Homeಕರ್ನಾಟಕಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ 'ಪಾಶ್‌ ಕಮಿಟಿ' ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

ಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ ‘ಪಾಶ್‌ ಕಮಿಟಿ’ ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಚಿತ್ರರಂಗದ ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ಹಲವು ತಿಂಗಳುಗಳ ಒತ್ತಡಕ್ಕೆ ಮಣಿದಿರುವ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’, ಕೊನೆಗೂ “ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ” (posh act) ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ಜಸ್ಟೀಸ್ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಕರ್ನಾಟಕದಲ್ಲಿ ಸಹ ಸಮಿತಿ ರಚಿಸಬೇಕು ಎಂಬ ಕೂಗು ಎದ್ದಿತ್ತು. ಆದರೆ, ಇದಕ್ಕೆ ಚಿತ್ರರಂಗದ ಪ್ರಮುಖರು ಆಸಕ್ತಿ ತೋರಿರಲಿಲ್ಲ. ಇದೀಗ, ಹಿರಿಯ ನಿರ್ದೇಶಕಿ ಕವಿತಾ ಲಂಕೇಶ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಖಾಯಂ ಸದಸ್ಯರಾಗಿ,  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಸದಸ್ಯರಾಗಿ ಹಿರಿಯ ನಟಿ ಪ್ರಮೀಳಾ ಜೋಶಾಯ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ವಿಮಲಾ ಕೆ.ಎಸ್, ಹಿರಿಯ ವಕೀಲೆ ರಾಜಲಕ್ಷ್ಮಿ ಅಂಕಲಗಿ, ಟ್ರಾನ್ಸ್‌ ಜೆಂಡರ್ ಹೋರಾಟಗಾರರಾದ ಮಲ್ಲು ಕುಂಬಾರ್, ನಟಿ ಶೃತಿ ಹರಿಹರನ್, ಹಿರಿಯ ಪತ್ರಕರ್ತ ಮುರುಳೀಧರ್ ಖಜಾನೆ, ರಂಗಕರ್ಮಿ ಶಶಿಕಾಂತ್ ಯಡಹಳ್ಳಿ, ನಿರ್ಮಾಕಪಕರಾದ ಸಾರಾ ಗೋವಿಂದ್ ಸಮಿತಿಯಲ್ಲಿ ಇದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜೊತೆಗೆ ಮಾತನಾಡಿದ ಕವಿತಾ ಲಂಕೇಶ್, “ಪಾಶ್ ಕಮಿಟಿ ರಚಿಸಬೇಕು ಎಂದು ಮಹಿಳಾ ಆಯೋಗದ ನಾಗಲಕ್ಷ್ಮಿ ಅವರೊಟ್ಟಿಗೆ ನಾವು ಹೋಗಿ ಒತ್ತಡ ಹಾಕಿದ್ದೆವು. ಇದಕ್ಕಾಗಿ ನಾವು ಕಳೆದ ಐದು ವರ್ಷಗಳಿಂದ ಎಷ್ಟೇ ಪ್ರಯತ್ನ ಮಾಡಿದರೂ ಆಗಿರಲಿಲ್ಲ; ಈಗ ಸಮಿತಿ ರಚಿಸಿರುವುದು ಸಂತಸ ತಂದಿದೆ” ಎಂದರು.

“ಈಗಷ್ಟೇ ಸಮಿತಿ ರಚನೆ ಆಗಿದೆ, ಇನ್ನಷ್ಟು ಕೆಲಸಗಳು ಬಾಕಿ ಇವೆ. ವಿಭಿನ್ನ ಕ್ಷೇತ್ರಗಳಿಂದ ಸದಸ್ಯರನ್ನು ನೇಮಕ ಮಾಡಿರುವುದು ನನಗೆ ಸಂತಸವಾಗಿದೆ. ದೌರ್ಜನ್ಯವಾದರೆ ನಾವು ಏನು ಮಾಡಬೇಕು ಎಂಬ ಬಗ್ಗೆ ಕೆಲಸ ಆರಂಭಿಸಬೇಕು. ಮೊದಲು ಅದಕ್ಕೊಂದು ಹೆಲ್ಪ್‌ಲೈನ್ ಆಗಬೇಕು. ಏಕೆಂದರೆ, ಯಾರೋ ದೂರು ಕೊಡಬೇಕು ಎಂದರೆ ಸಾಕಷ್ಟು ಗೊಂದಲದಲ್ಲಿ ಇರುತ್ತಾರೆ; ಮೊದಲಿನಿಂದಲೂ ಈ ಸಮಸ್ಯೆ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋದರೆ ಸಾಕಷ್ಟು ನಿರ್ಲಕ್ಷ್ಯ ಮಾಡುತ್ತಿದ್ದರು. ದೂರು ಬಂದರೆ ಏನು ಮಾಡಬಹುದು ಎಂದು ನಾವು ನೋಡಬೇಕು” ಎಂದು ಹೇಳಿದರು.

“ಸಮಿತಿಯಲ್ಲಿ ಟ್ರಾನ್ಸ್‌ ಜೆಂಡರ್‌ ಸಮುದಾಯದ ಮಲ್ಲು ಕುಂಬಾರ್ ಸೇರಿದಂತೆ ಬೇರೆಬೇರೆ ಕ್ಷೇತ್ರದ ಜನರಿದ್ದಾರೆ. ಕೆ.ಎಸ್. ವಿಮಲಾ ಮತ್ತು ರಾಜಲಕ್ಷ್ಮಿ ಅಂಕಲಗಿ ಮಹಿಳೆಯರ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ನಾವು ಸೂಚಿಸಿದ ಹೆಸರುಗಳನ್ನು ಒಪ್ಪಿಕೊಂಡು ಸಮಿತಿ ರಚಿಸಿದ್ದಾರೆ. ಸದ್ಯಕ್ಕಂತೂ ಕಮಿಟಿ ಚೆನ್ನಾಗಿದೆ ಎಂದು ನನಗೆ ಅನಿಸುತ್ತಿದೆ. ಕೆಲಸ ಚೆನ್ನಾಗಿ ಆಗುತ್ತದೆ ಎನ್ನುವ ವಿಶ್ವಾಸ ನನಗಿದೆ. ಇಷ್ಟು ದಿನ ಸಮಸ್ಯೆಗಳಾದರೆ ಅದನ್ನು ಕೇಳುವುದಕ್ಕೇ ಯಾರೂ ಇರಲಿಲ್ಲ” ಎಂದರು.

ಸಮಿತಿ ಸದಸ್ಯರಾದ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, “ಎಲ್ಲ ಅಸಂಘಟಿತ ವಲಯಗಳಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚಿಸಬೇಕು ಎಂಬ ಕಾನೂನಿದೆ. ಆದರೆ, ಚಲನಚಿತ್ರ ವಾಣಿಜ್ಯ ಮಂಡಳಿ ಸಮಿತಿ ರಚಿಸಿಲ್ಲ ಎಂಬ ದೂರು ಹಲವು ದಿನಗಳಿಂದ ಕೇಳಿಬರುತ್ತಿತ್ತು. ಕೇರಳದಲ್ಲಿ ಹೇಮಾ ಸಮಿತಿ ವರದಿ ಹೊರಗೆ ಬಂದ ಬಳಿಕ, ಇಲ್ಲಿಯೂ ಸಮಿತಿ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿದ್ದವು. ಈಗ ವಾಣಿಜ್ಯ ಮಂಡಳಿ ಸಮಿತಿ ರಚಿಸಿ, ಹಲವು ಕ್ಷೇತ್ರಗಳ ಪ್ರಮುಖರನ್ನು ಸದಸ್ಯರನ್ನಾಗಿ ನೇಮಿಸಿದ್ದಾರೆ. ಇಂಥ ಸಮಿತಿ ರಚಿಸುವುದು ಅಗತ್ಯ” ಎಂದರು.

“ಮುಖ್ಯವಾಗಿ, ಇತ್ತೀಚಿನ ದಿನಗಳಲ್ಲಿ ಮೊದಲಿಗಿಂತಲೂ ಹೆಚ್ಚಾಗಿ ಕಲಾವಿದರು, ತಂತ್ರಜ್ಞರು ಸೇರಿದಂತೆ ಹಲವು ವಿಭಾಗಗಳಲ್ಲಿ ಕೆಲಸ ಮಾಡಲು ಅನ್ಯ ರಾಜ್ಯಗಳಿಂದ ಇಲ್ಲಿಗೆ ಬರುತ್ತಿದ್ದಾರೆ. ಇತ್ತೀಚೆಗೆ ಫ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗಿದ್ದು, ಇಲ್ಲಿಗೆ ಕೆಲಸ ಮಾಡಲು ಬಂದವರ ರಕ್ಷಣೆ ಮಾಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ಎಲ್ಲವೂ ಗಮನದಲ್ಲಿಟ್ಟುಕೊಂಡು ಈಗ ಸಮಿತಿ ರಚನೆ ಆಗಿದೆ. ಪಾಶ್ ಕಮಿಟಿ ನಿಯಮಗಳ ಪ್ರಕಾರ, ಸಮಿತಿಯಲ್ಲಿ ಯಾರ್ಯಾರು ಇರಬೇಕು ಎಂದು ಗಮನದಲ್ಲಿ ಇಟ್ಟುಕೊಂಡು ಮಾಡಿದ್ದಾರೆ, ಇದು ಸ್ವಾಗತಾರ್ಹ” ಎಂದು ಹೇಳಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ‘ಕರ್ನಾಟಕ ರಾಜ್ಯ ಮಹಿಳಾ ಆಯೋಗ’ದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ, “ಚಲನಚಿತ್ರ ವಾಣಿಜ್ಯ ಮಂಡಳಿ ಅಂತಿಮವಾಗಿ ಪಾಶ್ ಸಮಿತಿ ರಚಿಸಿರುವುದು ನನಗೆ ಸಂತಸ ತಂದಿದೆ. ನಿಯಮಗಳನ್ನು ಪಾಲನೆ ಮಾಡಿ ಸಮಿತಿ ರಚಿಸಿರುವುದಾಗಿ ನನಗೆ ಮೊದಲೇ ತಿಳಿಸಿದ್ದರು. ಈ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿಗೆ ಬರುವಂತೆ ನನ್ನನ್ನೂ ಕರೆದಿದ್ದರು. ಹೆಣ್ಣು ಮಕ್ಕಳ ರಕ್ಷಣೆ ಪ್ರಮುಖ ಆದ್ಯತೆಯಾಗಿರುವದರಿಂದ ನೀವು ಕಾಲ ದೂಡುವಂತೆ ಇಲ್ಲ ಎಂದು ನಾನು ಅವರಿಗೆ ಮೊದಲೇ ತಿಳಿಸಿದ್ದೆ; ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಹ ನಾನು ಪತ್ರ ಬರೆದಿದ್ದೆ” ಎಂದರು.

“ನಾನು ಪತ್ರಿಕಾಗೋಷ್ಠಿ ನಡೆಸಿದ ನಂತರ, ಅದನ್ನು ಗಂಭೀರವಾಗಿ ಪರಿಗಣಿಸಿ ಸಮಿತಿ ರಚಿಸಿದ್ದಾರೆ. ಇದು ಸ್ವಾಗತಾರ್ಹ, ಮೊದಲ ಬಾರಿಗೆ ಚಲನಚಿತ್ರೋದ್ಯಮದಲ್ಲಿ ಸಮಿತಿ ರಚನೆಯಾಗಿದೆ. ಚಿತ್ರರಂಗದಲ್ಲಿ ಕೆಲಸ ಮಾಡುವ ಯಾವುದೇ ಹೆಣ್ಣು ಮಗಳಿಗೆ ಲೈಂಗಿಕ ದೌರ್ಜನ್ಯ ನಡೆದರೆ, ಅಲ್ಲಿಯೇ ದೂರು ನೀಡಿ, ನ್ಯಾಯ ಪಡೆಯುವ ಪಾಶ್ ಕಮಿಟಿ ರಚನೆಯಾಗಿದೆ. ಹಣ್ಣು ಮಕ್ಕಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿರುವ ವಾಣಿಜ್ಯ ಮಂಡಳಿಗೆ ಅಭಿನಂಧಿಸುತ್ತೇನೆ” ಎಂದು ಹೇಳಿದರು.

“ಆರಂಭದಲ್ಲಿ ವಾಣಿಜ್ಯ ಮಂಡಳಿಯಲ್ಲಿ ಇದಕ್ಕೆ ಭಾರೀ ವಿರೋಧವಿತ್ತು. ನಾನು ಅಲ್ಲಿ ಪತ್ರಿಕಾಗೋಷ್ಠಿ ನಡೆಸಲು ಹೋದಾಗಲೂ ಸಹ ಅಪಸ್ವರವಿತ್ತು. ಜೋರಾಗಿ ಚೀರಾಡಿ, ಜಗಳ ಮಾಡಿ ಪಾಶ್ ಸಮಿತಿ ರಚನೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಏನೋ ಆಗುತ್ತದೆ ಎಂಬ ಕಾರಣಕ್ಕೆ ಅವರು ಸಮಿತಿ ರಚನೆಗೆ ಒಪ್ಪಿಕೊಂಡಿರಲಿಲ್ಲ. ಅವರು ಅರ್ಥ ಮಾಡಿಕೊಳ್ಳುವುದಕ್ಕೆ ಇಷ್ಟು ಕಾಲ ಬೇಕಾಯಿತು. ನಮ್ಮ ಕನ್ನಡದ ನಟಿಯರು ಹಾಗೂ ಉಳಿದವರಿಗೆ ದೌರ್ಜನ್ಯವಾದಾಗ ನ್ಯಾಯ ಪಡೆಯಲು ಅವರದ್ದೇ ತಾಯಿ ಸಂಸ್ಥೆಯಲ್ಲಿ ಕಮಿಟಿ ಇರಬೇಕು. ಅವರ ನಿರ್ಧಾರವನ್ನು ನಾನು ಸ್ವಾಗತ ಕೋರುತ್ತೇನೆ. ಚಲನಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು” ಎಂದು ವಿವರಿಸಿದರು.

ಇದನ್ನೂ ಓದಿ; ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...