Homeಕರ್ನಾಟಕಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ 'ಪಾಶ್‌ ಕಮಿಟಿ' ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

ಕವಿತಾ ಲಂಕೇಶ್ ಅಧ್ಯಕ್ಷತೆಯಲ್ಲಿ ‘ಪಾಶ್‌ ಕಮಿಟಿ’ ರಚಿಸಿದ ಚಲನಚಿತ್ರ ವಾಣಿಜ್ಯ ಮಂಡಳಿ

- Advertisement -
- Advertisement -

ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಚಿತ್ರರಂಗದ ಸದಸ್ಯರು ಹಾಗೂ ಮಹಿಳಾ ಸಂಘಟನೆಗಳ ಹಲವು ತಿಂಗಳುಗಳ ಒತ್ತಡಕ್ಕೆ ಮಣಿದಿರುವ ‘ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ’, ಕೊನೆಗೂ “ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ” (posh act) ಸಮಿತಿ ರಚಿಸಿ ಆದೇಶ ಹೊರಡಿಸಿದೆ.

ಕೇರಳ ಚಿತ್ರರಂಗದ ಲೈಂಗಿಕ ದೌರ್ಜನ್ಯದ ಕುರಿತು ಜಸ್ಟೀಸ್ ಹೇಮಾ ಸಮಿತಿ ವರದಿ ನೀಡಿದ ಬಳಿಕ, ಕರ್ನಾಟಕದಲ್ಲಿ ಸಹ ಸಮಿತಿ ರಚಿಸಬೇಕು ಎಂಬ ಕೂಗು ಎದ್ದಿತ್ತು. ಆದರೆ, ಇದಕ್ಕೆ ಚಿತ್ರರಂಗದ ಪ್ರಮುಖರು ಆಸಕ್ತಿ ತೋರಿರಲಿಲ್ಲ. ಇದೀಗ, ಹಿರಿಯ ನಿರ್ದೇಶಕಿ ಕವಿತಾ ಲಂಕೇಶ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.

ಖಾಯಂ ಸದಸ್ಯರಾಗಿ,  ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು, ಸದಸ್ಯರಾಗಿ ಹಿರಿಯ ನಟಿ ಪ್ರಮೀಳಾ ಜೋಶಾಯ್, ಮಹಿಳಾ ಹಕ್ಕುಗಳ ಹೋರಾಟಗಾರ್ತಿ ವಿಮಲಾ ಕೆ.ಎಸ್, ಹಿರಿಯ ವಕೀಲೆ ರಾಜಲಕ್ಷ್ಮಿ ಅಂಕಲಗಿ, ಟ್ರಾನ್ಸ್‌ ಜೆಂಡರ್ ಹೋರಾಟಗಾರರಾದ ಮಲ್ಲು ಕುಂಬಾರ್, ನಟಿ ಶೃತಿ ಹರಿಹರನ್, ಹಿರಿಯ ಪತ್ರಕರ್ತ ಮುರುಳೀಧರ್ ಖಜಾನೆ, ರಂಗಕರ್ಮಿ ಶಶಿಕಾಂತ್ ಯಡಹಳ್ಳಿ, ನಿರ್ಮಾಕಪಕರಾದ ಸಾರಾ ಗೋವಿಂದ್ ಸಮಿತಿಯಲ್ಲಿ ಇದ್ದಾರೆ.

ಈ ಬಗ್ಗೆ ‘ನಾನುಗೌರಿ.ಕಾಮ್’ ಜೊತೆಗೆ ಮಾತನಾಡಿದ ಕವಿತಾ ಲಂಕೇಶ್, “ಪಾಶ್ ಕಮಿಟಿ ರಚಿಸಬೇಕು ಎಂದು ಮಹಿಳಾ ಆಯೋಗದ ನಾಗಲಕ್ಷ್ಮಿ ಅವರೊಟ್ಟಿಗೆ ನಾವು ಹೋಗಿ ಒತ್ತಡ ಹಾಕಿದ್ದೆವು. ಇದಕ್ಕಾಗಿ ನಾವು ಕಳೆದ ಐದು ವರ್ಷಗಳಿಂದ ಎಷ್ಟೇ ಪ್ರಯತ್ನ ಮಾಡಿದರೂ ಆಗಿರಲಿಲ್ಲ; ಈಗ ಸಮಿತಿ ರಚಿಸಿರುವುದು ಸಂತಸ ತಂದಿದೆ” ಎಂದರು.

“ಈಗಷ್ಟೇ ಸಮಿತಿ ರಚನೆ ಆಗಿದೆ, ಇನ್ನಷ್ಟು ಕೆಲಸಗಳು ಬಾಕಿ ಇವೆ. ವಿಭಿನ್ನ ಕ್ಷೇತ್ರಗಳಿಂದ ಸದಸ್ಯರನ್ನು ನೇಮಕ ಮಾಡಿರುವುದು ನನಗೆ ಸಂತಸವಾಗಿದೆ. ದೌರ್ಜನ್ಯವಾದರೆ ನಾವು ಏನು ಮಾಡಬೇಕು ಎಂಬ ಬಗ್ಗೆ ಕೆಲಸ ಆರಂಭಿಸಬೇಕು. ಮೊದಲು ಅದಕ್ಕೊಂದು ಹೆಲ್ಪ್‌ಲೈನ್ ಆಗಬೇಕು. ಏಕೆಂದರೆ, ಯಾರೋ ದೂರು ಕೊಡಬೇಕು ಎಂದರೆ ಸಾಕಷ್ಟು ಗೊಂದಲದಲ್ಲಿ ಇರುತ್ತಾರೆ; ಮೊದಲಿನಿಂದಲೂ ಈ ಸಮಸ್ಯೆ ಇದೆ. ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋದರೆ ಸಾಕಷ್ಟು ನಿರ್ಲಕ್ಷ್ಯ ಮಾಡುತ್ತಿದ್ದರು. ದೂರು ಬಂದರೆ ಏನು ಮಾಡಬಹುದು ಎಂದು ನಾವು ನೋಡಬೇಕು” ಎಂದು ಹೇಳಿದರು.

“ಸಮಿತಿಯಲ್ಲಿ ಟ್ರಾನ್ಸ್‌ ಜೆಂಡರ್‌ ಸಮುದಾಯದ ಮಲ್ಲು ಕುಂಬಾರ್ ಸೇರಿದಂತೆ ಬೇರೆಬೇರೆ ಕ್ಷೇತ್ರದ ಜನರಿದ್ದಾರೆ. ಕೆ.ಎಸ್. ವಿಮಲಾ ಮತ್ತು ರಾಜಲಕ್ಷ್ಮಿ ಅಂಕಲಗಿ ಮಹಿಳೆಯರ ಪರವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ನಾವು ಸೂಚಿಸಿದ ಹೆಸರುಗಳನ್ನು ಒಪ್ಪಿಕೊಂಡು ಸಮಿತಿ ರಚಿಸಿದ್ದಾರೆ. ಸದ್ಯಕ್ಕಂತೂ ಕಮಿಟಿ ಚೆನ್ನಾಗಿದೆ ಎಂದು ನನಗೆ ಅನಿಸುತ್ತಿದೆ. ಕೆಲಸ ಚೆನ್ನಾಗಿ ಆಗುತ್ತದೆ ಎನ್ನುವ ವಿಶ್ವಾಸ ನನಗಿದೆ. ಇಷ್ಟು ದಿನ ಸಮಸ್ಯೆಗಳಾದರೆ ಅದನ್ನು ಕೇಳುವುದಕ್ಕೇ ಯಾರೂ ಇರಲಿಲ್ಲ” ಎಂದರು.

ಸಮಿತಿ ಸದಸ್ಯರಾದ ರಾಜಲಕ್ಷ್ಮಿ ಅಂಕಲಗಿ ಮಾತನಾಡಿ, “ಎಲ್ಲ ಅಸಂಘಟಿತ ವಲಯಗಳಲ್ಲಿ ಲೈಂಗಿಕ ದೌರ್ಜನ್ಯ ತಡೆ ಸಮಿತಿ ರಚಿಸಬೇಕು ಎಂಬ ಕಾನೂನಿದೆ. ಆದರೆ, ಚಲನಚಿತ್ರ ವಾಣಿಜ್ಯ ಮಂಡಳಿ ಸಮಿತಿ ರಚಿಸಿಲ್ಲ ಎಂಬ ದೂರು ಹಲವು ದಿನಗಳಿಂದ ಕೇಳಿಬರುತ್ತಿತ್ತು. ಕೇರಳದಲ್ಲಿ ಹೇಮಾ ಸಮಿತಿ ವರದಿ ಹೊರಗೆ ಬಂದ ಬಳಿಕ, ಇಲ್ಲಿಯೂ ಸಮಿತಿ ಆಗಲೇಬೇಕು ಎಂಬ ಒತ್ತಾಯ ಕೇಳಿಬಂದಿದ್ದವು. ಈಗ ವಾಣಿಜ್ಯ ಮಂಡಳಿ ಸಮಿತಿ ರಚಿಸಿ, ಹಲವು ಕ್ಷೇತ್ರಗಳ ಪ್ರಮುಖರನ್ನು ಸದಸ್ಯರನ್ನಾಗಿ ನೇಮಿಸಿದ್ದಾರೆ. ಇಂಥ ಸಮಿತಿ ರಚಿಸುವುದು ಅಗತ್ಯ” ಎಂದರು.

“ಮುಖ್ಯವಾಗಿ, ಇತ್ತೀಚಿನ ದಿನಗಳಲ್ಲಿ ಮೊದಲಿಗಿಂತಲೂ ಹೆಚ್ಚಾಗಿ ಕಲಾವಿದರು, ತಂತ್ರಜ್ಞರು ಸೇರಿದಂತೆ ಹಲವು ವಿಭಾಗಗಳಲ್ಲಿ ಕೆಲಸ ಮಾಡಲು ಅನ್ಯ ರಾಜ್ಯಗಳಿಂದ ಇಲ್ಲಿಗೆ ಬರುತ್ತಿದ್ದಾರೆ. ಇತ್ತೀಚೆಗೆ ಫ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗಿದ್ದು, ಇಲ್ಲಿಗೆ ಕೆಲಸ ಮಾಡಲು ಬಂದವರ ರಕ್ಷಣೆ ಮಾಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಈ ಎಲ್ಲವೂ ಗಮನದಲ್ಲಿಟ್ಟುಕೊಂಡು ಈಗ ಸಮಿತಿ ರಚನೆ ಆಗಿದೆ. ಪಾಶ್ ಕಮಿಟಿ ನಿಯಮಗಳ ಪ್ರಕಾರ, ಸಮಿತಿಯಲ್ಲಿ ಯಾರ್ಯಾರು ಇರಬೇಕು ಎಂದು ಗಮನದಲ್ಲಿ ಇಟ್ಟುಕೊಂಡು ಮಾಡಿದ್ದಾರೆ, ಇದು ಸ್ವಾಗತಾರ್ಹ” ಎಂದು ಹೇಳಿದರು.

ನಾನುಗೌರಿ.ಕಾಮ್ ಜೊತೆಗೆ ಮಾತನಾಡಿದ ‘ಕರ್ನಾಟಕ ರಾಜ್ಯ ಮಹಿಳಾ ಆಯೋಗ’ದ ಅಧ್ಯಕ್ಷರಾದ ಡಾ. ನಾಗಲಕ್ಷ್ಮಿ, “ಚಲನಚಿತ್ರ ವಾಣಿಜ್ಯ ಮಂಡಳಿ ಅಂತಿಮವಾಗಿ ಪಾಶ್ ಸಮಿತಿ ರಚಿಸಿರುವುದು ನನಗೆ ಸಂತಸ ತಂದಿದೆ. ನಿಯಮಗಳನ್ನು ಪಾಲನೆ ಮಾಡಿ ಸಮಿತಿ ರಚಿಸಿರುವುದಾಗಿ ನನಗೆ ಮೊದಲೇ ತಿಳಿಸಿದ್ದರು. ಈ ಬಗ್ಗೆ ಮಾಹಿತಿ ನೀಡಲು ಪತ್ರಿಕಾಗೋಷ್ಠಿಗೆ ಬರುವಂತೆ ನನ್ನನ್ನೂ ಕರೆದಿದ್ದರು. ಹೆಣ್ಣು ಮಕ್ಕಳ ರಕ್ಷಣೆ ಪ್ರಮುಖ ಆದ್ಯತೆಯಾಗಿರುವದರಿಂದ ನೀವು ಕಾಲ ದೂಡುವಂತೆ ಇಲ್ಲ ಎಂದು ನಾನು ಅವರಿಗೆ ಮೊದಲೇ ತಿಳಿಸಿದ್ದೆ; ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಸಹ ನಾನು ಪತ್ರ ಬರೆದಿದ್ದೆ” ಎಂದರು.

“ನಾನು ಪತ್ರಿಕಾಗೋಷ್ಠಿ ನಡೆಸಿದ ನಂತರ, ಅದನ್ನು ಗಂಭೀರವಾಗಿ ಪರಿಗಣಿಸಿ ಸಮಿತಿ ರಚಿಸಿದ್ದಾರೆ. ಇದು ಸ್ವಾಗತಾರ್ಹ, ಮೊದಲ ಬಾರಿಗೆ ಚಲನಚಿತ್ರೋದ್ಯಮದಲ್ಲಿ ಸಮಿತಿ ರಚನೆಯಾಗಿದೆ. ಚಿತ್ರರಂಗದಲ್ಲಿ ಕೆಲಸ ಮಾಡುವ ಯಾವುದೇ ಹೆಣ್ಣು ಮಗಳಿಗೆ ಲೈಂಗಿಕ ದೌರ್ಜನ್ಯ ನಡೆದರೆ, ಅಲ್ಲಿಯೇ ದೂರು ನೀಡಿ, ನ್ಯಾಯ ಪಡೆಯುವ ಪಾಶ್ ಕಮಿಟಿ ರಚನೆಯಾಗಿದೆ. ಹಣ್ಣು ಮಕ್ಕಳಿಗೆ ಮಾನಸಿಕವಾಗಿ ಧೈರ್ಯ ತುಂಬುವ ಕೆಲಸ ಮಾಡಿರುವ ವಾಣಿಜ್ಯ ಮಂಡಳಿಗೆ ಅಭಿನಂಧಿಸುತ್ತೇನೆ” ಎಂದು ಹೇಳಿದರು.

“ಆರಂಭದಲ್ಲಿ ವಾಣಿಜ್ಯ ಮಂಡಳಿಯಲ್ಲಿ ಇದಕ್ಕೆ ಭಾರೀ ವಿರೋಧವಿತ್ತು. ನಾನು ಅಲ್ಲಿ ಪತ್ರಿಕಾಗೋಷ್ಠಿ ನಡೆಸಲು ಹೋದಾಗಲೂ ಸಹ ಅಪಸ್ವರವಿತ್ತು. ಜೋರಾಗಿ ಚೀರಾಡಿ, ಜಗಳ ಮಾಡಿ ಪಾಶ್ ಸಮಿತಿ ರಚನೆಗೆ ಸಾಕಷ್ಟು ವಿರೋಧ ವ್ಯಕ್ತಪಡಿಸಿದ್ದರು. ಏನೋ ಆಗುತ್ತದೆ ಎಂಬ ಕಾರಣಕ್ಕೆ ಅವರು ಸಮಿತಿ ರಚನೆಗೆ ಒಪ್ಪಿಕೊಂಡಿರಲಿಲ್ಲ. ಅವರು ಅರ್ಥ ಮಾಡಿಕೊಳ್ಳುವುದಕ್ಕೆ ಇಷ್ಟು ಕಾಲ ಬೇಕಾಯಿತು. ನಮ್ಮ ಕನ್ನಡದ ನಟಿಯರು ಹಾಗೂ ಉಳಿದವರಿಗೆ ದೌರ್ಜನ್ಯವಾದಾಗ ನ್ಯಾಯ ಪಡೆಯಲು ಅವರದ್ದೇ ತಾಯಿ ಸಂಸ್ಥೆಯಲ್ಲಿ ಕಮಿಟಿ ಇರಬೇಕು. ಅವರ ನಿರ್ಧಾರವನ್ನು ನಾನು ಸ್ವಾಗತ ಕೋರುತ್ತೇನೆ. ಚಲನಚಿತ್ರರಂಗದಲ್ಲಿ ಇದೊಂದು ಮೈಲಿಗಲ್ಲು” ಎಂದು ವಿವರಿಸಿದರು.

ಇದನ್ನೂ ಓದಿ; ತಾರಕಕ್ಕೇರಿದ ಯತ್ನಾಳ್-ವಿಜಯೇಂದ್ರ ವಾಗ್ಯುದ್ಧ : ದೆಹಲಿ ತಲುಪಿದ ಬಿಜೆಪಿ ಬಣ ಕದನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...

‘ನಿಮ್ಮ ಮೌನ ಸ್ವೀಕಾರಾರ್ಹವಲ್ಲ’: ರಾಮ ಮಂದಿರ ದೇಣಿಗೆ ‘ಕಳ್ಳತನ’ದ ತನಿಖೆಗೆ ಮೋದಿಗೆ ಖರ್ಗೆ-ರಾಹುಲ್ ಗಾಂಧಿ ಪತ್ರ

ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಆರ್ಥಿಕ ಅಕ್ರಮ ಹಾಗೂ ‘ಕಳ್ಳತನ’ದ ವಿಷಯ ರಾಷ್ಟ್ರ ರಾಜಕಾರಣದಲ್ಲಿ...

ಶಾಂತಿಯುತ ಪ್ರತಿಭಟನೆಗಳನ್ನು ಮೋದಿ ಸರ್ಕಾರ ಹತ್ತಿಕ್ಕುತ್ತಿದೆ: ರಾಹುಲ್ ಗಾಂಧಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಬಲವಂತವಾಗಿ ಆಸ್ಪತ್ರೆಗೆ ಸಾಗಿಸಿದ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶನಿವಾರ ಮೌನ ಮುರಿದಿದ್ದಾರೆ. "ಶಾಂತಿಯುತ ಪ್ರತಿಭಟನೆಗಳನ್ನು...

ಸೋನಮ್ ವಾಂಗ್‌ಚುಕ್ ಬಲವಂತದ ಬಂಧನ; ಕಣ್ಣೀರಿಟ್ಟು ಉಪವಾಸ ಸತ್ಯಾಗ್ರಹ ಆರಂಭಿಸಿದ ಅಭಿಜೀತ್ ದಿಪ್ಕೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸ್ ಸಿಬ್ಬಂದಿ ಬಲವಂತವಾಗಿ, ಬಲಪ್ರಯೋಗದ ಮೂಲಕ ಆಸ್ಪತ್ರೆಗೆ ಕರೆದೊಯ್ಯುವಾಗ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳದಲ್ಲಿ ಗದ್ದಲ ಉಂಟಾಯಿತು....

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...