ಸಂಸ್ಥೆಯಲ್ಲಿ ಕಮಿಟಿ ಇರಬೇಕು. ಅವರ ನಿರ್ಧಾರವನ್ನು ನಾನು ಸ್ವಾಗತ ಕೋರುತ್ತೇನೆ. ಚಲನಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು” ಎಂದು ವಿವರಿಸಿದರು.

ಇದನ್ನೂ ಓದಿ; ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...